Homeಸಾಮಾಜಿಕಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

ಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

- Advertisement -
- Advertisement -

ದು.ಸರಸ್ವತಿ |

ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ ಅನ್ನುವ ಕಾನ್ಸೆಪ್ಟನ್ನು ಮೊದಲು ಕೇಳಿದ್ದು ಉಮಾ ಚಕ್ರವರ್ತಿಯವರ ಜಂಡರಿಂಗ್ ಕಾಸ್ಟ್ ಎನ್ನುವ ಪುಸ್ತಕದಲ್ಲಿ. ಮಂಡಲ್ ಆಯೋಗ ವರದಿ ಜಾರಿಯಾದ ನಂತರ ದೇಶ ಹೊತ್ತಿ ಉರಿವಾಗ ಕೆಲವು ಹೆಣ್ಣು ಮಕ್ಕಳು, ಐಎಎಸ್, ಐಪಿಎಸ್ ಆಫೀಸರ್ ಗಂಡುಗಳು ಸಿಗುವುದಿಲ್ಲ ಎಂದು ಪ್ಲೆಕಾರ್ಡ್ ಹಿಡಿದು ನಿಂತಿದ್ದರು. ಅಂದರೆ ರಿಸರ್ವೇಶನ್ ಇದ್ರೆ ನಾವು ಮದುವೆ ಆಗಲು ಮೇಲ್ಜಾತಿ ಆಫೀಸರ್‌ಗಳು ಸಿಗುವುದಿಲ್ಲ ಎಂದು ಪರೋಕ್ಷವಾಗಿ ಮೀಸಲಾತಿಯ ವಿರುದ್ಧ ದನಿ ಎತ್ತಿದ್ದರು. ಮಹಿಳೆಯರೆಲ್ಲ ದಲಿತರು, ಶೋಷಿತರು ಎಂದು ಹೋರಾಟದಲ್ಲಿದ್ದ ಮಹಿಳಾ ಚಳುವಳಿಗೆ ಇದು ದೊಡ್ಡ ಸವಾಲಾಗಿ ಎದುರಾಯಿತು. ಈ ಸಂದರ್ಭದಲ್ಲಿ ಉಮಾ ಚಕ್ರವರ್ತಿ ‘ಜೆಂಡರಿಂಗ್ ಕಾಸ್ಟ್’ ಪುಸ್ತಕ ಬರೆದರು. ಮಹಾರಾಷ್ಟ್ರದ ದಲಿತ ಸ್ತ್ರೀವಾದಿಗಳು ಅಂಬೇಡ್ಕರ್ ಮತ್ತು ಮಹಿಳೆ ಬಗ್ಗೆ ತುಂಬಾ ಆಳವಾದ ಅಧ್ಯಯನ ಮಾಡಿದರು. ಆಗ, ಅಂಬೇಡ್ಕರ್ ಅವರ ಜಾತಿ ವಿನಾಶ ಚಳುವಳಿಯ ಪರಂಪರೆ ಅಂದರೆ, ಲಿಂಗ ತಾರತಮ್ಯದ ವಿರುದ್ಧವೂ ಹೋರಾಡುವ ಪರಂಪರೆ; ಅದನ್ನ ಯಾಕೆ ಮಹಿಳಾ ಚಳುವಳಿಗಳು ಗುರುತಿಸಲೇ ಇಲ್ಲ ಎಂದು ಮೊದಲನೇ ಬಾರಿ ಎಲ್ಲರೂ ಆಲೋಚಿಸುವಂತಾಯಿತು. ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ, ಅಂಬೇಡ್ಕರ್‌ರ ವಿಚಾರಗಳನ್ನು ಕುರಿತ ಪುಸ್ತಕಗಳು ಬಂದವು. ಅಂಬೇಡ್ಕರ್ ಮತ್ತು ಮಹಿಳೆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣಿಕೆಯ ಪಿತೃಪ್ರಧಾನತೆ ಎಂಬ ಪರಿಕಲ್ಪನೆ ನಮಗೆಲ್ಲ ಸರಿಯಾಗಿ ಅರ್ಥವಾದದ್ದು.

ಈ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಪಿತೃಪ್ರಧಾನವಾದುದ್ದು ಎಂದು ಎಲ್ಲರಿಗೂ ಗೊತ್ತು. ರಾಜ್ಯವನ್ನು, ಆಸ್ತಿಯನ್ನ ಹಾಗೂ ಎಲ್ಲಾ ಅಧಿಕಾರವನ್ನು ಚಲಾಯಿಸುವಂತಹ, ಗಂಡು ನಾನೇ ಸುಪ್ರೀಂ ಎನ್ನುವ ವ್ಯವಸ್ಥೆ ಇದು. ಬ್ಯಾಹ್ಮಣ್ಯದ ಶ್ರೇಣೀಕರಣದಲ್ಲಿ ಬ್ರಾಹ್ಮಣರು ಜಾತಿ ವ್ಯವಸ್ಥೆಯ ಮೇಲ್ದರ್ಜೆಯ ತುತ್ತ ತುದಿಯಲ್ಲಿದ್ದಾರೆ. ಗಂಡು ಎನ್ನುವ ಶ್ರೇಷ್ಠತೆ, ಮೇಲ್ಜಾತಿ ಎನ್ನುವ ಶ್ರೇಷ್ಠತೆ ಎರಡೂ ಕೂಡಿ ಬ್ರಾಹ್ಮಣ ಶ್ರೇಷ್ಠತೆ ಉತ್ಕೃಷ್ಟ ಮಾದರಿಯಾಗಿ ನಿಲ್ಲುತ್ತದೆ. ಹಾಗಾಗಿ ಎಲ್ಲಾ ದೇವಾಲಯಗಳಲ್ಲಿ ಬ್ರಾಹ್ಮಣ ಗಂಡಸರು ಪೂಜೆ ಮಾಡುತ್ತಾರೆ, ಇತರರು ಕೈ ಮುಗಿದು ನಿಲ್ಲುತ್ತಾರೆ, ದಲಿತರು ಹೊರಗಿರಿಸಲ್ಪಡುತ್ತಾರೆ. ಇದು ಎಲ್ಲ ಸಮುದಾಯಗಳ ಒಳಕ್ಕೂ ಇಳಿದುಬಿಟ್ಟಿದೆ. ಮಾದಿಗರ ದಾಸಯ್ಯರು ಪೂಜೆ ಮಾಡ್ತಾರೆ, ಸಮಗಾರರು ಚರ್ಮದ ಕೆಲಸವನ್ನು ಮಾಡ್ತಾರೆ. ಇನ್ನು ಹೈರಾರ್ಕಿಯಲ್ಲಿ ಎಲ್ಲಾ ಸಮುದಾಯದಲ್ಲೂ ಪುರುಷರು ಮೇಲು ಎನ್ನುವುದೂ ಬೆಳೆದು ಬಂದಿದೆ, ಮೇಲ್ ಹೈರಾರ್ಕಿ, ಬ್ರಾಹ್ಮಿಣಿಕಲ್ ಹೈರಾರ್ಕಿಯ ಆಳದಲ್ಲಿ ಕಾಸ್ಟ್ ಸುಪ್ರಿಮಸಿ ಪ್ರಧಾನವಾಗಿದೆ, ಈ ಮೇಲರಿಮೆಯಲ್ಲಿ ಖಾಸಗಿ ಆಸ್ತಿಯೂ ಸೇರಿಕೊಂಡಿದೆ. ಇದು ಬೌದ್ಧಿಕ ಪವರ್‌ನೂ ಹೌದು ಮತ್ತೂ ಮೆಟಿರಿಯಲ್ ಪವರ್ ಕೂಡ ಹೌದು. ಅಕಾಡೆಮಿಕ್ ಬಳಕೆಯಲ್ಲಿ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಬ್ರಾಹ್ಮಣರನ್ನು ವಿರೋಧಿಸುವಂತದ್ದಲ್ಲ, ತಾನೇ ಸುಪ್ರೀಂ ನಾವಿರುವುದೇ ಆಳುವುದಕ್ಕೆ ಎನ್ನುವಂತಹ ವಾದವನ್ನು ಪ್ರಶ್ನಿಸುವಂತದ್ದು. ಈಗ ಮೇಲ್ಜಾತಿ ಎತ್ತಿರುವ ತಕರಾರು ಅಸಮಂಜಸವಾದದ್ದು. ವಿದ್ವತ್ ವಲಯದಲ್ಲಿ ಚರ್ಚೆಯಲ್ಲಿರುವ ಜಾಗತೀಕರಣ, ಆಳುವ ವರ್ಗ, ಫ್ಯೂಡಲಿಸಂ ಎನ್ನುವಂತಹ ಪರಿಕಲ್ಪನೆಗಳನ್ನು ಚರ್ಚೆ ಮಾಡಬೇಡಿ, ಇದರ ಬಗ್ಗೆ ಮಾತನಾಡಬೇಡಿ ಎಂದರೆ ಅದನ್ನೆಲ್ಲ ನಿಲ್ಲಸಲಾಗುತ್ತದೆಯೇ? ಖಂಡಿತಾ ಇಲ್ಲ. ಹಾಗೆಯೆ ಇದು ಕೂಡ. ಬ್ರಾಹ್ಮಣ್ಯದ ವಿರುದ್ಧದ ದನಿಯೇ ಹೊರತು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...