Homeಸಾಮಾಜಿಕಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

ಬ್ರಾಹ್ಮಣ್ಯದ ವಿರುದ್ಧದ ದನಿಯು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ

- Advertisement -
- Advertisement -

ದು.ಸರಸ್ವತಿ |

ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ ಅನ್ನುವ ಕಾನ್ಸೆಪ್ಟನ್ನು ಮೊದಲು ಕೇಳಿದ್ದು ಉಮಾ ಚಕ್ರವರ್ತಿಯವರ ಜಂಡರಿಂಗ್ ಕಾಸ್ಟ್ ಎನ್ನುವ ಪುಸ್ತಕದಲ್ಲಿ. ಮಂಡಲ್ ಆಯೋಗ ವರದಿ ಜಾರಿಯಾದ ನಂತರ ದೇಶ ಹೊತ್ತಿ ಉರಿವಾಗ ಕೆಲವು ಹೆಣ್ಣು ಮಕ್ಕಳು, ಐಎಎಸ್, ಐಪಿಎಸ್ ಆಫೀಸರ್ ಗಂಡುಗಳು ಸಿಗುವುದಿಲ್ಲ ಎಂದು ಪ್ಲೆಕಾರ್ಡ್ ಹಿಡಿದು ನಿಂತಿದ್ದರು. ಅಂದರೆ ರಿಸರ್ವೇಶನ್ ಇದ್ರೆ ನಾವು ಮದುವೆ ಆಗಲು ಮೇಲ್ಜಾತಿ ಆಫೀಸರ್‌ಗಳು ಸಿಗುವುದಿಲ್ಲ ಎಂದು ಪರೋಕ್ಷವಾಗಿ ಮೀಸಲಾತಿಯ ವಿರುದ್ಧ ದನಿ ಎತ್ತಿದ್ದರು. ಮಹಿಳೆಯರೆಲ್ಲ ದಲಿತರು, ಶೋಷಿತರು ಎಂದು ಹೋರಾಟದಲ್ಲಿದ್ದ ಮಹಿಳಾ ಚಳುವಳಿಗೆ ಇದು ದೊಡ್ಡ ಸವಾಲಾಗಿ ಎದುರಾಯಿತು. ಈ ಸಂದರ್ಭದಲ್ಲಿ ಉಮಾ ಚಕ್ರವರ್ತಿ ‘ಜೆಂಡರಿಂಗ್ ಕಾಸ್ಟ್’ ಪುಸ್ತಕ ಬರೆದರು. ಮಹಾರಾಷ್ಟ್ರದ ದಲಿತ ಸ್ತ್ರೀವಾದಿಗಳು ಅಂಬೇಡ್ಕರ್ ಮತ್ತು ಮಹಿಳೆ ಬಗ್ಗೆ ತುಂಬಾ ಆಳವಾದ ಅಧ್ಯಯನ ಮಾಡಿದರು. ಆಗ, ಅಂಬೇಡ್ಕರ್ ಅವರ ಜಾತಿ ವಿನಾಶ ಚಳುವಳಿಯ ಪರಂಪರೆ ಅಂದರೆ, ಲಿಂಗ ತಾರತಮ್ಯದ ವಿರುದ್ಧವೂ ಹೋರಾಡುವ ಪರಂಪರೆ; ಅದನ್ನ ಯಾಕೆ ಮಹಿಳಾ ಚಳುವಳಿಗಳು ಗುರುತಿಸಲೇ ಇಲ್ಲ ಎಂದು ಮೊದಲನೇ ಬಾರಿ ಎಲ್ಲರೂ ಆಲೋಚಿಸುವಂತಾಯಿತು. ಜ್ಯೋತಿ ಬಾ ಪುಲೆ, ಸಾವಿತ್ರಿ ಬಾ ಪುಲೆ, ಅಂಬೇಡ್ಕರ್‌ರ ವಿಚಾರಗಳನ್ನು ಕುರಿತ ಪುಸ್ತಕಗಳು ಬಂದವು. ಅಂಬೇಡ್ಕರ್ ಮತ್ತು ಮಹಿಳೆ ಪುಸ್ತಕವನ್ನು ಕನ್ನಡಕ್ಕೆ ಅನುವಾದ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣಿಕೆಯ ಪಿತೃಪ್ರಧಾನತೆ ಎಂಬ ಪರಿಕಲ್ಪನೆ ನಮಗೆಲ್ಲ ಸರಿಯಾಗಿ ಅರ್ಥವಾದದ್ದು.

ಈ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಪಿತೃಪ್ರಧಾನವಾದುದ್ದು ಎಂದು ಎಲ್ಲರಿಗೂ ಗೊತ್ತು. ರಾಜ್ಯವನ್ನು, ಆಸ್ತಿಯನ್ನ ಹಾಗೂ ಎಲ್ಲಾ ಅಧಿಕಾರವನ್ನು ಚಲಾಯಿಸುವಂತಹ, ಗಂಡು ನಾನೇ ಸುಪ್ರೀಂ ಎನ್ನುವ ವ್ಯವಸ್ಥೆ ಇದು. ಬ್ಯಾಹ್ಮಣ್ಯದ ಶ್ರೇಣೀಕರಣದಲ್ಲಿ ಬ್ರಾಹ್ಮಣರು ಜಾತಿ ವ್ಯವಸ್ಥೆಯ ಮೇಲ್ದರ್ಜೆಯ ತುತ್ತ ತುದಿಯಲ್ಲಿದ್ದಾರೆ. ಗಂಡು ಎನ್ನುವ ಶ್ರೇಷ್ಠತೆ, ಮೇಲ್ಜಾತಿ ಎನ್ನುವ ಶ್ರೇಷ್ಠತೆ ಎರಡೂ ಕೂಡಿ ಬ್ರಾಹ್ಮಣ ಶ್ರೇಷ್ಠತೆ ಉತ್ಕೃಷ್ಟ ಮಾದರಿಯಾಗಿ ನಿಲ್ಲುತ್ತದೆ. ಹಾಗಾಗಿ ಎಲ್ಲಾ ದೇವಾಲಯಗಳಲ್ಲಿ ಬ್ರಾಹ್ಮಣ ಗಂಡಸರು ಪೂಜೆ ಮಾಡುತ್ತಾರೆ, ಇತರರು ಕೈ ಮುಗಿದು ನಿಲ್ಲುತ್ತಾರೆ, ದಲಿತರು ಹೊರಗಿರಿಸಲ್ಪಡುತ್ತಾರೆ. ಇದು ಎಲ್ಲ ಸಮುದಾಯಗಳ ಒಳಕ್ಕೂ ಇಳಿದುಬಿಟ್ಟಿದೆ. ಮಾದಿಗರ ದಾಸಯ್ಯರು ಪೂಜೆ ಮಾಡ್ತಾರೆ, ಸಮಗಾರರು ಚರ್ಮದ ಕೆಲಸವನ್ನು ಮಾಡ್ತಾರೆ. ಇನ್ನು ಹೈರಾರ್ಕಿಯಲ್ಲಿ ಎಲ್ಲಾ ಸಮುದಾಯದಲ್ಲೂ ಪುರುಷರು ಮೇಲು ಎನ್ನುವುದೂ ಬೆಳೆದು ಬಂದಿದೆ, ಮೇಲ್ ಹೈರಾರ್ಕಿ, ಬ್ರಾಹ್ಮಿಣಿಕಲ್ ಹೈರಾರ್ಕಿಯ ಆಳದಲ್ಲಿ ಕಾಸ್ಟ್ ಸುಪ್ರಿಮಸಿ ಪ್ರಧಾನವಾಗಿದೆ, ಈ ಮೇಲರಿಮೆಯಲ್ಲಿ ಖಾಸಗಿ ಆಸ್ತಿಯೂ ಸೇರಿಕೊಂಡಿದೆ. ಇದು ಬೌದ್ಧಿಕ ಪವರ್‌ನೂ ಹೌದು ಮತ್ತೂ ಮೆಟಿರಿಯಲ್ ಪವರ್ ಕೂಡ ಹೌದು. ಅಕಾಡೆಮಿಕ್ ಬಳಕೆಯಲ್ಲಿ ಬ್ರಾಹ್ಮಿಣಿಕಲ್ ಪೇಟ್ರಿಯಾರ್ಕಿ ಅನ್ನೋದು ಬ್ರಾಹ್ಮಣರನ್ನು ವಿರೋಧಿಸುವಂತದ್ದಲ್ಲ, ತಾನೇ ಸುಪ್ರೀಂ ನಾವಿರುವುದೇ ಆಳುವುದಕ್ಕೆ ಎನ್ನುವಂತಹ ವಾದವನ್ನು ಪ್ರಶ್ನಿಸುವಂತದ್ದು. ಈಗ ಮೇಲ್ಜಾತಿ ಎತ್ತಿರುವ ತಕರಾರು ಅಸಮಂಜಸವಾದದ್ದು. ವಿದ್ವತ್ ವಲಯದಲ್ಲಿ ಚರ್ಚೆಯಲ್ಲಿರುವ ಜಾಗತೀಕರಣ, ಆಳುವ ವರ್ಗ, ಫ್ಯೂಡಲಿಸಂ ಎನ್ನುವಂತಹ ಪರಿಕಲ್ಪನೆಗಳನ್ನು ಚರ್ಚೆ ಮಾಡಬೇಡಿ, ಇದರ ಬಗ್ಗೆ ಮಾತನಾಡಬೇಡಿ ಎಂದರೆ ಅದನ್ನೆಲ್ಲ ನಿಲ್ಲಸಲಾಗುತ್ತದೆಯೇ? ಖಂಡಿತಾ ಇಲ್ಲ. ಹಾಗೆಯೆ ಇದು ಕೂಡ. ಬ್ರಾಹ್ಮಣ್ಯದ ವಿರುದ್ಧದ ದನಿಯೇ ಹೊರತು ಮನುಷ್ಯರಾದ ಬ್ರಾಹ್ಮಣರ ವಿರುದ್ಧವಾದುದ್ದಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...