Homeಪ್ರಪಂಚಬ್ರೆಜಿಲ್ ಮೋದಿಯ ಕುರಿತ ಕಡೆಯ ಕಂತು

ಬ್ರೆಜಿಲ್ ಮೋದಿಯ ಕುರಿತ ಕಡೆಯ ಕಂತು

- Advertisement -
- Advertisement -

ಭರತ್ ಹೆಬ್ಬಾಳ್ |

ಬ್ರೆಜಿಲ್ ಚುನಾವಣೆಯ ಫಲಿತಾಂಶದ ದಿನ ನವ ಬಲಪಂಥೀಯ ವಿಚಾರಗಳನ್ನು ಪ್ರಪಂಚಾದ್ಯಂತ ಪ್ರತಿಪಾದಿಸುವ ಅಮೆರಿಕಾದ ಪ್ರಚಾರಕ ಸ್ಟೀವ್ ಬ್ಯಾನನ್ ಬ್ರೆಜಿಲ್‌ನ ‘ವ್ಯಾಲರ್ ಎಕೊನೊಮಿಕಾ’ ಪತ್ರಿಕೆಯು ಸಂದರ್ಶನ ಮಾಡುತ್ತದೆ. ಸರ್ವಾಧಿಕಾರಿ ಜೈರ್ ಬೊಲ್ಸಾನರೋ ಗೆಲುವಿನ ಬಗ್ಗೆ ಕೇಳಿದಾಗ “ಜನರ ಮೇಲೆ ಮಾಡುವ ಪರಿಣಾಮಕಾರಿ ಮಾನಸಿಕ ಕಾರ್ಯಾಚರಣೆಯ ಒಂದು ಯಶಸ್ವಿ ನಿದರ್ಶನ ಬ್ರೆಜಿಲ್‌ನ ಚುನಾವಣೆ” ಎನ್ನುತ್ತಾನೆ (ವಿಜ್ಞಾನ ಮತ್ತು ಕಲೆ ಉಪಯೋಗಿಸಿಕೊಂಡು ಒಂದು ವ್ಯವಸ್ಥೆ ಮತ್ತು ಅದಲ್ಲಿರುವವರ ಮಾನಸಿಕ ಆಯಾಮವನ್ನು ನಿಯಂತ್ರಣದಲ್ಲಿಡುವುದನ್ನು ಸೈಕೊಲಾಜಿಕಲ್ ಆಪರೇಶನ್ಸ್ ಎನ್ನುತ್ತಾರೆ). ಈ ಸ್ಟೀವ್ ಬ್ಯಾನನ್ 2016ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್‌ನ ಚುನಾವಣಾ ಪ್ರಚಾರ ಸಂಯೋಜಕ ಮತ್ತು ಗೆದ್ದ ನಂತರ ವೈಟ್ ಹೌಸ್‌ನ ಮುಖ್ಯ ಕಾರ್ಯತಂತ್ರಜ್ಞನಾಗಿ ಕೆಲಸ ಮಾಡಿದ ವ್ಯಕ್ತಿ. ಇವನಿಗೂ ಮತ್ತು ವಿಶ್ವಾದ್ಯಂತ ಅಧಿಕಾರಕ್ಕೇರುತ್ತಿರುವ ತೀವ್ರವಾದ ಬಲಪಂಥೀಯ ಪಕ್ಷ, ಗುಂಪು, ಸರ್ಕಾರಗಳಿಗೂ ನಿಕಟ ಸಂಬಂಧವಿದೆ. ಇವನು ಮತ್ತು ಇವನ ಸಂಪರ್ಕ ಜಾಲದ ಕಂಪನಿಗಳೇ ಜರ್ಮನಿ, ಫಿಲಿಪೈನ್‌ನ ರೊಡ್ರಿಗೊ ಡ್ಯುಟೆರ್ಟಿ, ಅರ್ಜೆಂಟೀನಾದ ಮಾಯರಿಸೀಯೋ ಮಕ್ಕ್ರಿ, ಭಾರತದ ನರೇಂದ್ರ ಮೋದಿ, ಸ್ಕಾಟಿಶ್ ರಾಷ್ಟ್ರೀಯ ಪಾರ್ಟಿ, ಅಮೆರಿಕಾದ ಡೊನಾಲ್ಡ್ ಟ್ರಂಪ್ ಮತ್ತು ಬೊಲ್ಸಾನರೋನ ಸಾಮಾಜಿಕ ಜಾಲತಾಣಗಳ ಪ್ರಚಾರದ ನೇರ ಅಥವಾ ಪರೋಕ್ಷ ನಿರ್ವಹಣೆ ವಹಿಸಿಕೊಂಡಿದ್ದವು. ಇವರೆಲ್ಲರೂ ತಮ್ಮ ತಮ್ಮ ಚುನಾವಣಾ ಕಾರ್ಯತಂತ್ರಕ್ಕೆ ಸಾಮಾಜಿಕ ಜಾಲತಾಣಗಳ ಕಂಪನಿಗಳಾದ ಫೇಸ್ಬುಕ್, ಟ್ವಿಟರ್, ವಾಟ್ಸಾಪ್‌ಗಳಲ್ಲಿ ಏನನ್ನು ಹೇಗೆ ಹರಡಬೇಕೆಂಬುದರ ಬಗ್ಗೆ ಈ ಕೆಲವು ಕಂಪೆನಗಳನ್ನು ಅವಲಂಬಿಸಿದ್ದರು ಮತ್ತು ಅವರ ಸಲಹೆಯ ಮೇರೆಗೆ ತಮ್ಮ ಚುನಾವಣಾ ತಂತ್ರವನ್ನು ಬದಲಿಸುತ್ತಿದ್ದರು.

ಬೊಲ್ಸನಾರೋ ಕೂಡ ಅಮೆರಿಕಾದ ಟ್ರಂಪ್ ಮತ್ತು ಭಾರತದ ಮೋದಿಯ ಹಾಗೆ ತನ್ನನ್ನು ತಾನೇ “ಜಡಗಟ್ಟಿರುವ ಭ್ರಷ್ಟಾಚಾರ ಮತ್ತು ವ್ಯವಸ್ಥೆಯನ್ನು ನಿರ್ಣಾಯಕ ರೀತಿಯಲ್ಲಿ ಬದಲಾಯಿಸುವ ಮತ್ತು ದೇಶವನ್ನು ತೀವ್ರಗತಿಯಲ್ಲಿ ಅಭಿವೃದ್ಧಿ ಪಡಿಸುವ ನೇತಾರ”ನೆಂದು ಬಿಂಬಿಸಿಕೊಂಡ. ಹೊಸ ಆರ್ಥಿಕ ನೀತಿಯು ಮೊದಲಿಗೆ ಅನುಷ್ಠಾನವಾಗಿದ್ದೇ ದಕ್ಷಿಣ ಅಮೆರಿಕಾದ ಚಿಲಿ ದೇಶದಲ್ಲಿ. ಪ್ರಜಾತಾಂತ್ರಿಕವಾಗಿ ಚುನಾಯಿತರಾಗಿ ದೇಶದ ಅಧ್ಯಕ್ಷ ಪಟ್ಟಕ್ಕೇರಿದ್ದ ಸಮಾಜವಾದಿ ಸ್ಯಾಲ್ವಡಾರ್ ಅಲ್ಲೆಂಡೆಯನ್ನು 1973ರ ಸೆಪ್ಟೆಂಬರ್ 11ರಂದು ಸಿಐಎ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕೊಲ್ಲಲಾಗುತ್ತದೆ. ಅವರ ಸ್ಥಾನಕ್ಕೆ ಆಗ್ಯಾಸ್ಟೋ ಪಿನಶೇ ಎಂಬ ಮಿಲಿಟರೀ ಸರ್ವಾಧಿಕಾರಿ ಬಂದು ಅಮೆರಿಕಾದ ಕುಖ್ಯಾತಿಯ ಮಿಲ್ಟನ್ ಫ್ರೀಡ್ಮನ್‌ನ ಶಿಕಾಗೋ ಬಾಯ್ಸ್ ಪಡೆಯ ಪಾಲೊ ಗುಡೆಸ್ ಮೂಲಕ ಕೆಲವು ನೀತಿಗಳನ್ನು ಜಾರಿಗೆ ತರುತ್ತಾರೆ. ಆಘಾತಕಾರಿ ಸಂಗತಿಯೆಂದರೆ ಇದೇ ಪಾಲೊ ಗುಡೆಸ್ ಬೊಲ್ಸಾನರೋನ ಆರ್ಥಿಕ ಸಲಹೆಗಾರರಾಗಿದ್ದಾರೆ.

ಪ್ರಜಾತಂತ್ರವನ್ನು ಪ್ರಜಾತಂತ್ರದಿಂದಲೇ ಹೇಗೆ ಕೆಡವಬಹುದು ಎಂಬುದಕ್ಕೆ ದಕ್ಷಿಣ ಅಮೆರಿಕಾದ ದೇಶಗಳೇ ಉದಾಹರಣೆ. ಇದರಲ್ಲಿ ಬ್ರೆಜಿಲ್ ಒಂದು ಕೆಟ್ಟ ಸಂಪ್ರದಾಯಕ್ಕೆ ಹುಟ್ಟು ಹಾಕಿದೆ. ತನ್ನ ಇತಿಹಾಸದುದ್ದಕ್ಕೂ ಬೊಲ್ಸಾನರೋ ಮಹಿಳಾ, ಕಪ್ಪು ವರ್ಣೀಯ, ಸಲಿಂಗಕಾಮ, ಸಾಮಾಜಿಕ ನ್ಯಾಯದ ವಿರೋಧಿ ಹೇಳಿಕೆಗಳನ್ನು ಕೊಡುತ್ತಲೇ ಬರುತ್ತಿದ್ದಾರೆ. ಉದಾಹರಣೆಗೆ ‘ಕಪ್ಪು ವರ್ಣೀಯರು ಪ್ರಾಣಿಗಳಿಗೆ ಸಮ, ಅವರು ಮೃಗಾಲಯದಲ್ಲಿ ಇರಬೇಕಾದವರು, ಇವರೆಲ್ಲ ಯಾವುದಕ್ಕೂ ಪ್ರಯೋಜನವಿಲ್ಲದ ಗುಲಾಮಿ ಸಂತತಿ, ನನ್ನ ಮಗ ಸಲಿಂಗಕಾಮಿ ಎಂದು ಕೇಳುವುದಕ್ಕಿಂತ ಯಾವುದಾದರೂ ಕಾರು ಅಪಘಾತದಲ್ಲಿ ಮೃತಪಟ್ಟ ಎಂದು ಕೇಳಲು ಬಯಸುತ್ತೇನೆ, ಬ್ರೆಜಿಲ್‌ನ ಮಹಿಳಾ ಸಂಸದೆ ಮರೀಯ ದೊ ರೊಸಾರಿಯೋವನ್ನು ನೀನು ಅತ್ಯಾಚಾರಕ್ಕೂ ಲಾಯಕ್ಕಿಲ್ಲದ ಕುರೂಪಿ’ ಇವೆಲ್ಲವೂ ಬಹಿರಂಗ ಹೇಳಿಕೆಗಳು! ಅಮೆಜಾನ್ ಕಾಡುಗಳನ್ನು ಕಡಿದು ಬೀಫ್ ಮತ್ತು ಅಮೆರಿಕ ಕುಲಾಂತರಿ ಸೋಯಬೀನ್, ಜೋಳದ ಕಾಳು, ಇನ್ನಿತರೆ ಕೃಷಿ ವಿಸ್ತರಿಸಬೇಕು; ಲೇಬರ್ ಪಾರ್ಟಿಯ ಸರ್ಕಾರ ಶುರು ಮಾಡಿದ್ದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ತೆಗೆದು ಹಾಕಬೇಕು, ಸರ್ವಾಧಿಕಾರ ದೇವರು ಕೊಟ್ಟ ವರ. ಎಂದು ಒಂದರ ನಂತರ ಇನ್ನೊಂದು ತಿಕ್ಕಲುತನದ ಹೇಳಿಕೆಗಳನ್ನು ಹರಿಬಿಟ್ಟಿದ್ದ.

ಮಾಧ್ಯಮಗಳು ಖಾಸಗೀಕರಣಗೊಂಡು ಜನ ಬದುಕಿನ ಸಮಸ್ಯೆಯ ಸುದ್ದಿ ಬಿಟ್ಟು ಫೇಕ್, ವಿಕೃತ ಹಾಗೂ ಪ್ರಚೋದನಕಾರಿ ವಿಚಾರಗಳ ಹಿಂದೆ ಬೀಳುತ್ತಾರೆಂಬುದಕ್ಕೆ ಮತ್ತು ಸಾಮಾಜಿಕ ಜಾಲತಾಣಗಳನ್ನು ಅದಕ್ಕೆ ಹೇಗೆ ಪರಿಣಾಮಕಾರಿಯಾಗಿ ಬಳಸಬಹುದೆಂಬುದಕ್ಕೆ ಭಾರತ ಮತ್ತು ಬ್ರೆಜಿಲ್ ಚುನಾವಣೆಗಳೇ ಸಾಕ್ಷಿ. 21 ಕೋಟಿ ಜನಸಂಖ್ಯೆಯ ಬ್ರೆಜಿಲ್‌ನಲ್ಲಿ 12 ಕೋಟಿ ಜನರು ವಾಟ್ಸಾಪ್ ಉಪಯೋಗಿಸುತ್ತಾರೆ. ಭಾರತದಲ್ಲಿ ಈ ಸಂಖ್ಯೆ 70 ಕೋಟಿ ಮುಟ್ಟುತ್ತಿದೆ. ಭಾರತೀಯ ಜನತಾ ಪಕ್ಷ ಹೇಗೆ ರಾಜಕೀಯ ಅಪಪ್ರಚಾರ (ಅನ್ನಭಾಗ್ಯದ ವಿರುದ್ದವೂ ಮಾತಾಡಿ, ನಂತರ ಅದನ್ನು ತಂದಿದ್ದೂ ಮೋದಿಯೇ ಎಂದು ಕರ್ನಾಟಕ ಚುನಾವಣೆಯಲ್ಲಿ ಮಾಡಿದರೋ ಹಾಗೆ) ಮಾಡಿತ್ತೋ ಹಾಗೆಯೇ ಬ್ರೆಜಿಲ್‌ನಲ್ಲೂ ಕೂಡ ಈ ವಿಕೃತರ ಗೆಲುವಿಗೆ ವಾಟ್ಸಾಪ್‌ಸುದ್ದಿಗಳೇ ನಿರ್ಣಾಯಕ ಕಾರಣ ಎನ್ನುತ್ತಿದ್ದಾರೆ. ಈ ರೀತಿಯ ಸುಳ್ಳು ಸುದ್ದಿಗಳು ಪ್ರಣಾಳಿಕೆ ಬಿಟ್ಟು ಎದುರಾಳಿ ಪಕ್ಷದ ತೇಜೋವಧೆಗೆ ಹೆಚ್ಚು ಒತ್ತು ನೀಡಿತ್ತು. ಕಾರ್ಮಿಕ ಪಕ್ಷದ ಹದ್ದದ್‌ರ ಕುರಿತಂತೆ ಮತ್ತು ಪ್ರಗತಿಪರ ಧೋರಣೆಗಳ ವಿರುದ್ದ ಇಲ್ಲಸಲ್ಲದ ಆರೋಪಗಳು, ತಿದ್ದಿದ ಚಿತ್ರ ಮತ್ತು ವಿಡಿಯೋಗಳು ವೈರಲ್ ಆಗಿದ್ದವು. ಒಂದು ತಿದ್ದಿದ ವಿಡಿಯೋವನ್ನು ೩೦ ಲಕ್ಷ ವೀಕ್ಷಣೆಯ ನಂತರ ಯೂಟ್ಯೂಬ್ನಿಂದ ತೆಗೆದುಹಾಕಲಾಗಿತ್ತು. ಈ ಅನಾಮಿಕ ಸುಳ್ಳು ಪ್ರಚಾರದ ಹಾದಿಯನ್ನು ಬಹುಬೇಗ ತಿದ್ದಿಕೊಳ್ಳದಿದ್ದಲ್ಲಿ ದೇಶಗಳ ಸಾರ್ವಭೌಮತ್ವ ಕುಸಿದು ಬೀಳುವ ಆತಂಕ ತಪ್ಪಿದ್ದಲ್ಲ. ವಿಪರ್ಯಾಸವೆಂದರೆ ಯಾರು ರಾಷ್ಟ್ರವಾದಿ ಮತ್ತು ಉಗ್ರ ದೇಶಭಕ್ತಿಯನ್ನು ಅಬ್ಬರದಿಂದ ಪ್ರದರ್ಶಿಸುತ್ತಿದ್ದಾರೋ ಅವರೇ ತಮ್ಮ ದೇಶಗಳ ಆರ್ಥಿಕ, ಸಾಮಾಜಿಕ ಸಾರ್ವಭೌಮತ್ವವನ್ನು ಕಡೆಗಣಿಸುತ್ತಿದ್ದಾರೆ.

ಈ ವಿಕೃತ ಗೆಲುವನ್ನು ಫ್ರೆಂಚ್-ಬ್ರೆಜಿಲ್ ಸಮಾಜಶಾಸ್ತ್ರಜ್ಞ ಮೈಕಲ್ ಲೌಯ್ ರೋಗಗ್ರಸ್ತ ರಾಜಕೀಯದ ದೊಡ್ಡ ಪ್ರಮಾಣದ ಗೆಲುವು ಎಂದು ಬಣ್ಣಿಸಿದ್ದಾರೆ. ಇದು ಬ್ರೆಜಿಲ್ ದೇಶವನ್ನು ಮತ್ತಷ್ಟು ಬಿಕ್ಕಟ್ಟಿನತ್ತ ಕೊಂಡೊಯ್ಯುತ್ತದೆ ಎಂಬುದರಲ್ಲಿ ಯಾವುದೇ ಸಂದೇಹ ಇಲ್ಲ. ಇದು ಅಲ್ಪಾವಧಿಯಲ್ಲಿ ತನ್ನ ಸುತ್ತಮುತ್ತಲಿನ ಎಡಪಂಥೀಯ ಸರ್ಕಾರಗಳ ಪತನವನ್ನು ಮತ್ತು ಕಾರ್ಮಿಕ ಪಕ್ಷ ಮಾಡಿದ ಅಲ್ಪ ಸ್ವಲ್ಪ ಜನಕಲ್ಯಾಣ ಯೋಜನೆಗಳನ್ನು ಸಂಪೂರ್ಣವಾಗಿ ನಾಶ ಮಾಡಬಹುದು. ಆದರೆ ಇವರು ಶುರು ಮಾಡುವ ದೀರ್ಘಾವಧಿ ಕೆಡಕುಗಳು ಬಹಳಷ್ಟಿವೆ. ಈ ಬಲಪಂಥೀಯ ಗೆಲವುಗಳನ್ನು ಸಮಾಜದ ಎಲ್ಲ ಮಾನವಪ್ರೇಮಿ ಹೃದಯಗಳು ಮತ್ತು ಮುಖ್ಯವಾಗಿ ಮೆದುಳುಗಳು ವಿಮರ್ಶಿಸಿ ಪರ್ಯಾಯವನ್ನು ಹುಡುಕಿಕೊಳ್ಳಬೇಕಿದೆ. ಕ್ರಾಂತಿಕಾರಿ ಪಕ್ಷಗಳು ಸಂಸದೀಯ ಸುಧಾರಣಾವಾದಿ ಮಾರ್ಗ ಹುಡುಕಿಕೊಂಡಾಗ ಮತ್ತು ಜನರಲ್ಲಿ ಮೂಲಭೂತ ಬದಲಾವಣೆಯನ್ನು ತರುವಲ್ಲಿ ವಿಫಲರಾದಾಗ ಹೇಗೆ ತೀವ್ರ ಬಲಪಂಥೀಯ ರಾಜಕೀಯಕ್ಕೆ ಆಸ್ಪದ ಮಾಡಿಕೊಡುತ್ತದೆಂಬುದಕ್ಕೆ ಬ್ರೆಜಿಲ್ ರಾಜಕೀಯ ಒಂದು ಸ್ಪಷ್ಟ ಉದಾಹರಣೆ ಮತ್ತು ಬಹುಮುಖ್ಯ ಪಾಠ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...