Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...