Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...