Homeರಾಷ್ಟ್ರೀಯಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಭಾರತದಲ್ಲಿರೋ ‘ಶಿರೋಸ್ ಕೆಫೆ’ ಅಂದ್ರೆ ವಿದೇಶಿಗರಿಗೆ ತುಂಬಾ ಇಷ್ಟವಂತೆ ಯಾಕೆ ಗೊತ್ತಾ?

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

- Advertisement -
- Advertisement -

ಆಗ್ರಾ ಅಂದ ತಕ್ಷಣ ನಮ್ಮೆಲ್ಲರಿಗೂ ಜ್ಞಾಪನಕ್ಕೆ ಬರುವುದು ತಾಜ್ ಮಹಲ್. ತುಂಬಾ ಸುಂದರವಾದ, ಪ್ರೇಕ್ಷಣೀಯ ಸ್ಥಳ ಅಲ್ವಾ? ತಾಜ್ ಮಹಲ್ ಬಗ್ಗೆ ನಿಮಗೆಲ್ಲಾ ಗೊತ್ತಿರುತ್ತೆ ಹಾಗಾಗಿ ನಾನಿವತ್ತು ತಾಜ್ ಮಹಲ್ ಗೆ ಹತ್ತಿರದಲ್ಲೇ ಇರುವ ಶಿರೋಸ್ ಕೆಫೆ ಬಗ್ಗೆ ಪರಿಚಯ ಮಾಡಿಕೊಡೋಣ ಅಂದುಕೊಂಡಿದ್ದೀನಿ.

ಇದೇನಿದು ‘ಶಿರೋಸ್ ಕೆಫೆ ಅಂತಾ’ ಯೋಚಿಸ್ತಿದಿರಾ?

ಆಸಿಡ್ ದಾಳಿಗೊಳಗಾದ ಸಂತ್ರಸ್ತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿರುವ ರೆಸ್ಟೋರೆಂಟ್ ತರಹದ ಚಿಕ್ಕದಾದ ಹೋಟೆಲ್ ‘ಶಿರೋಸ್ ಕೆಫೆ’. ಇತ್ತೀಚೆಗೆ ಆಗ್ರಾದ ಪ್ರಮುಖ ಸ್ಥಳಗಳಲ್ಲಿ ಇದು ಕೂಡ ಹೆಸರುವಾಸಿಯಾಗಿದೆ.

2014ರಲ್ಲಿ ಆರಂಭವಾದ ಈ ಕೆಫೆಯ ರುವಾರು ರುಪಾ(Rupa). 20ರ ಹರೆಯದಲ್ಲಿ ಆಸಿಡ್ ದಾಳಿಗೊಳಗಾಗಿದ್ದಳು. ತನ್ನಂತೆ ಇರುವ ಸಂತ್ರಸ್ತರಿಗೆ ಏನಾದರೂ ಮಾಡಬೇಕು ಎಂಬ ಕನಸು ಅವಳಲ್ಲಿತ್ತು. ಕೆಫೆ ಶುರುವಾದಂದಿನಿಂದ ಪ್ರತಿ ವರ್ಷ ಜನರಿಂದ ಕೆಫೆಯ ಬಗ್ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗ ಆಗ್ರಾ ಮಾತ್ರವಲ್ಲದೇ ಲಕ್ನೊ ಮತ್ತು ಉದಯ್ ಪುರದಲ್ಲಿಯೂ ಶಾಖೆಗಳು ಉತ್ತಮವಾಗಿ ನಡಿತಿವೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ, ಗಂಡನ ಅನುಮಾನವೆಂಬ ರೋಗದಿಂದ, ಮಾತುಕೇಳುವುದಿಲ್ಲ ಹೀಗೆ ನಾನಾ ಕಾರಣಗಳಿಗಾಗಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರೇ ಈ ಕೆಫೆಯ ಉಸ್ತುವಾರಿಗಳು. ಬಂದವರನ್ನು ಪ್ರೀತಿಯಿಂದಲೇ ಬರಮಾಡಿಕೊಳ್ಳುತ್ತಾ ಆತಿಥ್ಯ ಮಾಡುವ ಇವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು.

ಇದನ್ನು ಓದಿ: ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಆಸಿಡ್ ದಾಳಿಯ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ದೃಷ್ಠಿಯಿಂದ ರುಪಾ ಶಿರೋಸ್ ಕೆಫೆ ಎಂಬ ಯೋಜನೆಯನ್ನು ಆರಂಭಿಸಿದರು. ಮನೆಯಿಂದ ಹೊರಬರಲಾರದೇ ಮಾನಸಿಕವಾಗಿ ಬಳಲುತ್ತಿದ್ದ ಸಂತ್ರಸ್ತರು ಧೈರ್ಯದಿಂದ ಬಂದು ಇಲ್ಲಿ ಕೆಲಸ ಮಾಡುವಂತಾಗಿದೆ. ಒಬ್ಬರಿಗೊಬ್ಬರು ಜೊತೆಯಾಗಿ ಧೈರ್ಯ ತುಂಬುತ್ತಾ ಭವಿಷ್ಯದ ಬಗ್ಗೆ ಕನಸು ಕಾಣುತ್ತಿದ್ದಾರೆ.

ಈ ಕೆಫೆಗೆ ಬರುವ ಬಹುಪಾಲು ಗ್ರಾಹಕರು ವಿದೇಶಿಗರೇ ಆಗಿದ್ದು, ಕೆಫೆಯಲ್ಲಿನ ಆತಿಥ್ಯವನ್ನು ಇಷ್ಟಪಡುತ್ತಾರೆ. ಉತ್ತರ ಭಾರತದ ಆಹಾರ ಇಲ್ಲಿ ದೊರಕುತ್ತದೆ. ಗ್ರಾಹಕರಿಗೆ ಇಷ್ಟೆ ಹಣ ನೀಡಬೇಕು ಎಂದೇನಿಲ್ಲ. ಅವರಿಗೆ ಇಷ್ಟ ಬಂದಷ್ಟು ಹಣ ಕೊಡಬಹುದು ಎಂಬುದು ಇಲ್ಲಿನ ವಿಶೇಷ. ಸಾಮಾನ್ಯವಾಗಿ ಪ್ರತಿವರ್ಷ ಉತ್ತಮ ಲಾಭ ಕೆಫೆಯಿಂದ ದೊರೆಯುತ್ತದೆ. ಆಗಾಗಾ ಜನರಿಂದಲೂ ಹಣ ಸಂಗ್ರಹ ಮಾಡುತ್ತಾರೆ.

ಈ ಕೆಫೆಯಿಂದಾದ ಲಾಭವೇನು?

ಈ ಜಾಗೃತಿ ಅಭಿಯಾನದಿಂದಾಗಿ ಆಸಿಡ್ ದಾಳಿಗೊಳಗಾದ ಸಂತ್ರಸ್ತರು ಪರಸ್ಪರ ಪರಿಚಯವಾಗುತ್ತಿದ್ದಾರೆ. ನೊಂದವರಿಗೆ ಸಾಂತ್ವಾನ ಹೇಳುತ್ತಾ ಮುಂದಿನ ಹೆಜ್ಜೆಯ ಬಗ್ಗೆ ತಿಳಿವು ನೀಡುತ್ತಾರೆ. ಹಾಗೂ ಈ ಕೆಫೆ ಜೀವನೋಪಾಯದ ಮಾರ್ಗವಾಗಿದೆ.

| ಆಧಾರ: ಕರ್ಲಿಟೇಲ್ಸ್ ವೆಬ್ |

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...