Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...