Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...