Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...