Homeಅಂತರಾಷ್ಟ್ರೀಯ"ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ": ವಿಶ್ವಸಂಸ್ಥೆ ಕಳವಳ

“ಭಾರತದ ಪೌರತ್ವ ಮಸೂದೆ ತಾರತಮ್ಯದಿಂದ ಕೂಡಿದೆ”: ವಿಶ್ವಸಂಸ್ಥೆ ಕಳವಳ

- Advertisement -
- Advertisement -

ದೇಶದಲ್ಲಿ, ನಿರ್ದಿಷ್ಟವಾಗಿ ಈಶಾನ್ಯ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಜನರ ಆಕ್ರೋಶಭರಿತ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ತನ್ನ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗವು `ಇದೊಂದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದ ಶಾಸನ’ ಎಂದು ಹೇಳಿದೆ.

ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರ ಜೆರೆಮಿ ಲಾರೆನ್ಸ್ ಅವರು ಜಿನೇವಾದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ನೀಡಿದ ಹೇಳಿಕೆಯಲ್ಲಿ “ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ 2019, ಮೂಲಭೂತವಾಗಿ ತಾರತಮ್ಯ ಗುಣದಿಂದ ಕೂಡಿದೆ ಎಂಬ ಕಳವಳ ವಿಶ್ವಸಂಸ್ಥೆಗಿದೆ” ಎಂದಿದ್ದಾರೆ.

“ತಿದ್ದುಪಡಿ ಕಾಯ್ದೆಯು ಭಾರತದ ಸಂವಿಧಾನದತ್ತ ಕಾನೂನುಗಳಲ್ಲಿ ಉಲ್ಲೇಖಿಸಲಾಗಿರುವ ಎಲ್ಲರನ್ನು ಸಮಾನವಾಗಿ ಕಾಣುವ ಬದ್ಧತೆಯನ್ನೆ ಅಲ್ಲಗಳೆಯುತ್ತಿದೆ. ಅಷ್ಟೇ ಅಲ್ಲ ಸ್ವತಃ ಭಾರತವೂ ಸಹಿ ಮಾಡಿರುವ ಅಂತಾರಾಷ್ಟ್ರೀಯ ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಒಪ್ಪಂದ ಹಾಗೂ ಜನಾಂಗೀಯ ತಾರತಮ್ಯ ನಿರ್ಮೂಲನಾ ಒಪ್ಪಂದಗಳನ್ನು ಭಾರತ ಉಲ್ಲಂಘಿಸಿದಂತಾಗಿದೆ. ಈ ಒಪ್ಪಂದಗಳು ಜನಾಂಗೀಯ ಮತ್ತು ಧಾರ್ಮಿಕ ಆಧಾರಗಳಲ್ಲಿ ತಾರತಮ್ಯ ಮಾಡುವುದನ್ನು ನಿರ್ಬಂಧಿಸುತ್ತವೆ” ಎಂದಿದ್ದಾರೆ.

“ವಿಶಾಲ ಮನೋಭಾವದ ಭಾರತದ ಹಳೆಯ ಪೌರತ್ವ ನಿಯಮಗಳು ಜಾರಿಯಲ್ಲಿರುತ್ತವೆಯಾದರು ಈ ಹೊಸ ಕಾಯ್ದೆ ಮಾತ್ರ ಪೌರತ್ವ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ವಲಸೆಯ ಸ್ಥಿತಿ ಏನೇ ಇರಲಿ, ಎಲ್ಲಾ ವಲಸಿಗರನ್ನು ಅವರಿಗಿರುವ ಮಾನವಹಕ್ಕುಗಳನ್ನು ಪರಿಗಣಿಸಿ ಸಮಾನ ಗೌರವ, ರಕ್ಷಣೆಯನ್ನು ಒದಗಿಸಬೇಕಾದ್ದು ಸರ್ಕಾರಗಳ ಕರ್ತವ್ಯ” ಎಂಬ ಮಾತನ್ನೂ ಅವರು ಹೇಳಿದ್ದಾರೆ.

“ಕೇವಲ 12 ತಿಂಗಳ ಹಿಂದಷ್ಟೇ ಭಾರತವು ಸಮಗ್ರ ಸುರಕ್ಷತಾ, ನಿಯಮಿತ ಮತ್ತು ಕ್ರಮಬದ್ಧ ವಲಸೆ ಒಪ್ಪಂದವನ್ನು ಅನುಮೋದಿಸಿತ್ತು. ಈ ಒಪ್ಪಂದವು ಅಸಹಾಯಕ ಪರಿಸ್ಥಿತಿಗಳಲ್ಲಿ ವಲಸಿಗರ ಬೇಡಿಕೆಗಳನ್ನು ಈಡೇರಿಸುವುದು, ಅವರನ್ನು ಅನಿಯಂತ್ರಿತವಾಗಿ ಬಂಧಿಸುವುದನ್ನು ಹಾಗೂ ಸಾರಾಸಗಟಾಗಿ ಹೊರಹಾಕುವುದನ್ನು ವಿರೋಧಿಸುವ ಮೂಲಕ ಅವರ ಮಾನವಹಕ್ಕುಗಳನ್ನು ಗೌರವಿಸುವುದಕ್ಕೆ ಬದ್ಧವಾಗಿರುವ ಒಪ್ಪಂದ.” ಎಂದೂ ಅವರು ತಿಳಿಸಿದ್ದಾರೆ.

ವಲಸಿಗರಿಗೆ ಪೌರತ್ವ ನೀಡುವ ಕ್ರಮವನ್ನು ಸ್ವಾಗತಿಸಬಹುದಾದರು ಅದು ಎಲ್ಲಾ ವಲಸಿಗರನ್ನು ಸಮನಾಗಿ ಕಾಣುವ, ಸದೃಢ ರಾಷ್ಟ್ರೀಯ ಆಶ್ರಯ ವ್ಯವಸ್ಥೆಯ ಮೂಲಕ ಮಾಡಬೇಕಿರುತ್ತದೆ ಎಂಬ ಅಭಿಪ್ರಾಯವನ್ನೂ ವಕ್ತಾರರು ಹೊರಹಾಕಿದ್ದಾರೆ.

“ಭಾರತದ ಸುಪ್ರೀಂ ಕೋರ್ಟ್ ಈ ಹೊಸ ಕಾಯ್ದೆಯನ್ನು ಪರಾಮರ್ಶಿಸಲಿದೆ ಎಂದು ನಮಗೆ ತಿಳಿದು ಬಂದಿದೆ. ಭಾರತದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬದ್ಧತೆಗಳೇನು ಎಂಬುದನ್ನು ಮನಗಂಡು ಹೊಸ ಕಾಯ್ದೆ ಎಷ್ಟರ ಮಟ್ಟಿಗೆ ಸಮಂಜಸವಾದುದು ಎಂಬ ಬಗ್ಗೆ ತನ್ನ ತೀರ್ಪು ನೀಡಲಿದೆ ಎಂದು ನಾವು ಭರವಸೆ ಇಟ್ಟುಕೊಂಡಿದ್ದೇವೆ” ಎಂದು ಲಾರೆನ್ಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಪ್ಘಾನಿಸ್ತಾನದಲ್ಲಿ ಜನಾಂಗೀಯ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತೀಯ ಪೌರತ್ವ ನೀಡುವ ಅವಕಾಶ ಕಲ್ಪಿಸುವ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಇದು ಲೋಕಸಭೆ, ರಾಜಸ್ಯಭೆಗಳೆರಡಲ್ಲೂ ಅನುಮೋದನೆಗೊಂಡು ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದ ನಂತರ ಕಾನೂನಾಗಿ ಜಾರಿಗೆ ಬಂದಿದೆ. ಆದರೆ ಜನಾಂಗೀಯ ಆಧಾರದಲ್ಲಿ ವಲಸಿಗರನ್ನು ರಾಜಕೀಯ ಕಾರಣಕ್ಕೆ ಮಾನ್ಯ ಮಾಡುವ ಈ ವಿವಾದಿತ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಅಸ್ಸಾಂನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಈಗಾಗಲೇ ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಮೆರಿಕಾ ಸಂಸತ್ತು ಪೌರತ್ವ ಮಸೂದೆ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾ ಮತ್ತು ಅಪ್ಘಾನಿಸ್ತಾನಗಳೂ ತಮ್ಮ ಮುನಿಸು ವ್ಯಕ್ತಪಡಿಸಿದ್ದವು. ಜಪಾನ್ ಪ್ರಧಾನಿ ಶಿನ್ಜೋ ಅಬೆ ತಮ್ಮ ಭಾರತ ಪ್ರವಾಸವನ್ನೇ ಮುಂದೂಡಿದ್ದಾರೆ. ಹೀಗೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರಕ್ಕೆ ರಾಜತಾಂತ್ರಿಕ ಒತ್ತಡಗಳು ದಟ್ಟವಾಗುತ್ತಿರುವ ಸಂದರ್ಭದಲ್ಲೇ ವಿಶ್ವಸಂಸ್ಥೆ ತನ್ನ ಕಳವಳ ಹೊರಹಾಕಿರುವುದು ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

(ಪಿಟಿಐ ಮಾಹಿತಿ ಆಧರಿಸಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...