Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...