Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...