Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...