Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...