Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...