Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...