Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...