Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...