Homeಕರ್ನಾಟಕಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ - ಮಾಜಿ ಸಿಎಂ ಸಿದ್ದರಾಮಯ್ಯ

ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ – ಮಾಜಿ ಸಿಎಂ ಸಿದ್ದರಾಮಯ್ಯ

ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

“ದೇಶದ ಜಿಡಿಪಿ ಕಳೆದ 5 ವರ್ಷಗಳಲ್ಲೇ ಕನಿಷ್ಟ ಮಟ್ಟಕ್ಕೆ ಇಳಿದಿದೆ, ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಗರಿಷ್ಟ ಮಟ್ಟ ತಲುಪಿದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಭಾವನೆಗಳಿಗೆ ಒಳಗಾಗಿ ಮತ ನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ನಲ್ಲಿ ಇಂದು ಬರೆದುಕೊಂಡಿದ್ದಾರೆ.

ಪುಲ್ವಾಮ ದಾಳಿಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಕಾರಣ. ದೇಶದ ಸಾವಿರಾರು ಸೈನಿಕರನ್ನು ಸ್ಥಳಾಂತರಿಸುವಾಗ ಕನಿಷ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಸರ್ಕಾರದ ತಪ್ಪು. ಇದನ್ನ ಪ್ರಶ್ನಿಸಬೇಕಾಗಿದ್ದ ಮಾಧ್ಯಮಗಳು ಕೂಡ ಜಾಣ ಕುರುಡು ಪ್ರದರ್ಶಿಸಿದವು. ಪುಲ್ವಾಮ ದುರಂತದಲ್ಲಿ ಮಡಿದ ನಮ್ಮ ಸೈನಿಕರ ಸಾವಿಗೆ ಮೋದಿಯವರೇ ನೇರಹೊಣೆ. ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ ಎಂದು ಹಲವು ತಿಂಗಳುಗಳ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮೋದಿಯವರು ಪ್ರಧಾನಿ ಆಗಿರುವುದರಿಂದ ಯಾರಿಗೆ ಸಂತೋಷವಾಗಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಸೆ ಮಾತ್ರ ಈಡೇರಿದೆ” ಎಂದು ಚುನಾವಣಾ ಸಂದರ್ಭದಲ್ಲಿ ಇಮ್ರಾನ್ ಖಾನ್ ಹೇಳಿದ್ದು ಮಾತು ನೆನಪಿಸಿ ವ್ಯಂಗ್ಯವಾಡಿದ್ದಾರೆ.

ರೈತರ, ಬಡವರ, ಸೈನಿಕರ ಕಷ್ಟದ ಬಗ್ಗೆ ಮಾತನಾಡಿದರೆ ನಮ್ಮನ್ನು ದೇಶದ್ರೋಹಿ ಎನ್ನುತ್ತಾರಲ್ಲ, ಈ ರೈತರು, ಬಡವರು, ದಲಿತರು, ಸೈನಿಕರು ಇವರೆಲ್ಲ ಅನ್ಯಗ್ರಹ ಜೀವಿಗಳೇ? ಇವರ ಸಮಸ್ಯೆ ಬಗ್ಗೆ ಪ್ರಶ್ನಿಸಬಾರದೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ಪ್ರಶ್ನಿಸುವವರನ್ನೆಲ್ಲ ದೇಶದ್ರೋಹಿ ಎನ್ನುವುದು ತಪ್ಪು ಎಂದು ಬರೆದಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಎಸ್‌ಐಟಿ ತಂಡ ಸೂಕ್ತ ಮತ್ತು ಪಾರದರ್ಶಕ ತನಿಖೆ ನಡೆಸಿ ಸತ್ಯವನ್ನು ಹೊರತರಲಿದೆ ಎಂಬ ಭರವಸೆಯಿದೆ. ಇದು ತಮ್ಮ ವಿರುದ್ಧ ರೂಪಿಸಿದ ಷಡ್ಯಂತ್ರ ಎಂದು ಅನಿಸಿದವರು ಎಸ್‌ಐಟಿ ತಂಡದ ಎದುರು ಹೋಗಿ ತಮ್ಮ ಅನುಮಾನ ಹೇಳಿಕೊಳ್ಳಲಿ ಎಂದು ಸಹ ಫೇಸ್ ಬುಕ್ ಪೋಸ್ಟ್ ನಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳೆದ ಚುನಾವಣೆಯಲ್ಲಿ ನಮ್ಮರಾಜ್ಯದಲ್ಲಿ ಭಾಜಪಕ್ಕೆ ಬಹುಮತ ಬರುವಂತೆ ಮತದಾನ ಪಡೆಯಲು ಭಾಜಪ ಕಾರ್ಯಕರ್ತರ ಪ್ರಯತ್ನ ಎಷ್ಟು ಕಾರಣವೋ ಅಷ್ಟೇ ಕಾರಣ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಅದರ ಕಾರ್ಯಕರ್ತರು ಜನರನ್ನು ತಲುಪಲು ವಿಫಲರಾದದ್ದು.
    ದಕ್ಷಿಣ ಭಾರತದ ಐದು ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಭಾಜಪಕ್ಕೆ ಅದ್ಭುತ ಗೆಲುವು ದೊರೆತದ್ದು ಹೇಗೆ?
    ಎಲ್ಲಾ ರೀತಿಯ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ನಾಯಕರುಗಳು ಪಕ್ಷದ ಪದವಿಗಳಿಗೆ ರಾಜಿನಾಮೆ ಕೊಟ್ಟು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷವನ್ನು ಮತ್ತೆ ಬಲಪಡಿಸುವ ಅಗತ್ಯವಿದೆ.
    ಆದರೆ ಈಗಿನ ಸ್ವಾರ್ಥಿ ನಾಯಕರಿಂದ ಅದು ಸಾಧ್ಯವಿಲ್ಲ. ಹಾಗಾಗಿ ಭಾಜಪ ಮೆರೆಯುತ್ತಿದೆ. ನಾವು ದಕ್ಷಿಣದ ಇತರ ರಾಜ್ಯಗಳ ಜನರಿಂದ ಮತ್ತು ಅಲ್ಲಿನ ನಾಯಕರುಗಳಿಂದ ಕಲಿಯುವುದು ಬಹಳಷ್ಟಿದೆ. ಮಾನ್ಯ ಸಿದ್ದರಾಮಯ್ಯ ಅವರು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಪಡಲಿ. ಮಾದರಿಯಾಗಿ ನಾಯಕ ಪಟ್ಟ ಬಿಟ್ಟು ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಿ ಎಂದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...