Homeಮುಖಪುಟಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

ಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

- Advertisement -
- Advertisement -

ಉತ್ತರ ಕನ್ನಡದ ಒಂದು ಕಾಲದ ಕೈಗಾರಿಕಾ ನಗರ ದಾಂಡೇಲಿ ಭೂಮಾಫಿಯಾದ ಆಡಂಬೋಲದಂತಾಗಿ ಹೋಗಿದೆ! ದೈತ್ಯ ರಾಜಕಾರಣಿ ದೇಶಪಾಂಡೆ ದೊಡ್ಡ ಕೈಗಾರಿಕೆಗಳ ಪ್ರಭಾವಿ ಮಂತ್ರಿ ಮಾಂಡಲೀಕನಾಗಿದ್ದಾಗಲೇ ಇಲ್ಲಿಯ ಒಂದೊಂದೇ ಕಾರ್ಖಾನೆಗಳು ಬಾಗಿಲು ಎಳೆದುಕೊಂಡಿರುವುದು ಇವತ್ತಿಗೂ ಬಿಡಿಸಲಾಗದ ಒಗಟಾಗೇ ಉಳಿದಿದೆ. ಈಗೇನಿದ್ದರೂ ದಾಂಡೇಲಿಯಲ್ಲಿ ಪ್ರವಾಸೋದ್ಯಮ “ದಂಧೆ”ಯ ಭಯಾನಕ ಭರಾಟೆ! ದಾಂಡೇಲಿ ಜೋಯಿಡಾದ ನಿತ್ಯಹರಿದ್ವರ್ಣ ಕಾಡಿನ ನೀರವತೆ ಮೃಗ-ಪಕ್ಷಿಗಳ ಕೂಗು-ಕಲರವ, ಕಾಳಿ-ಪಾಂಡರಿ ನದಿಗಳ ನಿನಾದ ತಂಡೋಪತಂಡವಾಗಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಒಂದು ವಾರಕ್ಕೆ ಹಲವು ಕೋಟಿ ವಹಿವಾಟು ಆಗುತ್ತಿದೆ.
ದಾಂಡೇಲಿ-ಜೋಯಿಡಾದ ಸುತ್ತಲೂ ರೆಸಾರ್ಟ್, ಹೋಮ್‍ಸ್ಟೇಗಳದೇ ಹಾವಳಿ. ಪ್ರವಾಸೋದ್ಯಮದ ಮೋಜು-ಮಸ್ತಿ ಭೂ ಮಾಫಿಯಾ ನಿಭಾಯಿಸುತ್ತಿದೆ. ಹೀಗಾಗಿ ದಾಂಡೇಲಿಯ ಕಾಡಿನ ಅಂಚಿನ ಮತ್ತು ಕಾಳಿ ನದಿದಂಡೆಯ ಒಂದಿಂಚು ಜಾಗಕ್ಕೂ ಬಂಗಾರದ ಬೆಲೆ ಬಂದಿದೆ! ಟೂರಿಸಮ್‍ಗೆ ತೆಕ್ಕೆಹಾಕಿಕೊಂಡಿರುವ ಲ್ಯಾಂಡ್ ಲಫಡಾ, ಲಡಾಯಿ ದಾಂಡೇಲಿಯಲ್ಲಿ ನಿತ್ಯನೂತನ ಮುಂಬೈ-ಕೇರಳ-ಬೆಳಗಾವಿ-ಬೆಂಗಳೂರು ಮತ್ತು ಸ್ಥಳೀಯ ಭೂಭಾನ್ಗಡಿದಾರರು ಯಾರ್ಯಾರದೋ ಜಾಗ ಕಬಳಿಸಲು ಹೊಂಚುಹಾಕಿ ಕುಂತಿದ್ದಾರೆ. ಧೋಖಾ ಬಾಜಿಗಳ ಹಿಂದೆ ಸರ್ಕಾರಿ ಏಜೆನ್ಸಿಗಳು, ಕಾನೂನಿನ ಸಿಕ್ಕು ಬಿಡಿಸುವ ನ್ಯಾಯವಾದಿಗಳು, ಖಾಕಿಕಿರಾತಕರೆಲ್ಲ ಅಡಗಿಕೊಂಡಿದ್ದಾರೆ. ರೆಸಾರ್ಟ್ ಉದ್ಯಮಿಯಾಗಿ ಕೊಪ್ಪರಿಗೆ ಕಾಸು ಬಾಚುವ ದುರಾಸೆಯ ಪೈಪೋಟಿಯಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೆ ಈಗ ರಕ್ತದ ಕಲೆಯೂ ಅಂಟಿಬಿಟ್ಟಿದೆ!
ಕಳೆದ ಶುಕ್ರವಾರ, ಜುಲೈ 27ರ ರಾತ್ರಿ 9.30ರ ಹೊತ್ತಿಗೆ ಮುಸುಕುಧಾರಿ ಪಾತಕಿಯ ಮಚ್ಚಿನೇಟಿಗೆ ಹತರಾದ ದಾಂಡೇಲಿಯ ನಾಮಾಂಕಿತ ನ್ಯಾಯವಾದಿಯೂ, ಸಾಮಾಜಿಕ ಹೋರಾಟಗಾರರೂ ಆಗಿದ್ದ ಅಜಿತ್‍ನಾಯಕ್ ಬರ್ಬರ ಹತ್ಯೆ ಪ್ರಕರಣವೂ ಇದೇ ಪ್ರವಾಸೋದ್ಯಮ ನಂಟಿನ ಭೂ ಮಾಫಿಯಾದ ಭೀಭತ್ಸ ಕಾರ್ಯಾಚರಣೆ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಅಜಿತ್ ವಕೀಲಿಕೆಯಿಂದ ಭರ್ಜರಿ ದುಡ್ಡು-ಭೂಮಿ ಮಾಡಿಕೊಂಡಿದ್ದರು. ಸಣ್ಣ ಸೈಜಿನ ರಾಜಕಾರಣಿಯೂ ಆಗಿದ್ದರು. ದಾಂಡೇಲಿ ನಗರಸಭೆಯ ಅರ್ಯರೂ ಒಮ್ಮೆ ಆಗಿದ್ದರು. ಬ್ಲಾಕ್-ಕಾಂಗ್ರೆಸ್ ಕಮಿಟಿಯ ಅಧ್ಯಕ್ಷತೆ ನಿಭಾಯಿಸಿದ್ದರು; ಎಂಪಿಯಾಗಿದ್ದ ಮ್ಯಾಗಿ, ಸಿಎಂ ಆಗಿದ್ದ ‘ಬಂ’ ಬಾಂಧವ್ಯ ಅಜಿತ್‍ಗೆ ಇತ್ತು. ದಾಂಡೇಲಿಯ ಪರಿಸರ, ಸಾಮಾಜಿಕ ವ್ಯವಸ್ಥೆಗೆ ತೊಂದರೆಯಾದಾಗ ಆತ ಸೆಟೆದು ನಿಲ್ಲುತಿದ್ದರು. ಹೋರಾಟ ಕಟ್ಟೆ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.
ದಾಂಡೇಲಿ ತಾಲ್ಲೂಕು ಮಾಡಬೇಕೆಂದು ಸಂಘಟನೆ ಮಾಡಿ ಹೋರಾಟ ಅಜಿತ್‍ನಾಯಕ್ ರೂಪಿಸಿದ್ದರು. ಈಚೆಗೆ ದಾಂಡೇಲಿ ತಾಲ್ಲೂಕು ಘೋಷಣೆಯಾದಾಗ ಆತ ತುಂಬ ಖುಷಿಯಾಗಿದ್ದರು. ದಾಂಡೇಲಿಯ ಜೀವನದಿ ಕಾಳಿ ಬೆನ್ನಿವನ ಮೇಲೆ ಸಾಲಾಗಿ ಕಟ್ಟಲಾಗಿರುವ ಜಲವಿದ್ಯುತ್ ಡ್ಯಾಮ್‍ನಿಂದಾಗುವ ಡ್ಯಾಮೇಜ್ ಅರಿವಿನ ಕಾಳಿ ಬಚಾವ್ ಆಂದೋಲನದಲ್ಲಿ ಅಜಿತ್ ಸಕ್ರಿಯರಾಗಿದ್ದರು; ನದಿಯಿಂದ ಎತ್ತುವ ಮರಳು ಮಾಫಿಯಾ, ಕೈಗಾರಿಕಾ ಮಾಲಿನ್ಯ ಮಾಫಿಯಾದ ಕಣ್ಣುರಿಗೂ ಆತ ಕಾರಣರಾಗಿದ್ದರು. ಆದರೆ ಇದ್ಯಾವುದೂ ಆತನ ಕೊಂದೇ ಹಾಕುವಷ್ಟು ಸೇಡಿನ ಶತ್ರುಗಳನ್ನೇನೂ ಸೃಷ್ಟಿಸಿರಲಿಲ್ಲ. ಹಾಗಂತ ಆತ ಗÀುಣಸ್ವಭಾವ ಕಂಡಿರುವ ದಾಂಡೇಲಿಯ ಜನರು ಹೇಳುತ್ತಾರೆ.
ಹಾಗಿದ್ದರೆ ಅಜಿತ್‍ನಾಯಕ್‍ರ ಕೊಲೆ ಮಾಡುವಂಥ ಹಠದ ಜಿದ್ದಿನ ಹಿನೆÀ್ನಲೆ ಏನಿರಬಹುದು ಎಂದು ಉತ್ತರ ಕನ್ನಡದಲ್ಲಿ ಬಿರುಸಿನ ಚರ್ಚೆಗಳು ನಡೆದಿದೆ. ಪೊಲೀಸರು ಆತನ ವಕೀಲಿ ವೃತ್ತಿಗೆ ಸುತ್ತಿಕೊಂಡಿದ್ದ ಒಂದಿಷ್ಟು ಭೂಮಾಫಿಯಾ ವ್ಯವಹಾರಗಳತ್ತ ತನಿಖೆ ಕೇಂದ್ರೀಕರಿಸಿದ್ದಾರೆ. ಈಚೆಗೆ ಅಜಿತ್‍ನಾಯಕ್‍ಗೆ ಭೂಮಿಯ ಮೋಹ ವಿಪರೀತವಾಗಿತ್ತು. ಆತ ಹಲವು ಕಡೆ ಬೇನಾಮಿಯಾಗಿ ಭೂಖರೀದಿಯೂ ಮಾಡಿದ್ದರು. ರೆಸಾರ್ಟ್ ಬಿಸ್ನೆಸ್‍ನ ಸೆಳೆತಕ್ಕೆ ಬಿದ್ದಿದ್ದರಂತೆ. ಕಾಳಿನದಿ ತೀರದ ಮೌಳಂಗಿ ಎಂಬ ಮನಮೋಹಕ ಪ್ರದೇಶದ ಪ್ರೈಮ್ ಲ್ಯಾಂಡ್ ಮೇಲೆ ಅಜಿತ್ ಕಣ್ಣು ಬಿದ್ದಿತ್ತಂತೆ. ಇದೇ ಆತನಿಗೆ ಗಂಡಾಂತರಕಾರಿ ಆಯ್ತೆಂಬ ಕಾರಾರುವಾಕ್ಕಾದ ಲೆಕ್ಕಾಚಾರದ ಮಾತುಗಳೀಗ ದಾಂಡೇಲಿಯಲ್ಲಿ ಮೊಳಗಲಾರಂಭಿಸಿದೆ!
ಒಂದು ಸುದ್ದಿಯಂತೆ ಮೌಳಂಗಿಯ ಎರಡು ದಲಿತ ಕುಟುಂಬದ ಮಧ್ಯೆ ಭೂವ್ಯಾಜ್ಯ ನಡೆದಿತ್ತು. ಒಂದು ಕಡೆ ವಕೀಲರಾಗಿ ಅಜಿತ್‍ನಾಯಕ್ ನಿಂತಿದ್ದರು. ಎದುರಾಳಿ ತಂಡದ ಪಾಂಡುರಂಗ ಕಾಂಬಳೆಗೆ ಬಲಾಢ್ಯ ಭೂಮಾಫಿಯಾದ ನಂಟಿತ್ತು. ಕಾಂಬಳೆಯ ಜಾಗವನ್ನು ಎದುರುದಾರರು ಕಬ್ಜಾ ಮಾಡಿಕೊಂಡಿದ್ದರು. ಇದು ಘನಘೋರ ಕಾಳಗಕ್ಕೂ ಕಾರಣವಾಗಿಹೋಯ್ತು. ಆಗ ಅಜಿತ್ ನಾಯಕ್ ಮುತುವರ್ಜಿಯಲ್ಲಿ ಸರ್ವೇಯೂ ನಡೆಯಿತು. ತಾವೇ ಖುದ್ದು ನಿಂತು ಮೋಜುಣಿ ಮಾಡಿಸಿದ್ದರಂತೆ. ದೀಪಕ್ ಯಾನೆ ಪಾಂಡುರಂಗ ಕಾಂಬಳೆಯವರ ವಿರುದ್ಧ ಪೊಲೀಸ್ ಕಂಪ್ಲೇಂಟೂ ಆಗಿತ್ತು. ಪೊಲೀಸರು ಅಜಿತ್‍ನಾಯಕ್‍ರ ಪ್ರಭಾವದಿಂದ ಎದುರಾಳಿಗಳನ್ನು ಸತಾಯಿಸಿದ್ದರು. ಅಷ್ಟೇ ಅಲ್ಲ, ಕೆರಳಿದ ಕಾಂಬಳೆ ಪಾಳಯವು ಅಜಿತ್‍ನಾಯಕ್‍ರ ಕಕ್ಷಿದಾರನ ಜಾಗಕ್ಕೆ ಮಾರಕಾಸ್ತ್ರಗಳ ಸಮೇತ ಲಗ್ಗೆಹಾಕಿ ಧಮಕಿ ಹಾಕಿತ್ತು. ಒಂದೆಡೆ ತಗಾದೆ ನ್ಯಾಯಾಲಯ ಮೆಟ್ಟಿಲೇರಿದರೆ, ಮತ್ತೊಂದೆಡೆ ಆರೋಪಿಗಳಿಗೆ ಪೊಲೀಸರು ಜೈಲಿಗೆ ಹಾಕಿ ಬೆಂಡೆತ್ತಿದ್ದರು. ಇದಕ್ಕೆಲ್ಲ ವಕೀಲ ಅಜಿತ್‍ನಾಯಕ್ ಚಿತಾವಣಿಯೇ ಕಾರಣವೆಂಬ ಸಿಟ್ಟು ಕಾಂಬಳೆ ಕುಟುಂಬಕ್ಕಿತ್ತು. ಕೆರಳಿ ಬುಸುಗುಡುತ್ತಿದ್ದ ಕಾಂಬಳೆ ತಂಡ ಅಜಿತ್‍ನಾಯಕ್‍ಗೆ ಬೆದರಿಕೆ ಫೋನ್ ಕರೆಗಳನ್ನು ಆಗಾಗ ಮಾಡುತ್ತಲೇ ಇತ್ತು.
ಇದನ್ನು ಅಜಿತ್ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ ಈಗ ದಾಂಡೇಲಿಯಲ್ಲಿರುವ ಪುಕಾರುಗಳ ಪ್ರಕಾರ ತುಂಬ ಬೆಲೆಬಾಳುವ ಮಹತ್ವದ ಟೂರಿಸಮ್ ಸೈಟಾಗಿದ್ದ ಮೌಳಂಗಿಯ ಜಾಗದಲ್ಲಿ ಬೇನಾಮಿ ರೆಸಾರ್ಟ್ ಮಾಡುವ ಸ್ಕೆಚ್ ಹಾಕಿದ್ದ ಅಜಿತ್‍ನಾಯಕ್ ತುಂಬ ವ್ಯವಸ್ಥಿತವಾಗಿ ಎದುರಾಳಿಗಳ ಹಣಿಯಲು ಹತ್ತಿದ್ದರು. ಆದರೆ ಇದೇ ಜಾಗಕ್ಕಾಗಿ ಬಲಾಢ್ಯ ಭೂಮಾಫಿಯಾ ಒಂದು ಪ್ರಯತ್ನ ನಡೆಸಿ ಮತ್ತೊಂದು ದಲಿತÀ ಕುಟುಂಬದ ಬೆನ್ನಿಗೆ ನಿಂತಿತ್ತು. ಮೌಳಂಗಿಯಲ್ಲಿ ಈಕೋ ಪಾರ್ಕ್ ಆದ ಬಳಿಕ ವಿವಾದಿತ ಜಾಗದ ಕಿಮ್ಮತ್ತು ಜಾಸ್ತಿಯಾಗಿತ್ತು; ಅಜಿತ್ ನಾಯಕ್ ಕೂಡಾ ಸದ್ರಿ ಜಾಗದ ಬಗ್ಗೆ `ವಿಶೇಷ’ ಆಸಕ್ತಿ ವಹಿಸಿದ್ದರು. ಇದು ಪಾಂಡುರಂಗ ಕಾಂಬಳೆಯ ಆಕ್ರೋಶ ಹೆಚ್ಚಿಸಿತ್ತು. ಈ ದ್ವೇಷ ಒಳಗೊಳಗೇ ಹೊಗೆಯಾಡುತ್ತಲೇ ಇತ್ತು. ಅಜಿತ್‍ನಾಯಕ್‍ರ ಕಾನೂನು ತಂತ್ರಗಾರಿಕೆ, ಖಾಕಿಗಳ ಮೇಲಿನ ಹಿಡಿತದಿಂದ ಎದುರಾಳಿ ತಂಡ ಹೈರಾಣಾಗಿಹೋಗಿತ್ತು. ಇದು ಕೊಲೆಗೂ ಪ್ರೇರೇಪಿಸಿತೆಂಬ ತರ್ಕ ನಡೆದಿದೆ. ಇದು ಜನಸಾಮಾನ್ಯರದ್ದಷ್ಟೇ ಅಲ್ಲ, ಪೊಲೀಸರ ತಲೆಯೂ ತಿನ್ನುತ್ತಿದೆ.
ಹಂತಕರು ಹಲವು ದಿನಗಳಿಂದ ಅಜಿತ್‍ನಾಯಕ್ ಚಲನವಲನ, ಚಟುವಟಿಕೆ ಮೇಲೆ ನಿಗಾಯಿಟ್ಟು ನೋಡಿದ್ದಾರೆ. ಆತ ಅಂದು ರಾತ್ರಿ ದಾಂಡೇಲಿಯ ಜೆಎನ್ ರಸ್ತೆಯಲ್ಲಿರುವ ಕಚೇರಿಯಿಂದ ಹೊರಬರುವುದನ್ನೇ ಕಾದು ಕುಳಿತಿದ್ದಾರೆ. ಒಬ್ಬರೇ ಬರುವುದು ಖಾತ್ರಿಯಾಗಿದೆ. ಆತ ಕಾರಿನ ಬಳಿ ಹೋಗುವಾಗ ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ತಲೆಯ ಎಡಭಾಗ ಸೀಳಿಹೋಗಿದೆ. ಕಿವಿಯೂ ಚಿಂದಿಯಾಗಿದೆ. ಕೊಚ್ಚಿದ ರಭಸಕ್ಕೆ ಅಜಿತ್ ನಿಂತಲ್ಲೇ ಕುಸಿದು ರಕ್ತದ ಮಡುವಲ್ಲಿ ಒದ್ದಾಡಿ ಜೀವ ಬಿಟ್ಟಿದ್ದಾರೆ. ಕತ್ತಲಲ್ಲಿ ಹಂತಕ ಕರಗಿಹೋಗಿದ್ದಾನೆ. ಪೊಲೀಸರು ಈ ಲ್ಯಾಂಡ್ ಪ್ರಕರಣದತ್ತಲೇ ತನಿಖೆ ನಡೆಸಿದ್ದಾರೆ. ಹಂತಕನನ್ನು ಬಂಧಿಸಲಾಗಿದೆ ಎಂಬ ಅನಧಿಕೃತ ಸುದ್ದಿಯೂ ಹಬ್ಬಿದೆ ಯಲ್ಲಾಪುರದಲ್ಲಿ ಸೆರೆಸಿಕ್ಕಿರುವ ಹಂತಕ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನಂತೆ!
ಆತ ಅಸ್ತ್ರವಷ್ಟೇ! ಬಳಸಿದ್ದು ಯಾರೆಂಬುದು ಬಹಿರಂಗವಾಗಬೇಕಾಗಿದೆ. ಒಂದಂತೂ ಖರೆ; ಅಜಿತ್‍ನಾಯಕ್ ಕೋಲೆ ದಾಂಡೇಲಿ ಭಾಗದ ರೆಸಾರ್ಟ್ ದಂಧೆಯ ಅನಾಹುತಕಾರಿ ಆಯಾಮ ತೋರಿಸಿದೆ!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...