Homeಮುಖಪುಟಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

ಭೂದಾಹಕ್ಕೆ ಆಹುತಿಯಾದರಾ ಆಕ್ಟಿವಿಸ್ಟ್ ಅಜಿತ್ ನಾಯಕ್?!

- Advertisement -
- Advertisement -

ಉತ್ತರ ಕನ್ನಡದ ಒಂದು ಕಾಲದ ಕೈಗಾರಿಕಾ ನಗರ ದಾಂಡೇಲಿ ಭೂಮಾಫಿಯಾದ ಆಡಂಬೋಲದಂತಾಗಿ ಹೋಗಿದೆ! ದೈತ್ಯ ರಾಜಕಾರಣಿ ದೇಶಪಾಂಡೆ ದೊಡ್ಡ ಕೈಗಾರಿಕೆಗಳ ಪ್ರಭಾವಿ ಮಂತ್ರಿ ಮಾಂಡಲೀಕನಾಗಿದ್ದಾಗಲೇ ಇಲ್ಲಿಯ ಒಂದೊಂದೇ ಕಾರ್ಖಾನೆಗಳು ಬಾಗಿಲು ಎಳೆದುಕೊಂಡಿರುವುದು ಇವತ್ತಿಗೂ ಬಿಡಿಸಲಾಗದ ಒಗಟಾಗೇ ಉಳಿದಿದೆ. ಈಗೇನಿದ್ದರೂ ದಾಂಡೇಲಿಯಲ್ಲಿ ಪ್ರವಾಸೋದ್ಯಮ “ದಂಧೆ”ಯ ಭಯಾನಕ ಭರಾಟೆ! ದಾಂಡೇಲಿ ಜೋಯಿಡಾದ ನಿತ್ಯಹರಿದ್ವರ್ಣ ಕಾಡಿನ ನೀರವತೆ ಮೃಗ-ಪಕ್ಷಿಗಳ ಕೂಗು-ಕಲರವ, ಕಾಳಿ-ಪಾಂಡರಿ ನದಿಗಳ ನಿನಾದ ತಂಡೋಪತಂಡವಾಗಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಒಂದು ವಾರಕ್ಕೆ ಹಲವು ಕೋಟಿ ವಹಿವಾಟು ಆಗುತ್ತಿದೆ.
ದಾಂಡೇಲಿ-ಜೋಯಿಡಾದ ಸುತ್ತಲೂ ರೆಸಾರ್ಟ್, ಹೋಮ್‍ಸ್ಟೇಗಳದೇ ಹಾವಳಿ. ಪ್ರವಾಸೋದ್ಯಮದ ಮೋಜು-ಮಸ್ತಿ ಭೂ ಮಾಫಿಯಾ ನಿಭಾಯಿಸುತ್ತಿದೆ. ಹೀಗಾಗಿ ದಾಂಡೇಲಿಯ ಕಾಡಿನ ಅಂಚಿನ ಮತ್ತು ಕಾಳಿ ನದಿದಂಡೆಯ ಒಂದಿಂಚು ಜಾಗಕ್ಕೂ ಬಂಗಾರದ ಬೆಲೆ ಬಂದಿದೆ! ಟೂರಿಸಮ್‍ಗೆ ತೆಕ್ಕೆಹಾಕಿಕೊಂಡಿರುವ ಲ್ಯಾಂಡ್ ಲಫಡಾ, ಲಡಾಯಿ ದಾಂಡೇಲಿಯಲ್ಲಿ ನಿತ್ಯನೂತನ ಮುಂಬೈ-ಕೇರಳ-ಬೆಳಗಾವಿ-ಬೆಂಗಳೂರು ಮತ್ತು ಸ್ಥಳೀಯ ಭೂಭಾನ್ಗಡಿದಾರರು ಯಾರ್ಯಾರದೋ ಜಾಗ ಕಬಳಿಸಲು ಹೊಂಚುಹಾಕಿ ಕುಂತಿದ್ದಾರೆ. ಧೋಖಾ ಬಾಜಿಗಳ ಹಿಂದೆ ಸರ್ಕಾರಿ ಏಜೆನ್ಸಿಗಳು, ಕಾನೂನಿನ ಸಿಕ್ಕು ಬಿಡಿಸುವ ನ್ಯಾಯವಾದಿಗಳು, ಖಾಕಿಕಿರಾತಕರೆಲ್ಲ ಅಡಗಿಕೊಂಡಿದ್ದಾರೆ. ರೆಸಾರ್ಟ್ ಉದ್ಯಮಿಯಾಗಿ ಕೊಪ್ಪರಿಗೆ ಕಾಸು ಬಾಚುವ ದುರಾಸೆಯ ಪೈಪೋಟಿಯಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೆ ಈಗ ರಕ್ತದ ಕಲೆಯೂ ಅಂಟಿಬಿಟ್ಟಿದೆ!
ಕಳೆದ ಶುಕ್ರವಾರ, ಜುಲೈ 27ರ ರಾತ್ರಿ 9.30ರ ಹೊತ್ತಿಗೆ ಮುಸುಕುಧಾರಿ ಪಾತಕಿಯ ಮಚ್ಚಿನೇಟಿಗೆ ಹತರಾದ ದಾಂಡೇಲಿಯ ನಾಮಾಂಕಿತ ನ್ಯಾಯವಾದಿಯೂ, ಸಾಮಾಜಿಕ ಹೋರಾಟಗಾರರೂ ಆಗಿದ್ದ ಅಜಿತ್‍ನಾಯಕ್ ಬರ್ಬರ ಹತ್ಯೆ ಪ್ರಕರಣವೂ ಇದೇ ಪ್ರವಾಸೋದ್ಯಮ ನಂಟಿನ ಭೂ ಮಾಫಿಯಾದ ಭೀಭತ್ಸ ಕಾರ್ಯಾಚರಣೆ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಅಜಿತ್ ವಕೀಲಿಕೆಯಿಂದ ಭರ್ಜರಿ ದುಡ್ಡು-ಭೂಮಿ ಮಾಡಿಕೊಂಡಿದ್ದರು. ಸಣ್ಣ ಸೈಜಿನ ರಾಜಕಾರಣಿಯೂ ಆಗಿದ್ದರು. ದಾಂಡೇಲಿ ನಗರಸಭೆಯ ಅರ್ಯರೂ ಒಮ್ಮೆ ಆಗಿದ್ದರು. ಬ್ಲಾಕ್-ಕಾಂಗ್ರೆಸ್ ಕಮಿಟಿಯ ಅಧ್ಯಕ್ಷತೆ ನಿಭಾಯಿಸಿದ್ದರು; ಎಂಪಿಯಾಗಿದ್ದ ಮ್ಯಾಗಿ, ಸಿಎಂ ಆಗಿದ್ದ ‘ಬಂ’ ಬಾಂಧವ್ಯ ಅಜಿತ್‍ಗೆ ಇತ್ತು. ದಾಂಡೇಲಿಯ ಪರಿಸರ, ಸಾಮಾಜಿಕ ವ್ಯವಸ್ಥೆಗೆ ತೊಂದರೆಯಾದಾಗ ಆತ ಸೆಟೆದು ನಿಲ್ಲುತಿದ್ದರು. ಹೋರಾಟ ಕಟ್ಟೆ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.
ದಾಂಡೇಲಿ ತಾಲ್ಲೂಕು ಮಾಡಬೇಕೆಂದು ಸಂಘಟನೆ ಮಾಡಿ ಹೋರಾಟ ಅಜಿತ್‍ನಾಯಕ್ ರೂಪಿಸಿದ್ದರು. ಈಚೆಗೆ ದಾಂಡೇಲಿ ತಾಲ್ಲೂಕು ಘೋಷಣೆಯಾದಾಗ ಆತ ತುಂಬ ಖುಷಿಯಾಗಿದ್ದರು. ದಾಂಡೇಲಿಯ ಜೀವನದಿ ಕಾಳಿ ಬೆನ್ನಿವನ ಮೇಲೆ ಸಾಲಾಗಿ ಕಟ್ಟಲಾಗಿರುವ ಜಲವಿದ್ಯುತ್ ಡ್ಯಾಮ್‍ನಿಂದಾಗುವ ಡ್ಯಾಮೇಜ್ ಅರಿವಿನ ಕಾಳಿ ಬಚಾವ್ ಆಂದೋಲನದಲ್ಲಿ ಅಜಿತ್ ಸಕ್ರಿಯರಾಗಿದ್ದರು; ನದಿಯಿಂದ ಎತ್ತುವ ಮರಳು ಮಾಫಿಯಾ, ಕೈಗಾರಿಕಾ ಮಾಲಿನ್ಯ ಮಾಫಿಯಾದ ಕಣ್ಣುರಿಗೂ ಆತ ಕಾರಣರಾಗಿದ್ದರು. ಆದರೆ ಇದ್ಯಾವುದೂ ಆತನ ಕೊಂದೇ ಹಾಕುವಷ್ಟು ಸೇಡಿನ ಶತ್ರುಗಳನ್ನೇನೂ ಸೃಷ್ಟಿಸಿರಲಿಲ್ಲ. ಹಾಗಂತ ಆತ ಗÀುಣಸ್ವಭಾವ ಕಂಡಿರುವ ದಾಂಡೇಲಿಯ ಜನರು ಹೇಳುತ್ತಾರೆ.
ಹಾಗಿದ್ದರೆ ಅಜಿತ್‍ನಾಯಕ್‍ರ ಕೊಲೆ ಮಾಡುವಂಥ ಹಠದ ಜಿದ್ದಿನ ಹಿನೆÀ್ನಲೆ ಏನಿರಬಹುದು ಎಂದು ಉತ್ತರ ಕನ್ನಡದಲ್ಲಿ ಬಿರುಸಿನ ಚರ್ಚೆಗಳು ನಡೆದಿದೆ. ಪೊಲೀಸರು ಆತನ ವಕೀಲಿ ವೃತ್ತಿಗೆ ಸುತ್ತಿಕೊಂಡಿದ್ದ ಒಂದಿಷ್ಟು ಭೂಮಾಫಿಯಾ ವ್ಯವಹಾರಗಳತ್ತ ತನಿಖೆ ಕೇಂದ್ರೀಕರಿಸಿದ್ದಾರೆ. ಈಚೆಗೆ ಅಜಿತ್‍ನಾಯಕ್‍ಗೆ ಭೂಮಿಯ ಮೋಹ ವಿಪರೀತವಾಗಿತ್ತು. ಆತ ಹಲವು ಕಡೆ ಬೇನಾಮಿಯಾಗಿ ಭೂಖರೀದಿಯೂ ಮಾಡಿದ್ದರು. ರೆಸಾರ್ಟ್ ಬಿಸ್ನೆಸ್‍ನ ಸೆಳೆತಕ್ಕೆ ಬಿದ್ದಿದ್ದರಂತೆ. ಕಾಳಿನದಿ ತೀರದ ಮೌಳಂಗಿ ಎಂಬ ಮನಮೋಹಕ ಪ್ರದೇಶದ ಪ್ರೈಮ್ ಲ್ಯಾಂಡ್ ಮೇಲೆ ಅಜಿತ್ ಕಣ್ಣು ಬಿದ್ದಿತ್ತಂತೆ. ಇದೇ ಆತನಿಗೆ ಗಂಡಾಂತರಕಾರಿ ಆಯ್ತೆಂಬ ಕಾರಾರುವಾಕ್ಕಾದ ಲೆಕ್ಕಾಚಾರದ ಮಾತುಗಳೀಗ ದಾಂಡೇಲಿಯಲ್ಲಿ ಮೊಳಗಲಾರಂಭಿಸಿದೆ!
ಒಂದು ಸುದ್ದಿಯಂತೆ ಮೌಳಂಗಿಯ ಎರಡು ದಲಿತ ಕುಟುಂಬದ ಮಧ್ಯೆ ಭೂವ್ಯಾಜ್ಯ ನಡೆದಿತ್ತು. ಒಂದು ಕಡೆ ವಕೀಲರಾಗಿ ಅಜಿತ್‍ನಾಯಕ್ ನಿಂತಿದ್ದರು. ಎದುರಾಳಿ ತಂಡದ ಪಾಂಡುರಂಗ ಕಾಂಬಳೆಗೆ ಬಲಾಢ್ಯ ಭೂಮಾಫಿಯಾದ ನಂಟಿತ್ತು. ಕಾಂಬಳೆಯ ಜಾಗವನ್ನು ಎದುರುದಾರರು ಕಬ್ಜಾ ಮಾಡಿಕೊಂಡಿದ್ದರು. ಇದು ಘನಘೋರ ಕಾಳಗಕ್ಕೂ ಕಾರಣವಾಗಿಹೋಯ್ತು. ಆಗ ಅಜಿತ್ ನಾಯಕ್ ಮುತುವರ್ಜಿಯಲ್ಲಿ ಸರ್ವೇಯೂ ನಡೆಯಿತು. ತಾವೇ ಖುದ್ದು ನಿಂತು ಮೋಜುಣಿ ಮಾಡಿಸಿದ್ದರಂತೆ. ದೀಪಕ್ ಯಾನೆ ಪಾಂಡುರಂಗ ಕಾಂಬಳೆಯವರ ವಿರುದ್ಧ ಪೊಲೀಸ್ ಕಂಪ್ಲೇಂಟೂ ಆಗಿತ್ತು. ಪೊಲೀಸರು ಅಜಿತ್‍ನಾಯಕ್‍ರ ಪ್ರಭಾವದಿಂದ ಎದುರಾಳಿಗಳನ್ನು ಸತಾಯಿಸಿದ್ದರು. ಅಷ್ಟೇ ಅಲ್ಲ, ಕೆರಳಿದ ಕಾಂಬಳೆ ಪಾಳಯವು ಅಜಿತ್‍ನಾಯಕ್‍ರ ಕಕ್ಷಿದಾರನ ಜಾಗಕ್ಕೆ ಮಾರಕಾಸ್ತ್ರಗಳ ಸಮೇತ ಲಗ್ಗೆಹಾಕಿ ಧಮಕಿ ಹಾಕಿತ್ತು. ಒಂದೆಡೆ ತಗಾದೆ ನ್ಯಾಯಾಲಯ ಮೆಟ್ಟಿಲೇರಿದರೆ, ಮತ್ತೊಂದೆಡೆ ಆರೋಪಿಗಳಿಗೆ ಪೊಲೀಸರು ಜೈಲಿಗೆ ಹಾಕಿ ಬೆಂಡೆತ್ತಿದ್ದರು. ಇದಕ್ಕೆಲ್ಲ ವಕೀಲ ಅಜಿತ್‍ನಾಯಕ್ ಚಿತಾವಣಿಯೇ ಕಾರಣವೆಂಬ ಸಿಟ್ಟು ಕಾಂಬಳೆ ಕುಟುಂಬಕ್ಕಿತ್ತು. ಕೆರಳಿ ಬುಸುಗುಡುತ್ತಿದ್ದ ಕಾಂಬಳೆ ತಂಡ ಅಜಿತ್‍ನಾಯಕ್‍ಗೆ ಬೆದರಿಕೆ ಫೋನ್ ಕರೆಗಳನ್ನು ಆಗಾಗ ಮಾಡುತ್ತಲೇ ಇತ್ತು.
ಇದನ್ನು ಅಜಿತ್ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ ಈಗ ದಾಂಡೇಲಿಯಲ್ಲಿರುವ ಪುಕಾರುಗಳ ಪ್ರಕಾರ ತುಂಬ ಬೆಲೆಬಾಳುವ ಮಹತ್ವದ ಟೂರಿಸಮ್ ಸೈಟಾಗಿದ್ದ ಮೌಳಂಗಿಯ ಜಾಗದಲ್ಲಿ ಬೇನಾಮಿ ರೆಸಾರ್ಟ್ ಮಾಡುವ ಸ್ಕೆಚ್ ಹಾಕಿದ್ದ ಅಜಿತ್‍ನಾಯಕ್ ತುಂಬ ವ್ಯವಸ್ಥಿತವಾಗಿ ಎದುರಾಳಿಗಳ ಹಣಿಯಲು ಹತ್ತಿದ್ದರು. ಆದರೆ ಇದೇ ಜಾಗಕ್ಕಾಗಿ ಬಲಾಢ್ಯ ಭೂಮಾಫಿಯಾ ಒಂದು ಪ್ರಯತ್ನ ನಡೆಸಿ ಮತ್ತೊಂದು ದಲಿತÀ ಕುಟುಂಬದ ಬೆನ್ನಿಗೆ ನಿಂತಿತ್ತು. ಮೌಳಂಗಿಯಲ್ಲಿ ಈಕೋ ಪಾರ್ಕ್ ಆದ ಬಳಿಕ ವಿವಾದಿತ ಜಾಗದ ಕಿಮ್ಮತ್ತು ಜಾಸ್ತಿಯಾಗಿತ್ತು; ಅಜಿತ್ ನಾಯಕ್ ಕೂಡಾ ಸದ್ರಿ ಜಾಗದ ಬಗ್ಗೆ `ವಿಶೇಷ’ ಆಸಕ್ತಿ ವಹಿಸಿದ್ದರು. ಇದು ಪಾಂಡುರಂಗ ಕಾಂಬಳೆಯ ಆಕ್ರೋಶ ಹೆಚ್ಚಿಸಿತ್ತು. ಈ ದ್ವೇಷ ಒಳಗೊಳಗೇ ಹೊಗೆಯಾಡುತ್ತಲೇ ಇತ್ತು. ಅಜಿತ್‍ನಾಯಕ್‍ರ ಕಾನೂನು ತಂತ್ರಗಾರಿಕೆ, ಖಾಕಿಗಳ ಮೇಲಿನ ಹಿಡಿತದಿಂದ ಎದುರಾಳಿ ತಂಡ ಹೈರಾಣಾಗಿಹೋಗಿತ್ತು. ಇದು ಕೊಲೆಗೂ ಪ್ರೇರೇಪಿಸಿತೆಂಬ ತರ್ಕ ನಡೆದಿದೆ. ಇದು ಜನಸಾಮಾನ್ಯರದ್ದಷ್ಟೇ ಅಲ್ಲ, ಪೊಲೀಸರ ತಲೆಯೂ ತಿನ್ನುತ್ತಿದೆ.
ಹಂತಕರು ಹಲವು ದಿನಗಳಿಂದ ಅಜಿತ್‍ನಾಯಕ್ ಚಲನವಲನ, ಚಟುವಟಿಕೆ ಮೇಲೆ ನಿಗಾಯಿಟ್ಟು ನೋಡಿದ್ದಾರೆ. ಆತ ಅಂದು ರಾತ್ರಿ ದಾಂಡೇಲಿಯ ಜೆಎನ್ ರಸ್ತೆಯಲ್ಲಿರುವ ಕಚೇರಿಯಿಂದ ಹೊರಬರುವುದನ್ನೇ ಕಾದು ಕುಳಿತಿದ್ದಾರೆ. ಒಬ್ಬರೇ ಬರುವುದು ಖಾತ್ರಿಯಾಗಿದೆ. ಆತ ಕಾರಿನ ಬಳಿ ಹೋಗುವಾಗ ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ತಲೆಯ ಎಡಭಾಗ ಸೀಳಿಹೋಗಿದೆ. ಕಿವಿಯೂ ಚಿಂದಿಯಾಗಿದೆ. ಕೊಚ್ಚಿದ ರಭಸಕ್ಕೆ ಅಜಿತ್ ನಿಂತಲ್ಲೇ ಕುಸಿದು ರಕ್ತದ ಮಡುವಲ್ಲಿ ಒದ್ದಾಡಿ ಜೀವ ಬಿಟ್ಟಿದ್ದಾರೆ. ಕತ್ತಲಲ್ಲಿ ಹಂತಕ ಕರಗಿಹೋಗಿದ್ದಾನೆ. ಪೊಲೀಸರು ಈ ಲ್ಯಾಂಡ್ ಪ್ರಕರಣದತ್ತಲೇ ತನಿಖೆ ನಡೆಸಿದ್ದಾರೆ. ಹಂತಕನನ್ನು ಬಂಧಿಸಲಾಗಿದೆ ಎಂಬ ಅನಧಿಕೃತ ಸುದ್ದಿಯೂ ಹಬ್ಬಿದೆ ಯಲ್ಲಾಪುರದಲ್ಲಿ ಸೆರೆಸಿಕ್ಕಿರುವ ಹಂತಕ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನಂತೆ!
ಆತ ಅಸ್ತ್ರವಷ್ಟೇ! ಬಳಸಿದ್ದು ಯಾರೆಂಬುದು ಬಹಿರಂಗವಾಗಬೇಕಾಗಿದೆ. ಒಂದಂತೂ ಖರೆ; ಅಜಿತ್‍ನಾಯಕ್ ಕೋಲೆ ದಾಂಡೇಲಿ ಭಾಗದ ರೆಸಾರ್ಟ್ ದಂಧೆಯ ಅನಾಹುತಕಾರಿ ಆಯಾಮ ತೋರಿಸಿದೆ!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...