Homeಕರ್ನಾಟಕಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ:...

ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ: ಎಚ್.ಡಿ.ಕೆ

- Advertisement -
- Advertisement -

ನಾನು ಹಳ್ಳಿಗಳಿಗೆ ಹೋದಾಗ ನೀವು ಕೇವರ ಭೂಮಿ ಇರುವ ರೈತರ ಸಾಲ ಮನ್ನಾ ಮಾಡುತ್ತೀರಿ ನಮಗೇನು ಮಾಡಿದ್ದೀರಿ ಎಂದು ಹಲವಾರು ಜನ ಕೇಳುತ್ತಿದ್ದರು. ಅವರ ನೆರವಿಗಾಗಿ ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಇಂದು ಸಿಎಂ ಕಛೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿಯವರು ವಾರ್ಷಿಕ 1.20 ಲಕ್ಷ ಆದಾಯ ಮಿತಿಯೊಳಗಿರುವ ಬಡವರಿಗೆ, ಭೂ ರಹಿತ ಕಾರ್ಮಿಕರು, ರೈತರೂ, 2 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೂ ಸಹ ಈ ಕಾಯ್ದೆಯ ಫಲಾನುಭವಿಗಳಾಗಲಿದ್ದಾರೆ ಎಂದರು.

ರಾಜ್ಯ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳ ಎಲ್ಲರ ಸಹಕಾರದಿಂದ 14 ತಿಂಗಳು ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದರು.

ರೈತರ ಸಾಲಮನ್ನಾ ಯೋಜನೆ, ಸಿದ್ಧತೆಗಳನ್ನು ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಿದ್ದಾರೆ.

ರಾಜಕೀಯ ಅಸ್ಥಿರತೆ ಉಂಟು ಮಾಡುವ ಘಟನೆಗಳು ಪ್ರತಿದಿನ ನಡೆಯುತ್ತಿದ್ದರೂ ಅಧಿಕಾರಿಗಳು ಕೊಟ್ಟ ಸಹಕಾರದಿಂದ ಆರ್ಥಿಕ ಶಿಸ್ತು ಕಾಪಾಡಿದ್ದೇವೆ. ಮುಂದಿನ ದಿನಗಳು ಸಹ ರಾಜಕೀಯ ಅಸ್ಥಿರತೆ ಮುಂದುವರೆಯುತ್ತವೆ. ಏನು ಬೇಕಾದರೂ ಆಗಬಹುದು. ಯಾವುದೇ ಅಸ್ಥಿರತೆ ಇದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ .. ಪ್ರಾಮಾಣಿಕವಾಗಿ ನಿರ್ವಹಣೆ ಮಾಡಿ ಎಂದು ಹೇಳಿದ್ದೇನೆ ಎಂದರು.

ಅಧಿಕಾರದಿಂದ ನಿರ್ಗಮಿಸುವಾಗ ಜನರಿಗೆ ಕೊಡುಗೆ ಕೊಡುವ ಸಲುವಾಗಿ ಈ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದರು. ರೈತರ ಸಾಲಮನ್ನಾ ಮಾಡುವಾಗ ದೇವರಾಜ್ ಅರಸ್ 1976 ಆಕ್ಟ್ ಮುಂದುವರೆಸುವುದು ನಮ್ಮ ಗುರಿ ಎಂದರು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಅಂಕಿತ ಹಾಕಿದ್ದಕ್ಕೆ ಬಡಜನರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು. ಉತ್ತಮ ಕೆಲಸ ಮಾಡಿದ ಆತ್ಮ ತೃಪ್ತಿ ನನಗಿದೆ ಎಂದರು.

ರಿಲೀಫ್ ಆಕ್ಟ್ ಪ್ರಕಾರ ಸಾಲದ ಸಂಪೂರ್ಣ ಮಾಹಿತಿ ಕೊಡಿ. ಜಾಹೀರಾತು ಕೂಡ ಕೊಡುತ್ತಾರೆ. 90 ದಿನದ ಒಳಗೆ ಮನಿ ಲೆಂಡರ್ಸ್ ಹತ್ತಿರ ಸಾಲ ಪಡೆದಿರುವವರು ನೊಡಲ್ ಆಫೀಸರ್ ಬಳಿ ತಲುಪಿಸಿದರೆ ಆ ಸಾಲದಿಂದ ಋಣಮುಕ್ತ ಕಾಯ್ದೆಯನ್ವಯ ಮನ್ನಾ ಆಗುತ್ತದೆ ಎಂದರು. ಇದು ಒಂದು ಟೈಮ್ ಸೆಟ್ಲಮೆಂಟ್ ರಿಲೀಫ್ ಆಗಿದೆ. ಒಂದು ವರ್ಷ ಈ ಆಕ್ಟ್ ಇದೆ.  ಎಲ್ಲಾ ರೀತಿಯ ಸಾಲ ಮನ್ನಾಗೆ ಅವಕಾಶವಿದೆ ಎಂದರು. ಬಂಡೆಪ್ಪ ಕಾಶೆಂಪೂರ್ ರವರು ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಪಾಲಿಗೆ ನಮ್ಮ ಕುಮಾರಣ್ಣನ ಯಾವಾಗಾದ್ರೂ ಇವರನ್ನು ಮುಕ್ತ ತಂದಿದ್ದು ನಮಗೆ ತುಂಬಾ ಸಂತೋಷ ಅವರಿಗೆ ದೇವರು ಆಯುಷ್ಯ ಆರೋಗ್ಯ ಸಂಪತ್ತು ಕೊಡಲಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...