Homeಕರ್ನಾಟಕಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ:...

ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ: ಎಚ್.ಡಿ.ಕೆ

- Advertisement -
- Advertisement -

ನಾನು ಹಳ್ಳಿಗಳಿಗೆ ಹೋದಾಗ ನೀವು ಕೇವರ ಭೂಮಿ ಇರುವ ರೈತರ ಸಾಲ ಮನ್ನಾ ಮಾಡುತ್ತೀರಿ ನಮಗೇನು ಮಾಡಿದ್ದೀರಿ ಎಂದು ಹಲವಾರು ಜನ ಕೇಳುತ್ತಿದ್ದರು. ಅವರ ನೆರವಿಗಾಗಿ ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಇಂದು ಸಿಎಂ ಕಛೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿಯವರು ವಾರ್ಷಿಕ 1.20 ಲಕ್ಷ ಆದಾಯ ಮಿತಿಯೊಳಗಿರುವ ಬಡವರಿಗೆ, ಭೂ ರಹಿತ ಕಾರ್ಮಿಕರು, ರೈತರೂ, 2 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೂ ಸಹ ಈ ಕಾಯ್ದೆಯ ಫಲಾನುಭವಿಗಳಾಗಲಿದ್ದಾರೆ ಎಂದರು.

ರಾಜ್ಯ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳ ಎಲ್ಲರ ಸಹಕಾರದಿಂದ 14 ತಿಂಗಳು ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದರು.

ರೈತರ ಸಾಲಮನ್ನಾ ಯೋಜನೆ, ಸಿದ್ಧತೆಗಳನ್ನು ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಿದ್ದಾರೆ.

ರಾಜಕೀಯ ಅಸ್ಥಿರತೆ ಉಂಟು ಮಾಡುವ ಘಟನೆಗಳು ಪ್ರತಿದಿನ ನಡೆಯುತ್ತಿದ್ದರೂ ಅಧಿಕಾರಿಗಳು ಕೊಟ್ಟ ಸಹಕಾರದಿಂದ ಆರ್ಥಿಕ ಶಿಸ್ತು ಕಾಪಾಡಿದ್ದೇವೆ. ಮುಂದಿನ ದಿನಗಳು ಸಹ ರಾಜಕೀಯ ಅಸ್ಥಿರತೆ ಮುಂದುವರೆಯುತ್ತವೆ. ಏನು ಬೇಕಾದರೂ ಆಗಬಹುದು. ಯಾವುದೇ ಅಸ್ಥಿರತೆ ಇದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ .. ಪ್ರಾಮಾಣಿಕವಾಗಿ ನಿರ್ವಹಣೆ ಮಾಡಿ ಎಂದು ಹೇಳಿದ್ದೇನೆ ಎಂದರು.

ಅಧಿಕಾರದಿಂದ ನಿರ್ಗಮಿಸುವಾಗ ಜನರಿಗೆ ಕೊಡುಗೆ ಕೊಡುವ ಸಲುವಾಗಿ ಈ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದರು. ರೈತರ ಸಾಲಮನ್ನಾ ಮಾಡುವಾಗ ದೇವರಾಜ್ ಅರಸ್ 1976 ಆಕ್ಟ್ ಮುಂದುವರೆಸುವುದು ನಮ್ಮ ಗುರಿ ಎಂದರು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಅಂಕಿತ ಹಾಕಿದ್ದಕ್ಕೆ ಬಡಜನರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು. ಉತ್ತಮ ಕೆಲಸ ಮಾಡಿದ ಆತ್ಮ ತೃಪ್ತಿ ನನಗಿದೆ ಎಂದರು.

ರಿಲೀಫ್ ಆಕ್ಟ್ ಪ್ರಕಾರ ಸಾಲದ ಸಂಪೂರ್ಣ ಮಾಹಿತಿ ಕೊಡಿ. ಜಾಹೀರಾತು ಕೂಡ ಕೊಡುತ್ತಾರೆ. 90 ದಿನದ ಒಳಗೆ ಮನಿ ಲೆಂಡರ್ಸ್ ಹತ್ತಿರ ಸಾಲ ಪಡೆದಿರುವವರು ನೊಡಲ್ ಆಫೀಸರ್ ಬಳಿ ತಲುಪಿಸಿದರೆ ಆ ಸಾಲದಿಂದ ಋಣಮುಕ್ತ ಕಾಯ್ದೆಯನ್ವಯ ಮನ್ನಾ ಆಗುತ್ತದೆ ಎಂದರು. ಇದು ಒಂದು ಟೈಮ್ ಸೆಟ್ಲಮೆಂಟ್ ರಿಲೀಫ್ ಆಗಿದೆ. ಒಂದು ವರ್ಷ ಈ ಆಕ್ಟ್ ಇದೆ.  ಎಲ್ಲಾ ರೀತಿಯ ಸಾಲ ಮನ್ನಾಗೆ ಅವಕಾಶವಿದೆ ಎಂದರು. ಬಂಡೆಪ್ಪ ಕಾಶೆಂಪೂರ್ ರವರು ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಪಾಲಿಗೆ ನಮ್ಮ ಕುಮಾರಣ್ಣನ ಯಾವಾಗಾದ್ರೂ ಇವರನ್ನು ಮುಕ್ತ ತಂದಿದ್ದು ನಮಗೆ ತುಂಬಾ ಸಂತೋಷ ಅವರಿಗೆ ದೇವರು ಆಯುಷ್ಯ ಆರೋಗ್ಯ ಸಂಪತ್ತು ಕೊಡಲಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...