Homeಕರ್ನಾಟಕಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ:...

ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ: ಎಚ್.ಡಿ.ಕೆ

- Advertisement -
- Advertisement -

ನಾನು ಹಳ್ಳಿಗಳಿಗೆ ಹೋದಾಗ ನೀವು ಕೇವರ ಭೂಮಿ ಇರುವ ರೈತರ ಸಾಲ ಮನ್ನಾ ಮಾಡುತ್ತೀರಿ ನಮಗೇನು ಮಾಡಿದ್ದೀರಿ ಎಂದು ಹಲವಾರು ಜನ ಕೇಳುತ್ತಿದ್ದರು. ಅವರ ನೆರವಿಗಾಗಿ ಭೂರಹಿತರ, ಕಡಿಮೆ ಭೂಮಿ ಇರುವವರ ಖಾಸಗಿ ಸಾಲ ಮನ್ನಾ ಮಾಡಲು ನಿನ್ನೆ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಇಂದು ಸಿಎಂ ಕಛೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿಯವರು ವಾರ್ಷಿಕ 1.20 ಲಕ್ಷ ಆದಾಯ ಮಿತಿಯೊಳಗಿರುವ ಬಡವರಿಗೆ, ಭೂ ರಹಿತ ಕಾರ್ಮಿಕರು, ರೈತರೂ, 2 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೂ ಸಹ ಈ ಕಾಯ್ದೆಯ ಫಲಾನುಭವಿಗಳಾಗಲಿದ್ದಾರೆ ಎಂದರು.

ರಾಜ್ಯ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳ ಎಲ್ಲರ ಸಹಕಾರದಿಂದ 14 ತಿಂಗಳು ಕಾರ್ಯನಿರ್ವಹಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದರು.

ರೈತರ ಸಾಲಮನ್ನಾ ಯೋಜನೆ, ಸಿದ್ಧತೆಗಳನ್ನು ಮಾಡಿದ್ದೇವೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಿದ್ದಾರೆ.

ರಾಜಕೀಯ ಅಸ್ಥಿರತೆ ಉಂಟು ಮಾಡುವ ಘಟನೆಗಳು ಪ್ರತಿದಿನ ನಡೆಯುತ್ತಿದ್ದರೂ ಅಧಿಕಾರಿಗಳು ಕೊಟ್ಟ ಸಹಕಾರದಿಂದ ಆರ್ಥಿಕ ಶಿಸ್ತು ಕಾಪಾಡಿದ್ದೇವೆ. ಮುಂದಿನ ದಿನಗಳು ಸಹ ರಾಜಕೀಯ ಅಸ್ಥಿರತೆ ಮುಂದುವರೆಯುತ್ತವೆ. ಏನು ಬೇಕಾದರೂ ಆಗಬಹುದು. ಯಾವುದೇ ಅಸ್ಥಿರತೆ ಇದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ .. ಪ್ರಾಮಾಣಿಕವಾಗಿ ನಿರ್ವಹಣೆ ಮಾಡಿ ಎಂದು ಹೇಳಿದ್ದೇನೆ ಎಂದರು.

ಅಧಿಕಾರದಿಂದ ನಿರ್ಗಮಿಸುವಾಗ ಜನರಿಗೆ ಕೊಡುಗೆ ಕೊಡುವ ಸಲುವಾಗಿ ಈ ಋಣಮುಕ್ತ ಕಾಯ್ದೆ ತಂದಿದ್ದೇವೆ ಎಂದರು. ರೈತರ ಸಾಲಮನ್ನಾ ಮಾಡುವಾಗ ದೇವರಾಜ್ ಅರಸ್ 1976 ಆಕ್ಟ್ ಮುಂದುವರೆಸುವುದು ನಮ್ಮ ಗುರಿ ಎಂದರು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಅಂಕಿತ ಹಾಕಿದ್ದಕ್ಕೆ ಬಡಜನರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು. ಉತ್ತಮ ಕೆಲಸ ಮಾಡಿದ ಆತ್ಮ ತೃಪ್ತಿ ನನಗಿದೆ ಎಂದರು.

ರಿಲೀಫ್ ಆಕ್ಟ್ ಪ್ರಕಾರ ಸಾಲದ ಸಂಪೂರ್ಣ ಮಾಹಿತಿ ಕೊಡಿ. ಜಾಹೀರಾತು ಕೂಡ ಕೊಡುತ್ತಾರೆ. 90 ದಿನದ ಒಳಗೆ ಮನಿ ಲೆಂಡರ್ಸ್ ಹತ್ತಿರ ಸಾಲ ಪಡೆದಿರುವವರು ನೊಡಲ್ ಆಫೀಸರ್ ಬಳಿ ತಲುಪಿಸಿದರೆ ಆ ಸಾಲದಿಂದ ಋಣಮುಕ್ತ ಕಾಯ್ದೆಯನ್ವಯ ಮನ್ನಾ ಆಗುತ್ತದೆ ಎಂದರು. ಇದು ಒಂದು ಟೈಮ್ ಸೆಟ್ಲಮೆಂಟ್ ರಿಲೀಫ್ ಆಗಿದೆ. ಒಂದು ವರ್ಷ ಈ ಆಕ್ಟ್ ಇದೆ.  ಎಲ್ಲಾ ರೀತಿಯ ಸಾಲ ಮನ್ನಾಗೆ ಅವಕಾಶವಿದೆ ಎಂದರು. ಬಂಡೆಪ್ಪ ಕಾಶೆಂಪೂರ್ ರವರು ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಪಾಲಿಗೆ ನಮ್ಮ ಕುಮಾರಣ್ಣನ ಯಾವಾಗಾದ್ರೂ ಇವರನ್ನು ಮುಕ್ತ ತಂದಿದ್ದು ನಮಗೆ ತುಂಬಾ ಸಂತೋಷ ಅವರಿಗೆ ದೇವರು ಆಯುಷ್ಯ ಆರೋಗ್ಯ ಸಂಪತ್ತು ಕೊಡಲಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...