Homeಅಂಕಣಗಳುಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

ಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮೊನ್ನೆ ಗಾಂಧಿಭವನದಲ್ಲಿ ಮಾತನಾಡುತ್ತಾ ‘ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಹೊರಟರೆ ನನ್ನ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬರಬಹುದು’ ಎಂದು ಹೇಳಿ ‘ನಾನು ವಿಧಾನಸೌಧದ 3ನೇ ಮಹಡಿಗಳಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸಂಕಲ್ಪ ಮಾಡಿದ್ದೇನೆ’ ಎಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ತೀರ್ಮಾನ. ಮುಖ್ಯಮಂತ್ರಿಗಳು ಎಷ್ಟೇ ಬಲಶಾಲಿಗಳಾಗಿರಬಹುದು, 70 ವರ್ಷಗಳಿಂದ ಬೆಳೆದುನಿಂತಿರುವ ಈ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಒಂದೇ ಏಟಿಗೆ ತಡೆಹಿಡಿಯುವುದು ಆಗದ ಮಾತು. ಹಾಗೆ ಹೇಳಿ, ಭ್ರಷ್ಟಾಚಾರವನ್ನೂ ಸಮಾಜದಿಂದ ತೊಲಗಿಸುವುದು ಸಾಧ್ಯವೇ ಇಲ್ಲವೆಂದು ಕೈಕಟ್ಟಿ ಕೂಡುವುದೂ ಸರಿಯಲ್ಲ. ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಂಕಲ್ಪ ಮಾಡಬೇಕು.
ಸರ್ಕಾರದ ಸಿಬ್ಬಂದಿಯ ಭ್ರಷ್ಟಾಚಾರವನ್ನು ನಿಗ್ರಹಿಸಲು ನಿರ್ಧರಿಸಿರುವ ಕುಮಾರಸ್ವಾಮಿಯವರು ಆ ಕ್ರಿಯೆ ಎಲ್ಲಿಂದ ಆರಂಭವಾಗಬೇಕು ಎಂಬುದನ್ನು ಮೊದಲು ತಿಳಿಯಬೇಕು.
ಮೈಸೂರು ಸಂಸ್ಥಾನದ ಕೊನೆಯ ದಿವಾನರಾಗಿದ್ದ ಸರ್. ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಅವರು ದಕ್ಷ ಆಡಳಿತಗಾರರು. ಅವರು ಪೊಲೀಸರಿಗೆ ಹೀಗೆ ಹೇಳುತ್ತಿದ್ದರು: ‘ಭ್ರಷ್ಟಾಚಾರದಲ್ಲಿರುವ ಒಬ್ಬ ನೌಕರ ಅಥವಾ ಸೇವಕನನ್ನು ಹಿಡಿದು ಶಿಕ್ಷಿಸಿ ಪತ್ರಿಕೆಯಲ್ಲಿ ಪ್ರಚಾರ ಗಿಟ್ಟಿಸುವುದರಿಂದ ಏನೂ ಪ್ರಯೋಜನವಿಲ್ಲ. ಭ್ರಷ್ಟ್ಟಾಚಾರ ಕೊನೆಗೊಳ್ಳಬೇಕೆಂಬುದು ನಿಮ್ಮ ಉದ್ದೇಶವಾಗಿದ್ದರೆ, ಉನ್ನತಮಟ್ಟದ ನಾಲ್ಕಾರು ಭ್ರಷ್ಟರನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸಿ. ಆಗ ಭ್ರಷ್ಟಾಚಾರ ತಾನೇ ತಾನಾಗಿ ಕೊನೆಗೊಳ್ಳುತ್ತದೆ’ ಎಂದು. ಕುಮಾರಸ್ವಾಮಿಯವರು ಆದ್ಯತೆಯ ಮೇಲೆ ಈ ಕ್ರಮ ಕೈಗೊಳ್ಳಬೇಕು. ತಳಮಟ್ಟದ ಹುದ್ದೆಯ ನೂರಾರು ನೌಕರರನ್ನು ಹಿಡಿದರೆ. ನೀವು ಪ್ರಚಾರಗಿಟ್ಟಿಸಿಕೊಳ್ಳಬಹುದೇ ಹೊರತು, ಭ್ರಷ್ಟಾಚಾರವನ್ನು ತಡೆಗಟ್ಟಲಾರಿರಿ.
ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ನಿರತರಾಗಿರುವ ಹತ್ತಾರು ಸಾವಿರ ಮಂದಿ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಇದ್ದಾರೆ. ಇವರಲ್ಲಿ ಅನೇಕರು ಮಂತ್ರಿಗಳೂ, ಶಾಸಕರು, ಉನ್ನತಾಧಿಕಾರಿಗಳೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೂ ಇದ್ದಾರೆ. ಸಾರ್ವಜನಿಕ ಭೂಮಿ ಒತ್ತುವರಿಗೆ ಸಂಬಂಧಿಸಿ ಎ.ಟಿ.ರಾಮಸ್ವಾಮಿ ಸಮಿತಿಯ ವರದಿ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಸಿದ್ಧವಾಯಿತು. ಅವರ ವರದಿಯಲ್ಲಿ ನಮೂದಿಸಿರುವವರ ವಿರುದ್ಧ ಖಟ್ಲೆ ನಡೆಸಲು ವಿಶೇಷ ನ್ಯಾಯಾಲಯವೂ ಸ್ಥಾಪನೆಯಾಗಿದೆ. 50-60 ಸಾವಿರ ಕೇಸುಗಳು ಆ ನ್ಯಾಯಾಲಯದ ಮುಂದಿವೆ. ಈಗಿರುವ ಕೋರ್ಟು ಈ ಎಲ್ಲ ಕೇಸುಗಳನ್ನೂ ಕೈಗೆತ್ತಿಕೊಂಡು ನಿರ್ಣಯ ಕೊಡಬೇಕಾದರೆ ಇನ್ನು ಹತ್ತಿಪ್ಪತ್ತು ವರ್ಷಗಳೇ ಬೇಕಾಗಬಹುದು. ನಾಲ್ಕಾರು ವಿಶೇಷ ಕೋರ್ಟುಗಳನ್ನು ಅರಂಭಿಸದ ಹೊರತು ಈ ಖಟ್ಲೆಗಳನ್ನೆಲ್ಲಾ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೂಡಲೇ ವಿಶೇಷ ನ್ಯಾಯಾಲಯಗಳ ಸಂಖ್ಯೆ ಹೆಚ್ಚು ಮಾಡಿ ದುಷ್ಟ ಭೂಗಳ್ಳರಿಗೆ ಶಿಕ್ಷೆ ವಿಧಿಸುವಂತೆ ಮಾಡಲಿ. ಹಾಗೆಯೇ, ಎ.ಸಿ.ಬಿ ತನಿಖಾ ತಂಡವನ್ನು ಕೈಬಿಡುವ ವಿಚಾರ ಕುಮಾರಸ್ವಾಮಿಯವರಿಗಿಲ್ಲ ಎಂದು ಪತ್ರಿಕೆಗಳ ಸುದ್ದಿ ಇದೆ. ಚುನಾವಣಾ ಪ್ರಚಾರ ಕಾಲದಲ್ಲಿ ಘೋಷಣೆ ಮಾಡಿದಂತೆ ಕುಮಾರಸ್ವಾಮಿಯವರು ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕೆಲಸವನ್ನಾದರೂ ಈ ಕೂಡಲೇ ಮಾಡಬೇಕು.
ನ್ಯಾ| ಸಂತೋಷ್ ಹೆಗ್ಡೆಯವರ ಕಾಲದಿಂದ ಇಂದಿನವರೆಗೆ ಲೋಕಾಯುಕ್ತರಿಂದ ಅನೇಕ ಉನ್ನತ ಅಧಿಕಾರಿಗಳ ಮನೆಗಳ ಶೋಧ ನಡೆದಿದೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆಂದು ಲೋಕಾಯುಕ್ತರು ಪತ್ತೆಮಾಡಿ ವರದಿ ತಯಾರಿಸಿ ಈ ಉನ್ನತಾಧಿಕಾರಿಗಳ ಮೇಲೆ ಖಟ್ಲೆ ಹೂಡಲು ಅನುಮತಿ ಕೋರಿ ಸರ್ಕಾರಕ್ಕೆ ಬರೆದಿದ್ದಾರೆ. ಆ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಕೊಳೆಯುತ್ತಾ ಬಿದ್ದಿವೆ. ಭ್ರಷ್ಟಾಚಾರ ತೊಲಗಿಸಬೇಕೆಂದು ತೀರ್ಮಾನಿಸಿರುವ ಕುಮಾರಸ್ವಾಮಿಯವರು ಆ ಎಲ್ಲಾ ಅಧಿಕಾರಿಗಳ ಮೇಲೆ ಖಟ್ಲೆ ಹೂಡಲು ಸೂಚಿಸಿ, ಕೂಡಲೇ ಪತ್ರ ಬರೆದರೆ ಲೋಕಾಯುಕ್ತರು ಕ್ರಮ ಕೈಗೊಳ್ಳಲು ಮುಂದಾಗಬಹುದು.
ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಂದ 40 ಸಾವಿರ ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ. ಅದನ್ನೆಲ್ಲ ಹಿಂಪಡೆಯಬೇಕೆಂದು ಸಿದ್ದರಾಮಯ್ಯನವರ ಸರ್ಕಾರ ತೀರ್ಮಾನಿಸಿ, ಸರ್ಕಾರಿ ಜಮೀನನ್ನು ವಾಪಸ್ ಪಡೆಯಲು ಜಿಲ್ಲಾಧಿಕಾರಿಗಳ ನೆರವಿಗೆ ಇನ್ನಿಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ. ಈ ವಿಶೇಷ ಜಿಲ್ಲಾಧಿಕಾರಿಗಳು ಮಂದಗತಿಯಲ್ಲಿ ಜಮೀನು ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಅವರು ಮಾತ್ರ ಕ್ರಿಯಾಶೀಲರಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಈಗ ಶೇ.25ರಷ್ಟು ಜಮೀನು ವಾಪಸ್ ಪಡೆದಿದ್ದಾರಷ್ಟೆ. ಹೀಗೆ ಹಿಂಪಡೆಯಲಾದ ಜಮೀನಿಗೆ ತಂತಿ ಬೇಲಿ ಬಿಗಿದಿದ್ದರೂ, ಈಗಲೂ ಅಲ್ಲಿ ಕೆಲ ಪ್ರಬಲ ಪಾಲಿಕೆ ಸದಸ್ಯರು ಹಾಗೂ ಕೆಲ ಭೂಕಬಳಿಕೆದಾರರು ತಾವು ಹಾಕಿದ್ದ ಷೆಡ್‍ಗಳನ್ನು ಹಾಗೇ ಉಳಿಸಿಕೊಂಡು ಹತ್ತಾರು ಸಾವಿರ ರೂಗಳ ಬಾಡಿಗೆ ಪಡೆಯುತ್ತಿದ್ದಾರೆ.
ಈ ಅಕ್ರಮಕ್ಕೆ ಕಡಿವಾಣ ಹಾಕುವುದಲ್ಲದೆ ಈ ಎರಡು ಜಿಲ್ಲೆಗಳ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ನಿರ್ದಿಷ್ಟ ಅವಧಿಯೊಳಗೆ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೂ, ವಿಶೇಷ ಜಿಲ್ಲಾಧಿಕಾರಿಗಳಿಗೂ ಕುಮಾರಸ್ವಾಮಿಯವರ ಸರ್ಕಾರ ಕÀಟ್ಟಪ್ಪÀಣೆ ಮಾಡಬೇಕು.
ಇದಲ್ಲದೆ, ದೇವೇಗೌಡರ ನೇತೃತ್ವದಲ್ಲಿ ನೈಸ್ ಕಂಪನಿ ವಿರುದ್ಧ ನಡೆದ ಹೋರಾಟ ಈಗ ಹಾಲಿ ಸ್ಥಗಿತವಾಗಿದೆ. ಸಚಿವ ಜಯಚಂದ್ರ ಸಮಿತಿ ಕೂಡ ನೈಸ್ ಕಂಪನಿಯ ಖೇಣಿಯ ವಿರುದ್ಧ ನೂರಾರು ಪುಟಗಳ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದೂ ಆಗಿದೆ. ಆದರೆ ಸರ್ಕಾರ ಖೇಣಿ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು ಕೂಡಲೇ ಈ ವರದಿಯನ್ವಯ ಕ್ರಮಕೈಗೊಳ್ಳಬೇಕೆಂದು ಅಗ್ರಹ ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
ಈ ಮೇಲೆ ಹೇಳಿದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸಿದರೆ ಭ್ರಷ್ಟಾಚಾರ ನಿರ್ಮೂಲನಕ್ಕಾಗಿ ಒಂದು ದಿಟ್ಟಹೆಜ್ಜೆ ಇಟ್ಟಂತಾಗುತ್ತದೆ; ಮಾತುಗಳನ್ನು ಕೃತಿಗಿಳಿಸಿದಂತಾಗುತ್ತದೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...