Homeಅಂಕಣಗಳುಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

ಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮೊನ್ನೆ ಗಾಂಧಿಭವನದಲ್ಲಿ ಮಾತನಾಡುತ್ತಾ ‘ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಹೊರಟರೆ ನನ್ನ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬರಬಹುದು’ ಎಂದು ಹೇಳಿ ‘ನಾನು ವಿಧಾನಸೌಧದ 3ನೇ ಮಹಡಿಗಳಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸಂಕಲ್ಪ ಮಾಡಿದ್ದೇನೆ’ ಎಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ತೀರ್ಮಾನ. ಮುಖ್ಯಮಂತ್ರಿಗಳು ಎಷ್ಟೇ ಬಲಶಾಲಿಗಳಾಗಿರಬಹುದು, 70 ವರ್ಷಗಳಿಂದ ಬೆಳೆದುನಿಂತಿರುವ ಈ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಒಂದೇ ಏಟಿಗೆ ತಡೆಹಿಡಿಯುವುದು ಆಗದ ಮಾತು. ಹಾಗೆ ಹೇಳಿ, ಭ್ರಷ್ಟಾಚಾರವನ್ನೂ ಸಮಾಜದಿಂದ ತೊಲಗಿಸುವುದು ಸಾಧ್ಯವೇ ಇಲ್ಲವೆಂದು ಕೈಕಟ್ಟಿ ಕೂಡುವುದೂ ಸರಿಯಲ್ಲ. ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಂಕಲ್ಪ ಮಾಡಬೇಕು.
ಸರ್ಕಾರದ ಸಿಬ್ಬಂದಿಯ ಭ್ರಷ್ಟಾಚಾರವನ್ನು ನಿಗ್ರಹಿಸಲು ನಿರ್ಧರಿಸಿರುವ ಕುಮಾರಸ್ವಾಮಿಯವರು ಆ ಕ್ರಿಯೆ ಎಲ್ಲಿಂದ ಆರಂಭವಾಗಬೇಕು ಎಂಬುದನ್ನು ಮೊದಲು ತಿಳಿಯಬೇಕು.
ಮೈಸೂರು ಸಂಸ್ಥಾನದ ಕೊನೆಯ ದಿವಾನರಾಗಿದ್ದ ಸರ್. ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಅವರು ದಕ್ಷ ಆಡಳಿತಗಾರರು. ಅವರು ಪೊಲೀಸರಿಗೆ ಹೀಗೆ ಹೇಳುತ್ತಿದ್ದರು: ‘ಭ್ರಷ್ಟಾಚಾರದಲ್ಲಿರುವ ಒಬ್ಬ ನೌಕರ ಅಥವಾ ಸೇವಕನನ್ನು ಹಿಡಿದು ಶಿಕ್ಷಿಸಿ ಪತ್ರಿಕೆಯಲ್ಲಿ ಪ್ರಚಾರ ಗಿಟ್ಟಿಸುವುದರಿಂದ ಏನೂ ಪ್ರಯೋಜನವಿಲ್ಲ. ಭ್ರಷ್ಟ್ಟಾಚಾರ ಕೊನೆಗೊಳ್ಳಬೇಕೆಂಬುದು ನಿಮ್ಮ ಉದ್ದೇಶವಾಗಿದ್ದರೆ, ಉನ್ನತಮಟ್ಟದ ನಾಲ್ಕಾರು ಭ್ರಷ್ಟರನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸಿ. ಆಗ ಭ್ರಷ್ಟಾಚಾರ ತಾನೇ ತಾನಾಗಿ ಕೊನೆಗೊಳ್ಳುತ್ತದೆ’ ಎಂದು. ಕುಮಾರಸ್ವಾಮಿಯವರು ಆದ್ಯತೆಯ ಮೇಲೆ ಈ ಕ್ರಮ ಕೈಗೊಳ್ಳಬೇಕು. ತಳಮಟ್ಟದ ಹುದ್ದೆಯ ನೂರಾರು ನೌಕರರನ್ನು ಹಿಡಿದರೆ. ನೀವು ಪ್ರಚಾರಗಿಟ್ಟಿಸಿಕೊಳ್ಳಬಹುದೇ ಹೊರತು, ಭ್ರಷ್ಟಾಚಾರವನ್ನು ತಡೆಗಟ್ಟಲಾರಿರಿ.
ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ನಿರತರಾಗಿರುವ ಹತ್ತಾರು ಸಾವಿರ ಮಂದಿ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಇದ್ದಾರೆ. ಇವರಲ್ಲಿ ಅನೇಕರು ಮಂತ್ರಿಗಳೂ, ಶಾಸಕರು, ಉನ್ನತಾಧಿಕಾರಿಗಳೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೂ ಇದ್ದಾರೆ. ಸಾರ್ವಜನಿಕ ಭೂಮಿ ಒತ್ತುವರಿಗೆ ಸಂಬಂಧಿಸಿ ಎ.ಟಿ.ರಾಮಸ್ವಾಮಿ ಸಮಿತಿಯ ವರದಿ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಸಿದ್ಧವಾಯಿತು. ಅವರ ವರದಿಯಲ್ಲಿ ನಮೂದಿಸಿರುವವರ ವಿರುದ್ಧ ಖಟ್ಲೆ ನಡೆಸಲು ವಿಶೇಷ ನ್ಯಾಯಾಲಯವೂ ಸ್ಥಾಪನೆಯಾಗಿದೆ. 50-60 ಸಾವಿರ ಕೇಸುಗಳು ಆ ನ್ಯಾಯಾಲಯದ ಮುಂದಿವೆ. ಈಗಿರುವ ಕೋರ್ಟು ಈ ಎಲ್ಲ ಕೇಸುಗಳನ್ನೂ ಕೈಗೆತ್ತಿಕೊಂಡು ನಿರ್ಣಯ ಕೊಡಬೇಕಾದರೆ ಇನ್ನು ಹತ್ತಿಪ್ಪತ್ತು ವರ್ಷಗಳೇ ಬೇಕಾಗಬಹುದು. ನಾಲ್ಕಾರು ವಿಶೇಷ ಕೋರ್ಟುಗಳನ್ನು ಅರಂಭಿಸದ ಹೊರತು ಈ ಖಟ್ಲೆಗಳನ್ನೆಲ್ಲಾ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೂಡಲೇ ವಿಶೇಷ ನ್ಯಾಯಾಲಯಗಳ ಸಂಖ್ಯೆ ಹೆಚ್ಚು ಮಾಡಿ ದುಷ್ಟ ಭೂಗಳ್ಳರಿಗೆ ಶಿಕ್ಷೆ ವಿಧಿಸುವಂತೆ ಮಾಡಲಿ. ಹಾಗೆಯೇ, ಎ.ಸಿ.ಬಿ ತನಿಖಾ ತಂಡವನ್ನು ಕೈಬಿಡುವ ವಿಚಾರ ಕುಮಾರಸ್ವಾಮಿಯವರಿಗಿಲ್ಲ ಎಂದು ಪತ್ರಿಕೆಗಳ ಸುದ್ದಿ ಇದೆ. ಚುನಾವಣಾ ಪ್ರಚಾರ ಕಾಲದಲ್ಲಿ ಘೋಷಣೆ ಮಾಡಿದಂತೆ ಕುಮಾರಸ್ವಾಮಿಯವರು ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕೆಲಸವನ್ನಾದರೂ ಈ ಕೂಡಲೇ ಮಾಡಬೇಕು.
ನ್ಯಾ| ಸಂತೋಷ್ ಹೆಗ್ಡೆಯವರ ಕಾಲದಿಂದ ಇಂದಿನವರೆಗೆ ಲೋಕಾಯುಕ್ತರಿಂದ ಅನೇಕ ಉನ್ನತ ಅಧಿಕಾರಿಗಳ ಮನೆಗಳ ಶೋಧ ನಡೆದಿದೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆಂದು ಲೋಕಾಯುಕ್ತರು ಪತ್ತೆಮಾಡಿ ವರದಿ ತಯಾರಿಸಿ ಈ ಉನ್ನತಾಧಿಕಾರಿಗಳ ಮೇಲೆ ಖಟ್ಲೆ ಹೂಡಲು ಅನುಮತಿ ಕೋರಿ ಸರ್ಕಾರಕ್ಕೆ ಬರೆದಿದ್ದಾರೆ. ಆ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಕೊಳೆಯುತ್ತಾ ಬಿದ್ದಿವೆ. ಭ್ರಷ್ಟಾಚಾರ ತೊಲಗಿಸಬೇಕೆಂದು ತೀರ್ಮಾನಿಸಿರುವ ಕುಮಾರಸ್ವಾಮಿಯವರು ಆ ಎಲ್ಲಾ ಅಧಿಕಾರಿಗಳ ಮೇಲೆ ಖಟ್ಲೆ ಹೂಡಲು ಸೂಚಿಸಿ, ಕೂಡಲೇ ಪತ್ರ ಬರೆದರೆ ಲೋಕಾಯುಕ್ತರು ಕ್ರಮ ಕೈಗೊಳ್ಳಲು ಮುಂದಾಗಬಹುದು.
ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಂದ 40 ಸಾವಿರ ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ. ಅದನ್ನೆಲ್ಲ ಹಿಂಪಡೆಯಬೇಕೆಂದು ಸಿದ್ದರಾಮಯ್ಯನವರ ಸರ್ಕಾರ ತೀರ್ಮಾನಿಸಿ, ಸರ್ಕಾರಿ ಜಮೀನನ್ನು ವಾಪಸ್ ಪಡೆಯಲು ಜಿಲ್ಲಾಧಿಕಾರಿಗಳ ನೆರವಿಗೆ ಇನ್ನಿಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ. ಈ ವಿಶೇಷ ಜಿಲ್ಲಾಧಿಕಾರಿಗಳು ಮಂದಗತಿಯಲ್ಲಿ ಜಮೀನು ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಅವರು ಮಾತ್ರ ಕ್ರಿಯಾಶೀಲರಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಈಗ ಶೇ.25ರಷ್ಟು ಜಮೀನು ವಾಪಸ್ ಪಡೆದಿದ್ದಾರಷ್ಟೆ. ಹೀಗೆ ಹಿಂಪಡೆಯಲಾದ ಜಮೀನಿಗೆ ತಂತಿ ಬೇಲಿ ಬಿಗಿದಿದ್ದರೂ, ಈಗಲೂ ಅಲ್ಲಿ ಕೆಲ ಪ್ರಬಲ ಪಾಲಿಕೆ ಸದಸ್ಯರು ಹಾಗೂ ಕೆಲ ಭೂಕಬಳಿಕೆದಾರರು ತಾವು ಹಾಕಿದ್ದ ಷೆಡ್‍ಗಳನ್ನು ಹಾಗೇ ಉಳಿಸಿಕೊಂಡು ಹತ್ತಾರು ಸಾವಿರ ರೂಗಳ ಬಾಡಿಗೆ ಪಡೆಯುತ್ತಿದ್ದಾರೆ.
ಈ ಅಕ್ರಮಕ್ಕೆ ಕಡಿವಾಣ ಹಾಕುವುದಲ್ಲದೆ ಈ ಎರಡು ಜಿಲ್ಲೆಗಳ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ನಿರ್ದಿಷ್ಟ ಅವಧಿಯೊಳಗೆ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೂ, ವಿಶೇಷ ಜಿಲ್ಲಾಧಿಕಾರಿಗಳಿಗೂ ಕುಮಾರಸ್ವಾಮಿಯವರ ಸರ್ಕಾರ ಕÀಟ್ಟಪ್ಪÀಣೆ ಮಾಡಬೇಕು.
ಇದಲ್ಲದೆ, ದೇವೇಗೌಡರ ನೇತೃತ್ವದಲ್ಲಿ ನೈಸ್ ಕಂಪನಿ ವಿರುದ್ಧ ನಡೆದ ಹೋರಾಟ ಈಗ ಹಾಲಿ ಸ್ಥಗಿತವಾಗಿದೆ. ಸಚಿವ ಜಯಚಂದ್ರ ಸಮಿತಿ ಕೂಡ ನೈಸ್ ಕಂಪನಿಯ ಖೇಣಿಯ ವಿರುದ್ಧ ನೂರಾರು ಪುಟಗಳ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದೂ ಆಗಿದೆ. ಆದರೆ ಸರ್ಕಾರ ಖೇಣಿ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು ಕೂಡಲೇ ಈ ವರದಿಯನ್ವಯ ಕ್ರಮಕೈಗೊಳ್ಳಬೇಕೆಂದು ಅಗ್ರಹ ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
ಈ ಮೇಲೆ ಹೇಳಿದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸಿದರೆ ಭ್ರಷ್ಟಾಚಾರ ನಿರ್ಮೂಲನಕ್ಕಾಗಿ ಒಂದು ದಿಟ್ಟಹೆಜ್ಜೆ ಇಟ್ಟಂತಾಗುತ್ತದೆ; ಮಾತುಗಳನ್ನು ಕೃತಿಗಿಳಿಸಿದಂತಾಗುತ್ತದೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....