Homeಅಂಕಣಗಳುಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

ಭ್ರಷ್ಟಾಚಾರ ನಿಯಂತ್ರಣ ಮುಖ್ಯಮಂತ್ರಿಯವರಿಗೆ ಸಲಹೆಗಳು

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿಗಳು ಮೊನ್ನೆ ಗಾಂಧಿಭವನದಲ್ಲಿ ಮಾತನಾಡುತ್ತಾ ‘ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲು ಹೊರಟರೆ ನನ್ನ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬರಬಹುದು’ ಎಂದು ಹೇಳಿ ‘ನಾನು ವಿಧಾನಸೌಧದ 3ನೇ ಮಹಡಿಗಳಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸಂಕಲ್ಪ ಮಾಡಿದ್ದೇನೆ’ ಎಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ತೀರ್ಮಾನ. ಮುಖ್ಯಮಂತ್ರಿಗಳು ಎಷ್ಟೇ ಬಲಶಾಲಿಗಳಾಗಿರಬಹುದು, 70 ವರ್ಷಗಳಿಂದ ಬೆಳೆದುನಿಂತಿರುವ ಈ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಒಂದೇ ಏಟಿಗೆ ತಡೆಹಿಡಿಯುವುದು ಆಗದ ಮಾತು. ಹಾಗೆ ಹೇಳಿ, ಭ್ರಷ್ಟಾಚಾರವನ್ನೂ ಸಮಾಜದಿಂದ ತೊಲಗಿಸುವುದು ಸಾಧ್ಯವೇ ಇಲ್ಲವೆಂದು ಕೈಕಟ್ಟಿ ಕೂಡುವುದೂ ಸರಿಯಲ್ಲ. ಕುಮಾರಸ್ವಾಮಿಯವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಂಕಲ್ಪ ಮಾಡಬೇಕು.
ಸರ್ಕಾರದ ಸಿಬ್ಬಂದಿಯ ಭ್ರಷ್ಟಾಚಾರವನ್ನು ನಿಗ್ರಹಿಸಲು ನಿರ್ಧರಿಸಿರುವ ಕುಮಾರಸ್ವಾಮಿಯವರು ಆ ಕ್ರಿಯೆ ಎಲ್ಲಿಂದ ಆರಂಭವಾಗಬೇಕು ಎಂಬುದನ್ನು ಮೊದಲು ತಿಳಿಯಬೇಕು.
ಮೈಸೂರು ಸಂಸ್ಥಾನದ ಕೊನೆಯ ದಿವಾನರಾಗಿದ್ದ ಸರ್. ಆರ್ಕಾಟ್ ರಾಮಸ್ವಾಮಿ ಮೊದಲಿಯಾರ್ ಅವರು ದಕ್ಷ ಆಡಳಿತಗಾರರು. ಅವರು ಪೊಲೀಸರಿಗೆ ಹೀಗೆ ಹೇಳುತ್ತಿದ್ದರು: ‘ಭ್ರಷ್ಟಾಚಾರದಲ್ಲಿರುವ ಒಬ್ಬ ನೌಕರ ಅಥವಾ ಸೇವಕನನ್ನು ಹಿಡಿದು ಶಿಕ್ಷಿಸಿ ಪತ್ರಿಕೆಯಲ್ಲಿ ಪ್ರಚಾರ ಗಿಟ್ಟಿಸುವುದರಿಂದ ಏನೂ ಪ್ರಯೋಜನವಿಲ್ಲ. ಭ್ರಷ್ಟ್ಟಾಚಾರ ಕೊನೆಗೊಳ್ಳಬೇಕೆಂಬುದು ನಿಮ್ಮ ಉದ್ದೇಶವಾಗಿದ್ದರೆ, ಉನ್ನತಮಟ್ಟದ ನಾಲ್ಕಾರು ಭ್ರಷ್ಟರನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸಿ. ಆಗ ಭ್ರಷ್ಟಾಚಾರ ತಾನೇ ತಾನಾಗಿ ಕೊನೆಗೊಳ್ಳುತ್ತದೆ’ ಎಂದು. ಕುಮಾರಸ್ವಾಮಿಯವರು ಆದ್ಯತೆಯ ಮೇಲೆ ಈ ಕ್ರಮ ಕೈಗೊಳ್ಳಬೇಕು. ತಳಮಟ್ಟದ ಹುದ್ದೆಯ ನೂರಾರು ನೌಕರರನ್ನು ಹಿಡಿದರೆ. ನೀವು ಪ್ರಚಾರಗಿಟ್ಟಿಸಿಕೊಳ್ಳಬಹುದೇ ಹೊರತು, ಭ್ರಷ್ಟಾಚಾರವನ್ನು ತಡೆಗಟ್ಟಲಾರಿರಿ.
ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ ನಿರತರಾಗಿರುವ ಹತ್ತಾರು ಸಾವಿರ ಮಂದಿ ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಇದ್ದಾರೆ. ಇವರಲ್ಲಿ ಅನೇಕರು ಮಂತ್ರಿಗಳೂ, ಶಾಸಕರು, ಉನ್ನತಾಧಿಕಾರಿಗಳೂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೂ ಇದ್ದಾರೆ. ಸಾರ್ವಜನಿಕ ಭೂಮಿ ಒತ್ತುವರಿಗೆ ಸಂಬಂಧಿಸಿ ಎ.ಟಿ.ರಾಮಸ್ವಾಮಿ ಸಮಿತಿಯ ವರದಿ ಹಿಂದೆ ನೀವು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಸಿದ್ಧವಾಯಿತು. ಅವರ ವರದಿಯಲ್ಲಿ ನಮೂದಿಸಿರುವವರ ವಿರುದ್ಧ ಖಟ್ಲೆ ನಡೆಸಲು ವಿಶೇಷ ನ್ಯಾಯಾಲಯವೂ ಸ್ಥಾಪನೆಯಾಗಿದೆ. 50-60 ಸಾವಿರ ಕೇಸುಗಳು ಆ ನ್ಯಾಯಾಲಯದ ಮುಂದಿವೆ. ಈಗಿರುವ ಕೋರ್ಟು ಈ ಎಲ್ಲ ಕೇಸುಗಳನ್ನೂ ಕೈಗೆತ್ತಿಕೊಂಡು ನಿರ್ಣಯ ಕೊಡಬೇಕಾದರೆ ಇನ್ನು ಹತ್ತಿಪ್ಪತ್ತು ವರ್ಷಗಳೇ ಬೇಕಾಗಬಹುದು. ನಾಲ್ಕಾರು ವಿಶೇಷ ಕೋರ್ಟುಗಳನ್ನು ಅರಂಭಿಸದ ಹೊರತು ಈ ಖಟ್ಲೆಗಳನ್ನೆಲ್ಲಾ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕೂಡಲೇ ವಿಶೇಷ ನ್ಯಾಯಾಲಯಗಳ ಸಂಖ್ಯೆ ಹೆಚ್ಚು ಮಾಡಿ ದುಷ್ಟ ಭೂಗಳ್ಳರಿಗೆ ಶಿಕ್ಷೆ ವಿಧಿಸುವಂತೆ ಮಾಡಲಿ. ಹಾಗೆಯೇ, ಎ.ಸಿ.ಬಿ ತನಿಖಾ ತಂಡವನ್ನು ಕೈಬಿಡುವ ವಿಚಾರ ಕುಮಾರಸ್ವಾಮಿಯವರಿಗಿಲ್ಲ ಎಂದು ಪತ್ರಿಕೆಗಳ ಸುದ್ದಿ ಇದೆ. ಚುನಾವಣಾ ಪ್ರಚಾರ ಕಾಲದಲ್ಲಿ ಘೋಷಣೆ ಮಾಡಿದಂತೆ ಕುಮಾರಸ್ವಾಮಿಯವರು ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ಕೆಲಸವನ್ನಾದರೂ ಈ ಕೂಡಲೇ ಮಾಡಬೇಕು.
ನ್ಯಾ| ಸಂತೋಷ್ ಹೆಗ್ಡೆಯವರ ಕಾಲದಿಂದ ಇಂದಿನವರೆಗೆ ಲೋಕಾಯುಕ್ತರಿಂದ ಅನೇಕ ಉನ್ನತ ಅಧಿಕಾರಿಗಳ ಮನೆಗಳ ಶೋಧ ನಡೆದಿದೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆಂದು ಲೋಕಾಯುಕ್ತರು ಪತ್ತೆಮಾಡಿ ವರದಿ ತಯಾರಿಸಿ ಈ ಉನ್ನತಾಧಿಕಾರಿಗಳ ಮೇಲೆ ಖಟ್ಲೆ ಹೂಡಲು ಅನುಮತಿ ಕೋರಿ ಸರ್ಕಾರಕ್ಕೆ ಬರೆದಿದ್ದಾರೆ. ಆ ಎಲ್ಲ ಕಡತಗಳು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಕೊಳೆಯುತ್ತಾ ಬಿದ್ದಿವೆ. ಭ್ರಷ್ಟಾಚಾರ ತೊಲಗಿಸಬೇಕೆಂದು ತೀರ್ಮಾನಿಸಿರುವ ಕುಮಾರಸ್ವಾಮಿಯವರು ಆ ಎಲ್ಲಾ ಅಧಿಕಾರಿಗಳ ಮೇಲೆ ಖಟ್ಲೆ ಹೂಡಲು ಸೂಚಿಸಿ, ಕೂಡಲೇ ಪತ್ರ ಬರೆದರೆ ಲೋಕಾಯುಕ್ತರು ಕ್ರಮ ಕೈಗೊಳ್ಳಲು ಮುಂದಾಗಬಹುದು.
ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಂದ 40 ಸಾವಿರ ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ. ಅದನ್ನೆಲ್ಲ ಹಿಂಪಡೆಯಬೇಕೆಂದು ಸಿದ್ದರಾಮಯ್ಯನವರ ಸರ್ಕಾರ ತೀರ್ಮಾನಿಸಿ, ಸರ್ಕಾರಿ ಜಮೀನನ್ನು ವಾಪಸ್ ಪಡೆಯಲು ಜಿಲ್ಲಾಧಿಕಾರಿಗಳ ನೆರವಿಗೆ ಇನ್ನಿಬ್ಬರು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿರುತ್ತಾರೆ. ಈ ವಿಶೇಷ ಜಿಲ್ಲಾಧಿಕಾರಿಗಳು ಮಂದಗತಿಯಲ್ಲಿ ಜಮೀನು ಹಿಂಪಡೆಯುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಶಂಕರ್ ಅವರು ಮಾತ್ರ ಕ್ರಿಯಾಶೀಲರಾಗಿ ಕ್ರಮ ಕೈಗೊಂಡಿದ್ದಾರೆ. ಆದರೆ ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಈಗ ಶೇ.25ರಷ್ಟು ಜಮೀನು ವಾಪಸ್ ಪಡೆದಿದ್ದಾರಷ್ಟೆ. ಹೀಗೆ ಹಿಂಪಡೆಯಲಾದ ಜಮೀನಿಗೆ ತಂತಿ ಬೇಲಿ ಬಿಗಿದಿದ್ದರೂ, ಈಗಲೂ ಅಲ್ಲಿ ಕೆಲ ಪ್ರಬಲ ಪಾಲಿಕೆ ಸದಸ್ಯರು ಹಾಗೂ ಕೆಲ ಭೂಕಬಳಿಕೆದಾರರು ತಾವು ಹಾಕಿದ್ದ ಷೆಡ್‍ಗಳನ್ನು ಹಾಗೇ ಉಳಿಸಿಕೊಂಡು ಹತ್ತಾರು ಸಾವಿರ ರೂಗಳ ಬಾಡಿಗೆ ಪಡೆಯುತ್ತಿದ್ದಾರೆ.
ಈ ಅಕ್ರಮಕ್ಕೆ ಕಡಿವಾಣ ಹಾಕುವುದಲ್ಲದೆ ಈ ಎರಡು ಜಿಲ್ಲೆಗಳ 40 ಸಾವಿರ ಎಕರೆ ಸರ್ಕಾರಿ ಜಮೀನನ್ನು ನಿರ್ದಿಷ್ಟ ಅವಧಿಯೊಳಗೆ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೂ, ವಿಶೇಷ ಜಿಲ್ಲಾಧಿಕಾರಿಗಳಿಗೂ ಕುಮಾರಸ್ವಾಮಿಯವರ ಸರ್ಕಾರ ಕÀಟ್ಟಪ್ಪÀಣೆ ಮಾಡಬೇಕು.
ಇದಲ್ಲದೆ, ದೇವೇಗೌಡರ ನೇತೃತ್ವದಲ್ಲಿ ನೈಸ್ ಕಂಪನಿ ವಿರುದ್ಧ ನಡೆದ ಹೋರಾಟ ಈಗ ಹಾಲಿ ಸ್ಥಗಿತವಾಗಿದೆ. ಸಚಿವ ಜಯಚಂದ್ರ ಸಮಿತಿ ಕೂಡ ನೈಸ್ ಕಂಪನಿಯ ಖೇಣಿಯ ವಿರುದ್ಧ ನೂರಾರು ಪುಟಗಳ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದೂ ಆಗಿದೆ. ಆದರೆ ಸರ್ಕಾರ ಖೇಣಿ ಮೇಲೆ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿರುವ ಕುಮಾರಸ್ವಾಮಿಯವರು ಕೂಡಲೇ ಈ ವರದಿಯನ್ವಯ ಕ್ರಮಕೈಗೊಳ್ಳಬೇಕೆಂದು ಅಗ್ರಹ ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ.
ಈ ಮೇಲೆ ಹೇಳಿದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸಿದರೆ ಭ್ರಷ್ಟಾಚಾರ ನಿರ್ಮೂಲನಕ್ಕಾಗಿ ಒಂದು ದಿಟ್ಟಹೆಜ್ಜೆ ಇಟ್ಟಂತಾಗುತ್ತದೆ; ಮಾತುಗಳನ್ನು ಕೃತಿಗಿಳಿಸಿದಂತಾಗುತ್ತದೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....