Homeಸಾಮಾಜಿಕಮಂಗಳೂರು ಯೂನಿವರ್ಸಿಟಿ ಮಂಗಳ ಗಂಗೋತ್ರಿಯಲ್ಲಿ ಗಂಡಾಗುಂಡಿ

ಮಂಗಳೂರು ಯೂನಿವರ್ಸಿಟಿ ಮಂಗಳ ಗಂಗೋತ್ರಿಯಲ್ಲಿ ಗಂಡಾಗುಂಡಿ

- Advertisement -
- Advertisement -

ಮಂಗಳೂರು ವಿಶ್ವವಿದ್ಯಾಲಯಕ್ಕೆ “ಮಂಗಳ ಗಂಗೋತ್ರಿ” ಎಂಬ ಚಂದದ ಹೆಸರಿಡಲಾಗಿದೆ ವಿಕಟ ವ್ಯಂಗ್ಯವೆಂದರೆ, ಈ ಯೂನಿವರ್ಸಿಟಿ ಶುದ್ಧ ಅವ್ಯವಹಾರ, ಅಕ್ರಮ, ಅನ್ಯಾಯ, ಅನಾಚಾರದ ಗಂಗೋತ್ರಿಯಂತಾಗಿ ಅದ್ಯಾವುದೋ ಕಾಲವಾಗಿ ಹೋಗಿದೆ! ಇಲ್ಲಿಗೆ ಉಪಕುಲಪತಿಗಳಾಗಿ ವಕ್ಕರಿಸುವ ಭೂಪರಿಲ್ಲ ಸಿಕ್ಕóಷ್ಟು ಸ್ವಾಹಾ ಮಾಡುವ ಹಿಡನ್ ಅಜೆಂಡಾ ಇಟ್ಟುಕೊಂಡೇ ಬರುತ್ತಿದ್ದಾರೆ. ಹೀಗಾಗಿ ಮಂಗಳೂರು ವಿಶÀ್ವವಿದ್ಯಾಲಯ ಒಂದಲ್ಲ ಒಂದು ಬುರ್ನಾಸ್ ಭಾನ್ಗಡಿಯ ಸುದ್ದಿಗೀಡಾಗುತ್ತಲೇ ಇದೆ. ಈ ಪರಿಯ ಕವರ್iಕಾಂಡ, ಕಾಮಕತೆಗಳೆಲ್ಲವೂ ಲೋಕ ಪ್ರಸಿದ್ದ! ಮಂಗಳ ಗಂಗೋತ್ರಿಯಲ್ಲಾಗುವುದು ಕೋಟಿಗಳ ಲೆಕ್ಕದ ಬಿಲ್ ವಿದ್ಯೆ!! ಕಾಮಗಾರಿ, ನೇಮಕಾತಿ, ಖರೀದಿಯಲ್ಲಿ ಘನಘೋರ ಭ್ರಷ್ಟಾಚಾರ ನಡೆಯುತ್ತಿರುವ ಮಂಗಳೂರು ಯೂನಿವರ್ಸಿಟಿಯಲ್ಲಿ ಉಪನ್ಯಾಸಕಿಯರ, ವಿದ್ಯಾರ್ಥಿನಿಯರ ಲೈಂಗಿಕ ಶೋಷಣೆ ನಿತ್ಯಕರ್ಮದಂತಾಗಿದೆ.
ಅಂಕಪಟ್ಟಿ ಹಗರಣ 2007 ರಲ್ಲಿ ನಡೆದಾಗ ಅಲ್ಲೋಲಕಲ್ಲೋಲವೇ ಮಂಗಳ ಗಂಗೋತ್ರಿಯಲ್ಲಾಗಿತ್ತು! ಅದನ್ನು ಮರೆಯದ ಚರ್ಚೆಯ ಸಂಗತಿಯಾಗಿ ಇದೆಯೇ ವಿನಾಃ ನಿಷ್ಠುರ ತನಿಖೆ ಎಂಬುದಾಗಲೇ ಇಲ್ಲ. ಅಂದು ಎಬಿವಿಪಿಯ ರಣಧೀರ ಕಂಠೀರವನಾಗಿದ್ದ ಇಂದಿನ ಬೆಳ್ತಂಗಡಿಯ ಚೆಡ್ಡಿ ಶಾಸಕ ಹರೀಶ್‍ರೈ ಆ ಹಗರಣದ ಫಲಾನುಭವಿಗಳಲ್ಲಿ ಒಬ್ಬ!! ಮಂಗಳೂರು ವಿವಿಯಲ್ಲಿ ಆಕಾಡೆಮಿಕ್ ವಾತಾವರಣದ ಬದಲು ಸ್ವಚ್ಛಂದ ಮೋಜಿನ ಮೂಡ್ ನೆಲೆನಿಂತಿದ್ದೆ. ಸಂಘ ಪರಿವಾರದ ಹಾವಳಿಯಂತೂ ಹೇಳತೀರದು. ಸಿದ್ದು ಕಾಲಾವಧಿಯಲ್ಲಿ ಉಪಕುಲಪತಿಯಾಗಿ ನೇಮಕವಾಗಿದ್ದ ಭೈರಪ್ಪ ವಾರ್ಸಿಟಿಯ ಶೆಕ್ಷಣಿಕ ಸುಧಾರಣೆಗೆ ತಲೆಕೆಡಿಸಿಕೊಳ್ಳಲೇ ಇಲ್ಲ. ಆತ ಎಲ್ಲೆಲ್ಲಿ ಎಷ್ಟೆಷ್ಟು ಗುಳುಂ ಮಾಡಲು ಸಾಧ್ಯವೆಂದು ತಲಾಸ್ ನಡೆಸಿ ಹೊಟ್ಟೆತುಂಬ ಉಂಡು ಎದ್ದು ಹೋಗಿದ್ದಾರೆ. ಈ ಭೈರಪ್ಪ ಮಂಗಳ ಗಂಗೋತ್ರಿಯಿಂದ ತೊಲಗಿ ಆದಿಚುಂಚನಗಿರಿ ಶೆಕ್ಷಣಿಕ ಸಾಮ್ರಾಜ್ಯದ ಪ್ರೋಚಾನ್ಸಲರ್ ಆಗಿ ಅಮರಿಕೊಂಡು ತಿಂಗಳೆರಡು ಗತಿಸಿದರೂ ಆತನ ಗೋಲ್‍ಮಾಲ್ ಲೀಲೆಗಳ ಆವಾಜ್ ಮಾತ್ರ ಇವತ್ತಿಗೂ ನಿಂತಿಲ್ಲ…………
ಯಾರ್ಯಾರ ದೌರ್ಬಲ್ಯ ಎಂತೆಂಥದೆಂದು ಕರಾರುವಾಕ್ಕಾಗಿ ಕಂಡುಹಿಡಿದು ಆ ಚೋರ ಚಂಡಾಲರನ್ನು ತನ್ನ ಮನೋಗಡಕ್ಕೆ ಬಳಸಿಕೊಳುವ ಕಲೆ ಕರಗತ ಮಾಡಿಕೊಂಡಿದ್ದ ಭೈರಪ್ಪ ಸಾಹೇಬರು ತನಗೆ ವಿಸಿಯಾಗಿ ಪ್ರಾತಿಷ್ಠಾಪಿಸಿದ್ದ ಕಾಂಗ್ರೆಸಿಗರಷ್ಟೇ ಆದÀರಿಂದ ಬಿಜೆಪಿಗರನ್ನು ನೋಡಿಕೊಳ್ಳುತ್ತಿದ್ದರು ಕೇಸರಿ ಕಿತಾಪತಿಗಾರರ ಆಡ್ಡೆಯಂತಾಗಿರುವ ಮಂಗಳೂರಲ್ಲಿ ಬಿಜೆಪಿ ಪರಿವಾರಿಗರ ಯಶಸ್ವಿಯಾಗಿ ನಿಭಾಯಿಸಿದ್ದ ಭೈರಪ್ಪ ವಿವಿಯನ್ನು ಮಾವನ ಮನೆಯಿಂದ ಬಂದ ಬಳುವಳಿಯಂತೆ ದರ್ಬಾರು ನಡೆಸುತ್ತಿದ್ದರು! ತನ್ನ ರಣ ಹಸಿವು ಅರ್ಥ ಮಾಡಿಕೊಂಡವರ ವಿವಿಯ ಆಯಕಟ್ಟಿನ ಜಾಗದಲ್ಲಿ ನಿಭಾಯಿಸಿದ್ದ ಈ ವಿಸಿ ತನ್ನ ಒಣ ಸೈದ್ದಾಂತಿಕತೆ, ಸ್ವಪ್ರತಿಷ್ಠೆ ಮತ್ತು ಹಣದ ಹಪಾಹಪಿಗೆ ತಕ್ಕಂತೆ ಆಡಳಿತ ನಡೆಸಿಕೊಂಡಿದ್ದರು!!
ಪ್ರತಿ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಮಂಗಳೂರು ವಿವಿಯ ಸಂಪ್ರದಾಯ ಎಂಬಂತಾಗಿದೆ! ಭೈರಪ್ಪನ ಪರ್ವದಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗವಾದಾಗ ದೊಡ್ಡ ಗದ್ದಲವೂ ಆಗಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ವ್ಯವಸ್ಥಿತ ಜಾಲದಲ್ಲಿ ವೀಸಿ ಸಾಹೇಬರೂ ಇದ್ದಾರೆಂಬ ಪುಕಾರುಗಳು ಎದ್ದಿದ್ದವು. ತುಂಬ ನಾಜೂಕಾಗಿ ಪ್ರಕರಣ ನಿಭಾಯಿಸಿದ ವಿಸಿ ಭೈರಪ್ಪ ಎಲ್ಲಾ ಮುಚ್ಚಿಹಾಕಿ ಬಚಾವಾದರು. ಅಂಕಪಟ್ಟಿ ಅಕ್ರಮದಲ್ಲಂತೂ ಬಹುಕೋಟಿ ವ್ಯವಹಾರ ರಾಜಾರೋಷವಾಗೇ ನಡೆದುಹೋಗಿದೆ. ಇದರಲ್ಲಿ ವಿಸಿ ಸಾಹೇಬರಿಗೆ ದೊಡ್ಡದೊಂದು ಪಾಲು ದಕ್ಕಿದೆಯೆಂದು ಯೂನಿವರ್ಸಿಟಿಯ ಕಂಬ-ಕಂಬವೂ ಪಿಸುಗುಡುತ್ತದೆ. ಕೆಎಸ್‍ಓಯು ಯುಜಿಸಿ ಮಾನ್ಯತೆ ಕಳೆದುಕೊಂಡಿತು. ಈ ಕೆಎಸ್‍ಓಯು ಮತ್ತು ದೂರಶಿಕ್ಷಣ ನಿರ್ದೇಶನಾಲಯವನ್ನು ದುಡ್ಡು ಮಾಡುವ ಅಡ್ಡೆಯಂತಾಗಿಸಲಾಯಿತು. ಕಾಸು ಕೊಟ್ಟವರಿಗೆಲ್ಲಾ ಪದವಿ ರಾತ್ರಿ ಬೆಳಗಾಗುವುದರಲ್ಲಿ ಮಂಗಳಗಂಗೋತ್ರಿಯಲ್ಲಿ ಸಲೀಸಾಗಿ ಸಿಗುತ್ತಿದೆ.
ಮಂಗಳ ಗಂಗೋತ್ರಿಯ ಅಷ್ಟೂ ಅವ್ಯವಹಾರ ತಾಯಿಬೇರು ಖರೀದಿ ಕಮಿಟಿ(ಪರ್ಚೆಸ್ ಕಮಿಟಿ) ವೀಸಿ ಕಣ್ಗಾವಲಿನಲ್ಲಿರುವ ಈ ಕಮಿಟಿಯಲ್ಲಿ ಡೀನ್‍ಗಳೆಲ್ಲ ಇರುತ್ತಾರೆ. ಇಲ್ಲಾಗುವ ಖೋಟಾ ಖರೀದಿ, ಕಮಿಷನ್, ಕಿಕ್‍ಬ್ಯಾಕ್‍ಗಳು ಲಕ್ಷದ ಲೆಕ್ಕದಲ್ಲೇ ಇರುತ್ತದೆ! ಖರೀದಿಗಳು ಕೊಟ್ಯಾಂತರ ರೂಪಾಯಿಗಳಾದರೆ ಲಫಡಾ ಲಕ್ಷಾಂತರ ರೂಪಾಯಿಗಳದು. ಪೀಠೋಪಕರಣ, ಎಲೆಕ್ಟ್ರಿಕಲ್ ಸಾಮಾನು, ಕಂಪ್ಯೂಟರ್ ಮುಂತಾದ ವಸ್ತು ಕೊಳ್ಳುವಾಗ ವಿಪರೀತ ಬೆಲೆ ನಮೂದಿಸಿ ಪರ್ಸೆಂಟೇಜ್ ಹೊಡೆಯುವುದು ಸದ್ರಿ ವಾರ್ಸಿಟಿ ವಾಡಿಕೆ. ಈ ಕಮಾಯಿ ಭೈರಪ್ಪನ ಟೀಮು ಹಗಲೂ-ಇರುಳೂ ನಡೆಸಿ ದುಂಡಗಾಗಿದೆ. ಈ ಪರ್ಚೆಸ್ ಪರಾಕ್ರಮದ ಸರಿಯಾದ ತನಿಖೆ ನಡೆದರೆ ಭೈರಪ್ಪ ಅಂಡ್‍ಕೋದ ಲೂಟಿ ಲೆಕ್ಕಸಿಗುತ್ತದೆ. ಆ ತಾಕತ್ತು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರಿಗಿದೆಯಾ? ಸ್ವಜಾತಿ ಬಂಧುವಾದ ಭೈರಪ್ಪರ ಮುಟ್ಟುವ ಮನಸ್ಸು ಮಂತ್ರಿ ದೇವೇಗೌಡರಿಗಿಲ್ಲ ಎಂದು ವಾರ್ಸಿಟಿಯ ಮಂದಿ ಮುಸಿಮುಸಿ ನಗುತ್ತಾರೆ.
ವಿಸಿ ಭೈರಪ್ಪರ ಡಬ್ಬಲ್ ವೆಂಚರ್ ಎಂದೇ ಕುಖ್ಯಾತವಾಗಿದೆ ವಿವಿಯಲ್ಲಿ ಬೇಕಾಬಿಟ್ಟಿಯಾಗಿ ಅಳವಡಿಸಿರುವ ಸಿಸಿ ಕ್ಯಾಮರಾ ಮತ್ತು ಸೋಲಾರ್ ಹಗರಣಗಳು!! ಎರಡೂ ಕೋಟಿ ಕರಾಮತ್ತೇ. ಸೋಲಾರ್ ಗುತ್ತಿಗೆ ಕಡಿಮೆ ಮೊತ್ತದ ಬಿಡ್‍ದಾರನ ಬದಲಿಗೆ ದೊಡ್ಡ ಬಿಡ್‍ದಾರನಿಗೆ ಭೈರಪ್ಪರ ಗ್ಯಾಂಗು ದಯಪಾಲಿಸಿದೆ. ಇದರಲ್ಲಿ ಲಕ್ಷಾಂತರ ಕಮಿಷನ್ ಪಡೆದಿರುವ ವೀಸಿ ಬಳಗ ಬರೊಬ್ಬರಿ ನಾಲ್ಕು ಕೋಟಿ ರೂಪಾಯಿಗಳ ಸಿಸಿ ಕ್ಯಾಮರಾ ಅಳವಡಿಕೆಯಲ್ಲಿ ಬುದ್ಧಿಪೂರ್ವಕವಾಗೇ ಟೆಂಡರ್ ನಿಯಮ ಧಿಕ್ಕರಿಸಿದೆ. ಯಾವುದೇ ಟೆಂಡರ್ ಇಲ್ಲದೆ ಮುಗುಮ್ಮಾಗಿ ಆಗಿ ನಡೆದಿರುವ ಈ ಸಿಸಿಕ್ಯಾಮರಾ ಅಳವಡಿಕೆ ಕಾಮಗಾರಿ ವೀಸಿ ಭೈರಪ್ಪರ ದೆಸೆಯನ್ನೇ ಬದಲಿಸಿದೆ!
ಗುತ್ತಿಗೆ ಆಧಾರದಲ್ಲಿ ನೇಮಕಾತಿಯಾಗುವ ದುರ್ಬಲರ ಸಂಬಳಕ್ಕೂ ನಾಲಿಗೆ ಚಾಚುವ ಭೈರಪ್ಪರ ಬಣದ ಚಾಳಿ ಮಂಗಳೂರು ವಿವಿ ವ್ಯಾಪ್ತಿಯ ಅಷ್ಟೂ ಶಿಕ್ಷಣ ಸಂಸ್ಥೆಗಳಲ್ಲಿ ಸುಪ್ರಸಿದ್ಧ!! ಸೆಕ್ಯೂರಿಟಿ, ಸಿಫಾಯಿ, ಅಟೆಂಡರ್, ಗುಮಾಸ್ತರಂಥ ಸಣ್ಣ-ಪುಟ್ಟ ಕರ್ಮಚಾರಿಗಳನ್ನು ವಿವಿಯಲ್ಲಿ ಗುತ್ತಿಗೆಯಲ್ಲಿ ತೆಗೆದುಕೊಳ್ಳಲಾಗಿದೆ. ಇವರಿಗೆಲ್ಲಾ ಅಬ್ಬಬ್ಬಾ ಎಂದರೆ ಏಳೆಂಟು ಸಾವಿರ ರೂಪಾಯಿ ಪಗಾರು ಕೊಡಲಾಗುತ್ತಿದೆ. ಆದರೆ ಇವರ ಹೆಸರಲ್ಲಿ ಹದಿನೈದು ಸಾವಿರದಿಂದ ಇಪ್ಪತ್ತೈದು ಸಾವಿರ ರೂಪಾಯಿಗಳ ತನಕ ಖರ್ಚು ಹಾಕಲಾಗಿದೆಯಂತೆ. ವ್ಯತ್ಯಾಸದ ಕಾಸು ಎಲ್ಲಿ ಹೋಗಿದೆ ಎಂಬುದು ಭೈರಪ್ಪರಿಗೆ ಮಾತ್ರ ಗೊತ್ತಿದೆ! ಪೆವಿಲಿಯನ್ ಮತ್ತು ಕಟ್ಟಡಗಳ ನಿರ್ಮಾಣದಲ್ಲಿ ಕೋಟಿ-ಕೋಟಿ ನಾಯಿ-ನರಿ ಪಾಲಾಗಿದೆ ಎಂಬ ಆರೋಪಗಳಿವೆ. ಒಟ್ಟಿನಲ್ಲಿ ವಿವಿ ದುಡ್ಡಲ್ಲಿ ವಿಸಿಯಾಗಿದ್ದ ಭೈರಪ್ಪ ಭರ್ಜರಿ ಯಲ್ಲಮ್ಮನ ಜಾತ್ರೆ ಮಾಡಿಹೋಗಿದ್ದಾರೆ.
ಮಂಗಳಗಂಗೋತ್ರಿಯ ಮತ್ತೊಂದು ಮಗ್ಗುಲಲ್ಲಿ ಅವ್ಯವಹಾರ-ಅಕ್ರಮಗಳಷ್ಟೇ ಬಿರುಸಾಗಿ ಕಾಮಕಾಂಡವೂ ನಡೆದಿದೆ. ಉಪನ್ಯಾಸಕರ ವೃತ್ತಿಗೆ ನಾಲಾಯಕ್ ಆಗಿರುವವರೆಲ್ಲ ಅಮಾಯಕ ವಿದ್ಯಾರ್ಥಿನಿಯರ ನಡುವೆ ಅನಾಹುತಕಾರಿಗಳಂತೆ ಅಂಡಲೆಯುತ್ತಿದ್ದಾರೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಅಧ್ಯಾಪಕ ಡಾ|| ಉಮೇಶ್‍ನಾಯ್ಕ್ ಲ್ಯಾಬ್ ಮತ್ತು ಲೈಬ್ರರಿಯಲ್ಲಿ ಹುಡುಗಿಯರ ಜತೆ ಅಸಹ್ಯವಾಗಿ ವರ್ತಿಸುತ್ತಾನೆಂಬ ಗುಲ್ಲೆದ್ದಿದೆ. ಮರೈನ್ ಬಾಯಲಾಜಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ಇಟ್ಟು ಸಿಕ್ಕಿಬಿದ್ದಿದ್ದ. ಡಾ|| ಸುಜಾತ ಎಂಬ ಉಪನ್ಯಾಸಕಿ ತನಗೆ ಸಹೋದ್ಯೋಗಿ ಪ್ರೊಫೆಸರ್ ಡಾ|| ರಶೀದ್ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಡೆತ್‍ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಳು. ಬರೋಬ್ಬರಿ ಒಂಭತ್ತು ವರ್ಷ ಆಕೆಗೆ ರಶೀದ್ ಪೀಡಿಸುತ್ತಿದ್ದನಂತೆ. ಈ ಕಾಮಕತೆಗಳು ಮಂಗಳಗಂಗೋತ್ರಿ ಹೆಣ್ಣು ಕು¯ಕ್ಕೆ ಸುರಕ್ಷಿತವಲ್ಲ ಎಂಬ ಸಂದೇಶ ಕಳಿಸಿದೆ. ಅನಾಚಾರ-ಅವ್ಯವಹಾರ-ಅಕಾಡಮಿಕ್ ಪರಿಸರಕ್ಕೆ ಗಂಡಾಂತರಿಕಾರಿಯಾದ ಕುಕೃತ್ಯಗಳು ಒಂದರ ಹಿಂದೊಂದರಂತೆ ನಡೆದರೂ ಯಾವುದೂ ಸರಿಯಾದ ತನಿಖೆಗೆ ಒಳಪಡದೆ ಘಟಿಂಗರು ಪಾರಮ್ಯ ಮೆರೆಯುತ್ತಿದ್ದಾರೆ.
ಮಂಗಳ ಗಂಗೋತ್ರಿಯನ್ನು ಹಳಿಗೆ ತರುವ ಕೆಲಸ ಉನ್ನತ ಶಿಕ್ಷಣ ಮಂತ್ರಿ ಜಿ.ಟಿ. ದೇವೇಗೌಡರ ಕೈಲಿ ಸಾಧ್ಯವಾ? ಆ ಖಾತೆ ನಿಭಾಯಿಸುವ ಧೈರ್ಯ ತನಗಿಲ್ಲವೆಂಬ ಕೀಳಮೆಯ ದೇವೇಗೌಡರಿದ್ದಾರೆ. ಹಾಗಾಗಿ ವಿವಿ ಕುಲಾಧಿಪತಿಯಾಗಿರುವ ರಾಜ್ಯಪಾಲ ವಾಲಾ ಮೂಗು ತೂರಿಸುವ ಮೋದಲೇ ಸಿಎಂ ಕುಮ್ಮಿ ಎಚ್ಚೆತ್ತುಕೊಳ್ಳುವರಾ?!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...