Homeಸಾಮಾಜಿಕಮಂಗಳೂರು ಯೂನಿವರ್ಸಿಟಿ ಮಂಗಳ ಗಂಗೋತ್ರಿಯಲ್ಲಿ ಗಂಡಾಗುಂಡಿ

ಮಂಗಳೂರು ಯೂನಿವರ್ಸಿಟಿ ಮಂಗಳ ಗಂಗೋತ್ರಿಯಲ್ಲಿ ಗಂಡಾಗುಂಡಿ

- Advertisement -
- Advertisement -

ಮಂಗಳೂರು ವಿಶ್ವವಿದ್ಯಾಲಯಕ್ಕೆ “ಮಂಗಳ ಗಂಗೋತ್ರಿ” ಎಂಬ ಚಂದದ ಹೆಸರಿಡಲಾಗಿದೆ ವಿಕಟ ವ್ಯಂಗ್ಯವೆಂದರೆ, ಈ ಯೂನಿವರ್ಸಿಟಿ ಶುದ್ಧ ಅವ್ಯವಹಾರ, ಅಕ್ರಮ, ಅನ್ಯಾಯ, ಅನಾಚಾರದ ಗಂಗೋತ್ರಿಯಂತಾಗಿ ಅದ್ಯಾವುದೋ ಕಾಲವಾಗಿ ಹೋಗಿದೆ! ಇಲ್ಲಿಗೆ ಉಪಕುಲಪತಿಗಳಾಗಿ ವಕ್ಕರಿಸುವ ಭೂಪರಿಲ್ಲ ಸಿಕ್ಕóಷ್ಟು ಸ್ವಾಹಾ ಮಾಡುವ ಹಿಡನ್ ಅಜೆಂಡಾ ಇಟ್ಟುಕೊಂಡೇ ಬರುತ್ತಿದ್ದಾರೆ. ಹೀಗಾಗಿ ಮಂಗಳೂರು ವಿಶÀ್ವವಿದ್ಯಾಲಯ ಒಂದಲ್ಲ ಒಂದು ಬುರ್ನಾಸ್ ಭಾನ್ಗಡಿಯ ಸುದ್ದಿಗೀಡಾಗುತ್ತಲೇ ಇದೆ. ಈ ಪರಿಯ ಕವರ್iಕಾಂಡ, ಕಾಮಕತೆಗಳೆಲ್ಲವೂ ಲೋಕ ಪ್ರಸಿದ್ದ! ಮಂಗಳ ಗಂಗೋತ್ರಿಯಲ್ಲಾಗುವುದು ಕೋಟಿಗಳ ಲೆಕ್ಕದ ಬಿಲ್ ವಿದ್ಯೆ!! ಕಾಮಗಾರಿ, ನೇಮಕಾತಿ, ಖರೀದಿಯಲ್ಲಿ ಘನಘೋರ ಭ್ರಷ್ಟಾಚಾರ ನಡೆಯುತ್ತಿರುವ ಮಂಗಳೂರು ಯೂನಿವರ್ಸಿಟಿಯಲ್ಲಿ ಉಪನ್ಯಾಸಕಿಯರ, ವಿದ್ಯಾರ್ಥಿನಿಯರ ಲೈಂಗಿಕ ಶೋಷಣೆ ನಿತ್ಯಕರ್ಮದಂತಾಗಿದೆ.
ಅಂಕಪಟ್ಟಿ ಹಗರಣ 2007 ರಲ್ಲಿ ನಡೆದಾಗ ಅಲ್ಲೋಲಕಲ್ಲೋಲವೇ ಮಂಗಳ ಗಂಗೋತ್ರಿಯಲ್ಲಾಗಿತ್ತು! ಅದನ್ನು ಮರೆಯದ ಚರ್ಚೆಯ ಸಂಗತಿಯಾಗಿ ಇದೆಯೇ ವಿನಾಃ ನಿಷ್ಠುರ ತನಿಖೆ ಎಂಬುದಾಗಲೇ ಇಲ್ಲ. ಅಂದು ಎಬಿವಿಪಿಯ ರಣಧೀರ ಕಂಠೀರವನಾಗಿದ್ದ ಇಂದಿನ ಬೆಳ್ತಂಗಡಿಯ ಚೆಡ್ಡಿ ಶಾಸಕ ಹರೀಶ್‍ರೈ ಆ ಹಗರಣದ ಫಲಾನುಭವಿಗಳಲ್ಲಿ ಒಬ್ಬ!! ಮಂಗಳೂರು ವಿವಿಯಲ್ಲಿ ಆಕಾಡೆಮಿಕ್ ವಾತಾವರಣದ ಬದಲು ಸ್ವಚ್ಛಂದ ಮೋಜಿನ ಮೂಡ್ ನೆಲೆನಿಂತಿದ್ದೆ. ಸಂಘ ಪರಿವಾರದ ಹಾವಳಿಯಂತೂ ಹೇಳತೀರದು. ಸಿದ್ದು ಕಾಲಾವಧಿಯಲ್ಲಿ ಉಪಕುಲಪತಿಯಾಗಿ ನೇಮಕವಾಗಿದ್ದ ಭೈರಪ್ಪ ವಾರ್ಸಿಟಿಯ ಶೆಕ್ಷಣಿಕ ಸುಧಾರಣೆಗೆ ತಲೆಕೆಡಿಸಿಕೊಳ್ಳಲೇ ಇಲ್ಲ. ಆತ ಎಲ್ಲೆಲ್ಲಿ ಎಷ್ಟೆಷ್ಟು ಗುಳುಂ ಮಾಡಲು ಸಾಧ್ಯವೆಂದು ತಲಾಸ್ ನಡೆಸಿ ಹೊಟ್ಟೆತುಂಬ ಉಂಡು ಎದ್ದು ಹೋಗಿದ್ದಾರೆ. ಈ ಭೈರಪ್ಪ ಮಂಗಳ ಗಂಗೋತ್ರಿಯಿಂದ ತೊಲಗಿ ಆದಿಚುಂಚನಗಿರಿ ಶೆಕ್ಷಣಿಕ ಸಾಮ್ರಾಜ್ಯದ ಪ್ರೋಚಾನ್ಸಲರ್ ಆಗಿ ಅಮರಿಕೊಂಡು ತಿಂಗಳೆರಡು ಗತಿಸಿದರೂ ಆತನ ಗೋಲ್‍ಮಾಲ್ ಲೀಲೆಗಳ ಆವಾಜ್ ಮಾತ್ರ ಇವತ್ತಿಗೂ ನಿಂತಿಲ್ಲ…………
ಯಾರ್ಯಾರ ದೌರ್ಬಲ್ಯ ಎಂತೆಂಥದೆಂದು ಕರಾರುವಾಕ್ಕಾಗಿ ಕಂಡುಹಿಡಿದು ಆ ಚೋರ ಚಂಡಾಲರನ್ನು ತನ್ನ ಮನೋಗಡಕ್ಕೆ ಬಳಸಿಕೊಳುವ ಕಲೆ ಕರಗತ ಮಾಡಿಕೊಂಡಿದ್ದ ಭೈರಪ್ಪ ಸಾಹೇಬರು ತನಗೆ ವಿಸಿಯಾಗಿ ಪ್ರಾತಿಷ್ಠಾಪಿಸಿದ್ದ ಕಾಂಗ್ರೆಸಿಗರಷ್ಟೇ ಆದÀರಿಂದ ಬಿಜೆಪಿಗರನ್ನು ನೋಡಿಕೊಳ್ಳುತ್ತಿದ್ದರು ಕೇಸರಿ ಕಿತಾಪತಿಗಾರರ ಆಡ್ಡೆಯಂತಾಗಿರುವ ಮಂಗಳೂರಲ್ಲಿ ಬಿಜೆಪಿ ಪರಿವಾರಿಗರ ಯಶಸ್ವಿಯಾಗಿ ನಿಭಾಯಿಸಿದ್ದ ಭೈರಪ್ಪ ವಿವಿಯನ್ನು ಮಾವನ ಮನೆಯಿಂದ ಬಂದ ಬಳುವಳಿಯಂತೆ ದರ್ಬಾರು ನಡೆಸುತ್ತಿದ್ದರು! ತನ್ನ ರಣ ಹಸಿವು ಅರ್ಥ ಮಾಡಿಕೊಂಡವರ ವಿವಿಯ ಆಯಕಟ್ಟಿನ ಜಾಗದಲ್ಲಿ ನಿಭಾಯಿಸಿದ್ದ ಈ ವಿಸಿ ತನ್ನ ಒಣ ಸೈದ್ದಾಂತಿಕತೆ, ಸ್ವಪ್ರತಿಷ್ಠೆ ಮತ್ತು ಹಣದ ಹಪಾಹಪಿಗೆ ತಕ್ಕಂತೆ ಆಡಳಿತ ನಡೆಸಿಕೊಂಡಿದ್ದರು!!
ಪ್ರತಿ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಮಂಗಳೂರು ವಿವಿಯ ಸಂಪ್ರದಾಯ ಎಂಬಂತಾಗಿದೆ! ಭೈರಪ್ಪನ ಪರ್ವದಲ್ಲಿ ಪ್ರಶ್ನೆ ಪತ್ರಿಕೆ ಬಹಿರಂಗವಾದಾಗ ದೊಡ್ಡ ಗದ್ದಲವೂ ಆಗಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ವ್ಯವಸ್ಥಿತ ಜಾಲದಲ್ಲಿ ವೀಸಿ ಸಾಹೇಬರೂ ಇದ್ದಾರೆಂಬ ಪುಕಾರುಗಳು ಎದ್ದಿದ್ದವು. ತುಂಬ ನಾಜೂಕಾಗಿ ಪ್ರಕರಣ ನಿಭಾಯಿಸಿದ ವಿಸಿ ಭೈರಪ್ಪ ಎಲ್ಲಾ ಮುಚ್ಚಿಹಾಕಿ ಬಚಾವಾದರು. ಅಂಕಪಟ್ಟಿ ಅಕ್ರಮದಲ್ಲಂತೂ ಬಹುಕೋಟಿ ವ್ಯವಹಾರ ರಾಜಾರೋಷವಾಗೇ ನಡೆದುಹೋಗಿದೆ. ಇದರಲ್ಲಿ ವಿಸಿ ಸಾಹೇಬರಿಗೆ ದೊಡ್ಡದೊಂದು ಪಾಲು ದಕ್ಕಿದೆಯೆಂದು ಯೂನಿವರ್ಸಿಟಿಯ ಕಂಬ-ಕಂಬವೂ ಪಿಸುಗುಡುತ್ತದೆ. ಕೆಎಸ್‍ಓಯು ಯುಜಿಸಿ ಮಾನ್ಯತೆ ಕಳೆದುಕೊಂಡಿತು. ಈ ಕೆಎಸ್‍ಓಯು ಮತ್ತು ದೂರಶಿಕ್ಷಣ ನಿರ್ದೇಶನಾಲಯವನ್ನು ದುಡ್ಡು ಮಾಡುವ ಅಡ್ಡೆಯಂತಾಗಿಸಲಾಯಿತು. ಕಾಸು ಕೊಟ್ಟವರಿಗೆಲ್ಲಾ ಪದವಿ ರಾತ್ರಿ ಬೆಳಗಾಗುವುದರಲ್ಲಿ ಮಂಗಳಗಂಗೋತ್ರಿಯಲ್ಲಿ ಸಲೀಸಾಗಿ ಸಿಗುತ್ತಿದೆ.
ಮಂಗಳ ಗಂಗೋತ್ರಿಯ ಅಷ್ಟೂ ಅವ್ಯವಹಾರ ತಾಯಿಬೇರು ಖರೀದಿ ಕಮಿಟಿ(ಪರ್ಚೆಸ್ ಕಮಿಟಿ) ವೀಸಿ ಕಣ್ಗಾವಲಿನಲ್ಲಿರುವ ಈ ಕಮಿಟಿಯಲ್ಲಿ ಡೀನ್‍ಗಳೆಲ್ಲ ಇರುತ್ತಾರೆ. ಇಲ್ಲಾಗುವ ಖೋಟಾ ಖರೀದಿ, ಕಮಿಷನ್, ಕಿಕ್‍ಬ್ಯಾಕ್‍ಗಳು ಲಕ್ಷದ ಲೆಕ್ಕದಲ್ಲೇ ಇರುತ್ತದೆ! ಖರೀದಿಗಳು ಕೊಟ್ಯಾಂತರ ರೂಪಾಯಿಗಳಾದರೆ ಲಫಡಾ ಲಕ್ಷಾಂತರ ರೂಪಾಯಿಗಳದು. ಪೀಠೋಪಕರಣ, ಎಲೆಕ್ಟ್ರಿಕಲ್ ಸಾಮಾನು, ಕಂಪ್ಯೂಟರ್ ಮುಂತಾದ ವಸ್ತು ಕೊಳ್ಳುವಾಗ ವಿಪರೀತ ಬೆಲೆ ನಮೂದಿಸಿ ಪರ್ಸೆಂಟೇಜ್ ಹೊಡೆಯುವುದು ಸದ್ರಿ ವಾರ್ಸಿಟಿ ವಾಡಿಕೆ. ಈ ಕಮಾಯಿ ಭೈರಪ್ಪನ ಟೀಮು ಹಗಲೂ-ಇರುಳೂ ನಡೆಸಿ ದುಂಡಗಾಗಿದೆ. ಈ ಪರ್ಚೆಸ್ ಪರಾಕ್ರಮದ ಸರಿಯಾದ ತನಿಖೆ ನಡೆದರೆ ಭೈರಪ್ಪ ಅಂಡ್‍ಕೋದ ಲೂಟಿ ಲೆಕ್ಕಸಿಗುತ್ತದೆ. ಆ ತಾಕತ್ತು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರಿಗಿದೆಯಾ? ಸ್ವಜಾತಿ ಬಂಧುವಾದ ಭೈರಪ್ಪರ ಮುಟ್ಟುವ ಮನಸ್ಸು ಮಂತ್ರಿ ದೇವೇಗೌಡರಿಗಿಲ್ಲ ಎಂದು ವಾರ್ಸಿಟಿಯ ಮಂದಿ ಮುಸಿಮುಸಿ ನಗುತ್ತಾರೆ.
ವಿಸಿ ಭೈರಪ್ಪರ ಡಬ್ಬಲ್ ವೆಂಚರ್ ಎಂದೇ ಕುಖ್ಯಾತವಾಗಿದೆ ವಿವಿಯಲ್ಲಿ ಬೇಕಾಬಿಟ್ಟಿಯಾಗಿ ಅಳವಡಿಸಿರುವ ಸಿಸಿ ಕ್ಯಾಮರಾ ಮತ್ತು ಸೋಲಾರ್ ಹಗರಣಗಳು!! ಎರಡೂ ಕೋಟಿ ಕರಾಮತ್ತೇ. ಸೋಲಾರ್ ಗುತ್ತಿಗೆ ಕಡಿಮೆ ಮೊತ್ತದ ಬಿಡ್‍ದಾರನ ಬದಲಿಗೆ ದೊಡ್ಡ ಬಿಡ್‍ದಾರನಿಗೆ ಭೈರಪ್ಪರ ಗ್ಯಾಂಗು ದಯಪಾಲಿಸಿದೆ. ಇದರಲ್ಲಿ ಲಕ್ಷಾಂತರ ಕಮಿಷನ್ ಪಡೆದಿರುವ ವೀಸಿ ಬಳಗ ಬರೊಬ್ಬರಿ ನಾಲ್ಕು ಕೋಟಿ ರೂಪಾಯಿಗಳ ಸಿಸಿ ಕ್ಯಾಮರಾ ಅಳವಡಿಕೆಯಲ್ಲಿ ಬುದ್ಧಿಪೂರ್ವಕವಾಗೇ ಟೆಂಡರ್ ನಿಯಮ ಧಿಕ್ಕರಿಸಿದೆ. ಯಾವುದೇ ಟೆಂಡರ್ ಇಲ್ಲದೆ ಮುಗುಮ್ಮಾಗಿ ಆಗಿ ನಡೆದಿರುವ ಈ ಸಿಸಿಕ್ಯಾಮರಾ ಅಳವಡಿಕೆ ಕಾಮಗಾರಿ ವೀಸಿ ಭೈರಪ್ಪರ ದೆಸೆಯನ್ನೇ ಬದಲಿಸಿದೆ!
ಗುತ್ತಿಗೆ ಆಧಾರದಲ್ಲಿ ನೇಮಕಾತಿಯಾಗುವ ದುರ್ಬಲರ ಸಂಬಳಕ್ಕೂ ನಾಲಿಗೆ ಚಾಚುವ ಭೈರಪ್ಪರ ಬಣದ ಚಾಳಿ ಮಂಗಳೂರು ವಿವಿ ವ್ಯಾಪ್ತಿಯ ಅಷ್ಟೂ ಶಿಕ್ಷಣ ಸಂಸ್ಥೆಗಳಲ್ಲಿ ಸುಪ್ರಸಿದ್ಧ!! ಸೆಕ್ಯೂರಿಟಿ, ಸಿಫಾಯಿ, ಅಟೆಂಡರ್, ಗುಮಾಸ್ತರಂಥ ಸಣ್ಣ-ಪುಟ್ಟ ಕರ್ಮಚಾರಿಗಳನ್ನು ವಿವಿಯಲ್ಲಿ ಗುತ್ತಿಗೆಯಲ್ಲಿ ತೆಗೆದುಕೊಳ್ಳಲಾಗಿದೆ. ಇವರಿಗೆಲ್ಲಾ ಅಬ್ಬಬ್ಬಾ ಎಂದರೆ ಏಳೆಂಟು ಸಾವಿರ ರೂಪಾಯಿ ಪಗಾರು ಕೊಡಲಾಗುತ್ತಿದೆ. ಆದರೆ ಇವರ ಹೆಸರಲ್ಲಿ ಹದಿನೈದು ಸಾವಿರದಿಂದ ಇಪ್ಪತ್ತೈದು ಸಾವಿರ ರೂಪಾಯಿಗಳ ತನಕ ಖರ್ಚು ಹಾಕಲಾಗಿದೆಯಂತೆ. ವ್ಯತ್ಯಾಸದ ಕಾಸು ಎಲ್ಲಿ ಹೋಗಿದೆ ಎಂಬುದು ಭೈರಪ್ಪರಿಗೆ ಮಾತ್ರ ಗೊತ್ತಿದೆ! ಪೆವಿಲಿಯನ್ ಮತ್ತು ಕಟ್ಟಡಗಳ ನಿರ್ಮಾಣದಲ್ಲಿ ಕೋಟಿ-ಕೋಟಿ ನಾಯಿ-ನರಿ ಪಾಲಾಗಿದೆ ಎಂಬ ಆರೋಪಗಳಿವೆ. ಒಟ್ಟಿನಲ್ಲಿ ವಿವಿ ದುಡ್ಡಲ್ಲಿ ವಿಸಿಯಾಗಿದ್ದ ಭೈರಪ್ಪ ಭರ್ಜರಿ ಯಲ್ಲಮ್ಮನ ಜಾತ್ರೆ ಮಾಡಿಹೋಗಿದ್ದಾರೆ.
ಮಂಗಳಗಂಗೋತ್ರಿಯ ಮತ್ತೊಂದು ಮಗ್ಗುಲಲ್ಲಿ ಅವ್ಯವಹಾರ-ಅಕ್ರಮಗಳಷ್ಟೇ ಬಿರುಸಾಗಿ ಕಾಮಕಾಂಡವೂ ನಡೆದಿದೆ. ಉಪನ್ಯಾಸಕರ ವೃತ್ತಿಗೆ ನಾಲಾಯಕ್ ಆಗಿರುವವರೆಲ್ಲ ಅಮಾಯಕ ವಿದ್ಯಾರ್ಥಿನಿಯರ ನಡುವೆ ಅನಾಹುತಕಾರಿಗಳಂತೆ ಅಂಡಲೆಯುತ್ತಿದ್ದಾರೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಅಧ್ಯಾಪಕ ಡಾ|| ಉಮೇಶ್‍ನಾಯ್ಕ್ ಲ್ಯಾಬ್ ಮತ್ತು ಲೈಬ್ರರಿಯಲ್ಲಿ ಹುಡುಗಿಯರ ಜತೆ ಅಸಹ್ಯವಾಗಿ ವರ್ತಿಸುತ್ತಾನೆಂಬ ಗುಲ್ಲೆದ್ದಿದೆ. ಮರೈನ್ ಬಾಯಲಾಜಿ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ಇಟ್ಟು ಸಿಕ್ಕಿಬಿದ್ದಿದ್ದ. ಡಾ|| ಸುಜಾತ ಎಂಬ ಉಪನ್ಯಾಸಕಿ ತನಗೆ ಸಹೋದ್ಯೋಗಿ ಪ್ರೊಫೆಸರ್ ಡಾ|| ರಶೀದ್ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಡೆತ್‍ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಳು. ಬರೋಬ್ಬರಿ ಒಂಭತ್ತು ವರ್ಷ ಆಕೆಗೆ ರಶೀದ್ ಪೀಡಿಸುತ್ತಿದ್ದನಂತೆ. ಈ ಕಾಮಕತೆಗಳು ಮಂಗಳಗಂಗೋತ್ರಿ ಹೆಣ್ಣು ಕು¯ಕ್ಕೆ ಸುರಕ್ಷಿತವಲ್ಲ ಎಂಬ ಸಂದೇಶ ಕಳಿಸಿದೆ. ಅನಾಚಾರ-ಅವ್ಯವಹಾರ-ಅಕಾಡಮಿಕ್ ಪರಿಸರಕ್ಕೆ ಗಂಡಾಂತರಿಕಾರಿಯಾದ ಕುಕೃತ್ಯಗಳು ಒಂದರ ಹಿಂದೊಂದರಂತೆ ನಡೆದರೂ ಯಾವುದೂ ಸರಿಯಾದ ತನಿಖೆಗೆ ಒಳಪಡದೆ ಘಟಿಂಗರು ಪಾರಮ್ಯ ಮೆರೆಯುತ್ತಿದ್ದಾರೆ.
ಮಂಗಳ ಗಂಗೋತ್ರಿಯನ್ನು ಹಳಿಗೆ ತರುವ ಕೆಲಸ ಉನ್ನತ ಶಿಕ್ಷಣ ಮಂತ್ರಿ ಜಿ.ಟಿ. ದೇವೇಗೌಡರ ಕೈಲಿ ಸಾಧ್ಯವಾ? ಆ ಖಾತೆ ನಿಭಾಯಿಸುವ ಧೈರ್ಯ ತನಗಿಲ್ಲವೆಂಬ ಕೀಳಮೆಯ ದೇವೇಗೌಡರಿದ್ದಾರೆ. ಹಾಗಾಗಿ ವಿವಿ ಕುಲಾಧಿಪತಿಯಾಗಿರುವ ರಾಜ್ಯಪಾಲ ವಾಲಾ ಮೂಗು ತೂರಿಸುವ ಮೋದಲೇ ಸಿಎಂ ಕುಮ್ಮಿ ಎಚ್ಚೆತ್ತುಕೊಳ್ಳುವರಾ?!

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...