Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...