Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...