Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...