Homeಸಿನಿಮಾಸಿನಿ ಸುದ್ದಿಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

ಮಗನಿಗೆ ಅಂಬಿಯ ಆ ಕಿವಿಮಾತು ಮತ್ತು ಪುಟ್ಟಣ್ಣನ ತಮಿಳು ಸಿಟ್ಟು

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಮಂಡ್ಯದ ಗಂಡು ಅಂಬಿ ಈಗ ಫುಲ್ ರಿಲೀಫ್ ಮೂಡ್‍ನಲ್ಲಿದ್ದಾರೆ. ತನಗೆ ಆಗಿಬರದ ಪೊಲಿಟಿಕ್ಸ್‍ನ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಅಂಬರೀಷ್, ಆ ಜೇಡರಬಲೆಯಿಂದ ಆಚೆ ಬಂದ ನಂತರ ಸಿಕ್ಕಾಪಟ್ಟೆ ಜಾಲಿ ಮೂಡಿನಲ್ಲಿರುವಂತಿದೆ. ತನ್ನನ್ನೇ ತಾನು ಗೇಲಿ ಮಾಡಿಕೊಳ್ಳುತ್ತಾ, ತಮಾಷೆಗೆ ಎದುರಿನವರ ಕಾಲೆಳೆಯುತ್ತಾ ಹಳೇ ಅಂಬರೀಷ್ ಆಗಿ ಸ್ಯಾಂಡಲ್‍ವುಡ್‍ನಲ್ಲಿ ಹಗುರಾಗುತ್ತಿರೋದು ಅವರ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯ ಬೆಳವಣಿಗೆ. ಈ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾಂಗ್ರೆಸ್ ಪಕ್ಷ ಅಂಬಿಗೆ ಟಿಕೇಟ್ ಘೋಷಿಸಿದರೂ, ಹಳೆ ಮುನಿಸುಗಳನ್ನು ಮುಂದೆಮಾಡಿ ಗೌಡಿಕೆ ಗತ್ತಿನಲ್ಲಿ ಗುಟುರು ಹಾಕಿದ ಅಂಬಿ ಸದ್ಯದ ಮಟ್ಟಿಗೆ ರಾಜಕಾರಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡದ್ದು ಅವರ ವೈಯಕ್ತಿಕ ಬದುಕಿನ ದೃಷ್ಟಿಯಿಂದ ಬಹಳ ಆರೋಗ್ಯಕರ ನಿರ್ಧಾರ ಅಂತಲೇ ಹೇಳಬೇಕು. ಯಾಕೆಂದರೆ ಒಬ್ಬ ನಟನಾಗಿ ಅಂಬಿ ಅದೆಷ್ಟು ಅಭಿಮಾನಿಗಳನ್ನು, ಜನರ ಪ್ರೀತಿಯನ್ನು ಗಳಿಸಿಕೊಂಡಿದ್ದರೋ, ಒಬ್ಬ ರಾಜಕಾರಣಿಯಾಗಿ, ಜನಪ್ರತಿನಿಧಿಯಾಗಿ ಅಷ್ಟೇ ಮೂದಲಿಕೆಗೆ ಗುರಿಯಾಗುತ್ತಾ ಬಂದಿದ್ದರು. ಶಾಸಕ, ಸಚಿವರಾಗಿ ಅಂಬಿ ಜನರ ಕೈಗೆ ಸಿಗುವುದೇ ಇಲ್ಲವೆನ್ನುವ ಆಪಾದನೆಗಳು ದಂಡಿಯಾಗಿ ಕೇಳಿಬರುತ್ತಿದ್ದವು. ಹಾಗೆ ನೋಡಿದರೆ, ಅಂಬಿಯ ವ್ಯಕ್ತಿತ್ವಕ್ಕೆ ಇವತ್ತಿನ ಈ ಹಾಳು ಪೊಲಿಟಿಕ್ಸ್ ಒಗ್ಗುವಂತದ್ದೇ ಆಗಿರಲಿಲ್ಲ. ಮುಂದೆ ಹೇಗೋ, ಏನೋ, ಸದ್ಯಕ್ಕೆ ಎಲೆಕ್ಷನ್ ರಾಜಕಾರಣದ ಜಂಜಡದಿಂದ ಹೊರಬಂದ ತರುವಾಯ ಸಿನಿಮಾಗಳಲ್ಲಿ, ಸಿನಿಮಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗುತ್ತಾ ತನ್ನ ಹಳೆಯ ಕೀಟಲೆ ದಿನಗಳತ್ತ ಅಂಬಿ ಮರುಪಯಣಿಸುತ್ತಿರೋದು Really a Good Sign!

ಸದ್ಯ, ಗುರುದತ್ ಗಾಣಿಗ ನಿರ್ದೇಶಿಸುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೊ’ ಸಿನಿಮಾದ ಶೂಟಿಂಗ್‍ನಲ್ಲಿ ಅಂಬಿ ಫುಲ್ ಬ್ಯುಸಿಯಾಗಿದ್ದಾರೆ. ತಮಿಳಿನ `ಪಾ ಪಾಂಡಿ’ ಸಿನಿಮಾದ ರೀಮೇಕ್ ಆಗಿರುವ ಈ ಸಿನಿಮಾದಲ್ಲಿ ಅಂಬಿ ಪಾತ್ರದ ಯೌವ್ವನದ ದಿನಗಳ ರೂಪದಲ್ಲಿ ಸುದೀಪ್ ನಟಿಸುತ್ತಿದ್ದರೆ, ಅಂಬಿಗೆ ಜೋಡಿಯಾಗಿ 14 ವರ್ಷಗಳ ನಂತರ ನಟಿ ಸುಹಾಸಿನಿ ಹೆಜ್ಜೆ ಹಾಕಿದ್ದಾರೆ. ಇದರ ನಡುವೆ ಹೊಸಬರ ಚಿತ್ರಗಳ ಮುಹೂರ್ತ, ಸಿನಿಮಾ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳಲ್ಲೂ ಅಂಬಿ ದಿಲ್‍ಖುಷ್ ಆಗಿ ಭಾಗವಹಿಸುತ್ತಿದ್ದಾರೆ. ಮೊನ್ನೆಮೊನ್ನೆಯಷ್ಟೇ, ನಟ ಯಶ್‍ಗೆ ಅಡ್ಡ ಹಾಕಿಕೊಂಡು `ಬಡ್ಡೇತದೆ, ನಿನ್ನ ಮುಖದ ಮೇಲೆ ಗಡ್ಡ ಸರಿ ಕಾಣಕ್ಕಿಲ್ಲ, ಗಡ್ಡ ಯಾವಾಗ್ಲಾ ತಗೀತೀಯಾ?’ ಅಂತ ಆತ್ಮೀಯವಾಗಿ ಗದರಿಕೊಂಡಿದ್ದ ಅಂಬಿ ಇತ್ತೀಚೆಗೆ ನಡೆದ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಬಿಗ್‍ಬಾಸ್ ಬಾರ್ಬಿ ಡಾಲ್ ನಿವೇದಿತಾ ಗೌಡಳ ಜೊತೆಗೆ ಅವಳದೇ ಧಾಟಿಯಲ್ಲಿ ಮಾತಾಡಿ, ಕಾಲೆಳೆದು ಕಿಚಾಯಿಸಿದ್ದರು. ಪಕ್ಕಾ ಪೊಲಿಟಿಷಿಯನ್ ಅವತಾರದಲ್ಲಿದ್ದಾಗ ಇಂಥಾ ಕಾರ್ಯಕ್ರಮಗಳಿಗಿರಲಿ, ಸರ್ಕಾರಿ ಸಮಾರಂಭಗಳಿಗೇ ಚಕ್ಕರ್ ಹೊಡೆಯುತ್ತಿದ್ದ ಅವರು ಈಗ ಕೊಂಚ ಬದಲಾಗಿದ್ದಾರೆ, ಬದಲಾಗುತ್ತಿದ್ದಾರೆ.

ಇದೀಗ ಅಂಬಿಯ ಮಗ ಅಭಿಷೇಕ್ ಗೌಡ ಕೂಡಾ `ಅಮರ್’ ಸಿನಿಮಾದ ಮೂಲಕ ಹೀರೋ ಆಗಲು ಸಜ್ಜಾಗಿದ್ದಾನೆ. ನಾಗಶೇಖರ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ನಟಿಸುತ್ತಿದ್ದಾರೆ. ಜೆಪಿ ನಗರದ ದೇವಸ್ಥಾನದಲ್ಲಿ ಮುಹೂರ್ತವೂ ಮುಗಿದಿದೆ. ಇನ್ನೇನು ಚಿತ್ರೀಕರಣ ಶುರುವಾಗಬೇಕು ಅಷ್ಟೇ. ಅಂದಹಾಗೆ, ಹೀರೊ ಆಗಲು ಹೊರಟಿರುವ ಮಗನಿಗೆ ಅಂಬಿ ಒಂದು ಕಿವಿಮಾತು ಹೇಳಿದ್ದಾರೆ. ಅದೇನು ಗೊತ್ತಾ, `ನನ್ನ ಥರಾ ಯಾವತ್ತೂ ಸೆಟ್‍ಗೆ ಲೇಟಾಗಿ ಹೋಗ್ಬೇಡ’ ಅಂತ! ಅಂಬಿ ಶೂಟಿಂಗ್ ಸ್ಪಾಟ್‍ಗೆ ಲೇಟಾಗಿ ಬರೋದ್ರಲ್ಲಿ ಸಿಕ್ಕಾಪಟ್ಟೆ ಫೇಮಸ್ಸು. ಅದು ಇವತ್ತು ನಿನ್ನೆಯ ಅಭ್ಯಾಸವಲ್ಲ, ಮೊದಲ ಸಿನಿಮಾದ ಮೊದಲ ದಿನದಿಂದಲೇ ಅಂತದ್ದೊಂದು ಅದ್ಭುತ ಸಂಪ್ರದಾಯವನ್ನ ಪಾಲಿಸಿಕೊಂಡು ಬರ್ತಿದಾರೆ. ನಾಗರಹಾವು ಸಿನಿಮಾದ ಶೂಟಿಂಗ್‍ನ ಮೊದಲ ದಿನ ಅಂಬಿ ಸೆಟ್‍ಗೆ ತಡವಾಗಿ ಬಂದಿದ್ದರಂತೆ. ಆಗ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಿಟ್ಟಿನಿಂದ ಯಾಕಯ್ಯ ಲೇಟು ಅಂತ ಕೇಳಿದಾಗ, ಅಂಬಿ ಗುರುವಿನ ಎದುರು ನುಲಿದಾಡುತ್ತಾ `ದಾರೀಲಿ ಟೈರ್ ಪಂಕ್ಚರ್ ಆಗ್ಬಿಟ್ಟಿತ್ತು, ಸಾರ್, ಅದ್ಕೆ ಒಸಿ ಲೇಟಾಯ್ತು’ ಅಂತ ಏನೋ ಕಥೆ ಕಟ್ಟಲು ಹೋದರಂತೆ. ಆಗ ಪುಟ್ಟಣ್ಣ ಪಕ್ಕದಲ್ಲಿದ್ದ ತನ್ನ ತಮಿಳು ಅಸಿಸ್ಟೆಂಟ್ ಕಡೆ ತಿರುಗಿ ಅದೇ ಸಿಟ್ಟಿನಲ್ಲಿ `ನಾ ಕಥೆ ಏಡಕ್ಕೆ ವಂದಿರ್ಕೆ, ಕೇಕ್ಕೆ ವಂದಿಲ್ಲೈ’ (ನಾ ಕಥೆ ಹೇಳ್ಲಿಕ್ಕೆ ಬಂದಿದೀನಿ, ಕಥೆ ಕೇಳಕ್ಕೆ ಅಲ್ಲ!) ಎಂದು ಶೂಟಿಂಗ್‍ನಲ್ಲಿ ಬ್ಯುಸಿಯಾದರಂತೆ. ಅವತ್ತಿಂದ ಇಲ್ಲಿಯವರೆಗೂ ಅಂಬಿ ಶೂಟಿಂಗ್ ಸ್ಪಾಟ್‍ಗೆ ಆನ್‍ಟೈಂ ಬಂದಿದ್ದೇ ಅಪರೂಪ. ಅಂಥಾ ತನ್ನ ಗುಣವನ್ನು ನೀನು ಕಲೀಬೇಡ ಎಂದು ಮಗನಿಗೆ ಟಿಪ್ಸ್ ಕೊಟ್ಟಿದ್ದಾರೆ ಮಂಡ್ಯದ ಗಂಡು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...