Homeಕರ್ನಾಟಕಮಠದಲ್ಲಿ ಕೇಸರಿ ಶಾಲು - ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

ಮಠದಲ್ಲಿ ಕೇಸರಿ ಶಾಲು – ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ತುಮಕೂರು ಸಹಜ ಸ್ಥಿತಿಗೆ ಮರಳಿದೆ. ಸ್ಥಬ್ದವಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ದೊಡ್ಡದೊಂದು ಸಂಕಷ್ಟದಿಂದ ಬಿಡುಗಡೆಯಾದವರಂತೆ ಜನ ಚಲನೆಗೊಂಡರು. ಬಿಕೋ ಎನ್ನುತ್ತಿದ್ದ ರಸ್ತೆಗಳ ಜನರಿಂದ ತುಂಬಿದವು. ಲೋಕದ ವ್ಯವಹಾರಗಳು ಸಂಚಲನಗೊಂಡವು. ಎಲ್ಲದಕ್ಕೂ ಜೀವ ಬಂದಂತೆ ಭಾಸವಾಯಿತು. ಪ್ರಧಾನಿಯೊಬ್ಬರು ಬಂದು ಹೋಗಿದ್ದು ಬಂದ್ ನಂತೆ ಇತ್ತು. ಹಿಂದಿನ ಹಲವು ಮಂದಿ ಪ್ರಧಾನಿಗಳು ಬಂದುಹೋಗಿದ್ದಾರೆ. ಎಂದೂ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಹಿರಿಯರು ಮಾತನಾಡಿಕೊಂಡರು.

ಮಠದಲ್ಲಿ ಪ್ರಧಾನಿ ಮೋದಿ ವಿಭೂತಿ ತೀಡಿದ್ದರು. ಕೊರಳಿಗೆ ರುದ್ರಾಕ್ಷಿ ಸರಗಳನ್ನು ಹಾಕಿಕೊಂಡಿದ್ದರು. ಭುಜದ ಮೇಲೆ ಕೇಸರಿಶಾಲು ಹೊದ್ದಿದ್ದರು. ಮಕ್ಕಳ ಮುಂದೆ ಹೇಳಬೇಕಾದ್ದನ್ನೇ ಹೇಳದೆ ಬೇರೊಂದು ವಿಷಯವನ್ನು ಹೇಳಿದರು. ಅಲ್ಲಿಂದ ರೈತ ಸಮಾವೇಶಕ್ಕೆ ಬಂದರು. ಹಸಿರು ಶಾಲು ಹೊದಿಸಲಾಯಿತು. ಶಾಲನ್ನು ಹೆಗಲ ಮೇಲೆ ಹೊದ್ದುಕೊಂಡೇ 40 ನಿಮಿಷಗಳು ಭಾಷಣ ಮಾಡಿದರು. ರೈತರಿಗೆ ಡಾ.ಸ್ವಾಮಿನಾಥನ್ ಶಿಫಾರಸ್ಸು ಅನ್ವಯ ರೈತರು ಮಾಡಿದ ವೆಚ್ಚದ ಒಂದೂವರೆಪಟ್ಟು ಹಣವನ್ನು ಕೊಡುತ್ತೇನೆ ಎಂಬ ಒಂದೇ ಒಂದು ಮಾತು ಕೂಡ ಬರಲಿಲ್ಲ ಎಂದು ರೈತ ಮುಖಂಡರು ದೂರಿದರು.

HAL, ಫುಡ್ ಪಾರ್ಕ್ ಕುರಿತು ಪ್ರಧಾನ ಮಾತನಾಡಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿರುವ ಬಗ್ಗೆ ತುಮಕೂರಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು ಅದರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಬಹುದು ಎಂಬ ಜನರ ನಿರೀಕ್ಷೆಯೂ ಈಡೇರಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಬೆಳೆಯುವ ಬೆಳೆಗಳನ್ನು ರೈತರಿಗೆ ತಿಳಿಸಲು ಬಂದಿದ್ದರೆ ಎಂದು ತುಮಕೂರಿನ ಜನ ಪ್ರಶ್ನಿಸುತ್ತಿದ್ದಾರೆ.

ಜನರಿಗೆ ಒಂದೇ ಒಂದು ಭರವಸೆಯ ಮಾತುಗಳನ್ನು ಹೇಳಲಿಲ್ಲ. ಮಠಕ್ಕೆ ಬಂದರು. ರಾಜಕೀಯ ಮಾತನಾಡಿದರು. ರೈತರ ಸಮಾವೇಶಕ್ಕೆ ಬಂದರು. ಕೃಷಿ ಸನ್ಮಾನ್ ನೀದಿಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದರು. ರೈತರ ಆತ್ಮಹತ್ಯೆ, ಸಾಲಮನ್ನಾ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಕೊಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಬೇಕಾದ ಸಲಕರಣೆ ಕೊಡುವುದಾಗಿ ಹೇಳಿದರು. ತೆಂಗು, ರಬ್ಬರ್, ಅರಿಶಿಣ, ಗುಲಾಬಿ, ದಾಳಿಂಬೆ, ಕಾಫಿ ಹೀಗೆ ಹಲವು ಬೆಳೆಗಳ ಪ್ರಸ್ತಾಪ ಮಾಡಿದರು. ಅವುಗಳಿಗೆ ವೈಜ್ಞಾನಿಕ ಬೆಲೆ ನೀಡುವ ಬಗ್ಗೆ ಹೇಳಲೇ ಇಲ್ಲ. ಇದು ಕೂಡ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೃಷಿ ಸನ್ಮಾನ್ ನಿಧಿ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಲವು ರೈತರ ಮೊಬೈಲ್ ಗಳಿಗೆ ಮೆಸೇಜ್ ಬಂದಿದ್ದು 2 ಸಾವಿರ ರೂಪಾಯಿ ಬಂದಿದೆ ಎಂದು ಕೆಲವರು ಪೋನ್ ಮಾಡಿ ಹೇಳಿದರು. ಈಗ ಹಣ ಬಂದಿರುವುದು ಮೊದಲ ಬಾರಿ ಎಂದು ನಾಗವಲ್ಲಿಯಿಂದ ರೈತರೊಬ್ಬರು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...