Homeಕರ್ನಾಟಕಮಠದಲ್ಲಿ ಕೇಸರಿ ಶಾಲು - ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

ಮಠದಲ್ಲಿ ಕೇಸರಿ ಶಾಲು – ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ತುಮಕೂರು ಸಹಜ ಸ್ಥಿತಿಗೆ ಮರಳಿದೆ. ಸ್ಥಬ್ದವಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ದೊಡ್ಡದೊಂದು ಸಂಕಷ್ಟದಿಂದ ಬಿಡುಗಡೆಯಾದವರಂತೆ ಜನ ಚಲನೆಗೊಂಡರು. ಬಿಕೋ ಎನ್ನುತ್ತಿದ್ದ ರಸ್ತೆಗಳ ಜನರಿಂದ ತುಂಬಿದವು. ಲೋಕದ ವ್ಯವಹಾರಗಳು ಸಂಚಲನಗೊಂಡವು. ಎಲ್ಲದಕ್ಕೂ ಜೀವ ಬಂದಂತೆ ಭಾಸವಾಯಿತು. ಪ್ರಧಾನಿಯೊಬ್ಬರು ಬಂದು ಹೋಗಿದ್ದು ಬಂದ್ ನಂತೆ ಇತ್ತು. ಹಿಂದಿನ ಹಲವು ಮಂದಿ ಪ್ರಧಾನಿಗಳು ಬಂದುಹೋಗಿದ್ದಾರೆ. ಎಂದೂ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಹಿರಿಯರು ಮಾತನಾಡಿಕೊಂಡರು.

ಮಠದಲ್ಲಿ ಪ್ರಧಾನಿ ಮೋದಿ ವಿಭೂತಿ ತೀಡಿದ್ದರು. ಕೊರಳಿಗೆ ರುದ್ರಾಕ್ಷಿ ಸರಗಳನ್ನು ಹಾಕಿಕೊಂಡಿದ್ದರು. ಭುಜದ ಮೇಲೆ ಕೇಸರಿಶಾಲು ಹೊದ್ದಿದ್ದರು. ಮಕ್ಕಳ ಮುಂದೆ ಹೇಳಬೇಕಾದ್ದನ್ನೇ ಹೇಳದೆ ಬೇರೊಂದು ವಿಷಯವನ್ನು ಹೇಳಿದರು. ಅಲ್ಲಿಂದ ರೈತ ಸಮಾವೇಶಕ್ಕೆ ಬಂದರು. ಹಸಿರು ಶಾಲು ಹೊದಿಸಲಾಯಿತು. ಶಾಲನ್ನು ಹೆಗಲ ಮೇಲೆ ಹೊದ್ದುಕೊಂಡೇ 40 ನಿಮಿಷಗಳು ಭಾಷಣ ಮಾಡಿದರು. ರೈತರಿಗೆ ಡಾ.ಸ್ವಾಮಿನಾಥನ್ ಶಿಫಾರಸ್ಸು ಅನ್ವಯ ರೈತರು ಮಾಡಿದ ವೆಚ್ಚದ ಒಂದೂವರೆಪಟ್ಟು ಹಣವನ್ನು ಕೊಡುತ್ತೇನೆ ಎಂಬ ಒಂದೇ ಒಂದು ಮಾತು ಕೂಡ ಬರಲಿಲ್ಲ ಎಂದು ರೈತ ಮುಖಂಡರು ದೂರಿದರು.

HAL, ಫುಡ್ ಪಾರ್ಕ್ ಕುರಿತು ಪ್ರಧಾನ ಮಾತನಾಡಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿರುವ ಬಗ್ಗೆ ತುಮಕೂರಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು ಅದರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಬಹುದು ಎಂಬ ಜನರ ನಿರೀಕ್ಷೆಯೂ ಈಡೇರಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಬೆಳೆಯುವ ಬೆಳೆಗಳನ್ನು ರೈತರಿಗೆ ತಿಳಿಸಲು ಬಂದಿದ್ದರೆ ಎಂದು ತುಮಕೂರಿನ ಜನ ಪ್ರಶ್ನಿಸುತ್ತಿದ್ದಾರೆ.

ಜನರಿಗೆ ಒಂದೇ ಒಂದು ಭರವಸೆಯ ಮಾತುಗಳನ್ನು ಹೇಳಲಿಲ್ಲ. ಮಠಕ್ಕೆ ಬಂದರು. ರಾಜಕೀಯ ಮಾತನಾಡಿದರು. ರೈತರ ಸಮಾವೇಶಕ್ಕೆ ಬಂದರು. ಕೃಷಿ ಸನ್ಮಾನ್ ನೀದಿಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದರು. ರೈತರ ಆತ್ಮಹತ್ಯೆ, ಸಾಲಮನ್ನಾ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಕೊಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಬೇಕಾದ ಸಲಕರಣೆ ಕೊಡುವುದಾಗಿ ಹೇಳಿದರು. ತೆಂಗು, ರಬ್ಬರ್, ಅರಿಶಿಣ, ಗುಲಾಬಿ, ದಾಳಿಂಬೆ, ಕಾಫಿ ಹೀಗೆ ಹಲವು ಬೆಳೆಗಳ ಪ್ರಸ್ತಾಪ ಮಾಡಿದರು. ಅವುಗಳಿಗೆ ವೈಜ್ಞಾನಿಕ ಬೆಲೆ ನೀಡುವ ಬಗ್ಗೆ ಹೇಳಲೇ ಇಲ್ಲ. ಇದು ಕೂಡ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೃಷಿ ಸನ್ಮಾನ್ ನಿಧಿ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಲವು ರೈತರ ಮೊಬೈಲ್ ಗಳಿಗೆ ಮೆಸೇಜ್ ಬಂದಿದ್ದು 2 ಸಾವಿರ ರೂಪಾಯಿ ಬಂದಿದೆ ಎಂದು ಕೆಲವರು ಪೋನ್ ಮಾಡಿ ಹೇಳಿದರು. ಈಗ ಹಣ ಬಂದಿರುವುದು ಮೊದಲ ಬಾರಿ ಎಂದು ನಾಗವಲ್ಲಿಯಿಂದ ರೈತರೊಬ್ಬರು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...