Homeಕರ್ನಾಟಕಮಠದಲ್ಲಿ ಕೇಸರಿ ಶಾಲು - ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

ಮಠದಲ್ಲಿ ಕೇಸರಿ ಶಾಲು – ರೈತ ಸಮಾವೇಶದಲ್ಲಿ ಹಸಿರು ಶಾಲು : ಮೋದಿ ಕಾರುಬಾರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ತುಮಕೂರು ಸಹಜ ಸ್ಥಿತಿಗೆ ಮರಳಿದೆ. ಸ್ಥಬ್ದವಾಗಿದ್ದ ಜನರು ನಿಟ್ಟುಸಿರು ಬಿಟ್ಟರು. ದೊಡ್ಡದೊಂದು ಸಂಕಷ್ಟದಿಂದ ಬಿಡುಗಡೆಯಾದವರಂತೆ ಜನ ಚಲನೆಗೊಂಡರು. ಬಿಕೋ ಎನ್ನುತ್ತಿದ್ದ ರಸ್ತೆಗಳ ಜನರಿಂದ ತುಂಬಿದವು. ಲೋಕದ ವ್ಯವಹಾರಗಳು ಸಂಚಲನಗೊಂಡವು. ಎಲ್ಲದಕ್ಕೂ ಜೀವ ಬಂದಂತೆ ಭಾಸವಾಯಿತು. ಪ್ರಧಾನಿಯೊಬ್ಬರು ಬಂದು ಹೋಗಿದ್ದು ಬಂದ್ ನಂತೆ ಇತ್ತು. ಹಿಂದಿನ ಹಲವು ಮಂದಿ ಪ್ರಧಾನಿಗಳು ಬಂದುಹೋಗಿದ್ದಾರೆ. ಎಂದೂ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಹಿರಿಯರು ಮಾತನಾಡಿಕೊಂಡರು.

ಮಠದಲ್ಲಿ ಪ್ರಧಾನಿ ಮೋದಿ ವಿಭೂತಿ ತೀಡಿದ್ದರು. ಕೊರಳಿಗೆ ರುದ್ರಾಕ್ಷಿ ಸರಗಳನ್ನು ಹಾಕಿಕೊಂಡಿದ್ದರು. ಭುಜದ ಮೇಲೆ ಕೇಸರಿಶಾಲು ಹೊದ್ದಿದ್ದರು. ಮಕ್ಕಳ ಮುಂದೆ ಹೇಳಬೇಕಾದ್ದನ್ನೇ ಹೇಳದೆ ಬೇರೊಂದು ವಿಷಯವನ್ನು ಹೇಳಿದರು. ಅಲ್ಲಿಂದ ರೈತ ಸಮಾವೇಶಕ್ಕೆ ಬಂದರು. ಹಸಿರು ಶಾಲು ಹೊದಿಸಲಾಯಿತು. ಶಾಲನ್ನು ಹೆಗಲ ಮೇಲೆ ಹೊದ್ದುಕೊಂಡೇ 40 ನಿಮಿಷಗಳು ಭಾಷಣ ಮಾಡಿದರು. ರೈತರಿಗೆ ಡಾ.ಸ್ವಾಮಿನಾಥನ್ ಶಿಫಾರಸ್ಸು ಅನ್ವಯ ರೈತರು ಮಾಡಿದ ವೆಚ್ಚದ ಒಂದೂವರೆಪಟ್ಟು ಹಣವನ್ನು ಕೊಡುತ್ತೇನೆ ಎಂಬ ಒಂದೇ ಒಂದು ಮಾತು ಕೂಡ ಬರಲಿಲ್ಲ ಎಂದು ರೈತ ಮುಖಂಡರು ದೂರಿದರು.

HAL, ಫುಡ್ ಪಾರ್ಕ್ ಕುರಿತು ಪ್ರಧಾನ ಮಾತನಾಡಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿರುವ ಬಗ್ಗೆ ತುಮಕೂರಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು ಅದರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಬಹುದು ಎಂಬ ಜನರ ನಿರೀಕ್ಷೆಯೂ ಈಡೇರಿಲ್ಲ. ಕೇವಲ ದಕ್ಷಿಣ ಭಾರತದಲ್ಲಿ ಬೆಳೆಯುವ ಬೆಳೆಗಳನ್ನು ರೈತರಿಗೆ ತಿಳಿಸಲು ಬಂದಿದ್ದರೆ ಎಂದು ತುಮಕೂರಿನ ಜನ ಪ್ರಶ್ನಿಸುತ್ತಿದ್ದಾರೆ.

ಜನರಿಗೆ ಒಂದೇ ಒಂದು ಭರವಸೆಯ ಮಾತುಗಳನ್ನು ಹೇಳಲಿಲ್ಲ. ಮಠಕ್ಕೆ ಬಂದರು. ರಾಜಕೀಯ ಮಾತನಾಡಿದರು. ರೈತರ ಸಮಾವೇಶಕ್ಕೆ ಬಂದರು. ಕೃಷಿ ಸನ್ಮಾನ್ ನೀದಿಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದರು. ರೈತರ ಆತ್ಮಹತ್ಯೆ, ಸಾಲಮನ್ನಾ ಮೊದಲಾದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಕೊಡಲಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಬೇಕಾದ ಸಲಕರಣೆ ಕೊಡುವುದಾಗಿ ಹೇಳಿದರು. ತೆಂಗು, ರಬ್ಬರ್, ಅರಿಶಿಣ, ಗುಲಾಬಿ, ದಾಳಿಂಬೆ, ಕಾಫಿ ಹೀಗೆ ಹಲವು ಬೆಳೆಗಳ ಪ್ರಸ್ತಾಪ ಮಾಡಿದರು. ಅವುಗಳಿಗೆ ವೈಜ್ಞಾನಿಕ ಬೆಲೆ ನೀಡುವ ಬಗ್ಗೆ ಹೇಳಲೇ ಇಲ್ಲ. ಇದು ಕೂಡ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕೃಷಿ ಸನ್ಮಾನ್ ನಿಧಿ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಹಲವು ರೈತರ ಮೊಬೈಲ್ ಗಳಿಗೆ ಮೆಸೇಜ್ ಬಂದಿದ್ದು 2 ಸಾವಿರ ರೂಪಾಯಿ ಬಂದಿದೆ ಎಂದು ಕೆಲವರು ಪೋನ್ ಮಾಡಿ ಹೇಳಿದರು. ಈಗ ಹಣ ಬಂದಿರುವುದು ಮೊದಲ ಬಾರಿ ಎಂದು ನಾಗವಲ್ಲಿಯಿಂದ ರೈತರೊಬ್ಬರು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...