Homeಕರ್ನಾಟಕಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

ಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

- Advertisement -
- Advertisement -

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ಬಳಿಕ ಧ್ಯಾನ ಮಾಡುತ್ತಾರೆಂದು ಸುದ್ದಿಯಾಗಿತ್ತು. ಆದರೆ ಧ್ಯಾನ ಬಿಟ್ಟು ರಾಜಕೀಯ ಭಾಷಣ ಮಾಡಿದರು.

ಕೇಂದ್ರ ಸರ್ಕಾರ ಜಮ್ಮು-ಕಾಸ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದೆ. 370ನೇ ಕಾಲಂ ರದ್ದುಪಡಿಸಿ ಶಾಂತಿಯನ್ನು ಸ್ಥಾಪಿಸಿದ್ದೇವೆ. ಸದಾ ಆತಂಕವಾದಿಗಳ ಗೂಡಾಗಿದ್ದ ಜಮ್ಮುಕಾಶ್ಮೀರದಲ್ಲಿ ಇಂದು ಆತಂಕ ದೂರವಾಗಿದೆ. ಜನ ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಮಾಡಿದ್ದೇವೆ ಎಂದು ಹೇಳಿಕೊಂಡರು.

ಬಹುಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಬಗೆಹರಿಸಿದ್ದೇವೆ. ರಾಮ ಮಂದಿರ ನಿರ್ಮಾಣಕ್ಕೆ ಪ್ರಶಸ್ತ ವಾತಾವರಣ ನಿರ್ಮಾಣವಾಗಿದೆ. ರಾಮಮಂದಿರವನ್ನು ನಿರ್ಮಿಸುತ್ತೇವೆ. ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ ನಲ್ಲಿ ಅಂಗೀಕರಿಸಿದ್ದೇವೆ. ಅದನ್ನು ಜಾರಿಗೊಳಿಸಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ವಿರೋಧ ವ್ಯಕ್ಪತಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಕಾಂಗ್ರೆಸ್ ಪಾಕಿಸ್ತಾನದ ವಿರುದ್ದ ಪ್ರತಿಭಟನೆ ಮಾಡುವುದು ಬಿಟ್ಟು ಸಂಸತ್ ವಿರುದ್ಧವೇ ಮಾತನಾಡುತ್ತಿದೆ ಎಂದು ಆರೋಪಿಸಿದರು.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಬೌದ್ಧರು, ಪಾರ್ಸಿಗಳು, ಕ್ರೈಸ್ತರು, ಜೈನರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಅವರಿಗೆ ಭಾರತದ ಪೌರತ್ವ ನೀಡುತ್ತೇವೆ ಎಂದರೆ, ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ದ್ವೇಷದ ವಾತಾವರಣವನ್ನು ವಿರೋಧ ಪಕ್ಷಗಳು ಹುಟ್ಟುಹಾಕುತ್ತಿವೆ ಎಂದು ಕಿಡಿಕಾರಿದರು.

ಪಾಕಿಸ್ತಾನದಲ್ಲಿ ದಲಿತರು, ಶೋಷಿತರ ಮೇಲೆ ಕ್ರೌರ್ಯ ನಡೆಯುತ್ತಿದ್ದರೂ ಕಾಂಗ್ರೆಸ್ 70 ವರ್ಷಗಳಿಂದ ಸುಮ್ಮನೆ ಕುಳಿತಿದೆ. ಹೋರಾಟವನ್ನೇ ಮಾಡುತ್ತಿಲ್ಲ.ಪಾಕಿಸ್ತಾನದ ಕರಾಳತನಕ್ಕೆ ಬೀಗಬಿದ್ದಿದೆ. ಕಾಂಗ್ರೆಸ್ ಮತ್ತು ಇತರರು ಪಾಕಿಸ್ತಾನದ ಹಿಂದೂಳಿಗೆ ಪೌರತ್ವ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದಗಂಗಾ ಮಠದಲ್ಲಿ ಧಾರ್ಮಿಕ ವಿಷಯಗಳನ್ನು ಪ್ರಸ್ತಾಪಿಸುವುದನ್ನು ಬಿಟ್ಟು ಮೋದಿ ರಾಜಕಾರಣ ಮಾತನಾಡಲು ಬಳಸಿಕೊಂಡರು. ಮಕ್ಕಳಿಗೆ ರಾಜಕೀಯ ಭಾಷಣ ಮಾಡಿದರು. ಮಕ್ಕಳು ಭವಿಷ್ಯದ ಪ್ರಜೆಗಳು ಎಂಬುದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಪ್ರಧಾನಿ ಮಕ್ಕಳು ಚನ್ನಾಗಿ ಓದಬೇಕು. ಉತ್ತಮ ಹುದ್ದೆಗಳನ್ನು ಹಿಡಿಯಬೇಕು. ದೇಶಕ್ಕೆ ಜಿಲ್ಲೆಗೆ ಕೀರ್ತಿ ತರಬೇಕು ಎಂಬಂತಹ ಒಂಂದೇ ಒಂದು ಮಾತನ್ನು ಹೇಳದೆ ಭಾಷಣ ಮುಗಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದನ್ನೇ ಬರೆದು ಕೊಟ್ಟಿರಬೇಕು ಬರೆಯುವವರು.
    ಆಗಾದರೆ ದೆಹಲಿಯಲ್ಲಿ ಹೇಳಿದ್ದು ಏನು?
    ಪೌರತ್ವದ ಬಗ್ಗೆ ಚರ್ಚೆನೇ ಮಾಡಿಲ್ಲ ಎಂದು ಹೇಳಿ.
    ಕರ್ನಾಟಕದಲ್ಲಿ ಪಾಸು ಮಾಡಿದ್ದೇನೆ ಎಂದು

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...