Homeಕರ್ನಾಟಕಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

ಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

- Advertisement -
- Advertisement -

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ಬಳಿಕ ಧ್ಯಾನ ಮಾಡುತ್ತಾರೆಂದು ಸುದ್ದಿಯಾಗಿತ್ತು. ಆದರೆ ಧ್ಯಾನ ಬಿಟ್ಟು ರಾಜಕೀಯ ಭಾಷಣ ಮಾಡಿದರು.

ಕೇಂದ್ರ ಸರ್ಕಾರ ಜಮ್ಮು-ಕಾಸ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದೆ. 370ನೇ ಕಾಲಂ ರದ್ದುಪಡಿಸಿ ಶಾಂತಿಯನ್ನು ಸ್ಥಾಪಿಸಿದ್ದೇವೆ. ಸದಾ ಆತಂಕವಾದಿಗಳ ಗೂಡಾಗಿದ್ದ ಜಮ್ಮುಕಾಶ್ಮೀರದಲ್ಲಿ ಇಂದು ಆತಂಕ ದೂರವಾಗಿದೆ. ಜನ ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಮಾಡಿದ್ದೇವೆ ಎಂದು ಹೇಳಿಕೊಂಡರು.

ಬಹುಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಬಗೆಹರಿಸಿದ್ದೇವೆ. ರಾಮ ಮಂದಿರ ನಿರ್ಮಾಣಕ್ಕೆ ಪ್ರಶಸ್ತ ವಾತಾವರಣ ನಿರ್ಮಾಣವಾಗಿದೆ. ರಾಮಮಂದಿರವನ್ನು ನಿರ್ಮಿಸುತ್ತೇವೆ. ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ ನಲ್ಲಿ ಅಂಗೀಕರಿಸಿದ್ದೇವೆ. ಅದನ್ನು ಜಾರಿಗೊಳಿಸಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ವಿರೋಧ ವ್ಯಕ್ಪತಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಕಾಂಗ್ರೆಸ್ ಪಾಕಿಸ್ತಾನದ ವಿರುದ್ದ ಪ್ರತಿಭಟನೆ ಮಾಡುವುದು ಬಿಟ್ಟು ಸಂಸತ್ ವಿರುದ್ಧವೇ ಮಾತನಾಡುತ್ತಿದೆ ಎಂದು ಆರೋಪಿಸಿದರು.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಬೌದ್ಧರು, ಪಾರ್ಸಿಗಳು, ಕ್ರೈಸ್ತರು, ಜೈನರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಅವರಿಗೆ ಭಾರತದ ಪೌರತ್ವ ನೀಡುತ್ತೇವೆ ಎಂದರೆ, ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ದ್ವೇಷದ ವಾತಾವರಣವನ್ನು ವಿರೋಧ ಪಕ್ಷಗಳು ಹುಟ್ಟುಹಾಕುತ್ತಿವೆ ಎಂದು ಕಿಡಿಕಾರಿದರು.

ಪಾಕಿಸ್ತಾನದಲ್ಲಿ ದಲಿತರು, ಶೋಷಿತರ ಮೇಲೆ ಕ್ರೌರ್ಯ ನಡೆಯುತ್ತಿದ್ದರೂ ಕಾಂಗ್ರೆಸ್ 70 ವರ್ಷಗಳಿಂದ ಸುಮ್ಮನೆ ಕುಳಿತಿದೆ. ಹೋರಾಟವನ್ನೇ ಮಾಡುತ್ತಿಲ್ಲ.ಪಾಕಿಸ್ತಾನದ ಕರಾಳತನಕ್ಕೆ ಬೀಗಬಿದ್ದಿದೆ. ಕಾಂಗ್ರೆಸ್ ಮತ್ತು ಇತರರು ಪಾಕಿಸ್ತಾನದ ಹಿಂದೂಳಿಗೆ ಪೌರತ್ವ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದಗಂಗಾ ಮಠದಲ್ಲಿ ಧಾರ್ಮಿಕ ವಿಷಯಗಳನ್ನು ಪ್ರಸ್ತಾಪಿಸುವುದನ್ನು ಬಿಟ್ಟು ಮೋದಿ ರಾಜಕಾರಣ ಮಾತನಾಡಲು ಬಳಸಿಕೊಂಡರು. ಮಕ್ಕಳಿಗೆ ರಾಜಕೀಯ ಭಾಷಣ ಮಾಡಿದರು. ಮಕ್ಕಳು ಭವಿಷ್ಯದ ಪ್ರಜೆಗಳು ಎಂಬುದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಪ್ರಧಾನಿ ಮಕ್ಕಳು ಚನ್ನಾಗಿ ಓದಬೇಕು. ಉತ್ತಮ ಹುದ್ದೆಗಳನ್ನು ಹಿಡಿಯಬೇಕು. ದೇಶಕ್ಕೆ ಜಿಲ್ಲೆಗೆ ಕೀರ್ತಿ ತರಬೇಕು ಎಂಬಂತಹ ಒಂಂದೇ ಒಂದು ಮಾತನ್ನು ಹೇಳದೆ ಭಾಷಣ ಮುಗಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದನ್ನೇ ಬರೆದು ಕೊಟ್ಟಿರಬೇಕು ಬರೆಯುವವರು.
    ಆಗಾದರೆ ದೆಹಲಿಯಲ್ಲಿ ಹೇಳಿದ್ದು ಏನು?
    ಪೌರತ್ವದ ಬಗ್ಗೆ ಚರ್ಚೆನೇ ಮಾಡಿಲ್ಲ ಎಂದು ಹೇಳಿ.
    ಕರ್ನಾಟಕದಲ್ಲಿ ಪಾಸು ಮಾಡಿದ್ದೇನೆ ಎಂದು

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...