Homeಮುಖಪುಟಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

ಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

- Advertisement -
- Advertisement -

ಕರ್ನಾಟಕದಲ್ಲಿ ಸದ್ಯಕ್ಕಿರುವ ರಾಜಕೀಯ ಪರಿಸ್ಥಿತಿಯನ್ನಾಧರಿಸಿ ಆಯಾ ವಿಧಾನಸಭಾ ಕ್ಷೇತ್ರಗಳ ಜಿದ್ದಾಜಿದ್ದಿ, ಚುನಾವಣಾ ಟ್ರಂಡ್‍ಗಳನ್ನು ಅಧ್ಯಯನ ನಡೆಸಿ, ನಮ್ಮ ಪತ್ರಿಕಾ ತಂಡ ಕ್ಷೇತ್ರವಾರು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ 117-122, ಬಿಜೆಪಿಗೆ 55-60, ಜೆಡಿಎಸ್‍ಗೆ 34-37 ಮತ್ತು ಇತರರಿಗೆ 3-5 ಸ್ಥಾನಗಳು ಲಭಿಸಬಹುದು.

ನಾನು ಗೌರಿ ತಂಡದ ಸಮೀಕ್ಷೆ

ಮುಖ್ಯವಾಗಿ ತನ್ನ ಪಾರಂಪರಿಕ ಪಾರುಪತ್ಯದ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿರುವುದಲ್ಲದೇ ಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿತವಾಗಿದ್ದ, ಲಿಂಗಾಯತ ಪ್ರಾಬಲ್ಯದ ಮುಂಬೈ ಕರ್ನಾಟಕದಲ್ಲೂ ಕೈ ಪಡೆ ಮುಂದಿರುವುದು ಸರಳ ಬಹುಮತಕ್ಕೆ ಸನಿಹವಾಗಿಸಿದೆ. ಕಳೆದ ಬಾರಿಯೂ ಕೈ ಪಾರ್ಟಿ ಈ ಎರಡು ಪ್ರಾಂತ್ಯಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ಅಧಿಕಾರಕ್ಕೆ ಹತ್ತಿರವಾಗಿಸಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್‍ಗೆ ಅದ್ಭುತ ಮೈಲೇಜ್ ತಂದುಕೊಡದೆ ಹೋದರೂ ಯಡಿಯೂರಪ್ಪನವರಿಂದ ಲಿಂಗಾಯತ ಲೀಡರಿಕೆಯನ್ನು ವಿಮುಖಗೊಳಿಸಿರುವುದು ಬಿಜೆಪಿಗೆ ಏಟು ನೀಡುತ್ತಿದೆ. ಅದು ಗಣನೀಯವಲ್ಲ, ಆದರೂ ಕೆಜೆಪಿ-ಬಿಜೆಪಿ-ಬಿಎಸ್‍ಆರ್ ಸಮಾಗಮದ ಆಘಾತವನ್ನು ತಡೆದುಕೊಳ್ಳಬಹುದಾದಷ್ಟು ಶಕ್ತಿಯನ್ನು ಅದು ಕಾಂಗ್ರೆಸ್‍ಗೆ ತುಂಬಿದೆ. ಇನ್ನು ಕರಾವಳಿ ಪ್ರಾಂತ್ಯದಲ್ಲಿ ಕಳೆದ ಆಘಾತವೇ ಬಿಜೆಪಿಗೆ ಈ ಸಲವೂ ಮುಂದುವರೆಯುವ ಲಕ್ಷಣಗಳಿವೆ. ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಅತ್ಯದ್ಭುತವಾಗಿ ಚೇತರಿಸಿಕೊಳ್ಳುವ ಪರಿಸ್ಥಿತಿ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳು ಹಿಂದೆಂದಿಗಿಂತಲೂ ಹೆಚ್ಚು ದೃವೀಕರಣಗೊಂಡ ದೇವೇಗೌಡರ ಬೆನ್ನಿಗೆ ನಿಂತಿರುವುದರಿಂದ ಇಲ್ಲಿ ಕೈಗೆ ಕಳೆದ ಬಾರಿಗಿಂತ ಅಲ್ಪ ಹಿನ್ನಡೆಯಾಗಬಹುದು. ಆದರೂ ಅದು ಸರಳ ಬಹುಮತದಿಂದ ಕಾಂಗ್ರೆಸ್ಸನ್ನು ದೂರಕ್ಕೆ ತಳ್ಳಲಾರದು. ಬೆಂಗಳೂರು ಸಿಟಿ ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಮಿಶ್ರ ಪ್ರತಿಫಲ ಕೊಡಲಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್‍ಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.

ಒಟ್ಟಾರೆ ಹೇಳಬೇಕೆಂದರೆ ಬಿಜೆಪಿಯೊಳಗಿನ ನಾಯಕತ್ವದ ಗೊಂದಲಗಳು, ಮೋದಿಯ ಎಂಪಿ ಎಲೆಕ್ಷನ್ ಭರವಸೆಗಳು ಜನರನ್ನು ಭ್ರಮಾ ನಿರಸನಗೊಳಿಸಿರುವುದು, ಕೇಂದ್ರ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿರೋದು, ಕರ್ನಾಟಕದ ಪ್ರಾದೇಶಿಕ ಸವಾಲುಗಳಿಗೆ ಬಿಜೆಪಿ ಸ್ಪಂದಿಸಿದ ನಿರಾಶದಾಯಕ ರೀತಿ, ಕಾಂಗ್ರೆಸ್‍ನೊಳಗೆ ಮಡುಗಟ್ಟಿರುವ ಅಪರೂಪದ ಒಗ್ಗಟ್ಟು, ರಾಜ್ಯ ಸರ್ಕಾರದ ಜನಪ್ರಿಯತೆ, ಪ್ರಧಾನ ಹಗರಣ-ಭ್ರಷ್ಟಾಚಾರ ಮುಕ್ತ ಆಡಳಿತಗಳು ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರುವ ಸಾಧ್ಯತೆಗಳೇ ದಟ್ಟವಾಗಿ ಕಾಣುತ್ತಿವೆ.

ದೇವರಾಜ ಅರಸು

ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಆಡಳಿತ ನಡೆಸಿದ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಪರದಾಡುತ್ತ ಬಂದಿದ್ದವು. ಪ್ರಭುತ್ವ ವಿರೋಧಿ ಅಲೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ತೇಲಿ ಹೋಗುವುದು ಸರ್ವೇ ಸಾಮಾನ್ಯ ಸಂಗತಿಯಾಗಿತ್ತು. 1978ರ ವಿಧಾನಸಭಾ ಚುನಾವಣೆಯಲ್ಲಿ ಆಗ ಐದು ವರ್ಷಗಳ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ್ದ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿತ್ತು. ಅದಾದ ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷವೂ ಪುನರಾಯ್ಕೆ ಆಗಿಲ್ಲ. ದೇವರಾಜ ಅರಸು ನಂತರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಸಿದ್ಧರಾಮಯ್ಯನವರದು. 1978ರಲ್ಲಿ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 149 ಸ್ಥಾನ ಪಡೆದಿತ್ತು. ಈಗ ಐದು ವರ್ಷ ಪೂರೈಸಿದ ಸಿದ್ಧರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೌದು. ಇತಿಹಾಸ ಮರುಕಳಿಸಲಿದೆ. ಎಷ್ಟೇ ಅಳೆದು ತೂಗಿ ನೋಡಿದರು. ಕಾಂಗ್ರೆಸ್‍ಗೆ ಸರಳ ಬಹುಮತ ಬರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದುರ್ಬಲ ಹೈಕಮಾಂಡ್‍ಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಪ್ರಬಲ ನಾಯಕತ್ವ ರಾಜ್ಯಕ್ಕೆ ಪರ್ಯಾಯ ಎನ್ನುವ ಸಂದೇಶ ಕರ್ನಾಟಕ ಮತ್ತೊಮ್ಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿವೆ. ಸಿದ್ಧರಾಮಯ್ಯನವರ ಅಲೆಯು ‘ಮಾತುಗಾರ’ರ ಮೋಡಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಲಿದೆ. ದೆಹಲಿಯಿಂದ ಅಧಿಕಾರ ನಡೆಸುವ ಕೇಂದ್ರದ ನಿಲುವಿಗೆ ಕರ್ನಾಟಕ ಯಾವತ್ತೂ ಸೊಪ್ಪು ಹಾಕಿಲ್ಲ. ದೆಹಲಿ ದೊರೆಗಳಿಗೆ ಕರ್ನಾಟಕ ಖಚಿತ ಉತ್ತರ ನೀಡುತ್ತಲೇ ಬಂದಿದೆ. ಅದೇ ಈ ಬಾರಿಯೂ ಪುನರಾವರ್ತನೆ ಆಗಲಿದೆ. ಕಳೆದ ಸಲಕ್ಕಿಂತ ಮತ ಗಳಿಕೆಯ ಪ್ರಮಾಣದಲ್ಲಿ ಉತ್ತಮ ಪ್ರಗತಿ ತೋರಿಸುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್ ಶೇ. 40ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗುತ್ತದೆ. ಕೇಂದ್ರ ಗುಪ್ತಚರ ಇಲಾಖೆಯ ವರದಿಯೂ ಸರಳ ಬಹುಮತದ ಸೂಚನೆ ಒದಗಿಸಿದೆ ಎನ್ನಲಾಗುತ್ತಿದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ಹಳೆ ಮೈಸೂರು ಮತ್ತು ಕರಾವಳಿಗಳಲ್ಲಿಯೂ ಕಾಂಗ್ರೆಸ್‍ನ ಸಾಧನೆಯು ಕಳೆದ ಬಾರಿಗಿಂತ ಉತ್ತಮವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ದುರ್ದಿನಗಳನ್ನು ಜನತೆ ಇನ್ನೂ ಮರೆತಿಲ್ಲ. ಕಳೆದ ಬಾರಿ ಸೋಲಿಸಿ ಪಾಠ ಕಲಿಸಿದ್ದ ಮತದಾರ ಈಗ ಮತ್ತೊಮ್ಮೆ ಬಿಜೆಪಿಗೆ ಅದರ ಸ್ಥಾನ ಸೂಚಿಸಲಿದ್ದಾನೆ. ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿರುವ ಅಭಿಪ್ರಾಯವು ಸರಳ ಬಹುಮತ ತಂದು ಕೊಡುವುದಕ್ಕೆ ಕಾರಣವಾಗಲಿದೆ. ‘ಸುಳ್ಳು’ಗಳ ಮೂಲಕ ಮಾತಿನ ಅರಮನೆ ಕಟ್ಟಲು ಹೊರಟ ‘ಮೋಜು’ಗಾರನಿಗೆ ಕರ್ನಾಟಕ ಸೂಕ್ತ ಉತ್ತರ ನೀಡಲಿದೆ. ಕರ್ನಾಟಕದ ಆಡಳಿತದ ಕೇಂದ್ರ ಬೆಂಗಳೂರೇ ಹೊರತು ದೆಹಲಿ ಅಲ್ಲ ಎಂಬುದು ಮತ್ತೇ ಸಾಬೀತಾಗಲಿದೆ.

ಯಡಿಯೂರಪ್ಪ
ಕುಮಾರಸ್ವಾಮಿ

ವಿರೋಧ ಪಕ್ಷದ ಸ್ಥಾನವನ್ನು ಸರಿಯಾಗಿ ನಿಭಾಯಿಸಲಾಗದ ಬಿಜೆಪಿಯು ನಾಯಕತ್ವದ ಕೊರತೆಯಿಂದ ಬಳಲಿತು. ಮೋದಿಯಂತಹ ಮಾತುಗಾರ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿದರೂ ಸುಸ್ತಾಗುವಷ್ಟು ರ್ಯಾಲಿಗಳನ್ನು ಮಾಡಿದರೂ ಫಲ ನೀಡಲಿಲ್ಲ. ಸಿದ್ಧರಾಮಯ್ಯನವರ ಪರವಾಗಿ ರಾಜ್ಯದಾದ್ಯಂತ ಇರುವ ‘ಅಲೆ’ಯ ಪ್ರಮಾಣ ಕಡಿಮೆ ಮಾಡುವದು ಸಾಧ್ಯವಾಗಲೇ ಇಲ್ಲ. ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮತ್ತು ದೆಹಲಿ ಹೈಕಮಾಂಡ್ ಅಣತಿಯಂತೆ ನಡೆಯಬೇಕಾದ ಅನಿವಾರ್ಯತೆ ಸಿಲುಕಿದ ಯಡಿಯೂರಪ್ಪ ಅವರು ‘ಪ್ರಮಾಣವಚನ’ ಸ್ವೀಕರಿಸುವ ಭ್ರಮಾತ್ಮಕ ಹೇಳಿಕೆ ನೀಡುವುದಕ್ಕ್ಕೆ ಮಾತ್ರ ಸೀಮಿತವಾಯಿತು. ಚುನಾವಣೆಯ ಪ್ರಚಾರ ಭಾಷಣದಲ್ಲಿಯೇ ‘ಬಜೆಟ್’ ಮಂಡಿಸುವ ಮತ್ತು ಸಂಪುಟದ ಸ್ಥಾನ ಹಂಚುವ ತಮಾಷೆಯ ಪ್ರಸಂಗಗಳು ಯಡಿಯೂರಪ್ಪ ಅವರು ತಲುಪಿದ್ದ ಹತಾಶೆಯ ಸ್ಥಿತಿಯನ್ನು ಬಿಂಬಿಸುವಂತಿತ್ತು. ದೆಹಲಿಯ ನಾಯಕರುಗಳ ಚರಿಸ್ಮಾ ತಮಗೆ ಸಹಾಯವಾಗಬಹುದು ಎಂದು ಕಾದು ಕುಳಿತಿದ್ದ ಬಿಜೆಪಿಯ ರಾಜ್ಯ ಮುಖಂಡರಿಗೆ ಕೇವಲ ಕಾದದ್ದಷ್ಟೇ ಲಾಭವಾಯಿತು. ಯಡಿಯೂರಪ್ಪ ಹೊರತು ಪಡಿಸಿದ ಎರಡನೇ ಸಾಲಿನ ನಾಯಕರೇ ಇಲ್ಲದ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿತ್ತು. ಮುಂಚೂಣಿಯಲ್ಲಿದ್ದ ನಾಯಕ ಕೂಡ ಎದೆಗುಂದುವಂತಹ ಬೆಳವಣಿಗೆಗಳನ್ನು ಎದುರಿಸಬೇಕಾಯಿತು. ಆಪ್ತರಿಗೇ ಟಿಕೆಟ್ ಕೊಡಿಸಲಾಗದ ಹತಾಶೆ ಒಂದೆಡೆಯಾದರೆ, ಮತದಾನದ ದಿನ ಹತ್ತಿರವಾದಂತೆ ಹೆಚ್ಚುತ್ತ ಹೋದ ಸಿದ್ಧರಾಮಯ್ಯನವರ ಜನಪ್ರಿಯತೆಯು ಕಾಂಗ್ರೆಸ್ ಪಕ್ಷವನ್ನು ಸರಳ ಬಹುಮತದ ಹಂತಕ್ಕೆ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...