Homeಮುಖಪುಟಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

ಮತ್ತೆ ಕಾಂಗ್ರೆಸ್ ಕೈಹಿಡಿಯಲಿದೆ ಸಿಂಪಲ್ ಮೆಜಾರಿಟಿ

- Advertisement -
- Advertisement -

ಕರ್ನಾಟಕದಲ್ಲಿ ಸದ್ಯಕ್ಕಿರುವ ರಾಜಕೀಯ ಪರಿಸ್ಥಿತಿಯನ್ನಾಧರಿಸಿ ಆಯಾ ವಿಧಾನಸಭಾ ಕ್ಷೇತ್ರಗಳ ಜಿದ್ದಾಜಿದ್ದಿ, ಚುನಾವಣಾ ಟ್ರಂಡ್‍ಗಳನ್ನು ಅಧ್ಯಯನ ನಡೆಸಿ, ನಮ್ಮ ಪತ್ರಿಕಾ ತಂಡ ಕ್ಷೇತ್ರವಾರು ನಡೆಸಿದ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ 117-122, ಬಿಜೆಪಿಗೆ 55-60, ಜೆಡಿಎಸ್‍ಗೆ 34-37 ಮತ್ತು ಇತರರಿಗೆ 3-5 ಸ್ಥಾನಗಳು ಲಭಿಸಬಹುದು.

ನಾನು ಗೌರಿ ತಂಡದ ಸಮೀಕ್ಷೆ

ಮುಖ್ಯವಾಗಿ ತನ್ನ ಪಾರಂಪರಿಕ ಪಾರುಪತ್ಯದ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿರುವುದಲ್ಲದೇ ಬಿಜೆಪಿಯ ಭದ್ರ ನೆಲೆ ಎಂದು ಪರಿಗಣಿತವಾಗಿದ್ದ, ಲಿಂಗಾಯತ ಪ್ರಾಬಲ್ಯದ ಮುಂಬೈ ಕರ್ನಾಟಕದಲ್ಲೂ ಕೈ ಪಡೆ ಮುಂದಿರುವುದು ಸರಳ ಬಹುಮತಕ್ಕೆ ಸನಿಹವಾಗಿಸಿದೆ. ಕಳೆದ ಬಾರಿಯೂ ಕೈ ಪಾರ್ಟಿ ಈ ಎರಡು ಪ್ರಾಂತ್ಯಗಳಲ್ಲಿ ಗಣನೀಯ ಸಾಧನೆ ಮಾಡಿದ್ದು ಅಧಿಕಾರಕ್ಕೆ ಹತ್ತಿರವಾಗಿಸಿತ್ತು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್‍ಗೆ ಅದ್ಭುತ ಮೈಲೇಜ್ ತಂದುಕೊಡದೆ ಹೋದರೂ ಯಡಿಯೂರಪ್ಪನವರಿಂದ ಲಿಂಗಾಯತ ಲೀಡರಿಕೆಯನ್ನು ವಿಮುಖಗೊಳಿಸಿರುವುದು ಬಿಜೆಪಿಗೆ ಏಟು ನೀಡುತ್ತಿದೆ. ಅದು ಗಣನೀಯವಲ್ಲ, ಆದರೂ ಕೆಜೆಪಿ-ಬಿಜೆಪಿ-ಬಿಎಸ್‍ಆರ್ ಸಮಾಗಮದ ಆಘಾತವನ್ನು ತಡೆದುಕೊಳ್ಳಬಹುದಾದಷ್ಟು ಶಕ್ತಿಯನ್ನು ಅದು ಕಾಂಗ್ರೆಸ್‍ಗೆ ತುಂಬಿದೆ. ಇನ್ನು ಕರಾವಳಿ ಪ್ರಾಂತ್ಯದಲ್ಲಿ ಕಳೆದ ಆಘಾತವೇ ಬಿಜೆಪಿಗೆ ಈ ಸಲವೂ ಮುಂದುವರೆಯುವ ಲಕ್ಷಣಗಳಿವೆ. ಇನ್ನು ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಅತ್ಯದ್ಭುತವಾಗಿ ಚೇತರಿಸಿಕೊಳ್ಳುವ ಪರಿಸ್ಥಿತಿ ಇಲ್ಲ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳು ಹಿಂದೆಂದಿಗಿಂತಲೂ ಹೆಚ್ಚು ದೃವೀಕರಣಗೊಂಡ ದೇವೇಗೌಡರ ಬೆನ್ನಿಗೆ ನಿಂತಿರುವುದರಿಂದ ಇಲ್ಲಿ ಕೈಗೆ ಕಳೆದ ಬಾರಿಗಿಂತ ಅಲ್ಪ ಹಿನ್ನಡೆಯಾಗಬಹುದು. ಆದರೂ ಅದು ಸರಳ ಬಹುಮತದಿಂದ ಕಾಂಗ್ರೆಸ್ಸನ್ನು ದೂರಕ್ಕೆ ತಳ್ಳಲಾರದು. ಬೆಂಗಳೂರು ಸಿಟಿ ಬಿಜೆಪಿ ಮತ್ತು ಕಾಂಗ್ರೆಸ್ ಪಾಲಿಗೆ ಮಿಶ್ರ ಪ್ರತಿಫಲ ಕೊಡಲಿದೆ. ಇಲ್ಲಿ ಬಿಜೆಪಿ ಕಾಂಗ್ರೆಸ್‍ಗಿಂತ ಒಂದು ಹೆಜ್ಜೆ ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.

ಒಟ್ಟಾರೆ ಹೇಳಬೇಕೆಂದರೆ ಬಿಜೆಪಿಯೊಳಗಿನ ನಾಯಕತ್ವದ ಗೊಂದಲಗಳು, ಮೋದಿಯ ಎಂಪಿ ಎಲೆಕ್ಷನ್ ಭರವಸೆಗಳು ಜನರನ್ನು ಭ್ರಮಾ ನಿರಸನಗೊಳಿಸಿರುವುದು, ಕೇಂದ್ರ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ವಿಫಲವಾಗಿರೋದು, ಕರ್ನಾಟಕದ ಪ್ರಾದೇಶಿಕ ಸವಾಲುಗಳಿಗೆ ಬಿಜೆಪಿ ಸ್ಪಂದಿಸಿದ ನಿರಾಶದಾಯಕ ರೀತಿ, ಕಾಂಗ್ರೆಸ್‍ನೊಳಗೆ ಮಡುಗಟ್ಟಿರುವ ಅಪರೂಪದ ಒಗ್ಗಟ್ಟು, ರಾಜ್ಯ ಸರ್ಕಾರದ ಜನಪ್ರಿಯತೆ, ಪ್ರಧಾನ ಹಗರಣ-ಭ್ರಷ್ಟಾಚಾರ ಮುಕ್ತ ಆಡಳಿತಗಳು ಕಾಂಗ್ರೆಸ್ಸನ್ನು ಮತ್ತೆ ಅಧಿಕಾರಕ್ಕೆ ತರುವ ಸಾಧ್ಯತೆಗಳೇ ದಟ್ಟವಾಗಿ ಕಾಣುತ್ತಿವೆ.

ದೇವರಾಜ ಅರಸು

ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ಆಡಳಿತ ನಡೆಸಿದ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಪರದಾಡುತ್ತ ಬಂದಿದ್ದವು. ಪ್ರಭುತ್ವ ವಿರೋಧಿ ಅಲೆಯಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಪಕ್ಷ ತೇಲಿ ಹೋಗುವುದು ಸರ್ವೇ ಸಾಮಾನ್ಯ ಸಂಗತಿಯಾಗಿತ್ತು. 1978ರ ವಿಧಾನಸಭಾ ಚುನಾವಣೆಯಲ್ಲಿ ಆಗ ಐದು ವರ್ಷಗಳ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ್ದ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿತ್ತು. ಅದಾದ ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷವೂ ಪುನರಾಯ್ಕೆ ಆಗಿಲ್ಲ. ದೇವರಾಜ ಅರಸು ನಂತರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಸಿದ್ಧರಾಮಯ್ಯನವರದು. 1978ರಲ್ಲಿ ಅರಸು ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 149 ಸ್ಥಾನ ಪಡೆದಿತ್ತು. ಈಗ ಐದು ವರ್ಷ ಪೂರೈಸಿದ ಸಿದ್ಧರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಹೌದು. ಇತಿಹಾಸ ಮರುಕಳಿಸಲಿದೆ. ಎಷ್ಟೇ ಅಳೆದು ತೂಗಿ ನೋಡಿದರು. ಕಾಂಗ್ರೆಸ್‍ಗೆ ಸರಳ ಬಹುಮತ ಬರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದುರ್ಬಲ ಹೈಕಮಾಂಡ್‍ಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಪ್ರಬಲ ನಾಯಕತ್ವ ರಾಜ್ಯಕ್ಕೆ ಪರ್ಯಾಯ ಎನ್ನುವ ಸಂದೇಶ ಕರ್ನಾಟಕ ಮತ್ತೊಮ್ಮೆ ನೀಡುವ ಸಾಧ್ಯತೆಗಳು ನಿಚ್ಚಳವಾಗಿವೆ. ಸಿದ್ಧರಾಮಯ್ಯನವರ ಅಲೆಯು ‘ಮಾತುಗಾರ’ರ ಮೋಡಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಲಿದೆ. ದೆಹಲಿಯಿಂದ ಅಧಿಕಾರ ನಡೆಸುವ ಕೇಂದ್ರದ ನಿಲುವಿಗೆ ಕರ್ನಾಟಕ ಯಾವತ್ತೂ ಸೊಪ್ಪು ಹಾಕಿಲ್ಲ. ದೆಹಲಿ ದೊರೆಗಳಿಗೆ ಕರ್ನಾಟಕ ಖಚಿತ ಉತ್ತರ ನೀಡುತ್ತಲೇ ಬಂದಿದೆ. ಅದೇ ಈ ಬಾರಿಯೂ ಪುನರಾವರ್ತನೆ ಆಗಲಿದೆ. ಕಳೆದ ಸಲಕ್ಕಿಂತ ಮತ ಗಳಿಕೆಯ ಪ್ರಮಾಣದಲ್ಲಿ ಉತ್ತಮ ಪ್ರಗತಿ ತೋರಿಸುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್ ಶೇ. 40ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗುತ್ತದೆ. ಕೇಂದ್ರ ಗುಪ್ತಚರ ಇಲಾಖೆಯ ವರದಿಯೂ ಸರಳ ಬಹುಮತದ ಸೂಚನೆ ಒದಗಿಸಿದೆ ಎನ್ನಲಾಗುತ್ತಿದೆ. ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿದಂತೆ ಹಳೆ ಮೈಸೂರು ಮತ್ತು ಕರಾವಳಿಗಳಲ್ಲಿಯೂ ಕಾಂಗ್ರೆಸ್‍ನ ಸಾಧನೆಯು ಕಳೆದ ಬಾರಿಗಿಂತ ಉತ್ತಮವಾಗಿರಲಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ದುರ್ದಿನಗಳನ್ನು ಜನತೆ ಇನ್ನೂ ಮರೆತಿಲ್ಲ. ಕಳೆದ ಬಾರಿ ಸೋಲಿಸಿ ಪಾಠ ಕಲಿಸಿದ್ದ ಮತದಾರ ಈಗ ಮತ್ತೊಮ್ಮೆ ಬಿಜೆಪಿಗೆ ಅದರ ಸ್ಥಾನ ಸೂಚಿಸಲಿದ್ದಾನೆ. ರಾಜ್ಯದಾದ್ಯಂತ ಕಾಂಗ್ರೆಸ್ ಪರವಾಗಿರುವ ಅಭಿಪ್ರಾಯವು ಸರಳ ಬಹುಮತ ತಂದು ಕೊಡುವುದಕ್ಕೆ ಕಾರಣವಾಗಲಿದೆ. ‘ಸುಳ್ಳು’ಗಳ ಮೂಲಕ ಮಾತಿನ ಅರಮನೆ ಕಟ್ಟಲು ಹೊರಟ ‘ಮೋಜು’ಗಾರನಿಗೆ ಕರ್ನಾಟಕ ಸೂಕ್ತ ಉತ್ತರ ನೀಡಲಿದೆ. ಕರ್ನಾಟಕದ ಆಡಳಿತದ ಕೇಂದ್ರ ಬೆಂಗಳೂರೇ ಹೊರತು ದೆಹಲಿ ಅಲ್ಲ ಎಂಬುದು ಮತ್ತೇ ಸಾಬೀತಾಗಲಿದೆ.

ಯಡಿಯೂರಪ್ಪ
ಕುಮಾರಸ್ವಾಮಿ

ವಿರೋಧ ಪಕ್ಷದ ಸ್ಥಾನವನ್ನು ಸರಿಯಾಗಿ ನಿಭಾಯಿಸಲಾಗದ ಬಿಜೆಪಿಯು ನಾಯಕತ್ವದ ಕೊರತೆಯಿಂದ ಬಳಲಿತು. ಮೋದಿಯಂತಹ ಮಾತುಗಾರ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿದರೂ ಸುಸ್ತಾಗುವಷ್ಟು ರ್ಯಾಲಿಗಳನ್ನು ಮಾಡಿದರೂ ಫಲ ನೀಡಲಿಲ್ಲ. ಸಿದ್ಧರಾಮಯ್ಯನವರ ಪರವಾಗಿ ರಾಜ್ಯದಾದ್ಯಂತ ಇರುವ ‘ಅಲೆ’ಯ ಪ್ರಮಾಣ ಕಡಿಮೆ ಮಾಡುವದು ಸಾಧ್ಯವಾಗಲೇ ಇಲ್ಲ. ಬಿಜೆಪಿ ಪಕ್ಷದೊಳಗಿನ ಭಿನ್ನಮತ ಮತ್ತು ದೆಹಲಿ ಹೈಕಮಾಂಡ್ ಅಣತಿಯಂತೆ ನಡೆಯಬೇಕಾದ ಅನಿವಾರ್ಯತೆ ಸಿಲುಕಿದ ಯಡಿಯೂರಪ್ಪ ಅವರು ‘ಪ್ರಮಾಣವಚನ’ ಸ್ವೀಕರಿಸುವ ಭ್ರಮಾತ್ಮಕ ಹೇಳಿಕೆ ನೀಡುವುದಕ್ಕ್ಕೆ ಮಾತ್ರ ಸೀಮಿತವಾಯಿತು. ಚುನಾವಣೆಯ ಪ್ರಚಾರ ಭಾಷಣದಲ್ಲಿಯೇ ‘ಬಜೆಟ್’ ಮಂಡಿಸುವ ಮತ್ತು ಸಂಪುಟದ ಸ್ಥಾನ ಹಂಚುವ ತಮಾಷೆಯ ಪ್ರಸಂಗಗಳು ಯಡಿಯೂರಪ್ಪ ಅವರು ತಲುಪಿದ್ದ ಹತಾಶೆಯ ಸ್ಥಿತಿಯನ್ನು ಬಿಂಬಿಸುವಂತಿತ್ತು. ದೆಹಲಿಯ ನಾಯಕರುಗಳ ಚರಿಸ್ಮಾ ತಮಗೆ ಸಹಾಯವಾಗಬಹುದು ಎಂದು ಕಾದು ಕುಳಿತಿದ್ದ ಬಿಜೆಪಿಯ ರಾಜ್ಯ ಮುಖಂಡರಿಗೆ ಕೇವಲ ಕಾದದ್ದಷ್ಟೇ ಲಾಭವಾಯಿತು. ಯಡಿಯೂರಪ್ಪ ಹೊರತು ಪಡಿಸಿದ ಎರಡನೇ ಸಾಲಿನ ನಾಯಕರೇ ಇಲ್ಲದ ಬಿಜೆಪಿಯ ಸ್ಥಿತಿ ಚಿಂತಾಜನಕವಾಗಿತ್ತು. ಮುಂಚೂಣಿಯಲ್ಲಿದ್ದ ನಾಯಕ ಕೂಡ ಎದೆಗುಂದುವಂತಹ ಬೆಳವಣಿಗೆಗಳನ್ನು ಎದುರಿಸಬೇಕಾಯಿತು. ಆಪ್ತರಿಗೇ ಟಿಕೆಟ್ ಕೊಡಿಸಲಾಗದ ಹತಾಶೆ ಒಂದೆಡೆಯಾದರೆ, ಮತದಾನದ ದಿನ ಹತ್ತಿರವಾದಂತೆ ಹೆಚ್ಚುತ್ತ ಹೋದ ಸಿದ್ಧರಾಮಯ್ಯನವರ ಜನಪ್ರಿಯತೆಯು ಕಾಂಗ್ರೆಸ್ ಪಕ್ಷವನ್ನು ಸರಳ ಬಹುಮತದ ಹಂತಕ್ಕೆ ತಂದು ನಿಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...