Homeಚಳವಳಿಮದ್ಯದ ವಿರುದ್ಧ ಕದಲಿದ ಮಹಿಳೆಯರ ಪಾದಗಳು

ಮದ್ಯದ ವಿರುದ್ಧ ಕದಲಿದ ಮಹಿಳೆಯರ ಪಾದಗಳು

- Advertisement -
- Advertisement -

ಕೆ.ಪಿ.ಸುರೇಶ |

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಚಾರಿತ್ರಿಕ ಬೆಳವಣಿಗೆ. ಆದರೆ ಈ ಬಗ್ಗೆ ನಮ್ಮ ರಾಜಕೀಯ ಪಕ್ಷಗಳಷ್ಟೇ ಅಲ್ಲ ಒಟ್ಟಾರೆ ನಾಗರಿಕ ಸಮಾಜದ ಪ್ರತಿಕ್ರಿಯೆ ನಿರಾಶಾದಾಯಕವಾಗಿದೆ.
ರಾಜಕೀಯ ಪಕ್ಷಗಳ ನಿಲುವು ನಿರೀಕ್ಷಿತ. ನಮ್ಮ ಸರಕಾರಗಳು ಈ ದುಡ್ಡಿನಿಂದಲೇ ನಡೆಯುವುದು ಎಂಬ ನಂಬಿಕೆ ಇವಕ್ಕಿದೆ. ಸರ್ಕಾರವೂ ಇದೊಂದು ಅನಿವಾರ್ಯ ಚಟವೆಂಬಂತೆ ಬಿಂಬಿಸಿದೆ. ಆದರೆ ಆರ್ಥಿಕ ವಿವರಗಳನ್ನು ನೋಡಿದರೆ ಸರ್ಕಾರಕ್ಕಿರುವ ಆದಾಯ ಸುಮಾರು 18 ಸಾವಿರ ಕೋಟಿ ಎಂದು ಅಂಕಿಅಂಶಗಳು ಹೇಳುತ್ತಿವೆ. ಈ ಮೊತ್ತ ಅಷ್ಟೇನೂ ದೊಡ್ಡದಲ್ಲ. ಎರಡು ದಶಕಗಳ ಮೊದಲು ಬೇರೆ ಸೇವಾ ತೆರಿಗೆಗಳೇ ಇಲ್ಲದ ಕಾಲದಲ್ಲಿ ಮದ್ಯದ ತೆರಿಗೆಯೇ ಪ್ರಮುಖ ಆದಾಯ ಮೂಲವಾಗಿತ್ತು ಎಂಬುದು ನಿಜ. ಆದರೆ ಪ್ರಸ್ತುತ ಇದು ಅಷ್ಟೇನೂ ನಿಜವಲ್ಲ. ಇಂದು ಇzರ ಪ್ರಾಮುಖ್ಯತೆ ಬೇರೆ ಕಾರಣಕ್ಕಾಗಿ ಇದೆ. ಈ ಮದ್ಯದ ಅಂಗಡಿ, ಬಾರುಗಳು ರಾಜಕೀಯ ನೇತಾರರ ನೆಚ್ಚಿನ ಕಾಳಧನದ ಮೂಲ. ಅಷ್ಟೇ ಅಲ್ಲ ಚುನಾವಣಾ ಕಾಲದಲ್ಲಿ ನೆಚ್ಚಿಕೊಳ್ಳಬಹುದಾದ ಸರಬರಾಜು ಮೂಲ.
ಮುಖ್ಯತಃ ಈ ಪಾದಯಾತ್ರೆ ನಮ್ಮ ಒಟ್ಟಾರೆ ಸಮಾಜದ ಪುರುಷಪ್ರಧಾನ ಉಡಾಫೆಯನ್ನು ಅನಾವರಣಗೊಳಿಸಲಿದೆ. ಶೇ. ಐವತ್ತರಷ್ಟು ಇರುವ ಮಹಿಳೆಯರು, ಮತ್ತದರ ಅರ್ಧದಷ್ಟಿರುವ ಮಕ್ಕಳನ್ನು ಬಿಟ್ಟರೆ ಉಳಿಯುವ ಶೇ.25 ಗಂಡಸರಲ್ಲಿ ಕುಡುಕರೆಷ್ಟು? ಪೂರಾ ಅಂದರೂ ಅವರೇನು ಬಹುಮತವಲ್ಲ. ಇದಿಷ್ಟೇ ಸಾಕು ಸರ್ಕಾರದ ಅಷಾಡಭೂತಿತನವನ್ನು ಬೆತ್ತಲೆಗೊಳಿಸಲು.
ಕುಡಿತದ ಸಾಮಜಿಕ ಆರ್ಥಿಕ ಮತ್ತು ಆರೊಗ್ಯದ ಮೇಲಿನ ದುಷ್ಪರಿಣಾಮಗಳ ಬಗ್ಗೆ ಹೊಸತೇನೂ ಹೇಳಬೇಕಿಲ್ಲ. ಒಂದು ದಿನ ಮುಸ್ಸಂಜೆ ಯಾವುದೇ ಊರಲ್ಲಿ ನಿಂತರೂ ಇದು ಕಾಣಿಸುತ್ತೆ.
ಆದರೂ ದೇಶದ ಪ್ರತಿಷ್ಠಿತ ನರ ಆರೋಗ್ಯ ಸಂಸ್ಥೆ ನಿಮ್ಹಾನ್ಸ್ ಇತ್ತೀಚೆಗೆ ಪ್ರಕಟಿಸಿರುವ ಅಧ್ಯಯನ ವರದಿ ಈ ಕೇಡಿನ ಪರಿಣಾಮಗಳ ಬಗ್ಗೆ ಛಳಿ ಹುಟ್ಟಿಸುವಂಥಾ ವಿವರಗಳನ್ನು ಮುಂದಿಟ್ಟಿದೆ.
ಭಾರತದಲ್ಲಿ ವರುಷಕ್ಕೆ 230 ಕೋಟಿ ಲೀಟರ್ ಮದ್ಯ ಉತ್ಪಾದನೆಯಾಗುತ್ತದೆ. ಅಂದರೆ ಸುಮಾರು ತಲಾ 2 ಲೀಟರ್!! ಹತ್ತು ವರುಷಗಳ ಹಿಂದೆಯೇ ಇದರಿಂದ ಬರುತ್ತಿದ್ದ ರಾಜಸ್ವ 40 ಸಾವಿರ ಕೋಟಿ. ಆದಾಯ ಎಲ್ಲಿಂದ ಬರುತ್ತಿದೆ ಎಂಬ ನೈತಿಕ ಪ್ರಶ್ನೆಯನ್ನು ಸರ್ಕಾರ ಎಂದೂ ತನಗೆ ತಾನೇ ಹಾಕಿಕೊಂಡಿಲ್ಲ.
ನಿಮ್ಹಾನ್ಸ್ ಅಧ್ಯಯನದ ಪ್ರಕಾರ ಶೇ. 30-35 ಗಂಡಸರು ಮದ್ಯಪಾನ ಮಾಡುತ್ತಾರೆ. ಶೇ.5ರಷ್ಟು ಮಹಿಳೆಯರೂ ಮದ್ಯಪಾನಿಗಳು.
ಆತಂಕ ಹುಟ್ಟಿಸುವ ಸಂಗತಿ ಎಂದರೆ ‘80ರ ದಶಕದಲ್ಲಿ ಮದ್ಯಪಾನ ಆರಂಭಿಸುವ ವಯಸ್ಸು 28 ಆಗಿತ್ತು. ಆದರೆ ಇದು 2007ರ ವೇಳೆಗೆ ಇದು 17ಕ್ಕಿಳಿದಿತ್ತು. ಇವರಲ್ಲಿ ಅರ್ಧಕ್ಕರ್ಧ ಮಂದಿ ಅಪಾಯಕಾರಿ ಮಟ್ಟದ ಕುಡಿತದ ಚಟ ಅಂಟಿಸಿಕೊಳ್ಳುತ್ತಾರೆ.
ಅಧ್ಯಯಯನಗಳ ಪ್ರಕಾರ ಕುಡಿತಕ್ಕಂಟಿದವರಲ್ಲಿ ಶೇ.20 ಮಂದಿ ಬೇಗನೆ ಸಾವನ್ನಪ್ಪುತ್ತಾರೆ. ಅಪಘಾತ, ಗಾಯಗಳೂ ಕುಡುಕರಿಗೇ ಜಾಸ್ತಿ. ಶೇ. 25ರಷ್ಟು ರಸ್ತೆ ಅಪಘಾತ ಮತ್ತು ಸಾವುಗಳು ಮದ್ಯ ಸಂಬಂಧೀ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಕೌಟುಂಬಿಕ ಹಿಂಸೆಯ ಅರ್ಧಾಂಶ ಈ ಕುಡಿತದ ಕಾರಣಕ್ಕೆ ನಡೆಯುತ್ತಿರುತ್ತೆ. ಶೇ.25ರಷ್ಟು ಪಾಶ್ರ್ವವಾಯು ಪೀಡಿತರು ಮದ್ಯವ್ಯಸನಿಗಳಾಗಿದ್ದಾರೆ. ಲಿವರ್ ಕಾಯಿಲೆಯಂತೂ ಬಹುತೇಕ ಕುಡಿತದ ಪರಿಣಾಮದಿಂದಲೇ ಎಂಬುದೂ ಸಿದ್ಧವಾಗಿದೆ.
ಇದರ ಸಾಮಾಜಿಕ ಪರಿಣಾಮಗಳಲ್ಲಿ ಕೆಲಸಕ್ಕೆ ಗೈರು ಹಾಜರಾಗುವುದು, ಕುಂಠಿತ ಆರೋಗ್ಯ, ಮಕ್ಕಳಿಗೆ ಶಿಕ್ಷಣದಲ್ಲಾಗುವ ತೊಡಕು ಹೀಗೆ ಹತ್ತು ಹಲವು ಬಗೆಯ ವಿವರಗಳಿಗೆ ಅಧ್ಯಯನಗಳೇ ಬೇಕಿಲ್ಲ ತಾನೇ?
ಆರ್ಥಿಕವಾಗಿ, ಇದರ ಆದಾಯ ನೆಚ್ಚಿಕೊಂಡಿರುವ ಸರ್ಕಾರ ಎಂಥಾ ಮೂರ್ಖವಾಗಿದೆಯೆಂದರೆ ಒಂದು ಅಧ್ಯಯನದ ಪ್ರಕಾರ ಹೆಂಡದ ಆದಾಯ 20 ಸಾವಿರ ಕೋಟಿ ಇದ್ದರೆ, ಹೆಂಡದ ಪರಿಣಾಮದಿಂದ ಸರ್ಕಾರಕ್ಕೆ ಆರೋಗ್ಯ ವ್ಯವಸ್ಥೆ ಮತ್ತಿತರ ಕಾರಣಕ್ಕಾಗುವ ವೆಚ್ಚ 24 ಸಾವಿರ ಕೋಟಿ. (ಇದು 2004ರ ಲೆಕ್ಕಾಚಾರ!!).
ಇನ್ನಷ್ಟು ಆತಂಕಕಾರೀ ವಿವರಗಳು ನಿಮ್ಹಾನ್ಸ್ ಅಧ್ಯಯನದಲ್ಲಿದೆ. ಮುಖ್ಯವಾಗಿ ಕುಡಿತದಿಂದಾಗುವ ಆರೋಗ್ಯ, ಸಾಮಾಜಿಕ, ಕೌಟುಂಬಿಕ ಅನಾಹುತಗಳಿಗೆ ಸರ್ಕಾರ ತೆರುವ ಬೆಲೆ ಅದರಿಂದ ಹುಟ್ಟುವ ಆದಾಯಕ್ಕಿಂತ ಜಾಸ್ತಿ ಎಂಬುದು ಗಮನಾರ್ಹ. ಇಂಥಾ ವೈದ್ಯಕೀಯ ವೃತ್ತಿಪರ ಸಂಸ್ಥೆಗಳ ಸೂಚಿಗಳನ್ನು ಸರ್ಕಾರ ಗೌರವಿಸಿದ್ದಿಲ್ಲ. ಆದರೆ ತುಲನಾತ್ಮಕವಾಗಿ ಗಮನಿಸಿ:
ಒಂದು ಕೀಟನಾಶಕದ ಬಗ್ಗೆ ಅಥವಾ ಮ್ಯಾಗೀ ನೂಡಲ್ ಬಗ್ಗೆ ಸರ್ಕಾರದ ಸಂಸ್ಥೆಯೊಂದು ವರದಿ ಕೊಟ್ಟರೆ ಮಾಧ್ಯಮಗಳು ಕೋಲಾಹಲವೆಬ್ಬಿಸುತ್ತವೆ. ಒತ್ತಡ ಗುಂಪುಗಳು ಹೌಹಾರಿ ಸರ್ಕಾರದ ಮೇಲೆ ಒತ್ತಡ ತರುತ್ತವೆ. ನಿಷೇಧ ಸಹಿತ ಹತ್ತು ಹಲವು ಕ್ರಮಗಳನ್ನು ಸರ್ಕಾರ ಮಿಂಚಿನ ವೇಗದಲ್ಲಿ ಜರುಗಿಸುತ್ತದೆ.
ಹೆಂಡದ ಬಗ್ಗೆ ಮಾತ್ರಾ ಅತ್ತ ಪರಿಣಿತರ ಅಧ್ಯಯನ, ಇತ್ತ ಕಣ್ಣಿಗೇ ಗಿಡಿಯುವ ನಿತ್ಯ ವರದಿಗಳಿದ್ದರೂ ಸರ್ಕಾರ ಗಮನಿಸುವುದಿಲ್ಲ. ಏನಿದರ ಅರ್ಥ?
ಸೊಷಿಯಲ್ ಡ್ರಿಂಕಿಂಗ್ ಅಂತ ಒಂದಿದೆ. ಅಂದರೆ ಆಗೀಗ ಮೋಜಿಗಾಗಿ ಕುಡಿಯುವುದು. ಇದನ್ನು ತಡೆಯಲಾಗದು. ಮನುಷ್ಯನ ಆದಿಮ ವ್ಯಸನ ಇದು ಎಂದೆಲ್ಲಾ ವಾದ ಇದೆ. ಚಾರಿತ್ರಿಕವಾಗಿ ಗಮನಿಸಬೇಕಾದ್ದು ಭಾರತದಲ್ಲಿ ಆಧುನಿಕ ಪಾಶ್ಚಿಮಾತ್ಯ ರಸಾಯನ ಶಾಸ್ತ್ರದ ಉತ್ಪನ್ನಗಳು ಪ್ರವೇಶಿಸುವ ಮೊದಲು ನಮ್ಮಲ್ಲಿದ್ದ ಮದ್ಯದ ಅಲ್ಕೋಹಾಲ್ ಪ್ರಮಾಣ ಅಷ್ಟೇನೂ ಅಪಾಯಕಾರಿಯಾಗಿರಲಿಲ್ಲ. ಇಂದಿಗೂ ಆದಿವಾಸಿ ಪಂಗಡಗಳು ಬಿಡಿ, ನಮ್ಮ ಕೊಡಗು ಮಲೆನಾಡುಗಳಲ್ಲೂ ವಿಶಿಷ್ಟ ಮದ್ಯಗಳನ್ನು ತಯಾರಿಸುವುದಿದೆ. ಇವೆಲ್ಲಾ ತೀರಾ ಅಪಾಯಕಾರೀ ಮದ್ಯಸಾರದ ಪ್ರಮಾಣ ಹೊಂದಿಲ್ಲ.
ಆಧುನಿಕ ಮದ್ಯಗಳ ಪ್ರವೇಶ ಆಗಿದ್ದೇ ನಮ್ಮ ಪಾರಂಪರಿಕ ಗ್ರಾಮವಾಸಿಗಳು ಪಂಗಡಗಳೂ ಈ ಅಪಾಯಕಾರೀ ಅಲ್ಕೋಹಾಲ್ ಪ್ರಮಾಣವಿರುವ ಮದ್ಯಕ್ಕೆ ಶರಣಾಗಿದ್ದಾರೆ. ಇಂದಿಗೂ ಹಳ್ಳಿಗಳ ಕುಡುಕರನ್ನು ಕೇಳಿದರೆ ಕಂಟ್ರಿ ಸರಾಯಿ ಬಗ್ಗೆ ಮಾತಾಡುತ್ತಾರೆ.
ಇದರರ್ಥ ಇಷ್ಟೇ. ಈ ಚಟ ಕ್ರಮೇಣ ಎಲ್ಲಾ ಚಟಗಳಂತೆ ಹೆಚ್ಚು ಹೆಚ್ಚು ಪ್ರಮಾಣದ ಕುಡಿತವನ್ನು ಪ್ರೇರೇಪಿಸುತ್ತಾ ಹೋಗುತ್ತದೆ.
ಒಂದೆಡೆ ಗ್ರಾಮೀಣ ರೈತನ ಕೌಟುಂಬಿಕ ಆದಾಯ ದಿನಕ್ಕೆ ಕೇವಲ ರೂ.200 ಎಂದು ಮರುಗುವ ಸರ್ಕಾರ ಇದೇ ಕುಟುಂಬದ ಗಂಡಸೊಬ್ಬ ಈ ಮೊತ್ತವನ್ನು ಹೆಂಡಕ್ಕೆ ವ್ಯಯಿಸುವುದರ ಬಗ್ಗೆ ಗೊತ್ತಿದ್ದೂ ಮೌನ ತಾಳುತ್ತದೆ.
ಹಳ್ಳಿಯ ಗೂಡಂಗಡಿಗಳಲ್ಲೂ ಮದ್ಯ ಮಾರಾಟವಾಗುವುದು ಬಹಿರಂಗವಾಗಿದ್ದರೂ ಇಲಾಖೆಗಳಾಗಲೀ ಜನಪ್ರತಿನಿಧಿಗಳಾಗಲೀ ಈ ಬಗ್ಗೆ ಕ್ರಮಕೈಗೊಂಡ ಉದಾಹರಣೆ ಇದೆಯೇ?
ಅರ್ಥಾತ್ ಈ ಮದ್ಯ ಎಂಬುದು ಕೌಟುಂಬಿಕ ನೆಮ್ಮೆದಿ, ಆರೋಗ್ಯಕ್ಕೆ ಮಾರಕವಾಗಿದೆಯಷ್ಟೇ ಅಲ್ಲ, ನಮ್ಮ ಸಾರ್ವಜನಿಕ ಜೀವನವನ್ನು ಭ್ರಷ್ಟಗೊಳಿಸುವಲ್ಲೂ ಮಹತ್ವದ ಪಾತ್ರ ವಹಿಸಿದೆ.
ಈ ಹಿಂದೆ ಕರ್ನಾಟಕದ ಮಹತ್ವದ ಹೋರಾಟಗಳನ್ನೂ ಮಹಿಳೆಯರೇ ಮುನ್ನಡೆಸಿದ್ದರು ಎಂಬುದನ್ನು ನೆನಪಿಸಿಕೊಂಡರೆ ಈ ಪಾದಯಾತ್ರೆ ನಿರ್ಣಾಯಕವಾಗುವ ಲಕ್ಷಣ ಕಾಣಿಸುತ್ತಿದೆ. ನಾಳೆಗೇ ಈ ಮಹಿಳೆಯರು ಗೆಲ್ಲುತ್ತಾರೆಂಬ ಭ್ರಮೆ ಈ ಮಹಿಳೆಯರಿಗೂ ಇಲ್ಲ. ಆದರೆ ಮುಂಬರುವ ದಿನಗಳಲ್ಲಿ ಕಿರಗೂರಿನ ಗಯ್ಯಾಳಿಗಳು ಕಥೆಯಲ್ಲಿ ಸ್ಫೋಟವಾಗುವ ಆಕ್ರೋಶ ರಾಜ್ಯದ ಹಳ್ಳಿಹಳ್ಳಿಗಳಲ್ಲೂ ಮೊಳಕೆ ಒಡೆಯಲಿದೆ.
ಈಗ ಉಡಾಫೆ, ಕಿತಾಪತಿಯಲ್ಲಿ ಈ ಹೋರಾಟವನ್ನು ನೋಡುತ್ತಿರುವ ಪಕ್ಷಗಳಿಗೂ ಈ ಬಿಸಿ ತಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....