Homeಕರ್ನಾಟಕಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

ಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

- Advertisement -
- Advertisement -

ಜಿಲ್ಲಾಡಳಿತ ಮಧುಗಿರಿ ತಾಲೂಕು ಬ್ಯಾಲ್ಯ ಗ್ರಾಮಠಾಣದಲ್ಲೇ ವಸತಿ ವಂಚಿತರಿಗೆ ನಿವೇಶನ ಕೊಡುವ ಪತ್ರ ನೀಡಿದ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು 14 ದಿನಗಳ ನಂತರ ವಾಪಸ್ ಪಡೆದಿದೆ. ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಧರಣಿ ಕುಳಿತಿದ್ದ ಹೋರಾಟ ಸಮಿತಿಗೆ ಕೊನೆಗೂ ಹೋರಾಟಕ್ಕೆ ಜಯ ದೊರೆತಿರುವುದು ಸಂತಸಕ್ಕೆ ಕಾರಣವಾಗಿದೆ.

ಮಧುಗಿರಿ ತಾಲೂಕಿ ಬ್ಯಾಲ್ಯದ 70 ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡುವಂತೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ನಿರಂತರ 14 ದಿನಗಳು ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಹೋರಾಟಕ್ಕೆ ದಲಿತ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಬಲ ನೀಡಿದ್ದವು. ಬಡಜನರಿಗೆ ನಿವೇಶನ ನೀಡದೆ ಸ್ಥಳದಿಂದ ಕದಲುವುದಿಲ್ಲ ಎಂಬ ಧರಣಿನಿತರ ಪಟ್ಟಿಗೆ ಜಿಲ್ಲಾಡಳಿತ ಕೊನೆಗೆ ಸ್ಪಂದಿಸಿದೆ. ಗ್ರಾಮಠಾಣಾದ 30 ಕುಟುಂಬ ಜಮೀನಿನಲ್ಲಿ ನಿವೇಶನ ನೀಡುವ ಆದೇಶ ಪತ್ರವನ್ನು ನೀಡಿದ ನಂತರ ಧರಣಿ ಕೈಬಿಡಲಾಗಿದೆ.

ಧರಣಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಚಾಲನೆ ನೀಡಿದ್ದರು. ದೇಶದ ಪ್ರತಿಯೊಬ್ಬ ಬಸವರಿಗೆ  ಕೂಡ ವಸತಿ ಕಲ್ಪಿಸುವುದ ಸರ್ಕಾರ ಜವಾಬ್ದಾರಿ. ಬಡವರು ಗೌರವಯುತವಾಗಿ ಬದಕಲು ಸರ್ಕಾರ ಅವಕಾಶ ಮಾಡಿಕೊಡಬೇಕು. ವಸತಿ ಮತ್ತು ಭೂಮಿಯಿಂದ ಯಾರನ್ನೂ ವಂಚಿಸಬಾರದು ಎಂದು ತಾಕೀತು ಮಾಡಿ ಹೋಗಿದ್ದರು. ಆನಂತರ ಜಿಲ್ಲಾಧಿಕಾರಿಗಳು ಎರಡು ಬಾರಿ ಧರಣಿನಿರತರಲ್ಲಿಗೆ ಆಗಮಿಸಿ ನಿವೇಶನ ನೀಡಲು ಕ್ರಮ ಕೈಗೊಳ್ಳುತ್ತೇನೆ. ಧರಣಿ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಧರಣಿನಿರತರು ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಈ ನಡುವೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಿತಿಯ ಮಾರ್ಗದರ್ಶಕರಾದ ಎಚ್.ಎಸ್. ದೊರೆ ಸ್ವಾಮಿ ಅವರನ್ನು ಭೇಟಿಯಾಗಿ ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಿ ಬಂದರು. ಯಾವುದೇ ಕಾರಣಕ್ಕೂ ಸೂಕ್ತ ಪರಿಹಾರ ಕಾಣದೆ ಧರಣಿ ಕೈಬಿಡಬಾರದು ಎಂದು ಸೂಚಿಸಿದರು. ಅವರ ಮಾರ್ಗದರ್ಶನದಂತೆ ಧರಣಿ ಮುಂದುವರಿಸಲಾಯಿತು. ಧರಣಿಗೆ ಬೇರೆ ಬೇರೆ ಸಂಘಟನೆಗಳು ಬೆಂಬಲ ನಿಡಿದರು.

ಸರ್ಕಾರದ ವಿರುದ್ದ ಪದಗಳನ್ನು ಕಟ್ಟಿ ಹಾಡುವುದು ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಧರಣಿಯನ್ನು ವಿಭಿನ್ನವಾಗಿ ನಡೆಸಿದರು. ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ತಮಟೆ ಚಳವಳಿ ಮಾಡಿದರು. ಪತ್ರಚಳವಳಿ ಕೈಗೊಂಡರು. ಆದರೂ ಜಿಲ್ಲಾಡಳಿತದ ಕಿವಿಗೆ ಬಡವರ ಕೂಗು ಮುಟ್ಟಲೇ ಇಲ್ಲ. ಧರಣಿ ಕೈಬಿಡಬಹುದೆಂಬ ಅಧಿಕಾರಿಗಳ ನಿರೀಕ್ಷೆ ಹುಸಿಯಾಯಿತು.

ಜಿಲ್ಲಾಧಿಕಾರಿಗಳು ಬ್ಯಾಲ್ಯಗ್ರಾಮದಿಂದ ಮೂರು ಕಿಲೋ ಮೀಟರ್ ದೂರದಲ್ಲಿ 4 ಎಕರೆ ಭೂಮಿ ನೀಡಿರುವುದಾಗಿ ಪತ್ರಿಕೆಗಳ ಮೂಲಕ ಪ್ರಕಟಿಸಿದರು. ಇದಕ್ಕೂ ಹೋರಾಟ ಸಮಿತಿ ಬಗ್ಗಲಿಲ್ಲ. ಜಿಲ್ಲಾಧಿಕಾರಿಗಳು ಸೂಚಿಸಿದ ಪ್ರದೇಶ ತಗ್ಗುದಿಬ್ಬಗಳಿಂದ ಕೂಡಿತ್ತು. ಗುಡ್ಡದ ಸಮೀಪ ತೋರಿಸಿದ್ದ ಭೂಮಿಯಲ್ಲಿ ಪೊದೆಗಳು ಬೆಳೆದಿದ್ವು. ಅಲ್ಲಿ ಚರತೆ ಮತ್ತು ಕರಡಿಗಳ ಕಾಟ ಅಧಿಕವಿತ್ತು ಎಂಬುದನ್ನು ಹೋರಾಟ ಸಮಿತಿ ಅಧಿಕಾರಿಗಳ ಗಮನ ಸೆಳೆಯಿತು. ಧರಣಿ ನಡೆಸುತ್ತಿದ್ದವರು ಎಷ್ಟೇ ಕಷ್ಟವಿದ್ದರೂ ಪಟ್ಟನ್ನು ಮಾತ್ರ ಸಡಿಸಲೇ ಇಲ್ಲ.

ಕೊನೆಗೂ ಜಿಲ್ಲಾಡಳಿತ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿಯ ಧರಣಿಗೆ ಮಣಿಯಲೇ ಬೇಕಾಯಿತು. 70 ಕುಟುಂಬಗಳ ಸಮಸ್ಯೆ ಗಂಭೀರ ಸ್ವರೂಪದ್ದು ಎಂಬುದನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಹೋರಾಟ ಸಮಿತಿ ಯಶಸ್ವಿಯಾಯಿತು. ಪರಿಣಾಮ ಬ್ಯಾಲ್ಯ ಗ್ರಾಮದ ಗ್ರಾಮಠಾಣದಲ್ಲೇ ಇರುವ ಭೂಮಿಯಲ್ಲಿ ನಿವೇಶನಗಳನ್ನು ನೀಡಲು ಒಪ್ಪಿಕೊಂಡಿತು.

ಬ್ಯಾಲ್ಯ ಗ್ರಾಮದ ಗ್ರಾಮಠಾಣ ಜಾಗದಲ್ಲೇ 30 ಕುಂಟೆ ಜಾಗವನ್ನು ಗುರುತಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲು ಪತ್ರ ಮುಖೇನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ. ಈ ಸಂಬಂಧ ಇದರ ಪ್ರತಿಯನ್ನು  ನಮಗೆ ನೀಡಿದೆ. ನಮಗೆ ಇದರಿಂದ ತೃಪ್ತಿಯಾಗಿದೆ. ಈಗ ನೀಡಿರುವ ಜಾಗದಲ್ಲಿ ಕನಿಷ್ಠ 25 ರಿಂದ 30 ನಿವೇಶನಗಳು ವಿಂಗಡಣೆಯಾಗಲಿವೆ. ಈಗ ತುರ್ತು ಇರುವವರಿಗೆ ನೀವೇಶ ನೀಡುವುದು. 20830 ಅಡಿ ನಿವೇಶ ನೀಡಿದರೆ ಅನುಕೂಲವಾಗುತ್ತದೆ. ಇನ್ನುಳಿದವರಿಗೂ ನಿವೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಜಾಗ ನೋಡಲು ತಿಳಿಸಿದ್ದು, ಮಾರಾಟ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ.  ಅದಕ್ಕೆ ಅವರೂ ಒಪ್ಪಿಕೊಂಡಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡ ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

ಧರಣಿ ಸ್ಥಳಕ್ಕೆ ಬಮದು ನಮ್ಮ ಮನವಿಗೆ ಸ್ಪಂದಿಸಿದ ಅಪರ  ಜಿಲ್ಲಾಧಿಕಾರಿ ಚನ್ನಬಸಪ್ಪ,,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದೇಶ್, ಮಧುಗಿರಿ ತಹಸಿಲ್ದಾರ್ ನಂದೀಶ್ ,ಜೆಸಿಬಿ ವೆಂಕಟೇಶ್,ಟಿ.ಸಿ.ರಾಮಯ್ಯ,ಭರತ್ ಕುಮಾರ್,ಮೋಹನ್ ಕುಮಾರ್,ಯೋಗೀಶ್ ಮೆಳೆಕಲ್ಲಹಳ್ಳಿ,ರಾಮಮೂರ್ತಿ,ಶಿವರಾಜು ಕರ್ನಾಟಕ ರಾಷ್ಟ್ರ ಸಮಿತಿ ಮಲ್ಲಿಕಾರ್ಜುನ್,ತಿಮ್ಮಯ್ಯ ಮೊದಲಾದವರ ಸಮ್ಮುಖದಲ್ಲಿ ಪತ್ರ ನೀಡಿದ ಬಳಿಕ ಧರಣಿ ಹಿಂತೆಗೆದುಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ವಸತಿ ಮತ್ತು ಭೂಮಿ ವಂಚಿತರು ಸಾಕಷ್ಟು ಮಂದಿ ಇದ್ದಾರೆ. ಎಲ್ಲರಿಗೂ ವಸತಿ ದೊರೆಯಬೇಕು.  ಸಾಮಾಜಿಕ ನ್ಯಾಯ ದೊರೆತರೆ ಅನುಕೂಲವಾಗುತ್ತದೆ. ಜಾತಿ, ಮತ, ಲಿಂಗ, ಧರ್ಮಗಳನ್ನು ಮೀರಿ ನಮ್ಮ ಹೋರಾಟ ಮುಂದುವರಿಯುತ್ತದೆ. ಗುಡಿಸಲಲ್ಲಿ ವಾಸಿಸುವವರಿಗು ಮನೆ ದೊರೆಯಬೇಕು. ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ವಸತಿ ಇಲ್ಲದವರು ಇದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರ ಅವರಿಗೂ ನ್ಯಾಯ ಕೊಡಬೇಕು. ಎಲ್ಲ ಕುಟುಂಬಗಳು ನೆಮ್ಮದಿಯಿಂದ ಬದುಕಬೇಕೆಂಬುದೇ ನಮ್ಮ ಉದ್ದೇಶ. ಧರಣಿಯನ್ನು ಬೆಂಬಲಿಸಿದ ಮುಖಂಡರು ಹಾಗೂ ಸುದ್ಧಿ ಮಾಧ್ಯಮಗಳಿಗೆ ಧನ್ಯವಾದಗಳನ್ನು ತಿಳಿಸುವುದನ್ನು ನಾಗಭೂಷಣ್ ಮರೆಯಲಿಲ್ಲ.

ಅಂತೂ ಧರಣಿ ಮುಕ್ತಾಯವಾಧರೂ ನಿವೇಶನ ಮತ್ತು ಭೂಮಿ ವಂಚಿತರಿಗೆ ನ್ಯಾಯ ದೊರೆಯಲಿ ಎಂಬುದು ಪತ್ರಿಕೆಯ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...