Homeಕರ್ನಾಟಕಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

ಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

- Advertisement -
- Advertisement -

ಜಿಲ್ಲಾಡಳಿತ ಮಧುಗಿರಿ ತಾಲೂಕು ಬ್ಯಾಲ್ಯ ಗ್ರಾಮಠಾಣದಲ್ಲೇ ವಸತಿ ವಂಚಿತರಿಗೆ ನಿವೇಶನ ಕೊಡುವ ಪತ್ರ ನೀಡಿದ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು 14 ದಿನಗಳ ನಂತರ ವಾಪಸ್ ಪಡೆದಿದೆ. ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಧರಣಿ ಕುಳಿತಿದ್ದ ಹೋರಾಟ ಸಮಿತಿಗೆ ಕೊನೆಗೂ ಹೋರಾಟಕ್ಕೆ ಜಯ ದೊರೆತಿರುವುದು ಸಂತಸಕ್ಕೆ ಕಾರಣವಾಗಿದೆ.

ಮಧುಗಿರಿ ತಾಲೂಕಿ ಬ್ಯಾಲ್ಯದ 70 ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡುವಂತೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ನಿರಂತರ 14 ದಿನಗಳು ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಹೋರಾಟಕ್ಕೆ ದಲಿತ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಬಲ ನೀಡಿದ್ದವು. ಬಡಜನರಿಗೆ ನಿವೇಶನ ನೀಡದೆ ಸ್ಥಳದಿಂದ ಕದಲುವುದಿಲ್ಲ ಎಂಬ ಧರಣಿನಿತರ ಪಟ್ಟಿಗೆ ಜಿಲ್ಲಾಡಳಿತ ಕೊನೆಗೆ ಸ್ಪಂದಿಸಿದೆ. ಗ್ರಾಮಠಾಣಾದ 30 ಕುಟುಂಬ ಜಮೀನಿನಲ್ಲಿ ನಿವೇಶನ ನೀಡುವ ಆದೇಶ ಪತ್ರವನ್ನು ನೀಡಿದ ನಂತರ ಧರಣಿ ಕೈಬಿಡಲಾಗಿದೆ.

ಧರಣಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಚಾಲನೆ ನೀಡಿದ್ದರು. ದೇಶದ ಪ್ರತಿಯೊಬ್ಬ ಬಸವರಿಗೆ  ಕೂಡ ವಸತಿ ಕಲ್ಪಿಸುವುದ ಸರ್ಕಾರ ಜವಾಬ್ದಾರಿ. ಬಡವರು ಗೌರವಯುತವಾಗಿ ಬದಕಲು ಸರ್ಕಾರ ಅವಕಾಶ ಮಾಡಿಕೊಡಬೇಕು. ವಸತಿ ಮತ್ತು ಭೂಮಿಯಿಂದ ಯಾರನ್ನೂ ವಂಚಿಸಬಾರದು ಎಂದು ತಾಕೀತು ಮಾಡಿ ಹೋಗಿದ್ದರು. ಆನಂತರ ಜಿಲ್ಲಾಧಿಕಾರಿಗಳು ಎರಡು ಬಾರಿ ಧರಣಿನಿರತರಲ್ಲಿಗೆ ಆಗಮಿಸಿ ನಿವೇಶನ ನೀಡಲು ಕ್ರಮ ಕೈಗೊಳ್ಳುತ್ತೇನೆ. ಧರಣಿ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಧರಣಿನಿರತರು ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಈ ನಡುವೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಿತಿಯ ಮಾರ್ಗದರ್ಶಕರಾದ ಎಚ್.ಎಸ್. ದೊರೆ ಸ್ವಾಮಿ ಅವರನ್ನು ಭೇಟಿಯಾಗಿ ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಿ ಬಂದರು. ಯಾವುದೇ ಕಾರಣಕ್ಕೂ ಸೂಕ್ತ ಪರಿಹಾರ ಕಾಣದೆ ಧರಣಿ ಕೈಬಿಡಬಾರದು ಎಂದು ಸೂಚಿಸಿದರು. ಅವರ ಮಾರ್ಗದರ್ಶನದಂತೆ ಧರಣಿ ಮುಂದುವರಿಸಲಾಯಿತು. ಧರಣಿಗೆ ಬೇರೆ ಬೇರೆ ಸಂಘಟನೆಗಳು ಬೆಂಬಲ ನಿಡಿದರು.

ಸರ್ಕಾರದ ವಿರುದ್ದ ಪದಗಳನ್ನು ಕಟ್ಟಿ ಹಾಡುವುದು ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಧರಣಿಯನ್ನು ವಿಭಿನ್ನವಾಗಿ ನಡೆಸಿದರು. ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ತಮಟೆ ಚಳವಳಿ ಮಾಡಿದರು. ಪತ್ರಚಳವಳಿ ಕೈಗೊಂಡರು. ಆದರೂ ಜಿಲ್ಲಾಡಳಿತದ ಕಿವಿಗೆ ಬಡವರ ಕೂಗು ಮುಟ್ಟಲೇ ಇಲ್ಲ. ಧರಣಿ ಕೈಬಿಡಬಹುದೆಂಬ ಅಧಿಕಾರಿಗಳ ನಿರೀಕ್ಷೆ ಹುಸಿಯಾಯಿತು.

ಜಿಲ್ಲಾಧಿಕಾರಿಗಳು ಬ್ಯಾಲ್ಯಗ್ರಾಮದಿಂದ ಮೂರು ಕಿಲೋ ಮೀಟರ್ ದೂರದಲ್ಲಿ 4 ಎಕರೆ ಭೂಮಿ ನೀಡಿರುವುದಾಗಿ ಪತ್ರಿಕೆಗಳ ಮೂಲಕ ಪ್ರಕಟಿಸಿದರು. ಇದಕ್ಕೂ ಹೋರಾಟ ಸಮಿತಿ ಬಗ್ಗಲಿಲ್ಲ. ಜಿಲ್ಲಾಧಿಕಾರಿಗಳು ಸೂಚಿಸಿದ ಪ್ರದೇಶ ತಗ್ಗುದಿಬ್ಬಗಳಿಂದ ಕೂಡಿತ್ತು. ಗುಡ್ಡದ ಸಮೀಪ ತೋರಿಸಿದ್ದ ಭೂಮಿಯಲ್ಲಿ ಪೊದೆಗಳು ಬೆಳೆದಿದ್ವು. ಅಲ್ಲಿ ಚರತೆ ಮತ್ತು ಕರಡಿಗಳ ಕಾಟ ಅಧಿಕವಿತ್ತು ಎಂಬುದನ್ನು ಹೋರಾಟ ಸಮಿತಿ ಅಧಿಕಾರಿಗಳ ಗಮನ ಸೆಳೆಯಿತು. ಧರಣಿ ನಡೆಸುತ್ತಿದ್ದವರು ಎಷ್ಟೇ ಕಷ್ಟವಿದ್ದರೂ ಪಟ್ಟನ್ನು ಮಾತ್ರ ಸಡಿಸಲೇ ಇಲ್ಲ.

ಕೊನೆಗೂ ಜಿಲ್ಲಾಡಳಿತ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿಯ ಧರಣಿಗೆ ಮಣಿಯಲೇ ಬೇಕಾಯಿತು. 70 ಕುಟುಂಬಗಳ ಸಮಸ್ಯೆ ಗಂಭೀರ ಸ್ವರೂಪದ್ದು ಎಂಬುದನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಹೋರಾಟ ಸಮಿತಿ ಯಶಸ್ವಿಯಾಯಿತು. ಪರಿಣಾಮ ಬ್ಯಾಲ್ಯ ಗ್ರಾಮದ ಗ್ರಾಮಠಾಣದಲ್ಲೇ ಇರುವ ಭೂಮಿಯಲ್ಲಿ ನಿವೇಶನಗಳನ್ನು ನೀಡಲು ಒಪ್ಪಿಕೊಂಡಿತು.

ಬ್ಯಾಲ್ಯ ಗ್ರಾಮದ ಗ್ರಾಮಠಾಣ ಜಾಗದಲ್ಲೇ 30 ಕುಂಟೆ ಜಾಗವನ್ನು ಗುರುತಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲು ಪತ್ರ ಮುಖೇನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ. ಈ ಸಂಬಂಧ ಇದರ ಪ್ರತಿಯನ್ನು  ನಮಗೆ ನೀಡಿದೆ. ನಮಗೆ ಇದರಿಂದ ತೃಪ್ತಿಯಾಗಿದೆ. ಈಗ ನೀಡಿರುವ ಜಾಗದಲ್ಲಿ ಕನಿಷ್ಠ 25 ರಿಂದ 30 ನಿವೇಶನಗಳು ವಿಂಗಡಣೆಯಾಗಲಿವೆ. ಈಗ ತುರ್ತು ಇರುವವರಿಗೆ ನೀವೇಶ ನೀಡುವುದು. 20830 ಅಡಿ ನಿವೇಶ ನೀಡಿದರೆ ಅನುಕೂಲವಾಗುತ್ತದೆ. ಇನ್ನುಳಿದವರಿಗೂ ನಿವೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಜಾಗ ನೋಡಲು ತಿಳಿಸಿದ್ದು, ಮಾರಾಟ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ.  ಅದಕ್ಕೆ ಅವರೂ ಒಪ್ಪಿಕೊಂಡಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡ ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

ಧರಣಿ ಸ್ಥಳಕ್ಕೆ ಬಮದು ನಮ್ಮ ಮನವಿಗೆ ಸ್ಪಂದಿಸಿದ ಅಪರ  ಜಿಲ್ಲಾಧಿಕಾರಿ ಚನ್ನಬಸಪ್ಪ,,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದೇಶ್, ಮಧುಗಿರಿ ತಹಸಿಲ್ದಾರ್ ನಂದೀಶ್ ,ಜೆಸಿಬಿ ವೆಂಕಟೇಶ್,ಟಿ.ಸಿ.ರಾಮಯ್ಯ,ಭರತ್ ಕುಮಾರ್,ಮೋಹನ್ ಕುಮಾರ್,ಯೋಗೀಶ್ ಮೆಳೆಕಲ್ಲಹಳ್ಳಿ,ರಾಮಮೂರ್ತಿ,ಶಿವರಾಜು ಕರ್ನಾಟಕ ರಾಷ್ಟ್ರ ಸಮಿತಿ ಮಲ್ಲಿಕಾರ್ಜುನ್,ತಿಮ್ಮಯ್ಯ ಮೊದಲಾದವರ ಸಮ್ಮುಖದಲ್ಲಿ ಪತ್ರ ನೀಡಿದ ಬಳಿಕ ಧರಣಿ ಹಿಂತೆಗೆದುಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ವಸತಿ ಮತ್ತು ಭೂಮಿ ವಂಚಿತರು ಸಾಕಷ್ಟು ಮಂದಿ ಇದ್ದಾರೆ. ಎಲ್ಲರಿಗೂ ವಸತಿ ದೊರೆಯಬೇಕು.  ಸಾಮಾಜಿಕ ನ್ಯಾಯ ದೊರೆತರೆ ಅನುಕೂಲವಾಗುತ್ತದೆ. ಜಾತಿ, ಮತ, ಲಿಂಗ, ಧರ್ಮಗಳನ್ನು ಮೀರಿ ನಮ್ಮ ಹೋರಾಟ ಮುಂದುವರಿಯುತ್ತದೆ. ಗುಡಿಸಲಲ್ಲಿ ವಾಸಿಸುವವರಿಗು ಮನೆ ದೊರೆಯಬೇಕು. ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ವಸತಿ ಇಲ್ಲದವರು ಇದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರ ಅವರಿಗೂ ನ್ಯಾಯ ಕೊಡಬೇಕು. ಎಲ್ಲ ಕುಟುಂಬಗಳು ನೆಮ್ಮದಿಯಿಂದ ಬದುಕಬೇಕೆಂಬುದೇ ನಮ್ಮ ಉದ್ದೇಶ. ಧರಣಿಯನ್ನು ಬೆಂಬಲಿಸಿದ ಮುಖಂಡರು ಹಾಗೂ ಸುದ್ಧಿ ಮಾಧ್ಯಮಗಳಿಗೆ ಧನ್ಯವಾದಗಳನ್ನು ತಿಳಿಸುವುದನ್ನು ನಾಗಭೂಷಣ್ ಮರೆಯಲಿಲ್ಲ.

ಅಂತೂ ಧರಣಿ ಮುಕ್ತಾಯವಾಧರೂ ನಿವೇಶನ ಮತ್ತು ಭೂಮಿ ವಂಚಿತರಿಗೆ ನ್ಯಾಯ ದೊರೆಯಲಿ ಎಂಬುದು ಪತ್ರಿಕೆಯ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...