Homeಕರ್ನಾಟಕಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

ಮಧುಗಿರಿ : ಭೂಮಿ ವಸತಿ ವಂಚಿತರ ಹೋರಾಟಕ್ಕೆ ಕಡೆಗೂ ಜಯ

- Advertisement -
- Advertisement -

ಜಿಲ್ಲಾಡಳಿತ ಮಧುಗಿರಿ ತಾಲೂಕು ಬ್ಯಾಲ್ಯ ಗ್ರಾಮಠಾಣದಲ್ಲೇ ವಸತಿ ವಂಚಿತರಿಗೆ ನಿವೇಶನ ಕೊಡುವ ಪತ್ರ ನೀಡಿದ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು 14 ದಿನಗಳ ನಂತರ ವಾಪಸ್ ಪಡೆದಿದೆ. ಸ್ಥಳದಲ್ಲೇ ಅಡುಗೆ ಮಾಡಿಕೊಂಡು ಧರಣಿ ಕುಳಿತಿದ್ದ ಹೋರಾಟ ಸಮಿತಿಗೆ ಕೊನೆಗೂ ಹೋರಾಟಕ್ಕೆ ಜಯ ದೊರೆತಿರುವುದು ಸಂತಸಕ್ಕೆ ಕಾರಣವಾಗಿದೆ.

ಮಧುಗಿರಿ ತಾಲೂಕಿ ಬ್ಯಾಲ್ಯದ 70 ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡುವಂತೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ನಿರಂತರ 14 ದಿನಗಳು ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿತ್ತು. ಹೋರಾಟಕ್ಕೆ ದಲಿತ ಸಂಘಟನೆಗಳು ಮತ್ತು ಜನಪರ ಸಂಘಟನೆಗಳು ಬೆಂಬಲ ನೀಡಿದ್ದವು. ಬಡಜನರಿಗೆ ನಿವೇಶನ ನೀಡದೆ ಸ್ಥಳದಿಂದ ಕದಲುವುದಿಲ್ಲ ಎಂಬ ಧರಣಿನಿತರ ಪಟ್ಟಿಗೆ ಜಿಲ್ಲಾಡಳಿತ ಕೊನೆಗೆ ಸ್ಪಂದಿಸಿದೆ. ಗ್ರಾಮಠಾಣಾದ 30 ಕುಟುಂಬ ಜಮೀನಿನಲ್ಲಿ ನಿವೇಶನ ನೀಡುವ ಆದೇಶ ಪತ್ರವನ್ನು ನೀಡಿದ ನಂತರ ಧರಣಿ ಕೈಬಿಡಲಾಗಿದೆ.

ಧರಣಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಚಾಲನೆ ನೀಡಿದ್ದರು. ದೇಶದ ಪ್ರತಿಯೊಬ್ಬ ಬಸವರಿಗೆ  ಕೂಡ ವಸತಿ ಕಲ್ಪಿಸುವುದ ಸರ್ಕಾರ ಜವಾಬ್ದಾರಿ. ಬಡವರು ಗೌರವಯುತವಾಗಿ ಬದಕಲು ಸರ್ಕಾರ ಅವಕಾಶ ಮಾಡಿಕೊಡಬೇಕು. ವಸತಿ ಮತ್ತು ಭೂಮಿಯಿಂದ ಯಾರನ್ನೂ ವಂಚಿಸಬಾರದು ಎಂದು ತಾಕೀತು ಮಾಡಿ ಹೋಗಿದ್ದರು. ಆನಂತರ ಜಿಲ್ಲಾಧಿಕಾರಿಗಳು ಎರಡು ಬಾರಿ ಧರಣಿನಿರತರಲ್ಲಿಗೆ ಆಗಮಿಸಿ ನಿವೇಶನ ನೀಡಲು ಕ್ರಮ ಕೈಗೊಳ್ಳುತ್ತೇನೆ. ಧರಣಿ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಧರಣಿನಿರತರು ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದು ಕುಳಿತರು.

ಈ ನಡುವೆ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಿತಿಯ ಮಾರ್ಗದರ್ಶಕರಾದ ಎಚ್.ಎಸ್. ದೊರೆ ಸ್ವಾಮಿ ಅವರನ್ನು ಭೇಟಿಯಾಗಿ ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಿ ಬಂದರು. ಯಾವುದೇ ಕಾರಣಕ್ಕೂ ಸೂಕ್ತ ಪರಿಹಾರ ಕಾಣದೆ ಧರಣಿ ಕೈಬಿಡಬಾರದು ಎಂದು ಸೂಚಿಸಿದರು. ಅವರ ಮಾರ್ಗದರ್ಶನದಂತೆ ಧರಣಿ ಮುಂದುವರಿಸಲಾಯಿತು. ಧರಣಿಗೆ ಬೇರೆ ಬೇರೆ ಸಂಘಟನೆಗಳು ಬೆಂಬಲ ನಿಡಿದರು.

ಸರ್ಕಾರದ ವಿರುದ್ದ ಪದಗಳನ್ನು ಕಟ್ಟಿ ಹಾಡುವುದು ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಧರಣಿಯನ್ನು ವಿಭಿನ್ನವಾಗಿ ನಡೆಸಿದರು. ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ತಮಟೆ ಚಳವಳಿ ಮಾಡಿದರು. ಪತ್ರಚಳವಳಿ ಕೈಗೊಂಡರು. ಆದರೂ ಜಿಲ್ಲಾಡಳಿತದ ಕಿವಿಗೆ ಬಡವರ ಕೂಗು ಮುಟ್ಟಲೇ ಇಲ್ಲ. ಧರಣಿ ಕೈಬಿಡಬಹುದೆಂಬ ಅಧಿಕಾರಿಗಳ ನಿರೀಕ್ಷೆ ಹುಸಿಯಾಯಿತು.

ಜಿಲ್ಲಾಧಿಕಾರಿಗಳು ಬ್ಯಾಲ್ಯಗ್ರಾಮದಿಂದ ಮೂರು ಕಿಲೋ ಮೀಟರ್ ದೂರದಲ್ಲಿ 4 ಎಕರೆ ಭೂಮಿ ನೀಡಿರುವುದಾಗಿ ಪತ್ರಿಕೆಗಳ ಮೂಲಕ ಪ್ರಕಟಿಸಿದರು. ಇದಕ್ಕೂ ಹೋರಾಟ ಸಮಿತಿ ಬಗ್ಗಲಿಲ್ಲ. ಜಿಲ್ಲಾಧಿಕಾರಿಗಳು ಸೂಚಿಸಿದ ಪ್ರದೇಶ ತಗ್ಗುದಿಬ್ಬಗಳಿಂದ ಕೂಡಿತ್ತು. ಗುಡ್ಡದ ಸಮೀಪ ತೋರಿಸಿದ್ದ ಭೂಮಿಯಲ್ಲಿ ಪೊದೆಗಳು ಬೆಳೆದಿದ್ವು. ಅಲ್ಲಿ ಚರತೆ ಮತ್ತು ಕರಡಿಗಳ ಕಾಟ ಅಧಿಕವಿತ್ತು ಎಂಬುದನ್ನು ಹೋರಾಟ ಸಮಿತಿ ಅಧಿಕಾರಿಗಳ ಗಮನ ಸೆಳೆಯಿತು. ಧರಣಿ ನಡೆಸುತ್ತಿದ್ದವರು ಎಷ್ಟೇ ಕಷ್ಟವಿದ್ದರೂ ಪಟ್ಟನ್ನು ಮಾತ್ರ ಸಡಿಸಲೇ ಇಲ್ಲ.

ಕೊನೆಗೂ ಜಿಲ್ಲಾಡಳಿತ ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿಯ ಧರಣಿಗೆ ಮಣಿಯಲೇ ಬೇಕಾಯಿತು. 70 ಕುಟುಂಬಗಳ ಸಮಸ್ಯೆ ಗಂಭೀರ ಸ್ವರೂಪದ್ದು ಎಂಬುದನ್ನು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಹೋರಾಟ ಸಮಿತಿ ಯಶಸ್ವಿಯಾಯಿತು. ಪರಿಣಾಮ ಬ್ಯಾಲ್ಯ ಗ್ರಾಮದ ಗ್ರಾಮಠಾಣದಲ್ಲೇ ಇರುವ ಭೂಮಿಯಲ್ಲಿ ನಿವೇಶನಗಳನ್ನು ನೀಡಲು ಒಪ್ಪಿಕೊಂಡಿತು.

ಬ್ಯಾಲ್ಯ ಗ್ರಾಮದ ಗ್ರಾಮಠಾಣ ಜಾಗದಲ್ಲೇ 30 ಕುಂಟೆ ಜಾಗವನ್ನು ಗುರುತಿಸಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಕ್ರಮವಹಿಸಲು ಪತ್ರ ಮುಖೇನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದೆ. ಈ ಸಂಬಂಧ ಇದರ ಪ್ರತಿಯನ್ನು  ನಮಗೆ ನೀಡಿದೆ. ನಮಗೆ ಇದರಿಂದ ತೃಪ್ತಿಯಾಗಿದೆ. ಈಗ ನೀಡಿರುವ ಜಾಗದಲ್ಲಿ ಕನಿಷ್ಠ 25 ರಿಂದ 30 ನಿವೇಶನಗಳು ವಿಂಗಡಣೆಯಾಗಲಿವೆ. ಈಗ ತುರ್ತು ಇರುವವರಿಗೆ ನೀವೇಶ ನೀಡುವುದು. 20830 ಅಡಿ ನಿವೇಶ ನೀಡಿದರೆ ಅನುಕೂಲವಾಗುತ್ತದೆ. ಇನ್ನುಳಿದವರಿಗೂ ನಿವೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ. ಜಾಗ ನೋಡಲು ತಿಳಿಸಿದ್ದು, ಮಾರಾಟ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ.  ಅದಕ್ಕೆ ಅವರೂ ಒಪ್ಪಿಕೊಂಡಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡ ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

ಧರಣಿ ಸ್ಥಳಕ್ಕೆ ಬಮದು ನಮ್ಮ ಮನವಿಗೆ ಸ್ಪಂದಿಸಿದ ಅಪರ  ಜಿಲ್ಲಾಧಿಕಾರಿ ಚನ್ನಬಸಪ್ಪ,,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದೇಶ್, ಮಧುಗಿರಿ ತಹಸಿಲ್ದಾರ್ ನಂದೀಶ್ ,ಜೆಸಿಬಿ ವೆಂಕಟೇಶ್,ಟಿ.ಸಿ.ರಾಮಯ್ಯ,ಭರತ್ ಕುಮಾರ್,ಮೋಹನ್ ಕುಮಾರ್,ಯೋಗೀಶ್ ಮೆಳೆಕಲ್ಲಹಳ್ಳಿ,ರಾಮಮೂರ್ತಿ,ಶಿವರಾಜು ಕರ್ನಾಟಕ ರಾಷ್ಟ್ರ ಸಮಿತಿ ಮಲ್ಲಿಕಾರ್ಜುನ್,ತಿಮ್ಮಯ್ಯ ಮೊದಲಾದವರ ಸಮ್ಮುಖದಲ್ಲಿ ಪತ್ರ ನೀಡಿದ ಬಳಿಕ ಧರಣಿ ಹಿಂತೆಗೆದುಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ವಸತಿ ಮತ್ತು ಭೂಮಿ ವಂಚಿತರು ಸಾಕಷ್ಟು ಮಂದಿ ಇದ್ದಾರೆ. ಎಲ್ಲರಿಗೂ ವಸತಿ ದೊರೆಯಬೇಕು.  ಸಾಮಾಜಿಕ ನ್ಯಾಯ ದೊರೆತರೆ ಅನುಕೂಲವಾಗುತ್ತದೆ. ಜಾತಿ, ಮತ, ಲಿಂಗ, ಧರ್ಮಗಳನ್ನು ಮೀರಿ ನಮ್ಮ ಹೋರಾಟ ಮುಂದುವರಿಯುತ್ತದೆ. ಗುಡಿಸಲಲ್ಲಿ ವಾಸಿಸುವವರಿಗು ಮನೆ ದೊರೆಯಬೇಕು. ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ವಸತಿ ಇಲ್ಲದವರು ಇದ್ದಾರೆ. ಜಿಲ್ಲಾಡಳಿತ ಮತ್ತು ಸರ್ಕಾರ ಅವರಿಗೂ ನ್ಯಾಯ ಕೊಡಬೇಕು. ಎಲ್ಲ ಕುಟುಂಬಗಳು ನೆಮ್ಮದಿಯಿಂದ ಬದುಕಬೇಕೆಂಬುದೇ ನಮ್ಮ ಉದ್ದೇಶ. ಧರಣಿಯನ್ನು ಬೆಂಬಲಿಸಿದ ಮುಖಂಡರು ಹಾಗೂ ಸುದ್ಧಿ ಮಾಧ್ಯಮಗಳಿಗೆ ಧನ್ಯವಾದಗಳನ್ನು ತಿಳಿಸುವುದನ್ನು ನಾಗಭೂಷಣ್ ಮರೆಯಲಿಲ್ಲ.

ಅಂತೂ ಧರಣಿ ಮುಕ್ತಾಯವಾಧರೂ ನಿವೇಶನ ಮತ್ತು ಭೂಮಿ ವಂಚಿತರಿಗೆ ನ್ಯಾಯ ದೊರೆಯಲಿ ಎಂಬುದು ಪತ್ರಿಕೆಯ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...