Homeಕರ್ನಾಟಕಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

ಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಒಂದು ಕಡೆ ಗಣಿಗಾರಿಕೆ ನಡೆಸಲು ಸಮೃದ್ಧ ಜಮೀನನ್ನು ಅರ್ಪಿಸುವುದು. ಸುಂದರ ಕಾಡು ಕಡಿದು ಅಭಿವೃದ್ದಿ ಎನ್ನುವುದು. ಮರ ಉರುಳಿಸಿ ರಸ್ತೆ ಮಾಡುವುದು. ಕೊನೆಗೆ ಮಳೆ ಬರುತ್ತಿಲ್ಲ ಹಾಗಾಗಿ ಸಕಾಲದಲ್ಲಿ ಮಳೆ ಬರಲೆಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಸುತ್ತೋಲೆ ಹೊರಡಿಸುವುದು. ಡೌಟೇ ಬೇಡ ಈ ಸರ್ಕಾರಕ್ಕೆ ಸಂಪೂರ್ಣ ತೆಲೆಕೆಟ್ಟು ಹೋಗಿದೆ.

ಮೇ 31ರಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬೆಳೆಯಾಗದೇ, ರಾಜ್ಯದ ಜನತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಹಾಗಾಗಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಮೇ 6 ರಂದು ಬ್ರಾಹ್ಮೀ ಮೂಹೂರ್ತದೊಂದಿಗೆ ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಿದೆ. 10,001/- ರೂಗಳು ವೆಚ್ಚ ಮೀರದಂತೆ ಆಯಾಯಾ ದೇವಾಲಯಗಳ ನಿಧಿಯಿಂದ ಭರಿಸಲು ಅನುಮತಿ ಸಹ ನೀಡಿದೆ

ದೇವರು ಧರ್ಮಗಳನ್ನು ನಂಬುವು ಮತ್ತು ಪಾಲಿಸುವ, ಪೂಜಿಸುವ ಹಕ್ಕನ್ನು ನಮ್ಮ ಸಂವಿಧಾನ ಎಲ್ಲರಿಗೂ ನೀಡಿದೆ. ಆದರೆ ಅದು ಖಾಸಗಿ ಹಕ್ಕಾಗಿದ್ದು ಖಾಸಗಿ ಸ್ಥಳಗಳಲ್ಲಿ ಯಾರು ಎಷ್ಟು ಬೇಕಾದರೂ ಹೋಮ ಪೂಜೆ ಮಾಡಿದರೆ ನಮಗೇನು ತೊಂದರೆಯಿಲ್ಲ. ಆದರೆ ಚುನಾಯಿತ ಸರ್ಕಾರವೊಂದು, ಸರ್ಕಾರಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಈ ರೀತಿಯ ಆಚರಣೆ ಮಾಡಲು ಆದೇಶ ನೀಡಿರುವುದು ಎಲ್ಲಾ ವಿಧಗಳಿಂದಲೂ ಒಪ್ಪುವಂತಹದಲ್ಲ. ಇದು ಮೌಡ್ಯದ ಪರಮಾವಧಿ ಮಾತ್ರವಲ್ಲ ಇದರಿಂದ ಮಳೆ ಬರದಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ಮರೆಮಾಚಿ ಜನರನ್ನು ದಿಕ್ಕುತಪ್ಪಿಸುವ ಹುನ್ನಾರವೂ ಇದರಿಂದ ಅಡಗಿದೆ.

ಜನರು ಹಲವು ಊರಿನಲ್ಲಿ ಅವರ ನಂಬಿಕೆಗನುಗುಣವಾಗಿ ಈ ರೀತಿ ಮಳೆಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಹೆಚ್ಚು ಖರ್ಚಿಲ್ಲದೇ ತಮಗೆ ಗೊತ್ತಿರುವ ವಿಧಾನಗಳಲ್ಲಿ ಅವರು ಪೂಜೆ ಮಾಡುತ್ತಾರೆ. ಹೀಗಿರುವಾಗ ಮತ್ತೆ ಸರ್ಕಾರ ದೊಡ್ಡ ಮಟ್ಟದಲ್ಲಿ ಈ ರೀತಿ ಪೂಜೆಗೆ ಆದೇಶ ನೀಡುವುದು ಸರಿಯಲ್ಲ. ಅದೇ ಹಣದಿಂದ ಕೆರೆ ಹೂಳೆತ್ತಲು ಬಳಸಿದರೆ ಒಂದಷ್ಟು ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂಬ ಸಾಮಾನ್ಯ ಜ್ಞಾನವೂ ನಮ್ಮ ಸರ್ಕಾರಕ್ಕಿಲ್ಲ.

ಇಷ್ಟೆಲ್ಲಾ ಅವಾಂತರುಗಳು ನಡೆಯುತ್ತಿದ್ದರೆ ಅದರ ಬಗ್ಗೆ ವಿರೋಧ ಪಕ್ಷ ಚಕಾರವನ್ನೇನು ಎತ್ತಿಲ್ಲ. ಅವರಿಗೆ ಸದಾ ಸರ್ಕಾರ ಬೀಳಿಸುವ ಚಿಂತೆ ಬಿಟ್ಟರೆ ಮತ್ತೇನಿಲ್ಲ. ಇದರಿಂದ ನಲುಗುವವರು ಮತ್ತೆ ಬಡವರು, ರೈತರೇ ಆಗಿರುವುದು ದೊಡ್ಡ ದುರಂತ.

ಹೌದು ಇಂದು ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಆಗುತ್ತಿಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಮುಖಕ್ಕೆ ಹೊಡೆದಂತೆ ರಾಚುತ್ತಿವೆ. ಕಾಡುಗಳ ನಾಶ, ಮಿತಿ ಮೀರಿದ ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯ ಕಾರಣದಿಂದ ಮಳೆಯಾಗುತ್ತಿಲ್ಲ. ಇದಕ್ಕೆ ಪರಿಹಾರಗಳು ಸಹ ಅಲ್ಲೆ ಇವೆ. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದು, ಕಾಡುಗಳನ್ನು ಸಂರಕ್ಷಿಸುವುದು, ಮಾಲಿನ್ಯ ಉಂಟು ಮಾಡುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕಡಿವಾಣ ಹಾಕುವುದು, ನೀರಿನ ಮಿತ ಬಳಕೆ ಮತ್ತು ಜಲಸಂರಕ್ಷಣೆಯ ಪಾಠಗಳನ್ನು ಜಾರಿಗೊಳಿಸುವುದು, ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಇತ್ಯಾದಿ

ಈ ಮೇಲಿನ ವಿಧಾನಗಳನ್ನು ಜಾರಿಗೊಳಿಸುವ ಹೊಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದರೂ ಅದರ ಪ್ರಧಾನ ಜವಾಬ್ದಾರಿ ಸರ್ಕಾರದ್ದೆ. ಒಂದು ಕಡೆ ದೊಡ್ಡ ಬಂಡವಾಳಶಾಹಿಗಳು ಮಿತಿಮೀರಿದ ಪರಿಸರ ನಾಶ ಮಾಡುತ್ತಿದ್ದರೆ ಅವರಿಗೆ ಕಡಿವಾಣ ಹಾಕುವ ಬದಲು ಸರ್ಕಾರ ಅವರಿಗೆ ತೆರಿಗೆ ವಿನಾಯಿತಿ, ಹೆಚ್ಚಿನ ಸಾಲ ಸೌಲಭ್ಯ, ಕಡಿಮೆ ಬೆಲೆಗೆ ಭೂಮಿ, ನೀರು ಮತ್ತು ವಿದ್ಯುತ್ ನೀಡಿ ಮತ್ತಷ್ಟು ಕೊಬ್ಬಿಸುತ್ತಿದೆ. ನಮ್ಮ ನಾಡಿನ ಜೀವನಾಡಿಯಾದ ಪಶ್ಚಿಮ ಘಟ್ಟಗಳು ದಿನೇ ದಿನೇ ಬರಿದಾಗುತ್ತಿದೆ. ಇದನ್ನು ತಡೆಗಟ್ಟಬೇಕಾದ ಸರ್ಕಾರ ಪೂಜೆ ಮಾಡಿ ಮಳೆ ತರಲು ಮುಂದಾಗಿರುವುದು ನಮ್ಮೆಲ್ಲರ ದುರಂತವಾಗಿದೆ.

ಅಂದ ಮಾತ್ರಕ್ಕೆ ನಾವು ರಸ್ತೆ ಕಟ್ಟುವುದರ, ದೊಡ್ಡ ಬಿಲ್ಡಿಂಗ್ ಕಟ್ಟುವುದನ್ನು, ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದೇವೆ ಅಂತ ಅಲ್ಲ. ಬದಲಿಗೆ ಆ ಅಭಿವೃದ್ಧಿ ಜನಕ್ಕೆ, ಪರಿಸರಕ್ಕೆ ಧಕ್ಕೆ ತರುವಂತೆ ಇರಬಾರದು. ಪರಿಸರ ಸ್ನೇಹಿ ಅಭಿವೃದ್ದಿ ಮಾದರಿಯನ್ನು ಬೆಂಬಲಿಸಬೇಕು..

ಇನ್ನೊಂದು ಕಡೆ ಮಳೆಗಾಗಿ ಮೋಡ ಬಿತ್ತನೆ ಮಾಡಲು 91ಕೋಟಿ ರೂಗಳ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೋಡ ಬಿತ್ತನೆ ಎಂಬುದು ಬರಗಾಲದಲ್ಲಿಯೂ ಒಂದಷ್ಟು ದುಡ್ಡು ಮಾಡಿಕೊಳ್ಳಲು ಸಚಿವರಿಗೆ, ಅಧಿಕಾರಿಗಳಿಗೆ ಇನ್ನೊಂದು ಮಾರ್ಗವೇ ಹೊರತು ಈ ಮೋಡ ಬಿತ್ತನೆಯಿಂದ ಮಳೆ ಬಂದ ಉದಾಹರಣೆ ಮಾತ್ರ ಇಲ್ಲ.

ಹೆಸರಾಂತ ಪತ್ರಕರ್ತ ಪಿ ಸಾಯಿನಾಥ್‍ರವರು ‘ಬರ ಅಂದ್ರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕ ಬರೆದು ದುರಂತಗಳನ್ನು ಎಳೆ ಎಳೆಯಾಗಿ ವಿವರಿಸಿದ್ದರು. ಆದರೇನು ಮಾಡುವುದು ಬಹುಶಃ ಹೀಗಿನ ಸರ್ಕಾರದ ಯಾವೊಬ್ಬರು ಅದನ್ನು ಓದಿರುವುದಿಲ್ಲ. ಅಷ್ಟು ಮಾತ್ರವಲ್ಲ ಪ್ರತಿ ವಾರ ಪರಿಸರ ಉಳಿಸಿಕೊಳ್ಳುವ ಸರಳ ವಿಧಾನಗಳ ಬಗ್ಗೆ ನಮ್ಮ ನಾಗೇಶ್ ಹೆಗಡೆಯವರು ಲೇಖನ, ಪತ್ರ ಬರೆಯುತ್ತಿರುತ್ತಾರೆ. ನಮ್ಮ ದುರಾದೃಷ್ಟವೋ ಎನೋ ಇವರ್ಯಾರು ಅದನ್ನು ಸಹ ಓದಿದಂತೆ ಕಾಣುವುದಿಲ್ಲ. ಓದಿದರೆ ಇಂತಹ ಪ್ಲಾಪ್ ಶೋ ಮಾಡಲು ಮುಂದಾಗುತ್ತಿರಲಿಲ್ಲ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೌಡ್ಯ ನಿಷೇಧ ಕಾಯ್ದೆ ತರಲು ಹೊರಟಾಗ ವಿರೋಧಿಸಿದರು ಇವರೆ ಇರಬೇಕು. ಪಾಪಾ ಅಂತಹ ಸಿದ್ದರಾಮಯ್ಯನವರು ಸಹ ಈಗ ಮೌನವಾಗಿರುವುದು ದುರಂತದ ಮೇಲೆ ದುರಂತ ಎನ್ನಬಹುದು. ಈಗ ಜನರೆ ಎಚ್ಚೆತ್ತುಕೊಂಡು ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಇಂತಹ ಗಿಮಿಕ್ ಮಾಡುವುದು ಬಿಟ್ಟು ಸರಿಯಾಗಿ ಕೆಲಸ ಮಾಡುವಂತೆ ಸರ್ಕಾರನ್ನು ಆಗ್ರಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...