Homeಕರ್ನಾಟಕಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

ಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಒಂದು ಕಡೆ ಗಣಿಗಾರಿಕೆ ನಡೆಸಲು ಸಮೃದ್ಧ ಜಮೀನನ್ನು ಅರ್ಪಿಸುವುದು. ಸುಂದರ ಕಾಡು ಕಡಿದು ಅಭಿವೃದ್ದಿ ಎನ್ನುವುದು. ಮರ ಉರುಳಿಸಿ ರಸ್ತೆ ಮಾಡುವುದು. ಕೊನೆಗೆ ಮಳೆ ಬರುತ್ತಿಲ್ಲ ಹಾಗಾಗಿ ಸಕಾಲದಲ್ಲಿ ಮಳೆ ಬರಲೆಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಸುತ್ತೋಲೆ ಹೊರಡಿಸುವುದು. ಡೌಟೇ ಬೇಡ ಈ ಸರ್ಕಾರಕ್ಕೆ ಸಂಪೂರ್ಣ ತೆಲೆಕೆಟ್ಟು ಹೋಗಿದೆ.

ಮೇ 31ರಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬೆಳೆಯಾಗದೇ, ರಾಜ್ಯದ ಜನತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಹಾಗಾಗಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಮೇ 6 ರಂದು ಬ್ರಾಹ್ಮೀ ಮೂಹೂರ್ತದೊಂದಿಗೆ ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಿದೆ. 10,001/- ರೂಗಳು ವೆಚ್ಚ ಮೀರದಂತೆ ಆಯಾಯಾ ದೇವಾಲಯಗಳ ನಿಧಿಯಿಂದ ಭರಿಸಲು ಅನುಮತಿ ಸಹ ನೀಡಿದೆ

ದೇವರು ಧರ್ಮಗಳನ್ನು ನಂಬುವು ಮತ್ತು ಪಾಲಿಸುವ, ಪೂಜಿಸುವ ಹಕ್ಕನ್ನು ನಮ್ಮ ಸಂವಿಧಾನ ಎಲ್ಲರಿಗೂ ನೀಡಿದೆ. ಆದರೆ ಅದು ಖಾಸಗಿ ಹಕ್ಕಾಗಿದ್ದು ಖಾಸಗಿ ಸ್ಥಳಗಳಲ್ಲಿ ಯಾರು ಎಷ್ಟು ಬೇಕಾದರೂ ಹೋಮ ಪೂಜೆ ಮಾಡಿದರೆ ನಮಗೇನು ತೊಂದರೆಯಿಲ್ಲ. ಆದರೆ ಚುನಾಯಿತ ಸರ್ಕಾರವೊಂದು, ಸರ್ಕಾರಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಈ ರೀತಿಯ ಆಚರಣೆ ಮಾಡಲು ಆದೇಶ ನೀಡಿರುವುದು ಎಲ್ಲಾ ವಿಧಗಳಿಂದಲೂ ಒಪ್ಪುವಂತಹದಲ್ಲ. ಇದು ಮೌಡ್ಯದ ಪರಮಾವಧಿ ಮಾತ್ರವಲ್ಲ ಇದರಿಂದ ಮಳೆ ಬರದಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ಮರೆಮಾಚಿ ಜನರನ್ನು ದಿಕ್ಕುತಪ್ಪಿಸುವ ಹುನ್ನಾರವೂ ಇದರಿಂದ ಅಡಗಿದೆ.

ಜನರು ಹಲವು ಊರಿನಲ್ಲಿ ಅವರ ನಂಬಿಕೆಗನುಗುಣವಾಗಿ ಈ ರೀತಿ ಮಳೆಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಹೆಚ್ಚು ಖರ್ಚಿಲ್ಲದೇ ತಮಗೆ ಗೊತ್ತಿರುವ ವಿಧಾನಗಳಲ್ಲಿ ಅವರು ಪೂಜೆ ಮಾಡುತ್ತಾರೆ. ಹೀಗಿರುವಾಗ ಮತ್ತೆ ಸರ್ಕಾರ ದೊಡ್ಡ ಮಟ್ಟದಲ್ಲಿ ಈ ರೀತಿ ಪೂಜೆಗೆ ಆದೇಶ ನೀಡುವುದು ಸರಿಯಲ್ಲ. ಅದೇ ಹಣದಿಂದ ಕೆರೆ ಹೂಳೆತ್ತಲು ಬಳಸಿದರೆ ಒಂದಷ್ಟು ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂಬ ಸಾಮಾನ್ಯ ಜ್ಞಾನವೂ ನಮ್ಮ ಸರ್ಕಾರಕ್ಕಿಲ್ಲ.

ಇಷ್ಟೆಲ್ಲಾ ಅವಾಂತರುಗಳು ನಡೆಯುತ್ತಿದ್ದರೆ ಅದರ ಬಗ್ಗೆ ವಿರೋಧ ಪಕ್ಷ ಚಕಾರವನ್ನೇನು ಎತ್ತಿಲ್ಲ. ಅವರಿಗೆ ಸದಾ ಸರ್ಕಾರ ಬೀಳಿಸುವ ಚಿಂತೆ ಬಿಟ್ಟರೆ ಮತ್ತೇನಿಲ್ಲ. ಇದರಿಂದ ನಲುಗುವವರು ಮತ್ತೆ ಬಡವರು, ರೈತರೇ ಆಗಿರುವುದು ದೊಡ್ಡ ದುರಂತ.

ಹೌದು ಇಂದು ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಆಗುತ್ತಿಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಮುಖಕ್ಕೆ ಹೊಡೆದಂತೆ ರಾಚುತ್ತಿವೆ. ಕಾಡುಗಳ ನಾಶ, ಮಿತಿ ಮೀರಿದ ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯ ಕಾರಣದಿಂದ ಮಳೆಯಾಗುತ್ತಿಲ್ಲ. ಇದಕ್ಕೆ ಪರಿಹಾರಗಳು ಸಹ ಅಲ್ಲೆ ಇವೆ. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದು, ಕಾಡುಗಳನ್ನು ಸಂರಕ್ಷಿಸುವುದು, ಮಾಲಿನ್ಯ ಉಂಟು ಮಾಡುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕಡಿವಾಣ ಹಾಕುವುದು, ನೀರಿನ ಮಿತ ಬಳಕೆ ಮತ್ತು ಜಲಸಂರಕ್ಷಣೆಯ ಪಾಠಗಳನ್ನು ಜಾರಿಗೊಳಿಸುವುದು, ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಇತ್ಯಾದಿ

ಈ ಮೇಲಿನ ವಿಧಾನಗಳನ್ನು ಜಾರಿಗೊಳಿಸುವ ಹೊಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದರೂ ಅದರ ಪ್ರಧಾನ ಜವಾಬ್ದಾರಿ ಸರ್ಕಾರದ್ದೆ. ಒಂದು ಕಡೆ ದೊಡ್ಡ ಬಂಡವಾಳಶಾಹಿಗಳು ಮಿತಿಮೀರಿದ ಪರಿಸರ ನಾಶ ಮಾಡುತ್ತಿದ್ದರೆ ಅವರಿಗೆ ಕಡಿವಾಣ ಹಾಕುವ ಬದಲು ಸರ್ಕಾರ ಅವರಿಗೆ ತೆರಿಗೆ ವಿನಾಯಿತಿ, ಹೆಚ್ಚಿನ ಸಾಲ ಸೌಲಭ್ಯ, ಕಡಿಮೆ ಬೆಲೆಗೆ ಭೂಮಿ, ನೀರು ಮತ್ತು ವಿದ್ಯುತ್ ನೀಡಿ ಮತ್ತಷ್ಟು ಕೊಬ್ಬಿಸುತ್ತಿದೆ. ನಮ್ಮ ನಾಡಿನ ಜೀವನಾಡಿಯಾದ ಪಶ್ಚಿಮ ಘಟ್ಟಗಳು ದಿನೇ ದಿನೇ ಬರಿದಾಗುತ್ತಿದೆ. ಇದನ್ನು ತಡೆಗಟ್ಟಬೇಕಾದ ಸರ್ಕಾರ ಪೂಜೆ ಮಾಡಿ ಮಳೆ ತರಲು ಮುಂದಾಗಿರುವುದು ನಮ್ಮೆಲ್ಲರ ದುರಂತವಾಗಿದೆ.

ಅಂದ ಮಾತ್ರಕ್ಕೆ ನಾವು ರಸ್ತೆ ಕಟ್ಟುವುದರ, ದೊಡ್ಡ ಬಿಲ್ಡಿಂಗ್ ಕಟ್ಟುವುದನ್ನು, ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದೇವೆ ಅಂತ ಅಲ್ಲ. ಬದಲಿಗೆ ಆ ಅಭಿವೃದ್ಧಿ ಜನಕ್ಕೆ, ಪರಿಸರಕ್ಕೆ ಧಕ್ಕೆ ತರುವಂತೆ ಇರಬಾರದು. ಪರಿಸರ ಸ್ನೇಹಿ ಅಭಿವೃದ್ದಿ ಮಾದರಿಯನ್ನು ಬೆಂಬಲಿಸಬೇಕು..

ಇನ್ನೊಂದು ಕಡೆ ಮಳೆಗಾಗಿ ಮೋಡ ಬಿತ್ತನೆ ಮಾಡಲು 91ಕೋಟಿ ರೂಗಳ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೋಡ ಬಿತ್ತನೆ ಎಂಬುದು ಬರಗಾಲದಲ್ಲಿಯೂ ಒಂದಷ್ಟು ದುಡ್ಡು ಮಾಡಿಕೊಳ್ಳಲು ಸಚಿವರಿಗೆ, ಅಧಿಕಾರಿಗಳಿಗೆ ಇನ್ನೊಂದು ಮಾರ್ಗವೇ ಹೊರತು ಈ ಮೋಡ ಬಿತ್ತನೆಯಿಂದ ಮಳೆ ಬಂದ ಉದಾಹರಣೆ ಮಾತ್ರ ಇಲ್ಲ.

ಹೆಸರಾಂತ ಪತ್ರಕರ್ತ ಪಿ ಸಾಯಿನಾಥ್‍ರವರು ‘ಬರ ಅಂದ್ರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕ ಬರೆದು ದುರಂತಗಳನ್ನು ಎಳೆ ಎಳೆಯಾಗಿ ವಿವರಿಸಿದ್ದರು. ಆದರೇನು ಮಾಡುವುದು ಬಹುಶಃ ಹೀಗಿನ ಸರ್ಕಾರದ ಯಾವೊಬ್ಬರು ಅದನ್ನು ಓದಿರುವುದಿಲ್ಲ. ಅಷ್ಟು ಮಾತ್ರವಲ್ಲ ಪ್ರತಿ ವಾರ ಪರಿಸರ ಉಳಿಸಿಕೊಳ್ಳುವ ಸರಳ ವಿಧಾನಗಳ ಬಗ್ಗೆ ನಮ್ಮ ನಾಗೇಶ್ ಹೆಗಡೆಯವರು ಲೇಖನ, ಪತ್ರ ಬರೆಯುತ್ತಿರುತ್ತಾರೆ. ನಮ್ಮ ದುರಾದೃಷ್ಟವೋ ಎನೋ ಇವರ್ಯಾರು ಅದನ್ನು ಸಹ ಓದಿದಂತೆ ಕಾಣುವುದಿಲ್ಲ. ಓದಿದರೆ ಇಂತಹ ಪ್ಲಾಪ್ ಶೋ ಮಾಡಲು ಮುಂದಾಗುತ್ತಿರಲಿಲ್ಲ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೌಡ್ಯ ನಿಷೇಧ ಕಾಯ್ದೆ ತರಲು ಹೊರಟಾಗ ವಿರೋಧಿಸಿದರು ಇವರೆ ಇರಬೇಕು. ಪಾಪಾ ಅಂತಹ ಸಿದ್ದರಾಮಯ್ಯನವರು ಸಹ ಈಗ ಮೌನವಾಗಿರುವುದು ದುರಂತದ ಮೇಲೆ ದುರಂತ ಎನ್ನಬಹುದು. ಈಗ ಜನರೆ ಎಚ್ಚೆತ್ತುಕೊಂಡು ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಇಂತಹ ಗಿಮಿಕ್ ಮಾಡುವುದು ಬಿಟ್ಟು ಸರಿಯಾಗಿ ಕೆಲಸ ಮಾಡುವಂತೆ ಸರ್ಕಾರನ್ನು ಆಗ್ರಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...