Homeಮುಖಪುಟಮಳೆನೀರು ಕೊಯ್ಲು, ಕೆರೆ ಪುನರುಜ್ಜೀವನ ಮುಂತಾದುವು ಯಾರಿಗೂ ಬೇಕಿಲ್ಲ ಯಾಕೆ?

ಮಳೆನೀರು ಕೊಯ್ಲು, ಕೆರೆ ಪುನರುಜ್ಜೀವನ ಮುಂತಾದುವು ಯಾರಿಗೂ ಬೇಕಿಲ್ಲ ಯಾಕೆ?

- Advertisement -
- Advertisement -

| ಹೇಮಲತಾ ಶೆಣೈ, ಬೆಂಗಳೂರು |

ಕರ್ನಾಟಕದ ನಗರಗಳ ನೀರಿನ ಬವಣೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ಗೆಲ್ಲುವ ಲಕ್ಷಣ ಕಾಣುತ್ತಿಲ್ಲ. ಯಾಕೆಂದರೆ ಅಳಿದುಳಿದ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ಮಳೆನೀರು ಕೊಯ್ಲಿನ ಮೂಲಕ ನೀರು ಸಂಗ್ರಹ ಇತ್ಯಾದಿ ನಮಗೆ ಎಟಕುವಂತಹದನ್ನು ಮಾಡಬೇಕೆನ್ನುವ ತಜ್ಞರ ಮಾತು ಅಧಿಕಾರಸ್ಥರ ಕಿವಿಯೊಳಗೆ ಹೋಗುವುದೇ ಇಲ್ಲ. ನದಿ ತಿರುವು, ನದಿ ಜೋಡಣೆ, ಮೋಡ ಬಿತ್ತನೆಯಂತಹ ದೊಡ್ಡ ಖರ್ಚಿನ ಬಾಬತ್ತುಗಳು ಮಾತ್ರ ಅವರಿಗೆ ಆಕರ್ಷಕವಾಗಿ ಕಾಣುತ್ತವೆ. ನೇತ್ರಾವತಿಯಲ್ಲಿ ನೀರು ಕಡಿಮೆಯಾಗಿ ಒಣಗಲು ಶುರುವಾಗಿದ್ದರೂ – ಈ ಬೇಸಿಗೆಯಲ್ಲಿ ನೀರಿನ ತೀವ್ರ ಕೊರತೆಯ ಕಾರಣ ಧರ್ಮಸ್ಥಳದ ಯಾತ್ರಾರ್ಥಿಗಳಿಗೆ ತಮ್ಮ ಪ್ರವಾಸವನ್ನು ಕೆಲ ದಿನ ಮುಂದೂಡಲು ದೇವಸ್ಥಾನದ ಆಡಳಿತಾಧಿಕಾರಿಗಳೇ ಮನವಿ ಮಾಡಿದ್ದನ್ನು ಸ್ಮರಿಸಬಹುದು – ಅಧಿಕಾರಸ್ಥರು ಈಗಲೂ ‘ನೇತ್ರಾವತಿ ತಿರುವು ಯೋಜನೆ’ಯ ಮಾತನ್ನೇ ಆಡುತ್ತಿದ್ದಾರೆ.

ಬೆಂಗಳೂರಿನ ಜನಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಹೊಟ್ಟೆಪಾಡಿಗಾಗಿ ಮತ್ತು ನೀರಿನ ಕೊರತೆಯಿಂದಾಗಿ ಹಳ್ಳಿಗಾಡಿನಿಂದ, ನಮ್ಮದೇ ರಾಜ್ಯದ ಬೇರೆಬೇರೆ ಭಾಗಗಳಿಂದ ಮಾತ್ರವಲ್ಲದೆ ನಾನಾ ರಾಜ್ಯಗಳಿಂದಲೂ ಅಸಂಖ್ಯಾತ ಜನರು ಬೆಂಗಳೂರನ್ನು ಆಶ್ರಯಿಸಿ ಬರುತ್ತಲೇ ಇದ್ದಾರೆ.

ಬೆಂಗಳೂರಿನ ನೀರಿನ ಬವಣೆ ನಿವಾರಣೆಗೆ ತಜ್ಞರ ಸಲಹೆಯೆಂದರೆ ಮಳೆನೀರು ಸಂಗ್ರಹ – ಒಂದು, ಕೆರೆಗಳಲ್ಲಿ ಹೂಳೆತ್ತಿ ಅಭಿವೃದ್ಧಿಪಡಿಸಿ ನೀರು ಸಂಗ್ರಹ; ಎರಡು, ಕಟ್ಟಡಗಳಲ್ಲಿ ಮಳೆನೀರು ಕೊಯ್ಲು. ಇದರಿಂದ ಸಾಕಷ್ಟು ನೀರು ಭೂಮಿಯಲ್ಲಿ ಇಂಗಿ ಜಲಮಟ್ಟ ಮೇಲೇರಿ ಬಾವಿ-ಬೋರ್‍ವೆಲ್‍ಗಳಲ್ಲೂ ನೀರು ಬರುತ್ತದೆ. ಇದು ಅನಿವಾರ್ಯ. ಇಷ್ಟರಲ್ಲಾಗಲೇ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಮಳೆನೀರು ಸಂಗ್ರಹಕ್ಕೆ ಸಿದ್ಧವಾಗಿರಬೇಕಿದ್ದ ಕೆರೆಗಳು ಹಾಗೇ ಇದ್ದಾವೆ.

ಜನಪ್ರತಿನಿಧಿಗಳಿಗೆ ತಮ್ಮ ಏರಿಯದ ಕೆರೆಗಳನ್ನು ನೀರಿನ ಸಂಗ್ರಹಕ್ಕೆ ಸಿದ್ಧ ಮಾಡುವ ತರಾತುರಿಯೇ ಇಲ್ಲ. ಕೋರ್ಟು ಎಷ್ಟು ಚಾಟಿ ಬೀಸಿದರೂ ಇವರ ದಪ್ಪ ಚರ್ಮಕ್ಕೆ ನಾಟುವುದೇ ಇಲ್ಲ. ಯಾಕಿದು ಹೀಗೆ? ಕೆರೆ ಜಾಗ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳು-ಬಲಾಢ್ಯರಿಂದ ಅದನ್ನು ಬಿಡಿಸಿಕೊಳ್ಳಬೇಕಾಗುತ್ತೆ, ಅದು ಇವರಿಗೆ ಬೇಡವಾಗಿದೆಯಾ?

ಹಲವೆಡೆ ಏರಿಯದ ಜನರು ಸೇರಿ ತಾವೇ ದುರಸ್ತಿ, ಹೂಳೆತ್ತುವುದು ಮಾಡಿಕೊಂಡಿದ್ದಾರೆ. ಯುವ ಸಾಫ್ಟ್‍ವೇರ್ ಇಂಜಿನಿಯರ್ ಒಬ್ಬರು ತಮ್ಮ ಖರ್ಚಿನಿಂದಲೇ ಕೆರೆಗಳನ್ನು ರಿಪೇರಿ ಮಾಡಿಸುತ್ತಿರುವುದು, ಜನಾನುರಾಗಿ ವ್ಯಕ್ತಿಯೊಬ್ಬರು ಎಷ್ಟೋ ಬಾವಿ ತೋಡಿಸುವ ಪಣ ತೊಟ್ಟು ತಮ್ಮಷ್ಟಕ್ಕೆ ಆ ಕೆಲಸ ಮಾಡುತ್ತಿರುವುದು ಇವೆಲ್ಲ ಪತ್ರಿಕೆಗಳಲ್ಲಿ ವರದಿಯಾಗುತ್ತಿರುತ್ತವೆ; ಇಷ್ಟು ದಿನ ಬಂದ ಮಳೆಗೆ ಅವೆಲ್ಲ ತುಂಬಿವೆ. ಆದರೆ ಜನಪ್ರತಿನಿಧಿಗಳು-ಅಧಿಕಾರಸ್ತರು ಇಂತಹ ಕೆಲಸ ಮಾಡಿಸಿದ್ದನ್ನು ಓದಿದ್ದು ನೆನಪಿಲ್ಲ! ಇನ್ನೂ ಕೆಲವು ಕೆರೆಗಳು ರಿಪೇರಿ ಆಗಿ ನೀರು ಸಂಗ್ರಹಿಸಲಿ ಎಂಬ ಕಾರಣಕ್ಕೋ ಎಂಬಂತೆ ನಮ್ಮ ಮುಂಗಾರು ನಾಕ್ನಾಕೇ ದಿನ ಹಿಂದೆ ಸರಿಯುತ್ತಿದೆ.

ಇನ್ನು, ಕಟ್ಟಡಗಳಲ್ಲಿ ಮಳೆನೀರು ಕೊಯ್ಲಿನ ವಿಚಾರಕ್ಕೆ ಬಂದರೆ, ಜನರು ಯಾಕೋ ಆ ಬಗ್ಗೆ ಕಾಳಜಿನೇ ವಹಿಸುತ್ತಿಲ್ಲ. ಹೊಸ ಕಟ್ಟಡಗಳಲ್ಲಿ ಮಳೆನೀರು ಕೊಯ್ಲಿನ ವ್ಯವಸ್ಥೆಯನ್ನು ಸರಕಾರ ಕಡ್ಡಾಯಗೊಳಿಸಿ ಕಾಯ್ದೆ ಮಾಡಿ ತನ್ನ ‘ಕರ್ತವ್ಯ ಪೂರೈಸಿ’ ಹಲವು ವರ್ಷಗಳೇ ಸಂದುವು. ಆದರೆ ಬೇಕಾದಷ್ಟು ಬಹುಮಹಡಿ ವಸತಿ ಸಮುಚ್ಚಯಗಳು, ಸರಕಾರಿ ಕಟ್ಟಡಗಳಲ್ಲೇ ಇದನ್ನು ಅಳವಡಿಸಿಲ್ಲ. ಅವರು ಅದಕ್ಕಾಗಿ ದಂಡ ಕಟ್ಟುತ್ತಾರೆ ಹೊರತು ಮಳೆನೀರು ಕೊಯ್ಲು ಮಾಡುತ್ತಿಲ್ಲ. ಯಾಕೆ?

ಮಿಕ್ಕ ರಾಜ್ಯಗಳಲ್ಲಿ ಇದೆಲ್ಲ ಹೇಗೆ ನಡೆಯುತ್ತಿದೆ? ನೆರೆ ರಾಜ್ಯ ತಮಿಳುನಾಡಿನಲ್ಲಿ ಜಯಲಲಿತಾ ಸಿಎಂ ಆಗಿದ್ದಾಗ ಎಷ್ಟು ಕಟ್ಟುನಿಟ್ಟಾಗಿ ಮತ್ತು ಕ್ರಮಬದ್ಧ ವೃತ್ತಿಪರತೆಯಿಂದ ಈ ಕೆಲಸ ಮಾಡಿಸುತ್ತಿದ್ದರೆಂದರೆ, ಮನೆ ಕಟ್ಟುವ ಪರವಾನಗಿ ಬೇಕಿರುವವರಿಂದ ಸರಕಾರ ಅಥವಾ ಸಂಬಂಧಿತ ಸ್ಥಳೀಯ ಆಡಳಿತಗಳೇ ಮಳೆನೀರು ಕೊಯ್ಲಿನ ವ್ಯವಸ್ಥೆಗೆ ನಿಗದಿತ ಹಣ ಕಟ್ಟಿಸಿಕೊಂಡು ಅದರ ವ್ಯವಸ್ಥೆ ಮಾಡುವಂತೆ ಕಡ್ಡಾಯ ಮಾಡಲಾಗಿತ್ತು. ಹಾಗೆಯೇ ಬ್ಯಾಂಕಿನಿಂದ ಕೃಷಿ ಸಾಲ ಬೇಕಿದ್ದಲ್ಲಿ ಕೃಷಿ ಹೊಂಡ ನಿರ್ಮಿಸಲೇ ಬೇಕಿತ್ತು. ನಮ್ಮಲ್ಲೇಕೆ ಇಂತಹ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವುದಿಲ್ಲ?

ಬಹುಮಹಡಿ ಕಟ್ಟಡಗಳ ಹಾಗೂ ದೊಡ್ಡದೊಡ್ಡ ಮನೆಗಳ ನಿವಾಸಿಗಳು ಎಂದಾದರೂ ನೀರಿಗಾಗಿ ಕೊಡ ಹಿಡಿದು ಕ್ಯೂ ನಿಲ್ಲುವುದು ಇದೆಯಾ? ಇಲ್ಲ. ಆ ಮನೆಗಳ ಸಂಪುಗಳೆಲ್ಲ ರಾತ್ರಿಯೇ ತುಂಬಿ ನೀರೆಲ್ಲ ಹರಿದುಹೋಗುತ್ತಿರುತ್ತದೆ. ಆದ್ದರಿಂದಲೇ ಅವರಿಗೆ ನೀರು ಕೊಯ್ಲಿನ ಜರೂರತ್ತು ಕಾಣುತ್ತಿಲ್ಲ. [ನಾವು ವಾಸ ಇರುವ ಕಟ್ಟಡದಲ್ಲಿ ಮಳೆನೀರು ಕೊಯ್ಲಿನಿಂದ ಬೋರ್‍ವೆಲ್‍ಗೆ ನೀರು ಮರುಪೂರಣ ವ್ಯವಸ್ಥೆಯಿದೆ. ಆದರೆ ನಮ್ಮ ಪಕ್ಕದ ಕಟ್ಟಡದಲ್ಲಿ ಆ ವ್ಯವಸ್ಥೆ ಮಾಡಿರಲಿಲ್ಲ. ಅವರ ಬೋರ್‍ವೆಲ್ ಬತ್ತಿಹೋಗಿ, ಟ್ಯಾಂಕರ್ ನೀರು ಸಹ ಸಾಕಾಗದೆ, ಮಾಲೀಕರು ನಿವಾಸಿಗಳಿಗೆ ನೀರಿನ ‘ರೇಶನ್’ ಅಳವಡಿಸಿದ್ದಾರೆ. ಹೀಗಾದ ನಂತರ ಈಗ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡಿದ್ದಾರೆ; ಆದರೆ ಆ ನಂತರ ಮಳೆಯೇ ಬಂದಿಲ್ಲ ಇನ್ನೂ!]

ಆದ್ದರಿಂದ ಮಳೆನೀರು ಸಂಗ್ರಹ ಸುಗಮವಾಗಿ ಆಗಬೇಕೆಂದರೆ ಬರೀ ದಂಡ ಕಟ್ಟಿಸಿಕೊಳ್ಳುವುದಲ್ಲ. ದುಡ್ಡಿನಿಂದ ನೀರು ಉತ್ಪಾದನೆ ಆಗುವುದಿಲ್ಲ! ಮನೆ ನಿರ್ಮಾಣದ ಪರವಾನಗಿ ಕೊಡುವಾಗಲೇ ಮಳೆನೀರು ಕೊಯ್ಲಿಗೆ ದುಡ್ಡು ಕಟ್ಟಿಸಿಕೊಂಡು ಅಥಾರಿಟಿಗಳೇ ಅದನ್ನು ನಿರ್ಮಿಸುವ ವ್ಯವಸ್ಥೆಯಾಗಬೇಕು; ಅಥವಾ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡದಿದ್ದರೆ ಅವರಿಗೆ ನೀರು ಪೂರೈಕೆಯನ್ನು ಬಂದ್ ಮಾಡುವ ನಿಬಂಧನೆಯೊಂದಿಗೇನೇ ಪರವಾನಗಿ ಕೊಡಬೇಕು ಮತ್ತು ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು.

ಈಗಾಗಲೇ ಬಹಳ ತಡವಾಗಿದೆ. ಈ ವರ್ಷದ ಬೇಸಿಗೆಯಲ್ಲಿ ಬೆಂಗಳೂರಿನ ಅದೆಷ್ಟೋ ಸಣ್ಣದೊಡ್ಡ ಬಹುಮಹಡಿ ಕಟ್ಟಡಗಳಲ್ಲಿನ ಬೋರ್‍ವೆಲ್‍ಗಳು ಒಣಗಿಹೋಗಿ ಟ್ಯಾಂಕರ್ ನೀರಿಗಾಗಿ ಪರದಾಡುವ ದೃಷ್ಯ ಕಾಮನ್ ಆಗಿತ್ತು. ಒಂದು ವೇಳೆ ಟ್ಯಾಂಕರುಗಳಿಗೇ ನೀರು ಸಿಗದೆ ಹೋದರೆ? ಧರ್ಮಸ್ಥಳ, ಉಡುಪಿ, ಸುಬ್ರಮಣ್ಯ, ಕೊಲ್ಲೂರು ಮುಂತಾದ ಪ್ರಖ್ಯಾತ ಯಾತ್ರಾಸ್ಥಳಗಳಲ್ಲೆಲ್ಲ ನೀರಿಗಾಗಿ ಹಾಹಾಕಾರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರಿಗೂ ಅಧಿಕಾರಸ್ತರಿಗೂ ಎಚ್ಚರಿಕೆಯ ಗಂಟೆಯಾಗಬೇಕಿದೆ. ಮಳೆನೀರು ಸಂಗ್ರಹವನ್ನು ಗರಿಷ್ಠ ಪ್ರಮಾಣಕ್ಕೆ ಮಾಡಿರೆಂಬ ನಮ್ಮ ಜಲತಜ್ಞರ ಸಲಹೆಯನ್ನು ಎಲ್ಲರೂ ಪಾಲಿಸಿದರೆ ಮಾತ್ರ ಉಳಿಗಾಲ ಎಂದು ಅನ್ನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....