Homeಮುಖಪುಟಮಳೆನೀರು ಕೊಯ್ಲು, ಕೆರೆ ಪುನರುಜ್ಜೀವನ ಮುಂತಾದುವು ಯಾರಿಗೂ ಬೇಕಿಲ್ಲ ಯಾಕೆ?

ಮಳೆನೀರು ಕೊಯ್ಲು, ಕೆರೆ ಪುನರುಜ್ಜೀವನ ಮುಂತಾದುವು ಯಾರಿಗೂ ಬೇಕಿಲ್ಲ ಯಾಕೆ?

- Advertisement -
- Advertisement -

| ಹೇಮಲತಾ ಶೆಣೈ, ಬೆಂಗಳೂರು |

ಕರ್ನಾಟಕದ ನಗರಗಳ ನೀರಿನ ಬವಣೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ಗೆಲ್ಲುವ ಲಕ್ಷಣ ಕಾಣುತ್ತಿಲ್ಲ. ಯಾಕೆಂದರೆ ಅಳಿದುಳಿದ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ಮಳೆನೀರು ಕೊಯ್ಲಿನ ಮೂಲಕ ನೀರು ಸಂಗ್ರಹ ಇತ್ಯಾದಿ ನಮಗೆ ಎಟಕುವಂತಹದನ್ನು ಮಾಡಬೇಕೆನ್ನುವ ತಜ್ಞರ ಮಾತು ಅಧಿಕಾರಸ್ಥರ ಕಿವಿಯೊಳಗೆ ಹೋಗುವುದೇ ಇಲ್ಲ. ನದಿ ತಿರುವು, ನದಿ ಜೋಡಣೆ, ಮೋಡ ಬಿತ್ತನೆಯಂತಹ ದೊಡ್ಡ ಖರ್ಚಿನ ಬಾಬತ್ತುಗಳು ಮಾತ್ರ ಅವರಿಗೆ ಆಕರ್ಷಕವಾಗಿ ಕಾಣುತ್ತವೆ. ನೇತ್ರಾವತಿಯಲ್ಲಿ ನೀರು ಕಡಿಮೆಯಾಗಿ ಒಣಗಲು ಶುರುವಾಗಿದ್ದರೂ – ಈ ಬೇಸಿಗೆಯಲ್ಲಿ ನೀರಿನ ತೀವ್ರ ಕೊರತೆಯ ಕಾರಣ ಧರ್ಮಸ್ಥಳದ ಯಾತ್ರಾರ್ಥಿಗಳಿಗೆ ತಮ್ಮ ಪ್ರವಾಸವನ್ನು ಕೆಲ ದಿನ ಮುಂದೂಡಲು ದೇವಸ್ಥಾನದ ಆಡಳಿತಾಧಿಕಾರಿಗಳೇ ಮನವಿ ಮಾಡಿದ್ದನ್ನು ಸ್ಮರಿಸಬಹುದು – ಅಧಿಕಾರಸ್ಥರು ಈಗಲೂ ‘ನೇತ್ರಾವತಿ ತಿರುವು ಯೋಜನೆ’ಯ ಮಾತನ್ನೇ ಆಡುತ್ತಿದ್ದಾರೆ.

ಬೆಂಗಳೂರಿನ ಜನಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಹೊಟ್ಟೆಪಾಡಿಗಾಗಿ ಮತ್ತು ನೀರಿನ ಕೊರತೆಯಿಂದಾಗಿ ಹಳ್ಳಿಗಾಡಿನಿಂದ, ನಮ್ಮದೇ ರಾಜ್ಯದ ಬೇರೆಬೇರೆ ಭಾಗಗಳಿಂದ ಮಾತ್ರವಲ್ಲದೆ ನಾನಾ ರಾಜ್ಯಗಳಿಂದಲೂ ಅಸಂಖ್ಯಾತ ಜನರು ಬೆಂಗಳೂರನ್ನು ಆಶ್ರಯಿಸಿ ಬರುತ್ತಲೇ ಇದ್ದಾರೆ.

ಬೆಂಗಳೂರಿನ ನೀರಿನ ಬವಣೆ ನಿವಾರಣೆಗೆ ತಜ್ಞರ ಸಲಹೆಯೆಂದರೆ ಮಳೆನೀರು ಸಂಗ್ರಹ – ಒಂದು, ಕೆರೆಗಳಲ್ಲಿ ಹೂಳೆತ್ತಿ ಅಭಿವೃದ್ಧಿಪಡಿಸಿ ನೀರು ಸಂಗ್ರಹ; ಎರಡು, ಕಟ್ಟಡಗಳಲ್ಲಿ ಮಳೆನೀರು ಕೊಯ್ಲು. ಇದರಿಂದ ಸಾಕಷ್ಟು ನೀರು ಭೂಮಿಯಲ್ಲಿ ಇಂಗಿ ಜಲಮಟ್ಟ ಮೇಲೇರಿ ಬಾವಿ-ಬೋರ್‍ವೆಲ್‍ಗಳಲ್ಲೂ ನೀರು ಬರುತ್ತದೆ. ಇದು ಅನಿವಾರ್ಯ. ಇಷ್ಟರಲ್ಲಾಗಲೇ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಮಳೆನೀರು ಸಂಗ್ರಹಕ್ಕೆ ಸಿದ್ಧವಾಗಿರಬೇಕಿದ್ದ ಕೆರೆಗಳು ಹಾಗೇ ಇದ್ದಾವೆ.

ಜನಪ್ರತಿನಿಧಿಗಳಿಗೆ ತಮ್ಮ ಏರಿಯದ ಕೆರೆಗಳನ್ನು ನೀರಿನ ಸಂಗ್ರಹಕ್ಕೆ ಸಿದ್ಧ ಮಾಡುವ ತರಾತುರಿಯೇ ಇಲ್ಲ. ಕೋರ್ಟು ಎಷ್ಟು ಚಾಟಿ ಬೀಸಿದರೂ ಇವರ ದಪ್ಪ ಚರ್ಮಕ್ಕೆ ನಾಟುವುದೇ ಇಲ್ಲ. ಯಾಕಿದು ಹೀಗೆ? ಕೆರೆ ಜಾಗ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳು-ಬಲಾಢ್ಯರಿಂದ ಅದನ್ನು ಬಿಡಿಸಿಕೊಳ್ಳಬೇಕಾಗುತ್ತೆ, ಅದು ಇವರಿಗೆ ಬೇಡವಾಗಿದೆಯಾ?

ಹಲವೆಡೆ ಏರಿಯದ ಜನರು ಸೇರಿ ತಾವೇ ದುರಸ್ತಿ, ಹೂಳೆತ್ತುವುದು ಮಾಡಿಕೊಂಡಿದ್ದಾರೆ. ಯುವ ಸಾಫ್ಟ್‍ವೇರ್ ಇಂಜಿನಿಯರ್ ಒಬ್ಬರು ತಮ್ಮ ಖರ್ಚಿನಿಂದಲೇ ಕೆರೆಗಳನ್ನು ರಿಪೇರಿ ಮಾಡಿಸುತ್ತಿರುವುದು, ಜನಾನುರಾಗಿ ವ್ಯಕ್ತಿಯೊಬ್ಬರು ಎಷ್ಟೋ ಬಾವಿ ತೋಡಿಸುವ ಪಣ ತೊಟ್ಟು ತಮ್ಮಷ್ಟಕ್ಕೆ ಆ ಕೆಲಸ ಮಾಡುತ್ತಿರುವುದು ಇವೆಲ್ಲ ಪತ್ರಿಕೆಗಳಲ್ಲಿ ವರದಿಯಾಗುತ್ತಿರುತ್ತವೆ; ಇಷ್ಟು ದಿನ ಬಂದ ಮಳೆಗೆ ಅವೆಲ್ಲ ತುಂಬಿವೆ. ಆದರೆ ಜನಪ್ರತಿನಿಧಿಗಳು-ಅಧಿಕಾರಸ್ತರು ಇಂತಹ ಕೆಲಸ ಮಾಡಿಸಿದ್ದನ್ನು ಓದಿದ್ದು ನೆನಪಿಲ್ಲ! ಇನ್ನೂ ಕೆಲವು ಕೆರೆಗಳು ರಿಪೇರಿ ಆಗಿ ನೀರು ಸಂಗ್ರಹಿಸಲಿ ಎಂಬ ಕಾರಣಕ್ಕೋ ಎಂಬಂತೆ ನಮ್ಮ ಮುಂಗಾರು ನಾಕ್ನಾಕೇ ದಿನ ಹಿಂದೆ ಸರಿಯುತ್ತಿದೆ.

ಇನ್ನು, ಕಟ್ಟಡಗಳಲ್ಲಿ ಮಳೆನೀರು ಕೊಯ್ಲಿನ ವಿಚಾರಕ್ಕೆ ಬಂದರೆ, ಜನರು ಯಾಕೋ ಆ ಬಗ್ಗೆ ಕಾಳಜಿನೇ ವಹಿಸುತ್ತಿಲ್ಲ. ಹೊಸ ಕಟ್ಟಡಗಳಲ್ಲಿ ಮಳೆನೀರು ಕೊಯ್ಲಿನ ವ್ಯವಸ್ಥೆಯನ್ನು ಸರಕಾರ ಕಡ್ಡಾಯಗೊಳಿಸಿ ಕಾಯ್ದೆ ಮಾಡಿ ತನ್ನ ‘ಕರ್ತವ್ಯ ಪೂರೈಸಿ’ ಹಲವು ವರ್ಷಗಳೇ ಸಂದುವು. ಆದರೆ ಬೇಕಾದಷ್ಟು ಬಹುಮಹಡಿ ವಸತಿ ಸಮುಚ್ಚಯಗಳು, ಸರಕಾರಿ ಕಟ್ಟಡಗಳಲ್ಲೇ ಇದನ್ನು ಅಳವಡಿಸಿಲ್ಲ. ಅವರು ಅದಕ್ಕಾಗಿ ದಂಡ ಕಟ್ಟುತ್ತಾರೆ ಹೊರತು ಮಳೆನೀರು ಕೊಯ್ಲು ಮಾಡುತ್ತಿಲ್ಲ. ಯಾಕೆ?

ಮಿಕ್ಕ ರಾಜ್ಯಗಳಲ್ಲಿ ಇದೆಲ್ಲ ಹೇಗೆ ನಡೆಯುತ್ತಿದೆ? ನೆರೆ ರಾಜ್ಯ ತಮಿಳುನಾಡಿನಲ್ಲಿ ಜಯಲಲಿತಾ ಸಿಎಂ ಆಗಿದ್ದಾಗ ಎಷ್ಟು ಕಟ್ಟುನಿಟ್ಟಾಗಿ ಮತ್ತು ಕ್ರಮಬದ್ಧ ವೃತ್ತಿಪರತೆಯಿಂದ ಈ ಕೆಲಸ ಮಾಡಿಸುತ್ತಿದ್ದರೆಂದರೆ, ಮನೆ ಕಟ್ಟುವ ಪರವಾನಗಿ ಬೇಕಿರುವವರಿಂದ ಸರಕಾರ ಅಥವಾ ಸಂಬಂಧಿತ ಸ್ಥಳೀಯ ಆಡಳಿತಗಳೇ ಮಳೆನೀರು ಕೊಯ್ಲಿನ ವ್ಯವಸ್ಥೆಗೆ ನಿಗದಿತ ಹಣ ಕಟ್ಟಿಸಿಕೊಂಡು ಅದರ ವ್ಯವಸ್ಥೆ ಮಾಡುವಂತೆ ಕಡ್ಡಾಯ ಮಾಡಲಾಗಿತ್ತು. ಹಾಗೆಯೇ ಬ್ಯಾಂಕಿನಿಂದ ಕೃಷಿ ಸಾಲ ಬೇಕಿದ್ದಲ್ಲಿ ಕೃಷಿ ಹೊಂಡ ನಿರ್ಮಿಸಲೇ ಬೇಕಿತ್ತು. ನಮ್ಮಲ್ಲೇಕೆ ಇಂತಹ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವುದಿಲ್ಲ?

ಬಹುಮಹಡಿ ಕಟ್ಟಡಗಳ ಹಾಗೂ ದೊಡ್ಡದೊಡ್ಡ ಮನೆಗಳ ನಿವಾಸಿಗಳು ಎಂದಾದರೂ ನೀರಿಗಾಗಿ ಕೊಡ ಹಿಡಿದು ಕ್ಯೂ ನಿಲ್ಲುವುದು ಇದೆಯಾ? ಇಲ್ಲ. ಆ ಮನೆಗಳ ಸಂಪುಗಳೆಲ್ಲ ರಾತ್ರಿಯೇ ತುಂಬಿ ನೀರೆಲ್ಲ ಹರಿದುಹೋಗುತ್ತಿರುತ್ತದೆ. ಆದ್ದರಿಂದಲೇ ಅವರಿಗೆ ನೀರು ಕೊಯ್ಲಿನ ಜರೂರತ್ತು ಕಾಣುತ್ತಿಲ್ಲ. [ನಾವು ವಾಸ ಇರುವ ಕಟ್ಟಡದಲ್ಲಿ ಮಳೆನೀರು ಕೊಯ್ಲಿನಿಂದ ಬೋರ್‍ವೆಲ್‍ಗೆ ನೀರು ಮರುಪೂರಣ ವ್ಯವಸ್ಥೆಯಿದೆ. ಆದರೆ ನಮ್ಮ ಪಕ್ಕದ ಕಟ್ಟಡದಲ್ಲಿ ಆ ವ್ಯವಸ್ಥೆ ಮಾಡಿರಲಿಲ್ಲ. ಅವರ ಬೋರ್‍ವೆಲ್ ಬತ್ತಿಹೋಗಿ, ಟ್ಯಾಂಕರ್ ನೀರು ಸಹ ಸಾಕಾಗದೆ, ಮಾಲೀಕರು ನಿವಾಸಿಗಳಿಗೆ ನೀರಿನ ‘ರೇಶನ್’ ಅಳವಡಿಸಿದ್ದಾರೆ. ಹೀಗಾದ ನಂತರ ಈಗ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡಿದ್ದಾರೆ; ಆದರೆ ಆ ನಂತರ ಮಳೆಯೇ ಬಂದಿಲ್ಲ ಇನ್ನೂ!]

ಆದ್ದರಿಂದ ಮಳೆನೀರು ಸಂಗ್ರಹ ಸುಗಮವಾಗಿ ಆಗಬೇಕೆಂದರೆ ಬರೀ ದಂಡ ಕಟ್ಟಿಸಿಕೊಳ್ಳುವುದಲ್ಲ. ದುಡ್ಡಿನಿಂದ ನೀರು ಉತ್ಪಾದನೆ ಆಗುವುದಿಲ್ಲ! ಮನೆ ನಿರ್ಮಾಣದ ಪರವಾನಗಿ ಕೊಡುವಾಗಲೇ ಮಳೆನೀರು ಕೊಯ್ಲಿಗೆ ದುಡ್ಡು ಕಟ್ಟಿಸಿಕೊಂಡು ಅಥಾರಿಟಿಗಳೇ ಅದನ್ನು ನಿರ್ಮಿಸುವ ವ್ಯವಸ್ಥೆಯಾಗಬೇಕು; ಅಥವಾ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡದಿದ್ದರೆ ಅವರಿಗೆ ನೀರು ಪೂರೈಕೆಯನ್ನು ಬಂದ್ ಮಾಡುವ ನಿಬಂಧನೆಯೊಂದಿಗೇನೇ ಪರವಾನಗಿ ಕೊಡಬೇಕು ಮತ್ತು ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು.

ಈಗಾಗಲೇ ಬಹಳ ತಡವಾಗಿದೆ. ಈ ವರ್ಷದ ಬೇಸಿಗೆಯಲ್ಲಿ ಬೆಂಗಳೂರಿನ ಅದೆಷ್ಟೋ ಸಣ್ಣದೊಡ್ಡ ಬಹುಮಹಡಿ ಕಟ್ಟಡಗಳಲ್ಲಿನ ಬೋರ್‍ವೆಲ್‍ಗಳು ಒಣಗಿಹೋಗಿ ಟ್ಯಾಂಕರ್ ನೀರಿಗಾಗಿ ಪರದಾಡುವ ದೃಷ್ಯ ಕಾಮನ್ ಆಗಿತ್ತು. ಒಂದು ವೇಳೆ ಟ್ಯಾಂಕರುಗಳಿಗೇ ನೀರು ಸಿಗದೆ ಹೋದರೆ? ಧರ್ಮಸ್ಥಳ, ಉಡುಪಿ, ಸುಬ್ರಮಣ್ಯ, ಕೊಲ್ಲೂರು ಮುಂತಾದ ಪ್ರಖ್ಯಾತ ಯಾತ್ರಾಸ್ಥಳಗಳಲ್ಲೆಲ್ಲ ನೀರಿಗಾಗಿ ಹಾಹಾಕಾರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರಿಗೂ ಅಧಿಕಾರಸ್ತರಿಗೂ ಎಚ್ಚರಿಕೆಯ ಗಂಟೆಯಾಗಬೇಕಿದೆ. ಮಳೆನೀರು ಸಂಗ್ರಹವನ್ನು ಗರಿಷ್ಠ ಪ್ರಮಾಣಕ್ಕೆ ಮಾಡಿರೆಂಬ ನಮ್ಮ ಜಲತಜ್ಞರ ಸಲಹೆಯನ್ನು ಎಲ್ಲರೂ ಪಾಲಿಸಿದರೆ ಮಾತ್ರ ಉಳಿಗಾಲ ಎಂದು ಅನ್ನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...