Homeಮುಖಪುಟಮಳೆನೀರು ಕೊಯ್ಲು, ಕೆರೆ ಪುನರುಜ್ಜೀವನ ಮುಂತಾದುವು ಯಾರಿಗೂ ಬೇಕಿಲ್ಲ ಯಾಕೆ?

ಮಳೆನೀರು ಕೊಯ್ಲು, ಕೆರೆ ಪುನರುಜ್ಜೀವನ ಮುಂತಾದುವು ಯಾರಿಗೂ ಬೇಕಿಲ್ಲ ಯಾಕೆ?

- Advertisement -
- Advertisement -

| ಹೇಮಲತಾ ಶೆಣೈ, ಬೆಂಗಳೂರು |

ಕರ್ನಾಟಕದ ನಗರಗಳ ನೀರಿನ ಬವಣೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ಗೆಲ್ಲುವ ಲಕ್ಷಣ ಕಾಣುತ್ತಿಲ್ಲ. ಯಾಕೆಂದರೆ ಅಳಿದುಳಿದ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ಮಳೆನೀರು ಕೊಯ್ಲಿನ ಮೂಲಕ ನೀರು ಸಂಗ್ರಹ ಇತ್ಯಾದಿ ನಮಗೆ ಎಟಕುವಂತಹದನ್ನು ಮಾಡಬೇಕೆನ್ನುವ ತಜ್ಞರ ಮಾತು ಅಧಿಕಾರಸ್ಥರ ಕಿವಿಯೊಳಗೆ ಹೋಗುವುದೇ ಇಲ್ಲ. ನದಿ ತಿರುವು, ನದಿ ಜೋಡಣೆ, ಮೋಡ ಬಿತ್ತನೆಯಂತಹ ದೊಡ್ಡ ಖರ್ಚಿನ ಬಾಬತ್ತುಗಳು ಮಾತ್ರ ಅವರಿಗೆ ಆಕರ್ಷಕವಾಗಿ ಕಾಣುತ್ತವೆ. ನೇತ್ರಾವತಿಯಲ್ಲಿ ನೀರು ಕಡಿಮೆಯಾಗಿ ಒಣಗಲು ಶುರುವಾಗಿದ್ದರೂ – ಈ ಬೇಸಿಗೆಯಲ್ಲಿ ನೀರಿನ ತೀವ್ರ ಕೊರತೆಯ ಕಾರಣ ಧರ್ಮಸ್ಥಳದ ಯಾತ್ರಾರ್ಥಿಗಳಿಗೆ ತಮ್ಮ ಪ್ರವಾಸವನ್ನು ಕೆಲ ದಿನ ಮುಂದೂಡಲು ದೇವಸ್ಥಾನದ ಆಡಳಿತಾಧಿಕಾರಿಗಳೇ ಮನವಿ ಮಾಡಿದ್ದನ್ನು ಸ್ಮರಿಸಬಹುದು – ಅಧಿಕಾರಸ್ಥರು ಈಗಲೂ ‘ನೇತ್ರಾವತಿ ತಿರುವು ಯೋಜನೆ’ಯ ಮಾತನ್ನೇ ಆಡುತ್ತಿದ್ದಾರೆ.

ಬೆಂಗಳೂರಿನ ಜನಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಹೊಟ್ಟೆಪಾಡಿಗಾಗಿ ಮತ್ತು ನೀರಿನ ಕೊರತೆಯಿಂದಾಗಿ ಹಳ್ಳಿಗಾಡಿನಿಂದ, ನಮ್ಮದೇ ರಾಜ್ಯದ ಬೇರೆಬೇರೆ ಭಾಗಗಳಿಂದ ಮಾತ್ರವಲ್ಲದೆ ನಾನಾ ರಾಜ್ಯಗಳಿಂದಲೂ ಅಸಂಖ್ಯಾತ ಜನರು ಬೆಂಗಳೂರನ್ನು ಆಶ್ರಯಿಸಿ ಬರುತ್ತಲೇ ಇದ್ದಾರೆ.

ಬೆಂಗಳೂರಿನ ನೀರಿನ ಬವಣೆ ನಿವಾರಣೆಗೆ ತಜ್ಞರ ಸಲಹೆಯೆಂದರೆ ಮಳೆನೀರು ಸಂಗ್ರಹ – ಒಂದು, ಕೆರೆಗಳಲ್ಲಿ ಹೂಳೆತ್ತಿ ಅಭಿವೃದ್ಧಿಪಡಿಸಿ ನೀರು ಸಂಗ್ರಹ; ಎರಡು, ಕಟ್ಟಡಗಳಲ್ಲಿ ಮಳೆನೀರು ಕೊಯ್ಲು. ಇದರಿಂದ ಸಾಕಷ್ಟು ನೀರು ಭೂಮಿಯಲ್ಲಿ ಇಂಗಿ ಜಲಮಟ್ಟ ಮೇಲೇರಿ ಬಾವಿ-ಬೋರ್‍ವೆಲ್‍ಗಳಲ್ಲೂ ನೀರು ಬರುತ್ತದೆ. ಇದು ಅನಿವಾರ್ಯ. ಇಷ್ಟರಲ್ಲಾಗಲೇ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಮಳೆನೀರು ಸಂಗ್ರಹಕ್ಕೆ ಸಿದ್ಧವಾಗಿರಬೇಕಿದ್ದ ಕೆರೆಗಳು ಹಾಗೇ ಇದ್ದಾವೆ.

ಜನಪ್ರತಿನಿಧಿಗಳಿಗೆ ತಮ್ಮ ಏರಿಯದ ಕೆರೆಗಳನ್ನು ನೀರಿನ ಸಂಗ್ರಹಕ್ಕೆ ಸಿದ್ಧ ಮಾಡುವ ತರಾತುರಿಯೇ ಇಲ್ಲ. ಕೋರ್ಟು ಎಷ್ಟು ಚಾಟಿ ಬೀಸಿದರೂ ಇವರ ದಪ್ಪ ಚರ್ಮಕ್ಕೆ ನಾಟುವುದೇ ಇಲ್ಲ. ಯಾಕಿದು ಹೀಗೆ? ಕೆರೆ ಜಾಗ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳು-ಬಲಾಢ್ಯರಿಂದ ಅದನ್ನು ಬಿಡಿಸಿಕೊಳ್ಳಬೇಕಾಗುತ್ತೆ, ಅದು ಇವರಿಗೆ ಬೇಡವಾಗಿದೆಯಾ?

ಹಲವೆಡೆ ಏರಿಯದ ಜನರು ಸೇರಿ ತಾವೇ ದುರಸ್ತಿ, ಹೂಳೆತ್ತುವುದು ಮಾಡಿಕೊಂಡಿದ್ದಾರೆ. ಯುವ ಸಾಫ್ಟ್‍ವೇರ್ ಇಂಜಿನಿಯರ್ ಒಬ್ಬರು ತಮ್ಮ ಖರ್ಚಿನಿಂದಲೇ ಕೆರೆಗಳನ್ನು ರಿಪೇರಿ ಮಾಡಿಸುತ್ತಿರುವುದು, ಜನಾನುರಾಗಿ ವ್ಯಕ್ತಿಯೊಬ್ಬರು ಎಷ್ಟೋ ಬಾವಿ ತೋಡಿಸುವ ಪಣ ತೊಟ್ಟು ತಮ್ಮಷ್ಟಕ್ಕೆ ಆ ಕೆಲಸ ಮಾಡುತ್ತಿರುವುದು ಇವೆಲ್ಲ ಪತ್ರಿಕೆಗಳಲ್ಲಿ ವರದಿಯಾಗುತ್ತಿರುತ್ತವೆ; ಇಷ್ಟು ದಿನ ಬಂದ ಮಳೆಗೆ ಅವೆಲ್ಲ ತುಂಬಿವೆ. ಆದರೆ ಜನಪ್ರತಿನಿಧಿಗಳು-ಅಧಿಕಾರಸ್ತರು ಇಂತಹ ಕೆಲಸ ಮಾಡಿಸಿದ್ದನ್ನು ಓದಿದ್ದು ನೆನಪಿಲ್ಲ! ಇನ್ನೂ ಕೆಲವು ಕೆರೆಗಳು ರಿಪೇರಿ ಆಗಿ ನೀರು ಸಂಗ್ರಹಿಸಲಿ ಎಂಬ ಕಾರಣಕ್ಕೋ ಎಂಬಂತೆ ನಮ್ಮ ಮುಂಗಾರು ನಾಕ್ನಾಕೇ ದಿನ ಹಿಂದೆ ಸರಿಯುತ್ತಿದೆ.

ಇನ್ನು, ಕಟ್ಟಡಗಳಲ್ಲಿ ಮಳೆನೀರು ಕೊಯ್ಲಿನ ವಿಚಾರಕ್ಕೆ ಬಂದರೆ, ಜನರು ಯಾಕೋ ಆ ಬಗ್ಗೆ ಕಾಳಜಿನೇ ವಹಿಸುತ್ತಿಲ್ಲ. ಹೊಸ ಕಟ್ಟಡಗಳಲ್ಲಿ ಮಳೆನೀರು ಕೊಯ್ಲಿನ ವ್ಯವಸ್ಥೆಯನ್ನು ಸರಕಾರ ಕಡ್ಡಾಯಗೊಳಿಸಿ ಕಾಯ್ದೆ ಮಾಡಿ ತನ್ನ ‘ಕರ್ತವ್ಯ ಪೂರೈಸಿ’ ಹಲವು ವರ್ಷಗಳೇ ಸಂದುವು. ಆದರೆ ಬೇಕಾದಷ್ಟು ಬಹುಮಹಡಿ ವಸತಿ ಸಮುಚ್ಚಯಗಳು, ಸರಕಾರಿ ಕಟ್ಟಡಗಳಲ್ಲೇ ಇದನ್ನು ಅಳವಡಿಸಿಲ್ಲ. ಅವರು ಅದಕ್ಕಾಗಿ ದಂಡ ಕಟ್ಟುತ್ತಾರೆ ಹೊರತು ಮಳೆನೀರು ಕೊಯ್ಲು ಮಾಡುತ್ತಿಲ್ಲ. ಯಾಕೆ?

ಮಿಕ್ಕ ರಾಜ್ಯಗಳಲ್ಲಿ ಇದೆಲ್ಲ ಹೇಗೆ ನಡೆಯುತ್ತಿದೆ? ನೆರೆ ರಾಜ್ಯ ತಮಿಳುನಾಡಿನಲ್ಲಿ ಜಯಲಲಿತಾ ಸಿಎಂ ಆಗಿದ್ದಾಗ ಎಷ್ಟು ಕಟ್ಟುನಿಟ್ಟಾಗಿ ಮತ್ತು ಕ್ರಮಬದ್ಧ ವೃತ್ತಿಪರತೆಯಿಂದ ಈ ಕೆಲಸ ಮಾಡಿಸುತ್ತಿದ್ದರೆಂದರೆ, ಮನೆ ಕಟ್ಟುವ ಪರವಾನಗಿ ಬೇಕಿರುವವರಿಂದ ಸರಕಾರ ಅಥವಾ ಸಂಬಂಧಿತ ಸ್ಥಳೀಯ ಆಡಳಿತಗಳೇ ಮಳೆನೀರು ಕೊಯ್ಲಿನ ವ್ಯವಸ್ಥೆಗೆ ನಿಗದಿತ ಹಣ ಕಟ್ಟಿಸಿಕೊಂಡು ಅದರ ವ್ಯವಸ್ಥೆ ಮಾಡುವಂತೆ ಕಡ್ಡಾಯ ಮಾಡಲಾಗಿತ್ತು. ಹಾಗೆಯೇ ಬ್ಯಾಂಕಿನಿಂದ ಕೃಷಿ ಸಾಲ ಬೇಕಿದ್ದಲ್ಲಿ ಕೃಷಿ ಹೊಂಡ ನಿರ್ಮಿಸಲೇ ಬೇಕಿತ್ತು. ನಮ್ಮಲ್ಲೇಕೆ ಇಂತಹ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವುದಿಲ್ಲ?

ಬಹುಮಹಡಿ ಕಟ್ಟಡಗಳ ಹಾಗೂ ದೊಡ್ಡದೊಡ್ಡ ಮನೆಗಳ ನಿವಾಸಿಗಳು ಎಂದಾದರೂ ನೀರಿಗಾಗಿ ಕೊಡ ಹಿಡಿದು ಕ್ಯೂ ನಿಲ್ಲುವುದು ಇದೆಯಾ? ಇಲ್ಲ. ಆ ಮನೆಗಳ ಸಂಪುಗಳೆಲ್ಲ ರಾತ್ರಿಯೇ ತುಂಬಿ ನೀರೆಲ್ಲ ಹರಿದುಹೋಗುತ್ತಿರುತ್ತದೆ. ಆದ್ದರಿಂದಲೇ ಅವರಿಗೆ ನೀರು ಕೊಯ್ಲಿನ ಜರೂರತ್ತು ಕಾಣುತ್ತಿಲ್ಲ. [ನಾವು ವಾಸ ಇರುವ ಕಟ್ಟಡದಲ್ಲಿ ಮಳೆನೀರು ಕೊಯ್ಲಿನಿಂದ ಬೋರ್‍ವೆಲ್‍ಗೆ ನೀರು ಮರುಪೂರಣ ವ್ಯವಸ್ಥೆಯಿದೆ. ಆದರೆ ನಮ್ಮ ಪಕ್ಕದ ಕಟ್ಟಡದಲ್ಲಿ ಆ ವ್ಯವಸ್ಥೆ ಮಾಡಿರಲಿಲ್ಲ. ಅವರ ಬೋರ್‍ವೆಲ್ ಬತ್ತಿಹೋಗಿ, ಟ್ಯಾಂಕರ್ ನೀರು ಸಹ ಸಾಕಾಗದೆ, ಮಾಲೀಕರು ನಿವಾಸಿಗಳಿಗೆ ನೀರಿನ ‘ರೇಶನ್’ ಅಳವಡಿಸಿದ್ದಾರೆ. ಹೀಗಾದ ನಂತರ ಈಗ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡಿದ್ದಾರೆ; ಆದರೆ ಆ ನಂತರ ಮಳೆಯೇ ಬಂದಿಲ್ಲ ಇನ್ನೂ!]

ಆದ್ದರಿಂದ ಮಳೆನೀರು ಸಂಗ್ರಹ ಸುಗಮವಾಗಿ ಆಗಬೇಕೆಂದರೆ ಬರೀ ದಂಡ ಕಟ್ಟಿಸಿಕೊಳ್ಳುವುದಲ್ಲ. ದುಡ್ಡಿನಿಂದ ನೀರು ಉತ್ಪಾದನೆ ಆಗುವುದಿಲ್ಲ! ಮನೆ ನಿರ್ಮಾಣದ ಪರವಾನಗಿ ಕೊಡುವಾಗಲೇ ಮಳೆನೀರು ಕೊಯ್ಲಿಗೆ ದುಡ್ಡು ಕಟ್ಟಿಸಿಕೊಂಡು ಅಥಾರಿಟಿಗಳೇ ಅದನ್ನು ನಿರ್ಮಿಸುವ ವ್ಯವಸ್ಥೆಯಾಗಬೇಕು; ಅಥವಾ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡದಿದ್ದರೆ ಅವರಿಗೆ ನೀರು ಪೂರೈಕೆಯನ್ನು ಬಂದ್ ಮಾಡುವ ನಿಬಂಧನೆಯೊಂದಿಗೇನೇ ಪರವಾನಗಿ ಕೊಡಬೇಕು ಮತ್ತು ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು.

ಈಗಾಗಲೇ ಬಹಳ ತಡವಾಗಿದೆ. ಈ ವರ್ಷದ ಬೇಸಿಗೆಯಲ್ಲಿ ಬೆಂಗಳೂರಿನ ಅದೆಷ್ಟೋ ಸಣ್ಣದೊಡ್ಡ ಬಹುಮಹಡಿ ಕಟ್ಟಡಗಳಲ್ಲಿನ ಬೋರ್‍ವೆಲ್‍ಗಳು ಒಣಗಿಹೋಗಿ ಟ್ಯಾಂಕರ್ ನೀರಿಗಾಗಿ ಪರದಾಡುವ ದೃಷ್ಯ ಕಾಮನ್ ಆಗಿತ್ತು. ಒಂದು ವೇಳೆ ಟ್ಯಾಂಕರುಗಳಿಗೇ ನೀರು ಸಿಗದೆ ಹೋದರೆ? ಧರ್ಮಸ್ಥಳ, ಉಡುಪಿ, ಸುಬ್ರಮಣ್ಯ, ಕೊಲ್ಲೂರು ಮುಂತಾದ ಪ್ರಖ್ಯಾತ ಯಾತ್ರಾಸ್ಥಳಗಳಲ್ಲೆಲ್ಲ ನೀರಿಗಾಗಿ ಹಾಹಾಕಾರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರಿಗೂ ಅಧಿಕಾರಸ್ತರಿಗೂ ಎಚ್ಚರಿಕೆಯ ಗಂಟೆಯಾಗಬೇಕಿದೆ. ಮಳೆನೀರು ಸಂಗ್ರಹವನ್ನು ಗರಿಷ್ಠ ಪ್ರಮಾಣಕ್ಕೆ ಮಾಡಿರೆಂಬ ನಮ್ಮ ಜಲತಜ್ಞರ ಸಲಹೆಯನ್ನು ಎಲ್ಲರೂ ಪಾಲಿಸಿದರೆ ಮಾತ್ರ ಉಳಿಗಾಲ ಎಂದು ಅನ್ನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...