Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...